Homeಕರ್ನಾಟಕರೈತ, ದಲಿತ, ಕಾರ್ಮಿಕರನ್ನು ಗುಲಾಮರನ್ನಾಗಿ ಮಾಡುತ್ತಿರುವ ಸರ್ಕಾರ: ಜನತಾ ಅಧಿವೇಶನದಲ್ಲಿ ಡಾ. ಪ್ರಕಾಶ್ ಕಮ್ಮರಡಿ

ರೈತ, ದಲಿತ, ಕಾರ್ಮಿಕರನ್ನು ಗುಲಾಮರನ್ನಾಗಿ ಮಾಡುತ್ತಿರುವ ಸರ್ಕಾರ: ಜನತಾ ಅಧಿವೇಶನದಲ್ಲಿ ಡಾ. ಪ್ರಕಾಶ್ ಕಮ್ಮರಡಿ

ಈ ಸಂದರ್ಭದಲ್ಲಿ, "ನಮ್ಮ ಪೂರ್ವಿಕರ ರಕ್ತ ಮತ್ತು ಬೆವರಿನಿಂದ ಮಿಂದಿರುವ ಈ ಪವಿತ್ರ ಮಣ್ಣನ್ನು ಕಳ್ಳ ಖದೀಮರ ಪಾಲಾಗಲು ಬಿಡುವುದಿಲ್ಲ" ಎಂದು ಭೂ ಸ್ವಾಧೀನ ಕಾಯ್ದೆಯನ್ನು ವಿರೋಧಿಸುವ ಪ್ರತಿಜ್ಞೆ ಮಾಡಿದರು.

- Advertisement -
- Advertisement -

“ಈ ಸರ್ಕಾರವು ರೈತ, ದಲಿತ ಮತ್ತು ಕಾರ್ಮಿಕ ವಿರೋಧಿ ಮಸೂದೆಗಳನ್ನು ಜಾರಿಗೆ ತರುವ ಮೂಲಕ ಈ ನಾಡಿನ ರೈತರು, ಕಾರ್ಮಿಕರು ಮತ್ತು ದಲಿತರನ್ನು ಕಾರ್ಪೋರೇಟ್ ಗಳಿಗೆ, ಕೈಗಾರಿಕೆಗಳಿಗೆ ಜೀತ ಮಾಡುವ ಗುಲಾಮರನ್ನಾಗಿಸುವ ಹುನ್ನಾರ ಮಾಡುತ್ತಿದೆ ಎಂದು ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾದ ಡಾ. ಪ್ರಕಾಶ್ ಕಮ್ಮರಡಿ ಆರೋಪಿಸಿದ್ದಾರೆ.

ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆದ ರೈತ-ದಲಿತ-ಕಾರ್ಮಿಕರ ಐಕ್ಯ ಹೋರಾಟದ ಪರ್ಯಾಯ ಜನತಾ ಅಧಿವೇಶನದ ಪ್ರಸ್ತಾವಿಕ ಮಾತುಗಳನ್ನಾಡಿದ ಅವರು, “ಕೊರೋನಾಗಿಂತ ದೊಡ್ಡ ಆತಂಕವನ್ನು ಸರ್ಕಾರ ನಮ್ಮ ಮುಂದಿಟ್ಟಿದೆ. ಜನವಿರೋಧಿ ಕಾನೂನುಗಳನ್ನು ನೀವು ಚರ್ಚಿಸಬಾರದು, ವಿರೋಧಿಸಬಾರದು ಎಂಬ ಕಾರಣಕ್ಕೆ ಸುಗ್ರೀವಾಜ್ಞೆಗಳನ್ನು ತಂದು ಮಸೂದೆಗಳನ್ನು ಜಾರಿಗೊಳಿಸಲು ಹೊರಟಿದೆ” ಎಂದು ಆರೋಪಿಸಿದ್ದಾರೆ.

