Homeಕರ್ನಾಟಕಮುಷ್ಕರ ವಾಪಸ್‌ ಪಡೆದ ಸರ್ಕಾರಿ ನೌಕರರ ಸಂಘ; ಎನ್‌‌ಪಿಎಸ್‌ ಹೋರಾಟಗಾರರ ವಿರೋಧ

ಮುಷ್ಕರ ವಾಪಸ್‌ ಪಡೆದ ಸರ್ಕಾರಿ ನೌಕರರ ಸಂಘ; ಎನ್‌‌ಪಿಎಸ್‌ ಹೋರಾಟಗಾರರ ವಿರೋಧ

ಸರ್ಕಾರಿ ನೌಕರರ ಸಂಘದ ನಿಲುವನ್ನು ಎನ್‌ಪಿಎಸ್‌ ನೌಕರರ ಸಂಘ ಕಟುವಾಗಿ ವಿರೋಧಿಸಿದೆ.

- Advertisement -
- Advertisement -

ರಾಜ್ಯ ಸರ್ಕಾರಿ ನೌಕರರ ವೇತನವನ್ನು ಶೇ. 17ರಷ್ಟು ಹೆಚ್ಚಳ ಮಾಡುವುದಾಗಿ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ವಾಪಸ್‌ ಪಡೆಯುತ್ತಿದ್ದೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್‌ ಷಡಾಕ್ಷರಿ ತಿಳಿಸಿದ್ದಾರೆ. ಆದರೆ ಈ ನಿರ್ಧಾರದಿಂದ ನೌಕರರು ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ.

ಬೆಂಗಳೂರಿನ ಕಬ್ಬನ್‌ ಪಾರ್ಕ್‌ನಲ್ಲಿರುವ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಷಡಾಕ್ಷರಿ, “ನಾವು ಶೇ.40ರಷ್ಟು ವೇತನ ಹೆಚ್ಚಿಸಬೇಕು ಎಂಬ ಬೇಡಿಕೆ ಇಟ್ಟಿದ್ದೆವು. ಆದರೆ, ಸರ್ಕಾರ ತನ್ನ ಇತಿಮಿತಿಯಲ್ಲಿ ಶೇ.17ರಷ್ಟು ಹೆಚ್ಚಳ ಮಾಡಿರುವುದರಿಂದ ಮುಷ್ಕರವನ್ನು ಕೈಬಿಡಲು ತೀರ್ಮಾನಿಸಿದ್ದೇವೆ” ಎಂದು ತಿಳಿಸಿದ್ದಾರೆ.

“ಹೊಸ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್‌) ರದ್ಧತಿ ಕುರಿತು ಇತರೆ ರಾಜ್ಯಗಳಲ್ಲಿ ಯಾವ ರೀತಿ ನಿಯಮ ಅನುಸರಿಸಲಾಗಿದೆ, ಅದರ ಆರ್ಥಿಕ ಪರಿಣಾಮಗಳ ಕುರಿತು ಅಧ್ಯಯನ ನಡೆಸಲು ಸರ್ಕಾರ ಸಮಿತಿಯೊಂದನ್ನು ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ರಚನೆ ಮಾಡುವುದಾಗಿ ಭರವಸೆ ನೀಡಿದ್ದು, ಎರಡು ತಿಂಗಳು ಗುಡುವು ನೀಡಲಾಗಿದೆ. ಹಾಗಾಗಿ ಮುಖ್ಯಮಂತ್ರಿಗಳ ಭರವಸೆಗೆ ಒಪ್ಪಿದ್ದೇವೆ ಮತ್ತು ಜನಸಾಮಾನ್ಯರ ಹಿತದೃಷ್ಟಿಯಿಂದಲೂ ಮುಷ್ಕರ ಕೈಬಿಡುತ್ತಿದ್ದೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಸರ್ಕಾರಿ ನೌಕರರ ಸಂಘದ ನಿಲುವಿಗೆ ಎನ್‌ಪಿಎಸ್‌ ಹೋರಾಟಗಾರರ ವಿರೋಧ

