Homeಕರ್ನಾಟಕಮುಷ್ಕರ ವಾಪಸ್‌ ಪಡೆದ ಸರ್ಕಾರಿ ನೌಕರರ ಸಂಘ; ಎನ್‌‌ಪಿಎಸ್‌ ಹೋರಾಟಗಾರರ ವಿರೋಧ

ಮುಷ್ಕರ ವಾಪಸ್‌ ಪಡೆದ ಸರ್ಕಾರಿ ನೌಕರರ ಸಂಘ; ಎನ್‌‌ಪಿಎಸ್‌ ಹೋರಾಟಗಾರರ ವಿರೋಧ

ಸರ್ಕಾರಿ ನೌಕರರ ಸಂಘದ ನಿಲುವನ್ನು ಎನ್‌ಪಿಎಸ್‌ ನೌಕರರ ಸಂಘ ಕಟುವಾಗಿ ವಿರೋಧಿಸಿದೆ.

- Advertisement -
- Advertisement -

ರಾಜ್ಯ ಸರ್ಕಾರಿ ನೌಕರರ ವೇತನವನ್ನು ಶೇ. 17ರಷ್ಟು ಹೆಚ್ಚಳ ಮಾಡುವುದಾಗಿ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ವಾಪಸ್‌ ಪಡೆಯುತ್ತಿದ್ದೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್‌ ಷಡಾಕ್ಷರಿ ತಿಳಿಸಿದ್ದಾರೆ. ಆದರೆ ಈ ನಿರ್ಧಾರದಿಂದ ನೌಕರರು ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ.

ಬೆಂಗಳೂರಿನ ಕಬ್ಬನ್‌ ಪಾರ್ಕ್‌ನಲ್ಲಿರುವ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಷಡಾಕ್ಷರಿ, “ನಾವು ಶೇ.40ರಷ್ಟು ವೇತನ ಹೆಚ್ಚಿಸಬೇಕು ಎಂಬ ಬೇಡಿಕೆ ಇಟ್ಟಿದ್ದೆವು. ಆದರೆ, ಸರ್ಕಾರ ತನ್ನ ಇತಿಮಿತಿಯಲ್ಲಿ ಶೇ.17ರಷ್ಟು ಹೆಚ್ಚಳ ಮಾಡಿರುವುದರಿಂದ ಮುಷ್ಕರವನ್ನು ಕೈಬಿಡಲು ತೀರ್ಮಾನಿಸಿದ್ದೇವೆ” ಎಂದು ತಿಳಿಸಿದ್ದಾರೆ.

“ಹೊಸ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್‌) ರದ್ಧತಿ ಕುರಿತು ಇತರೆ ರಾಜ್ಯಗಳಲ್ಲಿ ಯಾವ ರೀತಿ ನಿಯಮ ಅನುಸರಿಸಲಾಗಿದೆ, ಅದರ ಆರ್ಥಿಕ ಪರಿಣಾಮಗಳ ಕುರಿತು ಅಧ್ಯಯನ ನಡೆಸಲು ಸರ್ಕಾರ ಸಮಿತಿಯೊಂದನ್ನು ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ರಚನೆ ಮಾಡುವುದಾಗಿ ಭರವಸೆ ನೀಡಿದ್ದು, ಎರಡು ತಿಂಗಳು ಗುಡುವು ನೀಡಲಾಗಿದೆ. ಹಾಗಾಗಿ ಮುಖ್ಯಮಂತ್ರಿಗಳ ಭರವಸೆಗೆ ಒಪ್ಪಿದ್ದೇವೆ ಮತ್ತು ಜನಸಾಮಾನ್ಯರ ಹಿತದೃಷ್ಟಿಯಿಂದಲೂ ಮುಷ್ಕರ ಕೈಬಿಡುತ್ತಿದ್ದೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಸರ್ಕಾರಿ ನೌಕರರ ಸಂಘದ ನಿಲುವಿಗೆ ಎನ್‌ಪಿಎಸ್‌ ಹೋರಾಟಗಾರರ ವಿರೋಧ

