Homeಕರ್ನಾಟಕರೈತ, ದಲಿತ, ಕಾರ್ಮಿಕರನ್ನು ಗುಲಾಮರನ್ನಾಗಿ ಮಾಡುತ್ತಿರುವ ಸರ್ಕಾರ: ಜನತಾ ಅಧಿವೇಶನದಲ್ಲಿ ಡಾ. ಪ್ರಕಾಶ್ ಕಮ್ಮರಡಿ

ರೈತ, ದಲಿತ, ಕಾರ್ಮಿಕರನ್ನು ಗುಲಾಮರನ್ನಾಗಿ ಮಾಡುತ್ತಿರುವ ಸರ್ಕಾರ: ಜನತಾ ಅಧಿವೇಶನದಲ್ಲಿ ಡಾ. ಪ್ರಕಾಶ್ ಕಮ್ಮರಡಿ

ಈ ಸಂದರ್ಭದಲ್ಲಿ, "ನಮ್ಮ ಪೂರ್ವಿಕರ ರಕ್ತ ಮತ್ತು ಬೆವರಿನಿಂದ ಮಿಂದಿರುವ ಈ ಪವಿತ್ರ ಮಣ್ಣನ್ನು ಕಳ್ಳ ಖದೀಮರ ಪಾಲಾಗಲು ಬಿಡುವುದಿಲ್ಲ" ಎಂದು ಭೂ ಸ್ವಾಧೀನ ಕಾಯ್ದೆಯನ್ನು ವಿರೋಧಿಸುವ ಪ್ರತಿಜ್ಞೆ ಮಾಡಿದರು.

- Advertisement -
- Advertisement -

“ಈ ಸರ್ಕಾರವು ರೈತ, ದಲಿತ ಮತ್ತು ಕಾರ್ಮಿಕ ವಿರೋಧಿ ಮಸೂದೆಗಳನ್ನು ಜಾರಿಗೆ ತರುವ ಮೂಲಕ ಈ ನಾಡಿನ ರೈತರು, ಕಾರ್ಮಿಕರು ಮತ್ತು ದಲಿತರನ್ನು ಕಾರ್ಪೋರೇಟ್ ಗಳಿಗೆ, ಕೈಗಾರಿಕೆಗಳಿಗೆ ಜೀತ ಮಾಡುವ ಗುಲಾಮರನ್ನಾಗಿಸುವ ಹುನ್ನಾರ ಮಾಡುತ್ತಿದೆ ಎಂದು ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾದ ಡಾ. ಪ್ರಕಾಶ್ ಕಮ್ಮರಡಿ ಆರೋಪಿಸಿದ್ದಾರೆ.

ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆದ ರೈತ-ದಲಿತ-ಕಾರ್ಮಿಕರ ಐಕ್ಯ ಹೋರಾಟದ ಪರ್ಯಾಯ ಜನತಾ ಅಧಿವೇಶನದ ಪ್ರಸ್ತಾವಿಕ ಮಾತುಗಳನ್ನಾಡಿದ ಅವರು, “ಕೊರೋನಾಗಿಂತ ದೊಡ್ಡ ಆತಂಕವನ್ನು ಸರ್ಕಾರ ನಮ್ಮ ಮುಂದಿಟ್ಟಿದೆ. ಜನವಿರೋಧಿ ಕಾನೂನುಗಳನ್ನು ನೀವು ಚರ್ಚಿಸಬಾರದು, ವಿರೋಧಿಸಬಾರದು ಎಂಬ ಕಾರಣಕ್ಕೆ ಸುಗ್ರೀವಾಜ್ಞೆಗಳನ್ನು ತಂದು ಮಸೂದೆಗಳನ್ನು ಜಾರಿಗೊಳಿಸಲು ಹೊರಟಿದೆ” ಎಂದು ಆರೋಪಿಸಿದ್ದಾರೆ.

