Homeಕರ್ನಾಟಕಮುಷ್ಕರ ವಾಪಸ್‌ ಪಡೆದ ಸರ್ಕಾರಿ ನೌಕರರ ಸಂಘ; ಎನ್‌‌ಪಿಎಸ್‌ ಹೋರಾಟಗಾರರ ವಿರೋಧ

ಮುಷ್ಕರ ವಾಪಸ್‌ ಪಡೆದ ಸರ್ಕಾರಿ ನೌಕರರ ಸಂಘ; ಎನ್‌‌ಪಿಎಸ್‌ ಹೋರಾಟಗಾರರ ವಿರೋಧ

ಸರ್ಕಾರಿ ನೌಕರರ ಸಂಘದ ನಿಲುವನ್ನು ಎನ್‌ಪಿಎಸ್‌ ನೌಕರರ ಸಂಘ ಕಟುವಾಗಿ ವಿರೋಧಿಸಿದೆ.

- Advertisement -
- Advertisement -

ರಾಜ್ಯ ಸರ್ಕಾರಿ ನೌಕರರ ವೇತನವನ್ನು ಶೇ. 17ರಷ್ಟು ಹೆಚ್ಚಳ ಮಾಡುವುದಾಗಿ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ವಾಪಸ್‌ ಪಡೆಯುತ್ತಿದ್ದೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್‌ ಷಡಾಕ್ಷರಿ ತಿಳಿಸಿದ್ದಾರೆ. ಆದರೆ ಈ ನಿರ್ಧಾರದಿಂದ ನೌಕರರು ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ.

ಬೆಂಗಳೂರಿನ ಕಬ್ಬನ್‌ ಪಾರ್ಕ್‌ನಲ್ಲಿರುವ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಷಡಾಕ್ಷರಿ, “ನಾವು ಶೇ.40ರಷ್ಟು ವೇತನ ಹೆಚ್ಚಿಸಬೇಕು ಎಂಬ ಬೇಡಿಕೆ ಇಟ್ಟಿದ್ದೆವು. ಆದರೆ, ಸರ್ಕಾರ ತನ್ನ ಇತಿಮಿತಿಯಲ್ಲಿ ಶೇ.17ರಷ್ಟು ಹೆಚ್ಚಳ ಮಾಡಿರುವುದರಿಂದ ಮುಷ್ಕರವನ್ನು ಕೈಬಿಡಲು ತೀರ್ಮಾನಿಸಿದ್ದೇವೆ” ಎಂದು ತಿಳಿಸಿದ್ದಾರೆ.

“ಹೊಸ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್‌) ರದ್ಧತಿ ಕುರಿತು ಇತರೆ ರಾಜ್ಯಗಳಲ್ಲಿ ಯಾವ ರೀತಿ ನಿಯಮ ಅನುಸರಿಸಲಾಗಿದೆ, ಅದರ ಆರ್ಥಿಕ ಪರಿಣಾಮಗಳ ಕುರಿತು ಅಧ್ಯಯನ ನಡೆಸಲು ಸರ್ಕಾರ ಸಮಿತಿಯೊಂದನ್ನು ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ರಚನೆ ಮಾಡುವುದಾಗಿ ಭರವಸೆ ನೀಡಿದ್ದು, ಎರಡು ತಿಂಗಳು ಗುಡುವು ನೀಡಲಾಗಿದೆ. ಹಾಗಾಗಿ ಮುಖ್ಯಮಂತ್ರಿಗಳ ಭರವಸೆಗೆ ಒಪ್ಪಿದ್ದೇವೆ ಮತ್ತು ಜನಸಾಮಾನ್ಯರ ಹಿತದೃಷ್ಟಿಯಿಂದಲೂ ಮುಷ್ಕರ ಕೈಬಿಡುತ್ತಿದ್ದೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಸರ್ಕಾರಿ ನೌಕರರ ಸಂಘದ ನಿಲುವಿಗೆ ಎನ್‌ಪಿಎಸ್‌ ಹೋರಾಟಗಾರರ ವಿರೋಧ