ಸರ್ಕಾರಿ ನೌಕರರ ಸಂಘದ ನಿಲುವನ್ನು ರಾಜ್ಯ ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತರಾಮ್‌ ಟೀಕಿಸಿದ್ದಾರೆ. “ಇದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ರಾಜ್ಯದ ಆರು ಲಕ್ಷ ಸರ್ಕಾರಿ ನೌಕರರು ಮತ್ತು ಎನ್‌ಪಿಎಸ್‌ ನೌಕರರಿಗೆ ಮಾಡಿರುವ ನಂಬಿಕೆ ದ್ರೋಹ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಕನಿಷ್ಟ ಒಂದು ಬೇಡಿಕೆಯಾದರೂ ಖಡಾಖಂಡಿತವಾಗಿ ಈಡೇರಿಸಿಕೊಳ್ಳುವ ಮಟ್ಟಿಗೆ ಪಟ್ಟು ಹಿಡಿಯುತ್ತಾರೆ ಎಂದು ಭಾವಿಸಲಾಗಿದ್ದ ನೌಕರರಿಗೆ ಅನ್ಯಾಯ ಮಾಡಿದ್ದಾರೆ. ಶೇ.17ವೇತನ ಹೆಚ್ಚಳ ಮಾಡಿರುವುದನ್ನು ಒಪ್ಪಲಾಗುವುದಿಲ್ಲ. ಕನಿಷ್ಟ ಶೇ.30 ಆದರೂ ವೇತನವನ್ನು ಹೆಚ್ಚಿಸಬೇಕಿತ್ತು” ಎಂದಿದ್ದಾರೆ.

“ಎನ್‌ಪಿಎಸ್‌ ರದ್ದುಪಡಿಸುವ ಕುರಿತು ಸಮಿತಿ ರಚಿಸಿದ್ದೇವೆ ಎಂದಿದ್ದಾರೆ. ಆದರೆ, ಸರ್ಕಾರವೇ ರಚಿಸಿದ ಸಮಿತಿಗಳು ಹೇಗೆ ನೆಲ ಕಚ್ಚುತ್ತವೆ ಎಂಬುದನ್ನು ಈ ಹಿಂದೆ ನೋಡಿದ್ದೇವೆ. ಹಾಗಾಗಿ ಎನ್‌ಪಿಎಸ್‌ ನೌಕರರ ಸಂಘದ ಹೋರಾಟದ ಧ್ವನಿ ದೊಡ್ಡದಾಗಲಿದೆ, ನಮ್ಮ ತೀರ್ಮಾನದಲ್ಲಿ ಯಾವುದೇ ಬದಲಾವಣೆಯಿಲ್ಲ. ಈ ಸರ್ಕಾರ ಎನ್‌ಪಿಎಸ್‌ ನೌಕರರು ನೀಡಿದ್ದ ʼವೋಟ್‌ ಫಾರ್‌ ಒಪಿಎಸ್‌ʼ ಅವಕಾಶವನ್ನು ಕಳೆದುಕೊಂಡಿದೆ ಎಂದು ಸ್ಪಷ್ಟವಾಗಿ ಹೇಳುತ್ತೇನೆ” ಎಂದು ತಿಳಿಸಿದ್ದಾರೆ.