“ಕೊರೊನಾದ ಆತಂಕದ ನಡುವೆ ಈ ಮೂರೂ (ರೈತ, ದಲಿತ, ಕಾರ್ಮಿಕ) ಕೈಗಳು ಸೇರಿವೆ. ಈ ಬಾರಿ ಅವು ಒಟ್ಟು ಸೇರಿರುವುದಷ್ಟೇ ಅಲ್ಲದೇ ತಮ್ಮ ಕೈಗಳಲ್ಲಿ ತಂತಿ ಬೇಲಿಯನ್ನು ಹಿಡಿದುಕೊಂಡಿವೆ. ಈ ತಂತಿಬೇಲಿ ರಕ್ಷಣೆಯ ಸಂಕೇತವಾಗಿದೆ. ಈ ಮೂರೂ ಕೈಗಳು ಇಂದು ಸೇರಿ ಇಡೀ ವ್ಯವಸ್ಥೆಯನ್ನು ರಕ್ಷಣೆ ಮಾಡುತ್ತಿವೆ. ಈ ರಕ್ಷಣೆಗಾಗಿ ಇಂದು ಎಲ್ಲಾ ಹೋರಾಟಗಾರರೂ ಇಲ್ಲಿ ಸೇರಿದ್ದೀವಿ. ‌ಹಾಗಾಗಿ ಇದು ಅತ್ಯಂತ ಮಹತ್ವದ ದಿನವಾಗಿದೆ. ಈ ದಿನದಂದು ನಮ್ಮ ಪೂರ್ವಜರು ನಮ್ಮ ಒಳಿತಿಗಾಗಿ ಒಂದಾಗಿದ್ದರು ಎಂದು, ನಮ್ಮ ಮುಂದಿನ ಪೀಳಿಗೆಯವರು ನಮ್ಮನ್ನು ನೆನಪಿಕೊಳ್ಳಲಿದ್ದಾರೆ” ಎಂದು ಪ್ರಕಾಶ್ ಕಮ್ಮರಡಿ ಅಭಿಪ್ರಾಯಪಟ್ಟರು.

‘ಭೂ ಸುಧಾರಣೆ, ಎಪಿಎಂಸಿ ಮತ್ತು ಕಾರ್ಮಿಕ ಭದ್ರತೆಯಂತಹ ಕಾಯ್ದೆಗಳಿಗೆ ಸರ್ಕಾರ ತಿದ್ದುಪಡಿ ಮಾಡುತ್ತಿದೆ. ಇದನ್ನು ಚರ್ಚೆ ಮಾಡದೇ ಜಾರಿಗೆ ತರುವ ಅಗತ್ಯವೇನಿತ್ತು? ಆತುರ ಬೇಡ, ಚರ್ಚಿಸಿದ ನಂತರ ಜಾರಿಗೆ ತನ್ನಿ. ಅಂಬೇಡ್ಕರ್ ಆಶಯದ ಸಂಸತ್ತು ಇದೆ. ಇಂತಹ ನೀಚ ಕೆಲಸಗಳಿಂದ ಅದನ್ನು ಅಪವಿತ್ರ ಮಾಡಬೇಡಿ. ಯಾವುದೇ ಕಾನೂನ್ನಾದರೂ ಚರ್ಚಿಸಿ ಜಾರಿ ಮಾಡಬೇಕು” ಎಂದು ಅವರು ಒತ್ತಾಯಿಸಿದರು.

ಜನತಾ ಅಧಿವೇಶನದ ಉದ್ಘಾಟನೆಯನ್ನು, ಸ್ವರಾಜ್ ಇಂಡಿಯಾ ಪಕ್ಷದ ರಾಷ್ಟ್ರಾಧ್ಯಕ್ಷರಾದ ಯೋಗೇಂದ್ರ ಯಾದವ್‌ರವರು ಕಾಗೋಡು ಹೋರಾಟದ ನೆನಪಿನಲ್ಲಿ ಮಡಿಕೆಯಲ್ಲಿರುವ ಪವಿತ್ರ ಮಣ್ಣನ್ನು ಯುವ ರೈತರಿಗೆ ನೀಡುವ ಮೂಲಕ ನೆರವೇರಿಸಿದರು. ಈ ಸಂದರ್ಭದಲ್ಲಿ, “ನಮ್ಮ ಪೂರ್ವಿಕರ ರಕ್ತ ಮತ್ತು ಬೆವರಿನಿಂದ ಮಿಂದಿರುವ ಈ ಪವಿತ್ರ ಮಣ್ಣನ್ನು ಕಳ್ಳ ಖದೀಮರ ಪಾಲಾಗಲು ಬಿಡುವುದಿಲ್ಲ” ಎಂದು ಭೂ ಸ್ವಾಧೀನ ಕಾಯ್ದೆಯನ್ನು ವಿರೋಧಿಸುವ ಪ್ರತಿಜ್ಞೆ ಮಾಡಿದರು.


ಇದನ್ನೂ ಓದಿ: ರಸ್ತೆಯಲ್ಲಿ ಅರೆಬೆತ್ತಲೆ ಕುಳಿತ ರೈತರು; ಸರ್ಕಾರದ ವಿರುದ್ಧ ತೀವ್ರಗೊಂಡ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...