Homeಕರ್ನಾಟಕರೈತ, ದಲಿತ, ಕಾರ್ಮಿಕರನ್ನು ಗುಲಾಮರನ್ನಾಗಿ ಮಾಡುತ್ತಿರುವ ಸರ್ಕಾರ: ಜನತಾ ಅಧಿವೇಶನದಲ್ಲಿ ಡಾ. ಪ್ರಕಾಶ್ ಕಮ್ಮರಡಿ

ರೈತ, ದಲಿತ, ಕಾರ್ಮಿಕರನ್ನು ಗುಲಾಮರನ್ನಾಗಿ ಮಾಡುತ್ತಿರುವ ಸರ್ಕಾರ: ಜನತಾ ಅಧಿವೇಶನದಲ್ಲಿ ಡಾ. ಪ್ರಕಾಶ್ ಕಮ್ಮರಡಿ

ಈ ಸಂದರ್ಭದಲ್ಲಿ, "ನಮ್ಮ ಪೂರ್ವಿಕರ ರಕ್ತ ಮತ್ತು ಬೆವರಿನಿಂದ ಮಿಂದಿರುವ ಈ ಪವಿತ್ರ ಮಣ್ಣನ್ನು ಕಳ್ಳ ಖದೀಮರ ಪಾಲಾಗಲು ಬಿಡುವುದಿಲ್ಲ" ಎಂದು ಭೂ ಸ್ವಾಧೀನ ಕಾಯ್ದೆಯನ್ನು ವಿರೋಧಿಸುವ ಪ್ರತಿಜ್ಞೆ ಮಾಡಿದರು.

- Advertisement -
- Advertisement -

“ಈ ಸರ್ಕಾರವು ರೈತ, ದಲಿತ ಮತ್ತು ಕಾರ್ಮಿಕ ವಿರೋಧಿ ಮಸೂದೆಗಳನ್ನು ಜಾರಿಗೆ ತರುವ ಮೂಲಕ ಈ ನಾಡಿನ ರೈತರು, ಕಾರ್ಮಿಕರು ಮತ್ತು ದಲಿತರನ್ನು ಕಾರ್ಪೋರೇಟ್ ಗಳಿಗೆ, ಕೈಗಾರಿಕೆಗಳಿಗೆ ಜೀತ ಮಾಡುವ ಗುಲಾಮರನ್ನಾಗಿಸುವ ಹುನ್ನಾರ ಮಾಡುತ್ತಿದೆ ಎಂದು ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾದ ಡಾ. ಪ್ರಕಾಶ್ ಕಮ್ಮರಡಿ ಆರೋಪಿಸಿದ್ದಾರೆ.

ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆದ ರೈತ-ದಲಿತ-ಕಾರ್ಮಿಕರ ಐಕ್ಯ ಹೋರಾಟದ ಪರ್ಯಾಯ ಜನತಾ ಅಧಿವೇಶನದ ಪ್ರಸ್ತಾವಿಕ ಮಾತುಗಳನ್ನಾಡಿದ ಅವರು, “ಕೊರೋನಾಗಿಂತ ದೊಡ್ಡ ಆತಂಕವನ್ನು ಸರ್ಕಾರ ನಮ್ಮ ಮುಂದಿಟ್ಟಿದೆ. ಜನವಿರೋಧಿ ಕಾನೂನುಗಳನ್ನು ನೀವು ಚರ್ಚಿಸಬಾರದು, ವಿರೋಧಿಸಬಾರದು ಎಂಬ ಕಾರಣಕ್ಕೆ ಸುಗ್ರೀವಾಜ್ಞೆಗಳನ್ನು ತಂದು ಮಸೂದೆಗಳನ್ನು ಜಾರಿಗೊಳಿಸಲು ಹೊರಟಿದೆ” ಎಂದು ಆರೋಪಿಸಿದ್ದಾರೆ.

