Homeಕರ್ನಾಟಕಸರ್ಕಾರದ ವೈಫಲ್ಯಗಳನ್ನು ಕೇಸರಿ ಶಾಲುಗಳ ಹಿಂದೆ ಅಡಗಿಸಿಡಲು ಸಾಧ್ಯವಿಲ್ಲ: ಜನಪರ ಸಂಘಟನೆಗಳ ಆಕ್ರೋಶ

ಸರ್ಕಾರದ ವೈಫಲ್ಯಗಳನ್ನು ಕೇಸರಿ ಶಾಲುಗಳ ಹಿಂದೆ ಅಡಗಿಸಿಡಲು ಸಾಧ್ಯವಿಲ್ಲ: ಜನಪರ ಸಂಘಟನೆಗಳ ಆಕ್ರೋಶ

- Advertisement -
- Advertisement -

ಸಂವಿಧಾನ ಬದ್ಧವಾದ ಶಿಕ್ಷಣದ ಹಕ್ಕು ಮತ್ತು ಆಯ್ಕೆಯ ಸ್ವಾತಂತ್ರ್ಯದ ಪರವಾಗಿ ಹಾಗೂ ಕೇಸರಿ ಶಾಲು – ಹಿಜಾಬ್ ಹೆಸರಿನಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಷಡ್ಯಂತ್ರವನ್ನು ಜನಪರ ಸಂಘಟನೆಗಳು ವಿರೋಧಿಸಿದ್ದು, ಇದರ ವಿರುದ್ಧ ಒಕ್ಕೊರಲಿನ ದನಿಯೆತ್ತಲು ದೃಢ ನಿರ್ಧಾರ ತೆಗದುಕೊಳ್ಳಲಾಗಿದೆ. ಸರ್ಕಾರದ ಆಡಳಿತ ವೈಫಲ್ಯಗಳನ್ನು ಕೇಸರಿಶಾಲುಗಳ ಹಿಂದೆ ಅಡಗಿಸಿಡಲು ಸಾಧ್ಯವಿಲ್ಲ ಎಂದು ಜನಪರ ಸಂಘಟನೆಗಳು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

“ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ರಾಜ್ಯದಲ್ಲಿ ಕೇಸರಿಶಾಲು- ಹಿಜಾಬ್ ಎಂಬ ವಿಷಯದ ಸುತ್ತ ಕೋಮು ಗಲಭೆಯ ಜ್ವಾಲೆ ಹತ್ತಿ ಉರಿಯುತ್ತಿರುವುದು ಎಲ್ಲರನ್ನೂ ಕಂಗೆಡಿಸಿದೆ. ಮುಖ್ಯವಾಗಿ, ರಾಜ್ಯದ ಸಾವಿರಾರು ಅಲ್ಪಸಂಖ್ಯಾತ ಸಮುದಾಯದ ಹೆಣ್ಣುಮಕ್ಕಳು ತಮ್ಮ ತಪ್ಪೇನೂ ಇಲ್ಲದಿದ್ದರೂ ಶಿಕ್ಷಣದ ಹಕ್ಕಿನಿಂದ ವಂಚಿತರಾಗುತ್ತಾ, ಪ್ರತಿದಿನ ಕಾಲೇಜುಗಳ ಗೇಟುಗಳ ಮುಂದೆ ಏಕಾಂಗಿ ಪ್ರತಿಭಟನೆಗಳನ್ನು ನಡೆಸುತ್ತಾ ತೀವ್ರವಾದ ತೊಂದರೆಗೆ ಗುರಿಯಾಗಿದ್ದಾರೆ. ಆಡಳಿತ ನಡೆಸಬೇಕಾದ ಸರ್ಕಾರದ ಪ್ರತಿನಿಧಿಗಳು ತಮ್ಮ ದ್ವೇಷಪೂರಿತ ತಪ್ಪುಮಾಹಿತಿಯ ಭಾಷಣಗಳಿಂದ ಕೋಮು ಸಂಘರ್ಷದ ಬೀಜ ಬಿತ್ತುತ್ತಿದ್ದರೆ, ಜನರ ನೋವುಗಳಿಗೆ ಸ್ಪಂದಿಸಬೇಕಾದ ಸರ್ಕಾರದ ಯಂತ್ರಾಂಗಗಳೂ ಮಾಧ್ಯಮಗಳೂ ಏಕಪಕ್ಷೀಯ ನಡವಳಿಕೆಯಿಂದ ಉರಿಯುವ ಬೆಂಕಿಗೆ ತುಪ್ಪ ಸುರಿಯುತ್ತಿವೆ” ಎಂದು ಜನಪರ ಸಂಘಟನೆಗಳ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ.

