Homeಕರ್ನಾಟಕರೈತ, ದಲಿತ, ಕಾರ್ಮಿಕರನ್ನು ಗುಲಾಮರನ್ನಾಗಿ ಮಾಡುತ್ತಿರುವ ಸರ್ಕಾರ: ಜನತಾ ಅಧಿವೇಶನದಲ್ಲಿ ಡಾ. ಪ್ರಕಾಶ್ ಕಮ್ಮರಡಿ

ರೈತ, ದಲಿತ, ಕಾರ್ಮಿಕರನ್ನು ಗುಲಾಮರನ್ನಾಗಿ ಮಾಡುತ್ತಿರುವ ಸರ್ಕಾರ: ಜನತಾ ಅಧಿವೇಶನದಲ್ಲಿ ಡಾ. ಪ್ರಕಾಶ್ ಕಮ್ಮರಡಿ

ಈ ಸಂದರ್ಭದಲ್ಲಿ, "ನಮ್ಮ ಪೂರ್ವಿಕರ ರಕ್ತ ಮತ್ತು ಬೆವರಿನಿಂದ ಮಿಂದಿರುವ ಈ ಪವಿತ್ರ ಮಣ್ಣನ್ನು ಕಳ್ಳ ಖದೀಮರ ಪಾಲಾಗಲು ಬಿಡುವುದಿಲ್ಲ" ಎಂದು ಭೂ ಸ್ವಾಧೀನ ಕಾಯ್ದೆಯನ್ನು ವಿರೋಧಿಸುವ ಪ್ರತಿಜ್ಞೆ ಮಾಡಿದರು.

- Advertisement -
- Advertisement -

“ಈ ಸರ್ಕಾರವು ರೈತ, ದಲಿತ ಮತ್ತು ಕಾರ್ಮಿಕ ವಿರೋಧಿ ಮಸೂದೆಗಳನ್ನು ಜಾರಿಗೆ ತರುವ ಮೂಲಕ ಈ ನಾಡಿನ ರೈತರು, ಕಾರ್ಮಿಕರು ಮತ್ತು ದಲಿತರನ್ನು ಕಾರ್ಪೋರೇಟ್ ಗಳಿಗೆ, ಕೈಗಾರಿಕೆಗಳಿಗೆ ಜೀತ ಮಾಡುವ ಗುಲಾಮರನ್ನಾಗಿಸುವ ಹುನ್ನಾರ ಮಾಡುತ್ತಿದೆ ಎಂದು ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾದ ಡಾ. ಪ್ರಕಾಶ್ ಕಮ್ಮರಡಿ ಆರೋಪಿಸಿದ್ದಾರೆ.

ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆದ ರೈತ-ದಲಿತ-ಕಾರ್ಮಿಕರ ಐಕ್ಯ ಹೋರಾಟದ ಪರ್ಯಾಯ ಜನತಾ ಅಧಿವೇಶನದ ಪ್ರಸ್ತಾವಿಕ ಮಾತುಗಳನ್ನಾಡಿದ ಅವರು, “ಕೊರೋನಾಗಿಂತ ದೊಡ್ಡ ಆತಂಕವನ್ನು ಸರ್ಕಾರ ನಮ್ಮ ಮುಂದಿಟ್ಟಿದೆ. ಜನವಿರೋಧಿ ಕಾನೂನುಗಳನ್ನು ನೀವು ಚರ್ಚಿಸಬಾರದು, ವಿರೋಧಿಸಬಾರದು ಎಂಬ ಕಾರಣಕ್ಕೆ ಸುಗ್ರೀವಾಜ್ಞೆಗಳನ್ನು ತಂದು ಮಸೂದೆಗಳನ್ನು ಜಾರಿಗೊಳಿಸಲು ಹೊರಟಿದೆ” ಎಂದು ಆರೋಪಿಸಿದ್ದಾರೆ.