“ಕೊರೊನಾದ ಆತಂಕದ ನಡುವೆ ಈ ಮೂರೂ (ರೈತ, ದಲಿತ, ಕಾರ್ಮಿಕ) ಕೈಗಳು ಸೇರಿವೆ. ಈ ಬಾರಿ ಅವು ಒಟ್ಟು ಸೇರಿರುವುದಷ್ಟೇ ಅಲ್ಲದೇ ತಮ್ಮ ಕೈಗಳಲ್ಲಿ ತಂತಿ ಬೇಲಿಯನ್ನು ಹಿಡಿದುಕೊಂಡಿವೆ. ಈ ತಂತಿಬೇಲಿ ರಕ್ಷಣೆಯ ಸಂಕೇತವಾಗಿದೆ. ಈ ಮೂರೂ ಕೈಗಳು ಇಂದು ಸೇರಿ ಇಡೀ ವ್ಯವಸ್ಥೆಯನ್ನು ರಕ್ಷಣೆ ಮಾಡುತ್ತಿವೆ. ಈ ರಕ್ಷಣೆಗಾಗಿ ಇಂದು ಎಲ್ಲಾ ಹೋರಾಟಗಾರರೂ ಇಲ್ಲಿ ಸೇರಿದ್ದೀವಿ. ‌ಹಾಗಾಗಿ ಇದು ಅತ್ಯಂತ ಮಹತ್ವದ ದಿನವಾಗಿದೆ. ಈ ದಿನದಂದು ನಮ್ಮ ಪೂರ್ವಜರು ನಮ್ಮ ಒಳಿತಿಗಾಗಿ ಒಂದಾಗಿದ್ದರು ಎಂದು, ನಮ್ಮ ಮುಂದಿನ ಪೀಳಿಗೆಯವರು ನಮ್ಮನ್ನು ನೆನಪಿಕೊಳ್ಳಲಿದ್ದಾರೆ” ಎಂದು ಪ್ರಕಾಶ್ ಕಮ್ಮರಡಿ ಅಭಿಪ್ರಾಯಪಟ್ಟರು.

‘ಭೂ ಸುಧಾರಣೆ, ಎಪಿಎಂಸಿ ಮತ್ತು ಕಾರ್ಮಿಕ ಭದ್ರತೆಯಂತಹ ಕಾಯ್ದೆಗಳಿಗೆ ಸರ್ಕಾರ ತಿದ್ದುಪಡಿ ಮಾಡುತ್ತಿದೆ. ಇದನ್ನು ಚರ್ಚೆ ಮಾಡದೇ ಜಾರಿಗೆ ತರುವ ಅಗತ್ಯವೇನಿತ್ತು? ಆತುರ ಬೇಡ, ಚರ್ಚಿಸಿದ ನಂತರ ಜಾರಿಗೆ ತನ್ನಿ. ಅಂಬೇಡ್ಕರ್ ಆಶಯದ ಸಂಸತ್ತು ಇದೆ. ಇಂತಹ ನೀಚ ಕೆಲಸಗಳಿಂದ ಅದನ್ನು ಅಪವಿತ್ರ ಮಾಡಬೇಡಿ. ಯಾವುದೇ ಕಾನೂನ್ನಾದರೂ ಚರ್ಚಿಸಿ ಜಾರಿ ಮಾಡಬೇಕು” ಎಂದು ಅವರು ಒತ್ತಾಯಿಸಿದರು.

ಜನತಾ ಅಧಿವೇಶನದ ಉದ್ಘಾಟನೆಯನ್ನು, ಸ್ವರಾಜ್ ಇಂಡಿಯಾ ಪಕ್ಷದ ರಾಷ್ಟ್ರಾಧ್ಯಕ್ಷರಾದ ಯೋಗೇಂದ್ರ ಯಾದವ್‌ರವರು ಕಾಗೋಡು ಹೋರಾಟದ ನೆನಪಿನಲ್ಲಿ ಮಡಿಕೆಯಲ್ಲಿರುವ ಪವಿತ್ರ ಮಣ್ಣನ್ನು ಯುವ ರೈತರಿಗೆ ನೀಡುವ ಮೂಲಕ ನೆರವೇರಿಸಿದರು. ಈ ಸಂದರ್ಭದಲ್ಲಿ, “ನಮ್ಮ ಪೂರ್ವಿಕರ ರಕ್ತ ಮತ್ತು ಬೆವರಿನಿಂದ ಮಿಂದಿರುವ ಈ ಪವಿತ್ರ ಮಣ್ಣನ್ನು ಕಳ್ಳ ಖದೀಮರ ಪಾಲಾಗಲು ಬಿಡುವುದಿಲ್ಲ” ಎಂದು ಭೂ ಸ್ವಾಧೀನ ಕಾಯ್ದೆಯನ್ನು ವಿರೋಧಿಸುವ ಪ್ರತಿಜ್ಞೆ ಮಾಡಿದರು.


ಇದನ್ನೂ ಓದಿ: ರಸ್ತೆಯಲ್ಲಿ ಅರೆಬೆತ್ತಲೆ ಕುಳಿತ ರೈತರು; ಸರ್ಕಾರದ ವಿರುದ್ಧ ತೀವ್ರಗೊಂಡ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...