Homeಕರ್ನಾಟಕಸರ್ಕಾರದ ವೈಫಲ್ಯಗಳನ್ನು ಕೇಸರಿ ಶಾಲುಗಳ ಹಿಂದೆ ಅಡಗಿಸಿಡಲು ಸಾಧ್ಯವಿಲ್ಲ: ಜನಪರ ಸಂಘಟನೆಗಳ ಆಕ್ರೋಶ

ಸರ್ಕಾರದ ವೈಫಲ್ಯಗಳನ್ನು ಕೇಸರಿ ಶಾಲುಗಳ ಹಿಂದೆ ಅಡಗಿಸಿಡಲು ಸಾಧ್ಯವಿಲ್ಲ: ಜನಪರ ಸಂಘಟನೆಗಳ ಆಕ್ರೋಶ

- Advertisement -
- Advertisement -

ಸಂವಿಧಾನ ಬದ್ಧವಾದ ಶಿಕ್ಷಣದ ಹಕ್ಕು ಮತ್ತು ಆಯ್ಕೆಯ ಸ್ವಾತಂತ್ರ್ಯದ ಪರವಾಗಿ ಹಾಗೂ ಕೇಸರಿ ಶಾಲು – ಹಿಜಾಬ್ ಹೆಸರಿನಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಷಡ್ಯಂತ್ರವನ್ನು ಜನಪರ ಸಂಘಟನೆಗಳು ವಿರೋಧಿಸಿದ್ದು, ಇದರ ವಿರುದ್ಧ ಒಕ್ಕೊರಲಿನ ದನಿಯೆತ್ತಲು ದೃಢ ನಿರ್ಧಾರ ತೆಗದುಕೊಳ್ಳಲಾಗಿದೆ. ಸರ್ಕಾರದ ಆಡಳಿತ ವೈಫಲ್ಯಗಳನ್ನು ಕೇಸರಿಶಾಲುಗಳ ಹಿಂದೆ ಅಡಗಿಸಿಡಲು ಸಾಧ್ಯವಿಲ್ಲ ಎಂದು ಜನಪರ ಸಂಘಟನೆಗಳು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

“ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ರಾಜ್ಯದಲ್ಲಿ ಕೇಸರಿಶಾಲು- ಹಿಜಾಬ್ ಎಂಬ ವಿಷಯದ ಸುತ್ತ ಕೋಮು ಗಲಭೆಯ ಜ್ವಾಲೆ ಹತ್ತಿ ಉರಿಯುತ್ತಿರುವುದು ಎಲ್ಲರನ್ನೂ ಕಂಗೆಡಿಸಿದೆ. ಮುಖ್ಯವಾಗಿ, ರಾಜ್ಯದ ಸಾವಿರಾರು ಅಲ್ಪಸಂಖ್ಯಾತ ಸಮುದಾಯದ ಹೆಣ್ಣುಮಕ್ಕಳು ತಮ್ಮ ತಪ್ಪೇನೂ ಇಲ್ಲದಿದ್ದರೂ ಶಿಕ್ಷಣದ ಹಕ್ಕಿನಿಂದ ವಂಚಿತರಾಗುತ್ತಾ, ಪ್ರತಿದಿನ ಕಾಲೇಜುಗಳ ಗೇಟುಗಳ ಮುಂದೆ ಏಕಾಂಗಿ ಪ್ರತಿಭಟನೆಗಳನ್ನು ನಡೆಸುತ್ತಾ ತೀವ್ರವಾದ ತೊಂದರೆಗೆ ಗುರಿಯಾಗಿದ್ದಾರೆ. ಆಡಳಿತ ನಡೆಸಬೇಕಾದ ಸರ್ಕಾರದ ಪ್ರತಿನಿಧಿಗಳು ತಮ್ಮ ದ್ವೇಷಪೂರಿತ ತಪ್ಪುಮಾಹಿತಿಯ ಭಾಷಣಗಳಿಂದ ಕೋಮು ಸಂಘರ್ಷದ ಬೀಜ ಬಿತ್ತುತ್ತಿದ್ದರೆ, ಜನರ ನೋವುಗಳಿಗೆ ಸ್ಪಂದಿಸಬೇಕಾದ ಸರ್ಕಾರದ ಯಂತ್ರಾಂಗಗಳೂ ಮಾಧ್ಯಮಗಳೂ ಏಕಪಕ್ಷೀಯ ನಡವಳಿಕೆಯಿಂದ ಉರಿಯುವ ಬೆಂಕಿಗೆ ತುಪ್ಪ ಸುರಿಯುತ್ತಿವೆ” ಎಂದು ಜನಪರ ಸಂಘಟನೆಗಳ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ.