ಸರ್ಕಾರಿ ನೌಕರರ ಸಂಘದ ನಿಲುವನ್ನು ರಾಜ್ಯ ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತರಾಮ್‌ ಟೀಕಿಸಿದ್ದಾರೆ. “ಇದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ರಾಜ್ಯದ ಆರು ಲಕ್ಷ ಸರ್ಕಾರಿ ನೌಕರರು ಮತ್ತು ಎನ್‌ಪಿಎಸ್‌ ನೌಕರರಿಗೆ ಮಾಡಿರುವ ನಂಬಿಕೆ ದ್ರೋಹ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಕನಿಷ್ಟ ಒಂದು ಬೇಡಿಕೆಯಾದರೂ ಖಡಾಖಂಡಿತವಾಗಿ ಈಡೇರಿಸಿಕೊಳ್ಳುವ ಮಟ್ಟಿಗೆ ಪಟ್ಟು ಹಿಡಿಯುತ್ತಾರೆ ಎಂದು ಭಾವಿಸಲಾಗಿದ್ದ ನೌಕರರಿಗೆ ಅನ್ಯಾಯ ಮಾಡಿದ್ದಾರೆ. ಶೇ.17ವೇತನ ಹೆಚ್ಚಳ ಮಾಡಿರುವುದನ್ನು ಒಪ್ಪಲಾಗುವುದಿಲ್ಲ. ಕನಿಷ್ಟ ಶೇ.30 ಆದರೂ ವೇತನವನ್ನು ಹೆಚ್ಚಿಸಬೇಕಿತ್ತು” ಎಂದಿದ್ದಾರೆ.

“ಎನ್‌ಪಿಎಸ್‌ ರದ್ದುಪಡಿಸುವ ಕುರಿತು ಸಮಿತಿ ರಚಿಸಿದ್ದೇವೆ ಎಂದಿದ್ದಾರೆ. ಆದರೆ, ಸರ್ಕಾರವೇ ರಚಿಸಿದ ಸಮಿತಿಗಳು ಹೇಗೆ ನೆಲ ಕಚ್ಚುತ್ತವೆ ಎಂಬುದನ್ನು ಈ ಹಿಂದೆ ನೋಡಿದ್ದೇವೆ. ಹಾಗಾಗಿ ಎನ್‌ಪಿಎಸ್‌ ನೌಕರರ ಸಂಘದ ಹೋರಾಟದ ಧ್ವನಿ ದೊಡ್ಡದಾಗಲಿದೆ, ನಮ್ಮ ತೀರ್ಮಾನದಲ್ಲಿ ಯಾವುದೇ ಬದಲಾವಣೆಯಿಲ್ಲ. ಈ ಸರ್ಕಾರ ಎನ್‌ಪಿಎಸ್‌ ನೌಕರರು ನೀಡಿದ್ದ ʼವೋಟ್‌ ಫಾರ್‌ ಒಪಿಎಸ್‌ʼ ಅವಕಾಶವನ್ನು ಕಳೆದುಕೊಂಡಿದೆ ಎಂದು ಸ್ಪಷ್ಟವಾಗಿ ಹೇಳುತ್ತೇನೆ” ಎಂದು ತಿಳಿಸಿದ್ದಾರೆ.