ಹೆಚ್ಚಳದ ನೆಪದಲ್ಲಿ ತೆರಿಗೆ ಭಾರ

’ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’ದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್.ದಯಾನಂದ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “17% ಹೆಚ್ಚಿಸುವ ನಿರ್ಧಾರ ನೌಕರರ ಹಿತಾಸಕ್ತಿಯನ್ನು ಕಾಪಾಡುವುದಿಲ್ಲ. 1.04.2022ರಿಂದಲೇ 7ನೇ ವೇತನ ಆಯೋಗ ಜಾರಿ ಮಾಡಬೇಕಿತ್ತು. ನಾವು ಶೇ. 40ರಷ್ಟು ಹೆಚ್ಚಳವನ್ನು ಮಾಡಬೇಕೆಂದು ಒತ್ತಾಯಿಸಿದ್ದೆವು. ಆದರೆ ಈ 17%ರಷ್ಟು ಹೆಚ್ಚಳ ಮಾಡಿ ತೆರಿಗೆ ಭಾರ ಹೊರಿಸಲಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ತೆರಿಗೆಗೆ ಒಳಪಡದ ನೌಕರರು ಮುಂದಿನ ವರ್ಷದಿಂದ ತೆರಿಗೆ ವ್ಯಾಪ್ತಿಗೆ ಬರುತ್ತಾರೆ. ಉದಾಹರಣೆಗೆ ಸುಮಾರು 35 ಸಾವಿರ ರೂ. ಸಂಬಳ ತೆಗೆದುಕೊಳ್ಳುತ್ತಿರುವವರಿಗೆ ಆರು ಸಾವಿರ ರೂ. ಹೆಚ್ಚಾಗುತ್ತದೆ ಎಂದು ಭಾವಿಸೋಣ. ಹೀಗಾದಾಗ ಶೇ. 13ರಿಂದ 14 ಸಾವಿರ ಟ್ಯಾಕ್ಸ್‌ ಕಟ್ಟಬೇಕಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

“ಎನ್‌ಪಿಎಸ್‌ ವಿಚಾರವಾಗಿ ಕಮಿಟಿ ಮಾಡುವುದಾಗಿ ಹೇಳುತ್ತಿದ್ದಾರೆ. 2018ರಲ್ಲಿ ಮಾಡಿದ ಕಮಿಟಿ ಏನನ್ನೂ ತೀರ್ಮಾನ ಮಾಡಿಲ್ಲ. ಮತ್ತೆ ಕಮಿಟಿ ಮಾಡುವ ಪ್ರಸ್ತಾಪ ಬಂದಿದೆ. ಅಂದರೆ ನೌಕರರ ಪರವಾದ ಉದ್ದೇಶವೇ ಸರ್ಕಾರಕ್ಕೆ ಇಲ್ಲ ಎಂಬುದು ಸ್ಪಷ್ಟ” ಎಂದರು.

“ಜವಾಬ್ದಾರಿಯುತವಾದ ಸರ್ಕಾರ ಮೂಗಿನ ಮೇಲೆ ತುಪ್ಪ ಸವರುವ ಕೆಲಸ ಮಾಡಬಾರದು. ಸರ್ಕಾರದ ನಿರ್ಧಾರಕ್ಕೆ ಸರ್ಕಾರಿ ನೌಕರರ ಸಂಘ ಬದ್ಧವಾಗಿರುವಂತೆ ಕಾಣುತ್ತಿದೆ. ಹೀಗಾಗಿ ಹೋರಾಟವನ್ನು ವಾಪಸ್‌ ಪಡೆದಿದ್ದಾರೆ. ಷಡಾಕ್ಷರಿಯವರು ನಾಟಕ ಮಾಡಿದ್ದಾರೆಂದೇ ನಾವು ಭಾವಿಸುತ್ತೇವೆ” ಎಂದು ಹೇಳಿದರು.

“ನಾವು ಗಲಾಟೆ ಮಾಡಿದಂತೆ ವರ್ತಿಸುತ್ತೇವೆ, ನೀವು ಪರಿಹಾರ ನೀಡಿದಂತೆ ವರ್ತಿಸಿ ಎಂಬಂತಿದೆ ಈ ಪ್ರಹಸನ. ನೀವು ಕೊಟ್ಟಂತೆ ಮಾಡಿ, ನಾವು ಇಸ್ಕೊಂಡಂತೆ ಮಾಡುತ್ತೇವೆ ಎಂಬಂತೆ ಸರ್ಕಾರಿ ನೌಕರರ ಸಂಘ ವರ್ತಿಸಿದೆ. ಆರು ಸಾವಿರ ಹೆಚ್ಚಿಸಿ ಎರಡು ಪಟ್ಟು ತೆರಿಗೆ ವಸೂಲಿ ಮಾಡುವುದರಲ್ಲಿ ಅರ್ಥವಿದೆಯೇ?” ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...