Homeಕರ್ನಾಟಕಸರ್ಕಾರದ ವೈಫಲ್ಯಗಳನ್ನು ಕೇಸರಿ ಶಾಲುಗಳ ಹಿಂದೆ ಅಡಗಿಸಿಡಲು ಸಾಧ್ಯವಿಲ್ಲ: ಜನಪರ ಸಂಘಟನೆಗಳ ಆಕ್ರೋಶ

ಸರ್ಕಾರದ ವೈಫಲ್ಯಗಳನ್ನು ಕೇಸರಿ ಶಾಲುಗಳ ಹಿಂದೆ ಅಡಗಿಸಿಡಲು ಸಾಧ್ಯವಿಲ್ಲ: ಜನಪರ ಸಂಘಟನೆಗಳ ಆಕ್ರೋಶ

- Advertisement -
- Advertisement -

ಸಂವಿಧಾನ ಬದ್ಧವಾದ ಶಿಕ್ಷಣದ ಹಕ್ಕು ಮತ್ತು ಆಯ್ಕೆಯ ಸ್ವಾತಂತ್ರ್ಯದ ಪರವಾಗಿ ಹಾಗೂ ಕೇಸರಿ ಶಾಲು – ಹಿಜಾಬ್ ಹೆಸರಿನಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಷಡ್ಯಂತ್ರವನ್ನು ಜನಪರ ಸಂಘಟನೆಗಳು ವಿರೋಧಿಸಿದ್ದು, ಇದರ ವಿರುದ್ಧ ಒಕ್ಕೊರಲಿನ ದನಿಯೆತ್ತಲು ದೃಢ ನಿರ್ಧಾರ ತೆಗದುಕೊಳ್ಳಲಾಗಿದೆ. ಸರ್ಕಾರದ ಆಡಳಿತ ವೈಫಲ್ಯಗಳನ್ನು ಕೇಸರಿಶಾಲುಗಳ ಹಿಂದೆ ಅಡಗಿಸಿಡಲು ಸಾಧ್ಯವಿಲ್ಲ ಎಂದು ಜನಪರ ಸಂಘಟನೆಗಳು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

“ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ರಾಜ್ಯದಲ್ಲಿ ಕೇಸರಿಶಾಲು- ಹಿಜಾಬ್ ಎಂಬ ವಿಷಯದ ಸುತ್ತ ಕೋಮು ಗಲಭೆಯ ಜ್ವಾಲೆ ಹತ್ತಿ ಉರಿಯುತ್ತಿರುವುದು ಎಲ್ಲರನ್ನೂ ಕಂಗೆಡಿಸಿದೆ. ಮುಖ್ಯವಾಗಿ, ರಾಜ್ಯದ ಸಾವಿರಾರು ಅಲ್ಪಸಂಖ್ಯಾತ ಸಮುದಾಯದ ಹೆಣ್ಣುಮಕ್ಕಳು ತಮ್ಮ ತಪ್ಪೇನೂ ಇಲ್ಲದಿದ್ದರೂ ಶಿಕ್ಷಣದ ಹಕ್ಕಿನಿಂದ ವಂಚಿತರಾಗುತ್ತಾ, ಪ್ರತಿದಿನ ಕಾಲೇಜುಗಳ ಗೇಟುಗಳ ಮುಂದೆ ಏಕಾಂಗಿ ಪ್ರತಿಭಟನೆಗಳನ್ನು ನಡೆಸುತ್ತಾ ತೀವ್ರವಾದ ತೊಂದರೆಗೆ ಗುರಿಯಾಗಿದ್ದಾರೆ. ಆಡಳಿತ ನಡೆಸಬೇಕಾದ ಸರ್ಕಾರದ ಪ್ರತಿನಿಧಿಗಳು ತಮ್ಮ ದ್ವೇಷಪೂರಿತ ತಪ್ಪುಮಾಹಿತಿಯ ಭಾಷಣಗಳಿಂದ ಕೋಮು ಸಂಘರ್ಷದ ಬೀಜ ಬಿತ್ತುತ್ತಿದ್ದರೆ, ಜನರ ನೋವುಗಳಿಗೆ ಸ್ಪಂದಿಸಬೇಕಾದ ಸರ್ಕಾರದ ಯಂತ್ರಾಂಗಗಳೂ ಮಾಧ್ಯಮಗಳೂ ಏಕಪಕ್ಷೀಯ ನಡವಳಿಕೆಯಿಂದ ಉರಿಯುವ ಬೆಂಕಿಗೆ ತುಪ್ಪ ಸುರಿಯುತ್ತಿವೆ” ಎಂದು ಜನಪರ ಸಂಘಟನೆಗಳ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ.