ಹೆಚ್ಚಳದ ನೆಪದಲ್ಲಿ ತೆರಿಗೆ ಭಾರ

’ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’ದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್.ದಯಾನಂದ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “17% ಹೆಚ್ಚಿಸುವ ನಿರ್ಧಾರ ನೌಕರರ ಹಿತಾಸಕ್ತಿಯನ್ನು ಕಾಪಾಡುವುದಿಲ್ಲ. 1.04.2022ರಿಂದಲೇ 7ನೇ ವೇತನ ಆಯೋಗ ಜಾರಿ ಮಾಡಬೇಕಿತ್ತು. ನಾವು ಶೇ. 40ರಷ್ಟು ಹೆಚ್ಚಳವನ್ನು ಮಾಡಬೇಕೆಂದು ಒತ್ತಾಯಿಸಿದ್ದೆವು. ಆದರೆ ಈ 17%ರಷ್ಟು ಹೆಚ್ಚಳ ಮಾಡಿ ತೆರಿಗೆ ಭಾರ ಹೊರಿಸಲಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ತೆರಿಗೆಗೆ ಒಳಪಡದ ನೌಕರರು ಮುಂದಿನ ವರ್ಷದಿಂದ ತೆರಿಗೆ ವ್ಯಾಪ್ತಿಗೆ ಬರುತ್ತಾರೆ. ಉದಾಹರಣೆಗೆ ಸುಮಾರು 35 ಸಾವಿರ ರೂ. ಸಂಬಳ ತೆಗೆದುಕೊಳ್ಳುತ್ತಿರುವವರಿಗೆ ಆರು ಸಾವಿರ ರೂ. ಹೆಚ್ಚಾಗುತ್ತದೆ ಎಂದು ಭಾವಿಸೋಣ. ಹೀಗಾದಾಗ ಶೇ. 13ರಿಂದ 14 ಸಾವಿರ ಟ್ಯಾಕ್ಸ್‌ ಕಟ್ಟಬೇಕಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

“ಎನ್‌ಪಿಎಸ್‌ ವಿಚಾರವಾಗಿ ಕಮಿಟಿ ಮಾಡುವುದಾಗಿ ಹೇಳುತ್ತಿದ್ದಾರೆ. 2018ರಲ್ಲಿ ಮಾಡಿದ ಕಮಿಟಿ ಏನನ್ನೂ ತೀರ್ಮಾನ ಮಾಡಿಲ್ಲ. ಮತ್ತೆ ಕಮಿಟಿ ಮಾಡುವ ಪ್ರಸ್ತಾಪ ಬಂದಿದೆ. ಅಂದರೆ ನೌಕರರ ಪರವಾದ ಉದ್ದೇಶವೇ ಸರ್ಕಾರಕ್ಕೆ ಇಲ್ಲ ಎಂಬುದು ಸ್ಪಷ್ಟ” ಎಂದರು.

“ಜವಾಬ್ದಾರಿಯುತವಾದ ಸರ್ಕಾರ ಮೂಗಿನ ಮೇಲೆ ತುಪ್ಪ ಸವರುವ ಕೆಲಸ ಮಾಡಬಾರದು. ಸರ್ಕಾರದ ನಿರ್ಧಾರಕ್ಕೆ ಸರ್ಕಾರಿ ನೌಕರರ ಸಂಘ ಬದ್ಧವಾಗಿರುವಂತೆ ಕಾಣುತ್ತಿದೆ. ಹೀಗಾಗಿ ಹೋರಾಟವನ್ನು ವಾಪಸ್‌ ಪಡೆದಿದ್ದಾರೆ. ಷಡಾಕ್ಷರಿಯವರು ನಾಟಕ ಮಾಡಿದ್ದಾರೆಂದೇ ನಾವು ಭಾವಿಸುತ್ತೇವೆ” ಎಂದು ಹೇಳಿದರು.

“ನಾವು ಗಲಾಟೆ ಮಾಡಿದಂತೆ ವರ್ತಿಸುತ್ತೇವೆ, ನೀವು ಪರಿಹಾರ ನೀಡಿದಂತೆ ವರ್ತಿಸಿ ಎಂಬಂತಿದೆ ಈ ಪ್ರಹಸನ. ನೀವು ಕೊಟ್ಟಂತೆ ಮಾಡಿ, ನಾವು ಇಸ್ಕೊಂಡಂತೆ ಮಾಡುತ್ತೇವೆ ಎಂಬಂತೆ ಸರ್ಕಾರಿ ನೌಕರರ ಸಂಘ ವರ್ತಿಸಿದೆ. ಆರು ಸಾವಿರ ಹೆಚ್ಚಿಸಿ ಎರಡು ಪಟ್ಟು ತೆರಿಗೆ ವಸೂಲಿ ಮಾಡುವುದರಲ್ಲಿ ಅರ್ಥವಿದೆಯೇ?” ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...