ಸರ್ಕಾರಿ ನೌಕರರ ಸಂಘದ ನಿಲುವನ್ನು ರಾಜ್ಯ ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತರಾಮ್‌ ಟೀಕಿಸಿದ್ದಾರೆ. “ಇದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ರಾಜ್ಯದ ಆರು ಲಕ್ಷ ಸರ್ಕಾರಿ ನೌಕರರು ಮತ್ತು ಎನ್‌ಪಿಎಸ್‌ ನೌಕರರಿಗೆ ಮಾಡಿರುವ ನಂಬಿಕೆ ದ್ರೋಹ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಕನಿಷ್ಟ ಒಂದು ಬೇಡಿಕೆಯಾದರೂ ಖಡಾಖಂಡಿತವಾಗಿ ಈಡೇರಿಸಿಕೊಳ್ಳುವ ಮಟ್ಟಿಗೆ ಪಟ್ಟು ಹಿಡಿಯುತ್ತಾರೆ ಎಂದು ಭಾವಿಸಲಾಗಿದ್ದ ನೌಕರರಿಗೆ ಅನ್ಯಾಯ ಮಾಡಿದ್ದಾರೆ. ಶೇ.17ವೇತನ ಹೆಚ್ಚಳ ಮಾಡಿರುವುದನ್ನು ಒಪ್ಪಲಾಗುವುದಿಲ್ಲ. ಕನಿಷ್ಟ ಶೇ.30 ಆದರೂ ವೇತನವನ್ನು ಹೆಚ್ಚಿಸಬೇಕಿತ್ತು” ಎಂದಿದ್ದಾರೆ.

“ಎನ್‌ಪಿಎಸ್‌ ರದ್ದುಪಡಿಸುವ ಕುರಿತು ಸಮಿತಿ ರಚಿಸಿದ್ದೇವೆ ಎಂದಿದ್ದಾರೆ. ಆದರೆ, ಸರ್ಕಾರವೇ ರಚಿಸಿದ ಸಮಿತಿಗಳು ಹೇಗೆ ನೆಲ ಕಚ್ಚುತ್ತವೆ ಎಂಬುದನ್ನು ಈ ಹಿಂದೆ ನೋಡಿದ್ದೇವೆ. ಹಾಗಾಗಿ ಎನ್‌ಪಿಎಸ್‌ ನೌಕರರ ಸಂಘದ ಹೋರಾಟದ ಧ್ವನಿ ದೊಡ್ಡದಾಗಲಿದೆ, ನಮ್ಮ ತೀರ್ಮಾನದಲ್ಲಿ ಯಾವುದೇ ಬದಲಾವಣೆಯಿಲ್ಲ. ಈ ಸರ್ಕಾರ ಎನ್‌ಪಿಎಸ್‌ ನೌಕರರು ನೀಡಿದ್ದ ʼವೋಟ್‌ ಫಾರ್‌ ಒಪಿಎಸ್‌ʼ ಅವಕಾಶವನ್ನು ಕಳೆದುಕೊಂಡಿದೆ ಎಂದು ಸ್ಪಷ್ಟವಾಗಿ ಹೇಳುತ್ತೇನೆ” ಎಂದು ತಿಳಿಸಿದ್ದಾರೆ.

