Homeಕರ್ನಾಟಕರೈತ, ದಲಿತ, ಕಾರ್ಮಿಕರನ್ನು ಗುಲಾಮರನ್ನಾಗಿ ಮಾಡುತ್ತಿರುವ ಸರ್ಕಾರ: ಜನತಾ ಅಧಿವೇಶನದಲ್ಲಿ ಡಾ. ಪ್ರಕಾಶ್ ಕಮ್ಮರಡಿ

ರೈತ, ದಲಿತ, ಕಾರ್ಮಿಕರನ್ನು ಗುಲಾಮರನ್ನಾಗಿ ಮಾಡುತ್ತಿರುವ ಸರ್ಕಾರ: ಜನತಾ ಅಧಿವೇಶನದಲ್ಲಿ ಡಾ. ಪ್ರಕಾಶ್ ಕಮ್ಮರಡಿ

ಈ ಸಂದರ್ಭದಲ್ಲಿ, "ನಮ್ಮ ಪೂರ್ವಿಕರ ರಕ್ತ ಮತ್ತು ಬೆವರಿನಿಂದ ಮಿಂದಿರುವ ಈ ಪವಿತ್ರ ಮಣ್ಣನ್ನು ಕಳ್ಳ ಖದೀಮರ ಪಾಲಾಗಲು ಬಿಡುವುದಿಲ್ಲ" ಎಂದು ಭೂ ಸ್ವಾಧೀನ ಕಾಯ್ದೆಯನ್ನು ವಿರೋಧಿಸುವ ಪ್ರತಿಜ್ಞೆ ಮಾಡಿದರು.

- Advertisement -
- Advertisement -

“ಈ ಸರ್ಕಾರವು ರೈತ, ದಲಿತ ಮತ್ತು ಕಾರ್ಮಿಕ ವಿರೋಧಿ ಮಸೂದೆಗಳನ್ನು ಜಾರಿಗೆ ತರುವ ಮೂಲಕ ಈ ನಾಡಿನ ರೈತರು, ಕಾರ್ಮಿಕರು ಮತ್ತು ದಲಿತರನ್ನು ಕಾರ್ಪೋರೇಟ್ ಗಳಿಗೆ, ಕೈಗಾರಿಕೆಗಳಿಗೆ ಜೀತ ಮಾಡುವ ಗುಲಾಮರನ್ನಾಗಿಸುವ ಹುನ್ನಾರ ಮಾಡುತ್ತಿದೆ ಎಂದು ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾದ ಡಾ. ಪ್ರಕಾಶ್ ಕಮ್ಮರಡಿ ಆರೋಪಿಸಿದ್ದಾರೆ.

ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆದ ರೈತ-ದಲಿತ-ಕಾರ್ಮಿಕರ ಐಕ್ಯ ಹೋರಾಟದ ಪರ್ಯಾಯ ಜನತಾ ಅಧಿವೇಶನದ ಪ್ರಸ್ತಾವಿಕ ಮಾತುಗಳನ್ನಾಡಿದ ಅವರು, “ಕೊರೋನಾಗಿಂತ ದೊಡ್ಡ ಆತಂಕವನ್ನು ಸರ್ಕಾರ ನಮ್ಮ ಮುಂದಿಟ್ಟಿದೆ. ಜನವಿರೋಧಿ ಕಾನೂನುಗಳನ್ನು ನೀವು ಚರ್ಚಿಸಬಾರದು, ವಿರೋಧಿಸಬಾರದು ಎಂಬ ಕಾರಣಕ್ಕೆ ಸುಗ್ರೀವಾಜ್ಞೆಗಳನ್ನು ತಂದು ಮಸೂದೆಗಳನ್ನು ಜಾರಿಗೊಳಿಸಲು ಹೊರಟಿದೆ” ಎಂದು ಆರೋಪಿಸಿದ್ದಾರೆ.