“ಕ್ಷುಲ್ಲಕ ನೆಪವೊಡ್ಡಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಶಿಕ್ಷಣದ ಗೇಟುಗಳನ್ನು ಮುಚ್ಚುತ್ತಿರುವುದು, ಶಾಲಾ-ಕಾಲೇಜುಗಳಲ್ಲಿ ಎಳೆವಯಸ್ಸಿನ ವಿದ್ಯಾರ್ಥಿಗಳನ್ನು ರಾಜಕಾರಣದ ಕೆಸರಿನೊಳಕ್ಕೆ ಎಳೆದು ತರುತ್ತಿರುವುದು ನಾಗರಿಕರನ್ನು ತಲೆತಗ್ಗಿಸುವಂತೆ ಮಾಡಿದೆ. ಇದು ಸಮವಸ್ತ್ರದ ಸುತ್ತಲಿನ ಸಮಸ್ಯೆಯೆಂಬಂತೆ ಬಿಂಬಿಸಲಾಗುತ್ತಿದ್ದರೂ, ಇದರ ಹಿಂದೆ ಸಂಘಪರಿವಾರದ ಕೋಮುವಾದಿ ರಾಜಕಾರಣ ಕೆಲಸ ಮಾಡುತ್ತಿರುವುದು ನಿಚ್ಚಳವಾಗಿ ಗೋಚರಿಸುತ್ತಿದೆ. ಇದ್ಯಾವುದೂ ಆಕಸ್ಮಿಕವಾಗಿ ಸಂಭವಿಸುತ್ತಿರುವುದೆಂದು ಅಥವಾ ವಿದ್ಯಾರ್ಥಿಗಳು ತಮ್ಮಂತೆ ತಾವೇ ಇಂತಹ ಗದ್ದಲಕ್ಕಿಳಿದಿದ್ದಾರೆಂದು ನಂಬಲು ಸಾಧ್ಯವಿಲ್ಲ” ಎಂದು ಸಂಘಟನೆಗಳು ಸಂಶಯ ವ್ಯಕ್ತಪಡಿಸಿದೆ.

“ಈ ಇಡೀ ಗದ್ದಲದಲ್ಲಿ ವಿದ್ಯಾರ್ಥಿಗಳ, ವಿಶೇಷವಾಗಿ ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ದೊಡ್ಡ ಹೊಡೆತ ಬೀಳುತ್ತಿದೆ. ಒಂದೆಡೆ, ಸಾಚಾರ್ ವರದಿ ಸ್ಪಷ್ಟವಾಗಿ ಮುಸ್ಲಿಂ ಸಮುದಾಯದ ಶೈಕ್ಷಣಿಕ ಸ್ಥಿತಿಗತಿ ಎಷ್ಟು ಶೋಚನೀಯವಾಗಿದೆಯೆಂಬುದನ್ನು ಎತ್ತಿ ತೋರಿಸಿದೆ. ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳು ಕಾಲೇಜಿನ ಮೆಟ್ಟಿಲು ಹತ್ತುತ್ತಿರುವುದನ್ನು ಸ್ವಾಗತಿಸಬೇಕೇ ಹೊರತು ಅವರನ್ನು ಧಾರ್ಮಿಕ ಆಚರಣೆಗಳ ಕಾರಣ ಮುಂದಿಟ್ಟು ಕಾಲೇಜುಗಳ ಗೇಟುಗಳ ಹೊರಗೆ ನಿಲ್ಲಿಸುವುದಲ್ಲ” ಸಂಘಟನೆಗಳು ಹೇಳಿದೆ.