“ಕ್ಷುಲ್ಲಕ ನೆಪವೊಡ್ಡಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಶಿಕ್ಷಣದ ಗೇಟುಗಳನ್ನು ಮುಚ್ಚುತ್ತಿರುವುದು, ಶಾಲಾ-ಕಾಲೇಜುಗಳಲ್ಲಿ ಎಳೆವಯಸ್ಸಿನ ವಿದ್ಯಾರ್ಥಿಗಳನ್ನು ರಾಜಕಾರಣದ ಕೆಸರಿನೊಳಕ್ಕೆ ಎಳೆದು ತರುತ್ತಿರುವುದು ನಾಗರಿಕರನ್ನು ತಲೆತಗ್ಗಿಸುವಂತೆ ಮಾಡಿದೆ. ಇದು ಸಮವಸ್ತ್ರದ ಸುತ್ತಲಿನ ಸಮಸ್ಯೆಯೆಂಬಂತೆ ಬಿಂಬಿಸಲಾಗುತ್ತಿದ್ದರೂ, ಇದರ ಹಿಂದೆ ಸಂಘಪರಿವಾರದ ಕೋಮುವಾದಿ ರಾಜಕಾರಣ ಕೆಲಸ ಮಾಡುತ್ತಿರುವುದು ನಿಚ್ಚಳವಾಗಿ ಗೋಚರಿಸುತ್ತಿದೆ. ಇದ್ಯಾವುದೂ ಆಕಸ್ಮಿಕವಾಗಿ ಸಂಭವಿಸುತ್ತಿರುವುದೆಂದು ಅಥವಾ ವಿದ್ಯಾರ್ಥಿಗಳು ತಮ್ಮಂತೆ ತಾವೇ ಇಂತಹ ಗದ್ದಲಕ್ಕಿಳಿದಿದ್ದಾರೆಂದು ನಂಬಲು ಸಾಧ್ಯವಿಲ್ಲ” ಎಂದು ಸಂಘಟನೆಗಳು ಸಂಶಯ ವ್ಯಕ್ತಪಡಿಸಿದೆ.

“ಈ ಇಡೀ ಗದ್ದಲದಲ್ಲಿ ವಿದ್ಯಾರ್ಥಿಗಳ, ವಿಶೇಷವಾಗಿ ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ದೊಡ್ಡ ಹೊಡೆತ ಬೀಳುತ್ತಿದೆ. ಒಂದೆಡೆ, ಸಾಚಾರ್ ವರದಿ ಸ್ಪಷ್ಟವಾಗಿ ಮುಸ್ಲಿಂ ಸಮುದಾಯದ ಶೈಕ್ಷಣಿಕ ಸ್ಥಿತಿಗತಿ ಎಷ್ಟು ಶೋಚನೀಯವಾಗಿದೆಯೆಂಬುದನ್ನು ಎತ್ತಿ ತೋರಿಸಿದೆ. ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳು ಕಾಲೇಜಿನ ಮೆಟ್ಟಿಲು ಹತ್ತುತ್ತಿರುವುದನ್ನು ಸ್ವಾಗತಿಸಬೇಕೇ ಹೊರತು ಅವರನ್ನು ಧಾರ್ಮಿಕ ಆಚರಣೆಗಳ ಕಾರಣ ಮುಂದಿಟ್ಟು ಕಾಲೇಜುಗಳ ಗೇಟುಗಳ ಹೊರಗೆ ನಿಲ್ಲಿಸುವುದಲ್ಲ” ಸಂಘಟನೆಗಳು ಹೇಳಿದೆ.