“ಕೊರೊನಾದ ಆತಂಕದ ನಡುವೆ ಈ ಮೂರೂ (ರೈತ, ದಲಿತ, ಕಾರ್ಮಿಕ) ಕೈಗಳು ಸೇರಿವೆ. ಈ ಬಾರಿ ಅವು ಒಟ್ಟು ಸೇರಿರುವುದಷ್ಟೇ ಅಲ್ಲದೇ ತಮ್ಮ ಕೈಗಳಲ್ಲಿ ತಂತಿ ಬೇಲಿಯನ್ನು ಹಿಡಿದುಕೊಂಡಿವೆ. ಈ ತಂತಿಬೇಲಿ ರಕ್ಷಣೆಯ ಸಂಕೇತವಾಗಿದೆ. ಈ ಮೂರೂ ಕೈಗಳು ಇಂದು ಸೇರಿ ಇಡೀ ವ್ಯವಸ್ಥೆಯನ್ನು ರಕ್ಷಣೆ ಮಾಡುತ್ತಿವೆ. ಈ ರಕ್ಷಣೆಗಾಗಿ ಇಂದು ಎಲ್ಲಾ ಹೋರಾಟಗಾರರೂ ಇಲ್ಲಿ ಸೇರಿದ್ದೀವಿ. ‌ಹಾಗಾಗಿ ಇದು ಅತ್ಯಂತ ಮಹತ್ವದ ದಿನವಾಗಿದೆ. ಈ ದಿನದಂದು ನಮ್ಮ ಪೂರ್ವಜರು ನಮ್ಮ ಒಳಿತಿಗಾಗಿ ಒಂದಾಗಿದ್ದರು ಎಂದು, ನಮ್ಮ ಮುಂದಿನ ಪೀಳಿಗೆಯವರು ನಮ್ಮನ್ನು ನೆನಪಿಕೊಳ್ಳಲಿದ್ದಾರೆ” ಎಂದು ಪ್ರಕಾಶ್ ಕಮ್ಮರಡಿ ಅಭಿಪ್ರಾಯಪಟ್ಟರು.

‘ಭೂ ಸುಧಾರಣೆ, ಎಪಿಎಂಸಿ ಮತ್ತು ಕಾರ್ಮಿಕ ಭದ್ರತೆಯಂತಹ ಕಾಯ್ದೆಗಳಿಗೆ ಸರ್ಕಾರ ತಿದ್ದುಪಡಿ ಮಾಡುತ್ತಿದೆ. ಇದನ್ನು ಚರ್ಚೆ ಮಾಡದೇ ಜಾರಿಗೆ ತರುವ ಅಗತ್ಯವೇನಿತ್ತು? ಆತುರ ಬೇಡ, ಚರ್ಚಿಸಿದ ನಂತರ ಜಾರಿಗೆ ತನ್ನಿ. ಅಂಬೇಡ್ಕರ್ ಆಶಯದ ಸಂಸತ್ತು ಇದೆ. ಇಂತಹ ನೀಚ ಕೆಲಸಗಳಿಂದ ಅದನ್ನು ಅಪವಿತ್ರ ಮಾಡಬೇಡಿ. ಯಾವುದೇ ಕಾನೂನ್ನಾದರೂ ಚರ್ಚಿಸಿ ಜಾರಿ ಮಾಡಬೇಕು” ಎಂದು ಅವರು ಒತ್ತಾಯಿಸಿದರು.

ಜನತಾ ಅಧಿವೇಶನದ ಉದ್ಘಾಟನೆಯನ್ನು, ಸ್ವರಾಜ್ ಇಂಡಿಯಾ ಪಕ್ಷದ ರಾಷ್ಟ್ರಾಧ್ಯಕ್ಷರಾದ ಯೋಗೇಂದ್ರ ಯಾದವ್‌ರವರು ಕಾಗೋಡು ಹೋರಾಟದ ನೆನಪಿನಲ್ಲಿ ಮಡಿಕೆಯಲ್ಲಿರುವ ಪವಿತ್ರ ಮಣ್ಣನ್ನು ಯುವ ರೈತರಿಗೆ ನೀಡುವ ಮೂಲಕ ನೆರವೇರಿಸಿದರು. ಈ ಸಂದರ್ಭದಲ್ಲಿ, “ನಮ್ಮ ಪೂರ್ವಿಕರ ರಕ್ತ ಮತ್ತು ಬೆವರಿನಿಂದ ಮಿಂದಿರುವ ಈ ಪವಿತ್ರ ಮಣ್ಣನ್ನು ಕಳ್ಳ ಖದೀಮರ ಪಾಲಾಗಲು ಬಿಡುವುದಿಲ್ಲ” ಎಂದು ಭೂ ಸ್ವಾಧೀನ ಕಾಯ್ದೆಯನ್ನು ವಿರೋಧಿಸುವ ಪ್ರತಿಜ್ಞೆ ಮಾಡಿದರು.


ಇದನ್ನೂ ಓದಿ: ರಸ್ತೆಯಲ್ಲಿ ಅರೆಬೆತ್ತಲೆ ಕುಳಿತ ರೈತರು; ಸರ್ಕಾರದ ವಿರುದ್ಧ ತೀವ್ರಗೊಂಡ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...