“ಈ ರೀತಿ ಮಾಡುವುದರಿಂದ ಆ ಹೆಣ್ಣುಮಕ್ಕಳು ಮಾತ್ರವಲ್ಲದೆ ಇಡೀ ವಿದ್ಯಾರ್ಥಿ ಸಮುದಾಯದ ಮೇಲೆ ಅನಿಶ್ಚಿತತೆಯ ಕತ್ತಿ ತೂಗುತ್ತಿದೆ. ಶಾಲಾಕಾಲೇಜುಗಳ ಶೈಕ್ಷಣಿಕ ವಾತಾವರಣ ಕಲುಷಿತಗೊಳ್ಳುತ್ತಿದೆ. ಕೋವಿಡ್‌ನ ಕಾರಣದಿಂದ ಅಪಾರ ಏರುಪೇರುಗಳನ್ನು ಕಂಡಿದ್ದ ಶಿಕ್ಷಣ ವ್ಯವಸ್ಥೆಯು ನಿಧಾನವಾಗಿ ಒಂದಿಷ್ಟು ಚೇತರಿಸಿಕೊಳ್ಳುತ್ತಿರುವಂತೆಯೇ ಆರಂಭಿಸಲಾಗಿರುವ ಈ ಗದ್ದಲದಿಂದ ದೂರಗಾಮಿ ದುಷ್ಪರಿಣಾಮಗಳು ಉಂಟಾಗಲಿವೆ” ಎಂದು ಹೇಳಿದೆ.

“ದುಬಾರಿ ಫೀಸು ಮತ್ತು ಡೋನೆಷನ್ ಹಾವಳಿ ಬಡ ವಿದ್ಯಾರ್ಥಿಗಳನ್ನು ಹಿಂಡುತ್ತಿದೆ ಮತ್ತು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿದೆ. ಹಾಗೆಯೇ ಕಾಲೇಜು ಶಿಕ್ಷಣ ಮುಗಿಸುವ ವಿದ್ಯಾರ್ಥಿಗಳಿಗೆ ತಕ್ಕನಾದ ಸಾಕಷ್ಟು ಉದ್ಯೋಗಾವಕಾಶಗಳಿಲ್ಲದೆ, ಅಭದ್ರ ಉದ್ಯೋಗಗಳಲ್ಲಿ ನಮ್ಮ ಯುವಜನರು ನಲುಗುತ್ತಿದ್ದಾರೆ. ವಸ್ತುಸ್ಥಿತಿ ಹೀಗಿರುವಾಗ, ಯುವಜನರ ಈ ಮೂಲ ಸಮಸ್ಯೆಗಳನ್ನು ಸರ್ಕಾರ ಕೇಸರಿ ಶಾಲಿನ ಹಿಂದೆ ಮರೆಮಾಚಲು ಹೊರಟಿದೆ” ಎಂದು ಆಕ್ರೋಶ ವ್ಯಕ್ತವಾಗಿದೆ.

“ಇಂತಹ ಸಂದಿಗ್ಧ ಸನ್ನಿವೇಶದಲ್ಲಿ ಸಂವಿಧಾನದ ತತ್ವಗಳಲ್ಲಿ ನಂಬಿಕೆಯುಳ್ಳ ನಾಡಿನ ಎಲ್ಲ ಸೌಹಾರ್ದಪ್ರೇಮಿ ಬಂಧುಗಳೂ ಒಕ್ಕೊರಲಿನಿಂದ ಶಿಕ್ಷಣದ ಹಕ್ಕು ಮತ್ತು ಆಯ್ಕೆಯ ಸ್ವಾತಂತ್ರ‍್ಯದ ಪರವಾಗಿ ದೊಡ್ಡಮಟ್ಟದಲ್ಲಿ ದನಿಯೆತ್ತಬೇಕಾದ ಅಗತ್ಯವಿದೆ” ಎಂದು ಹೇಳಿದೆ.

ಇದನ್ನೂ ಓದಿ: ವಿಜಯಪುರ: ಮುಸ್ಲಿಮರ ನರಹತ್ಯೆಗೆ ಎಬಿವಿಪಿ ಸದಸ್ಯೆಯಿಂದ ಕರೆ; ವಿಡಿಯೊ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...