“ಕೊರೊನಾದ ಆತಂಕದ ನಡುವೆ ಈ ಮೂರೂ (ರೈತ, ದಲಿತ, ಕಾರ್ಮಿಕ) ಕೈಗಳು ಸೇರಿವೆ. ಈ ಬಾರಿ ಅವು ಒಟ್ಟು ಸೇರಿರುವುದಷ್ಟೇ ಅಲ್ಲದೇ ತಮ್ಮ ಕೈಗಳಲ್ಲಿ ತಂತಿ ಬೇಲಿಯನ್ನು ಹಿಡಿದುಕೊಂಡಿವೆ. ಈ ತಂತಿಬೇಲಿ ರಕ್ಷಣೆಯ ಸಂಕೇತವಾಗಿದೆ. ಈ ಮೂರೂ ಕೈಗಳು ಇಂದು ಸೇರಿ ಇಡೀ ವ್ಯವಸ್ಥೆಯನ್ನು ರಕ್ಷಣೆ ಮಾಡುತ್ತಿವೆ. ಈ ರಕ್ಷಣೆಗಾಗಿ ಇಂದು ಎಲ್ಲಾ ಹೋರಾಟಗಾರರೂ ಇಲ್ಲಿ ಸೇರಿದ್ದೀವಿ. ‌ಹಾಗಾಗಿ ಇದು ಅತ್ಯಂತ ಮಹತ್ವದ ದಿನವಾಗಿದೆ. ಈ ದಿನದಂದು ನಮ್ಮ ಪೂರ್ವಜರು ನಮ್ಮ ಒಳಿತಿಗಾಗಿ ಒಂದಾಗಿದ್ದರು ಎಂದು, ನಮ್ಮ ಮುಂದಿನ ಪೀಳಿಗೆಯವರು ನಮ್ಮನ್ನು ನೆನಪಿಕೊಳ್ಳಲಿದ್ದಾರೆ” ಎಂದು ಪ್ರಕಾಶ್ ಕಮ್ಮರಡಿ ಅಭಿಪ್ರಾಯಪಟ್ಟರು.

‘ಭೂ ಸುಧಾರಣೆ, ಎಪಿಎಂಸಿ ಮತ್ತು ಕಾರ್ಮಿಕ ಭದ್ರತೆಯಂತಹ ಕಾಯ್ದೆಗಳಿಗೆ ಸರ್ಕಾರ ತಿದ್ದುಪಡಿ ಮಾಡುತ್ತಿದೆ. ಇದನ್ನು ಚರ್ಚೆ ಮಾಡದೇ ಜಾರಿಗೆ ತರುವ ಅಗತ್ಯವೇನಿತ್ತು? ಆತುರ ಬೇಡ, ಚರ್ಚಿಸಿದ ನಂತರ ಜಾರಿಗೆ ತನ್ನಿ. ಅಂಬೇಡ್ಕರ್ ಆಶಯದ ಸಂಸತ್ತು ಇದೆ. ಇಂತಹ ನೀಚ ಕೆಲಸಗಳಿಂದ ಅದನ್ನು ಅಪವಿತ್ರ ಮಾಡಬೇಡಿ. ಯಾವುದೇ ಕಾನೂನ್ನಾದರೂ ಚರ್ಚಿಸಿ ಜಾರಿ ಮಾಡಬೇಕು” ಎಂದು ಅವರು ಒತ್ತಾಯಿಸಿದರು.

ಜನತಾ ಅಧಿವೇಶನದ ಉದ್ಘಾಟನೆಯನ್ನು, ಸ್ವರಾಜ್ ಇಂಡಿಯಾ ಪಕ್ಷದ ರಾಷ್ಟ್ರಾಧ್ಯಕ್ಷರಾದ ಯೋಗೇಂದ್ರ ಯಾದವ್‌ರವರು ಕಾಗೋಡು ಹೋರಾಟದ ನೆನಪಿನಲ್ಲಿ ಮಡಿಕೆಯಲ್ಲಿರುವ ಪವಿತ್ರ ಮಣ್ಣನ್ನು ಯುವ ರೈತರಿಗೆ ನೀಡುವ ಮೂಲಕ ನೆರವೇರಿಸಿದರು. ಈ ಸಂದರ್ಭದಲ್ಲಿ, “ನಮ್ಮ ಪೂರ್ವಿಕರ ರಕ್ತ ಮತ್ತು ಬೆವರಿನಿಂದ ಮಿಂದಿರುವ ಈ ಪವಿತ್ರ ಮಣ್ಣನ್ನು ಕಳ್ಳ ಖದೀಮರ ಪಾಲಾಗಲು ಬಿಡುವುದಿಲ್ಲ” ಎಂದು ಭೂ ಸ್ವಾಧೀನ ಕಾಯ್ದೆಯನ್ನು ವಿರೋಧಿಸುವ ಪ್ರತಿಜ್ಞೆ ಮಾಡಿದರು.


ಇದನ್ನೂ ಓದಿ: ರಸ್ತೆಯಲ್ಲಿ ಅರೆಬೆತ್ತಲೆ ಕುಳಿತ ರೈತರು; ಸರ್ಕಾರದ ವಿರುದ್ಧ ತೀವ್ರಗೊಂಡ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...