“ಈ ರೀತಿ ಮಾಡುವುದರಿಂದ ಆ ಹೆಣ್ಣುಮಕ್ಕಳು ಮಾತ್ರವಲ್ಲದೆ ಇಡೀ ವಿದ್ಯಾರ್ಥಿ ಸಮುದಾಯದ ಮೇಲೆ ಅನಿಶ್ಚಿತತೆಯ ಕತ್ತಿ ತೂಗುತ್ತಿದೆ. ಶಾಲಾಕಾಲೇಜುಗಳ ಶೈಕ್ಷಣಿಕ ವಾತಾವರಣ ಕಲುಷಿತಗೊಳ್ಳುತ್ತಿದೆ. ಕೋವಿಡ್‌ನ ಕಾರಣದಿಂದ ಅಪಾರ ಏರುಪೇರುಗಳನ್ನು ಕಂಡಿದ್ದ ಶಿಕ್ಷಣ ವ್ಯವಸ್ಥೆಯು ನಿಧಾನವಾಗಿ ಒಂದಿಷ್ಟು ಚೇತರಿಸಿಕೊಳ್ಳುತ್ತಿರುವಂತೆಯೇ ಆರಂಭಿಸಲಾಗಿರುವ ಈ ಗದ್ದಲದಿಂದ ದೂರಗಾಮಿ ದುಷ್ಪರಿಣಾಮಗಳು ಉಂಟಾಗಲಿವೆ” ಎಂದು ಹೇಳಿದೆ.

“ದುಬಾರಿ ಫೀಸು ಮತ್ತು ಡೋನೆಷನ್ ಹಾವಳಿ ಬಡ ವಿದ್ಯಾರ್ಥಿಗಳನ್ನು ಹಿಂಡುತ್ತಿದೆ ಮತ್ತು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿದೆ. ಹಾಗೆಯೇ ಕಾಲೇಜು ಶಿಕ್ಷಣ ಮುಗಿಸುವ ವಿದ್ಯಾರ್ಥಿಗಳಿಗೆ ತಕ್ಕನಾದ ಸಾಕಷ್ಟು ಉದ್ಯೋಗಾವಕಾಶಗಳಿಲ್ಲದೆ, ಅಭದ್ರ ಉದ್ಯೋಗಗಳಲ್ಲಿ ನಮ್ಮ ಯುವಜನರು ನಲುಗುತ್ತಿದ್ದಾರೆ. ವಸ್ತುಸ್ಥಿತಿ ಹೀಗಿರುವಾಗ, ಯುವಜನರ ಈ ಮೂಲ ಸಮಸ್ಯೆಗಳನ್ನು ಸರ್ಕಾರ ಕೇಸರಿ ಶಾಲಿನ ಹಿಂದೆ ಮರೆಮಾಚಲು ಹೊರಟಿದೆ” ಎಂದು ಆಕ್ರೋಶ ವ್ಯಕ್ತವಾಗಿದೆ.

“ಇಂತಹ ಸಂದಿಗ್ಧ ಸನ್ನಿವೇಶದಲ್ಲಿ ಸಂವಿಧಾನದ ತತ್ವಗಳಲ್ಲಿ ನಂಬಿಕೆಯುಳ್ಳ ನಾಡಿನ ಎಲ್ಲ ಸೌಹಾರ್ದಪ್ರೇಮಿ ಬಂಧುಗಳೂ ಒಕ್ಕೊರಲಿನಿಂದ ಶಿಕ್ಷಣದ ಹಕ್ಕು ಮತ್ತು ಆಯ್ಕೆಯ ಸ್ವಾತಂತ್ರ‍್ಯದ ಪರವಾಗಿ ದೊಡ್ಡಮಟ್ಟದಲ್ಲಿ ದನಿಯೆತ್ತಬೇಕಾದ ಅಗತ್ಯವಿದೆ” ಎಂದು ಹೇಳಿದೆ.

ಇದನ್ನೂ ಓದಿ: ವಿಜಯಪುರ: ಮುಸ್ಲಿಮರ ನರಹತ್ಯೆಗೆ ಎಬಿವಿಪಿ ಸದಸ್ಯೆಯಿಂದ ಕರೆ; ವಿಡಿಯೊ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...