“ಕೊರೊನಾದ ಆತಂಕದ ನಡುವೆ ಈ ಮೂರೂ (ರೈತ, ದಲಿತ, ಕಾರ್ಮಿಕ) ಕೈಗಳು ಸೇರಿವೆ. ಈ ಬಾರಿ ಅವು ಒಟ್ಟು ಸೇರಿರುವುದಷ್ಟೇ ಅಲ್ಲದೇ ತಮ್ಮ ಕೈಗಳಲ್ಲಿ ತಂತಿ ಬೇಲಿಯನ್ನು ಹಿಡಿದುಕೊಂಡಿವೆ. ಈ ತಂತಿಬೇಲಿ ರಕ್ಷಣೆಯ ಸಂಕೇತವಾಗಿದೆ. ಈ ಮೂರೂ ಕೈಗಳು ಇಂದು ಸೇರಿ ಇಡೀ ವ್ಯವಸ್ಥೆಯನ್ನು ರಕ್ಷಣೆ ಮಾಡುತ್ತಿವೆ. ಈ ರಕ್ಷಣೆಗಾಗಿ ಇಂದು ಎಲ್ಲಾ ಹೋರಾಟಗಾರರೂ ಇಲ್ಲಿ ಸೇರಿದ್ದೀವಿ. ‌ಹಾಗಾಗಿ ಇದು ಅತ್ಯಂತ ಮಹತ್ವದ ದಿನವಾಗಿದೆ. ಈ ದಿನದಂದು ನಮ್ಮ ಪೂರ್ವಜರು ನಮ್ಮ ಒಳಿತಿಗಾಗಿ ಒಂದಾಗಿದ್ದರು ಎಂದು, ನಮ್ಮ ಮುಂದಿನ ಪೀಳಿಗೆಯವರು ನಮ್ಮನ್ನು ನೆನಪಿಕೊಳ್ಳಲಿದ್ದಾರೆ” ಎಂದು ಪ್ರಕಾಶ್ ಕಮ್ಮರಡಿ ಅಭಿಪ್ರಾಯಪಟ್ಟರು.

‘ಭೂ ಸುಧಾರಣೆ, ಎಪಿಎಂಸಿ ಮತ್ತು ಕಾರ್ಮಿಕ ಭದ್ರತೆಯಂತಹ ಕಾಯ್ದೆಗಳಿಗೆ ಸರ್ಕಾರ ತಿದ್ದುಪಡಿ ಮಾಡುತ್ತಿದೆ. ಇದನ್ನು ಚರ್ಚೆ ಮಾಡದೇ ಜಾರಿಗೆ ತರುವ ಅಗತ್ಯವೇನಿತ್ತು? ಆತುರ ಬೇಡ, ಚರ್ಚಿಸಿದ ನಂತರ ಜಾರಿಗೆ ತನ್ನಿ. ಅಂಬೇಡ್ಕರ್ ಆಶಯದ ಸಂಸತ್ತು ಇದೆ. ಇಂತಹ ನೀಚ ಕೆಲಸಗಳಿಂದ ಅದನ್ನು ಅಪವಿತ್ರ ಮಾಡಬೇಡಿ. ಯಾವುದೇ ಕಾನೂನ್ನಾದರೂ ಚರ್ಚಿಸಿ ಜಾರಿ ಮಾಡಬೇಕು” ಎಂದು ಅವರು ಒತ್ತಾಯಿಸಿದರು.

ಜನತಾ ಅಧಿವೇಶನದ ಉದ್ಘಾಟನೆಯನ್ನು, ಸ್ವರಾಜ್ ಇಂಡಿಯಾ ಪಕ್ಷದ ರಾಷ್ಟ್ರಾಧ್ಯಕ್ಷರಾದ ಯೋಗೇಂದ್ರ ಯಾದವ್‌ರವರು ಕಾಗೋಡು ಹೋರಾಟದ ನೆನಪಿನಲ್ಲಿ ಮಡಿಕೆಯಲ್ಲಿರುವ ಪವಿತ್ರ ಮಣ್ಣನ್ನು ಯುವ ರೈತರಿಗೆ ನೀಡುವ ಮೂಲಕ ನೆರವೇರಿಸಿದರು. ಈ ಸಂದರ್ಭದಲ್ಲಿ, “ನಮ್ಮ ಪೂರ್ವಿಕರ ರಕ್ತ ಮತ್ತು ಬೆವರಿನಿಂದ ಮಿಂದಿರುವ ಈ ಪವಿತ್ರ ಮಣ್ಣನ್ನು ಕಳ್ಳ ಖದೀಮರ ಪಾಲಾಗಲು ಬಿಡುವುದಿಲ್ಲ” ಎಂದು ಭೂ ಸ್ವಾಧೀನ ಕಾಯ್ದೆಯನ್ನು ವಿರೋಧಿಸುವ ಪ್ರತಿಜ್ಞೆ ಮಾಡಿದರು.


ಇದನ್ನೂ ಓದಿ: ರಸ್ತೆಯಲ್ಲಿ ಅರೆಬೆತ್ತಲೆ ಕುಳಿತ ರೈತರು; ಸರ್ಕಾರದ ವಿರುದ್ಧ ತೀವ್ರಗೊಂಡ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...