ಹೆಚ್ಚಳದ ನೆಪದಲ್ಲಿ ತೆರಿಗೆ ಭಾರ

’ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’ದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್.ದಯಾನಂದ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “17% ಹೆಚ್ಚಿಸುವ ನಿರ್ಧಾರ ನೌಕರರ ಹಿತಾಸಕ್ತಿಯನ್ನು ಕಾಪಾಡುವುದಿಲ್ಲ. 1.04.2022ರಿಂದಲೇ 7ನೇ ವೇತನ ಆಯೋಗ ಜಾರಿ ಮಾಡಬೇಕಿತ್ತು. ನಾವು ಶೇ. 40ರಷ್ಟು ಹೆಚ್ಚಳವನ್ನು ಮಾಡಬೇಕೆಂದು ಒತ್ತಾಯಿಸಿದ್ದೆವು. ಆದರೆ ಈ 17%ರಷ್ಟು ಹೆಚ್ಚಳ ಮಾಡಿ ತೆರಿಗೆ ಭಾರ ಹೊರಿಸಲಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ತೆರಿಗೆಗೆ ಒಳಪಡದ ನೌಕರರು ಮುಂದಿನ ವರ್ಷದಿಂದ ತೆರಿಗೆ ವ್ಯಾಪ್ತಿಗೆ ಬರುತ್ತಾರೆ. ಉದಾಹರಣೆಗೆ ಸುಮಾರು 35 ಸಾವಿರ ರೂ. ಸಂಬಳ ತೆಗೆದುಕೊಳ್ಳುತ್ತಿರುವವರಿಗೆ ಆರು ಸಾವಿರ ರೂ. ಹೆಚ್ಚಾಗುತ್ತದೆ ಎಂದು ಭಾವಿಸೋಣ. ಹೀಗಾದಾಗ ಶೇ. 13ರಿಂದ 14 ಸಾವಿರ ಟ್ಯಾಕ್ಸ್‌ ಕಟ್ಟಬೇಕಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

“ಎನ್‌ಪಿಎಸ್‌ ವಿಚಾರವಾಗಿ ಕಮಿಟಿ ಮಾಡುವುದಾಗಿ ಹೇಳುತ್ತಿದ್ದಾರೆ. 2018ರಲ್ಲಿ ಮಾಡಿದ ಕಮಿಟಿ ಏನನ್ನೂ ತೀರ್ಮಾನ ಮಾಡಿಲ್ಲ. ಮತ್ತೆ ಕಮಿಟಿ ಮಾಡುವ ಪ್ರಸ್ತಾಪ ಬಂದಿದೆ. ಅಂದರೆ ನೌಕರರ ಪರವಾದ ಉದ್ದೇಶವೇ ಸರ್ಕಾರಕ್ಕೆ ಇಲ್ಲ ಎಂಬುದು ಸ್ಪಷ್ಟ” ಎಂದರು.

“ಜವಾಬ್ದಾರಿಯುತವಾದ ಸರ್ಕಾರ ಮೂಗಿನ ಮೇಲೆ ತುಪ್ಪ ಸವರುವ ಕೆಲಸ ಮಾಡಬಾರದು. ಸರ್ಕಾರದ ನಿರ್ಧಾರಕ್ಕೆ ಸರ್ಕಾರಿ ನೌಕರರ ಸಂಘ ಬದ್ಧವಾಗಿರುವಂತೆ ಕಾಣುತ್ತಿದೆ. ಹೀಗಾಗಿ ಹೋರಾಟವನ್ನು ವಾಪಸ್‌ ಪಡೆದಿದ್ದಾರೆ. ಷಡಾಕ್ಷರಿಯವರು ನಾಟಕ ಮಾಡಿದ್ದಾರೆಂದೇ ನಾವು ಭಾವಿಸುತ್ತೇವೆ” ಎಂದು ಹೇಳಿದರು.

“ನಾವು ಗಲಾಟೆ ಮಾಡಿದಂತೆ ವರ್ತಿಸುತ್ತೇವೆ, ನೀವು ಪರಿಹಾರ ನೀಡಿದಂತೆ ವರ್ತಿಸಿ ಎಂಬಂತಿದೆ ಈ ಪ್ರಹಸನ. ನೀವು ಕೊಟ್ಟಂತೆ ಮಾಡಿ, ನಾವು ಇಸ್ಕೊಂಡಂತೆ ಮಾಡುತ್ತೇವೆ ಎಂಬಂತೆ ಸರ್ಕಾರಿ ನೌಕರರ ಸಂಘ ವರ್ತಿಸಿದೆ. ಆರು ಸಾವಿರ ಹೆಚ್ಚಿಸಿ ಎರಡು ಪಟ್ಟು ತೆರಿಗೆ ವಸೂಲಿ ಮಾಡುವುದರಲ್ಲಿ ಅರ್ಥವಿದೆಯೇ?” ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....