“ಕ್ಷುಲ್ಲಕ ನೆಪವೊಡ್ಡಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಶಿಕ್ಷಣದ ಗೇಟುಗಳನ್ನು ಮುಚ್ಚುತ್ತಿರುವುದು, ಶಾಲಾ-ಕಾಲೇಜುಗಳಲ್ಲಿ ಎಳೆವಯಸ್ಸಿನ ವಿದ್ಯಾರ್ಥಿಗಳನ್ನು ರಾಜಕಾರಣದ ಕೆಸರಿನೊಳಕ್ಕೆ ಎಳೆದು ತರುತ್ತಿರುವುದು ನಾಗರಿಕರನ್ನು ತಲೆತಗ್ಗಿಸುವಂತೆ ಮಾಡಿದೆ. ಇದು ಸಮವಸ್ತ್ರದ ಸುತ್ತಲಿನ ಸಮಸ್ಯೆಯೆಂಬಂತೆ ಬಿಂಬಿಸಲಾಗುತ್ತಿದ್ದರೂ, ಇದರ ಹಿಂದೆ ಸಂಘಪರಿವಾರದ ಕೋಮುವಾದಿ ರಾಜಕಾರಣ ಕೆಲಸ ಮಾಡುತ್ತಿರುವುದು ನಿಚ್ಚಳವಾಗಿ ಗೋಚರಿಸುತ್ತಿದೆ. ಇದ್ಯಾವುದೂ ಆಕಸ್ಮಿಕವಾಗಿ ಸಂಭವಿಸುತ್ತಿರುವುದೆಂದು ಅಥವಾ ವಿದ್ಯಾರ್ಥಿಗಳು ತಮ್ಮಂತೆ ತಾವೇ ಇಂತಹ ಗದ್ದಲಕ್ಕಿಳಿದಿದ್ದಾರೆಂದು ನಂಬಲು ಸಾಧ್ಯವಿಲ್ಲ” ಎಂದು ಸಂಘಟನೆಗಳು ಸಂಶಯ ವ್ಯಕ್ತಪಡಿಸಿದೆ.

“ಈ ಇಡೀ ಗದ್ದಲದಲ್ಲಿ ವಿದ್ಯಾರ್ಥಿಗಳ, ವಿಶೇಷವಾಗಿ ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ದೊಡ್ಡ ಹೊಡೆತ ಬೀಳುತ್ತಿದೆ. ಒಂದೆಡೆ, ಸಾಚಾರ್ ವರದಿ ಸ್ಪಷ್ಟವಾಗಿ ಮುಸ್ಲಿಂ ಸಮುದಾಯದ ಶೈಕ್ಷಣಿಕ ಸ್ಥಿತಿಗತಿ ಎಷ್ಟು ಶೋಚನೀಯವಾಗಿದೆಯೆಂಬುದನ್ನು ಎತ್ತಿ ತೋರಿಸಿದೆ. ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳು ಕಾಲೇಜಿನ ಮೆಟ್ಟಿಲು ಹತ್ತುತ್ತಿರುವುದನ್ನು ಸ್ವಾಗತಿಸಬೇಕೇ ಹೊರತು ಅವರನ್ನು ಧಾರ್ಮಿಕ ಆಚರಣೆಗಳ ಕಾರಣ ಮುಂದಿಟ್ಟು ಕಾಲೇಜುಗಳ ಗೇಟುಗಳ ಹೊರಗೆ ನಿಲ್ಲಿಸುವುದಲ್ಲ” ಸಂಘಟನೆಗಳು ಹೇಳಿದೆ.

“ಈ ರೀತಿ ಮಾಡುವುದರಿಂದ ಆ ಹೆಣ್ಣುಮಕ್ಕಳು ಮಾತ್ರವಲ್ಲದೆ ಇಡೀ ವಿದ್ಯಾರ್ಥಿ ಸಮುದಾಯದ ಮೇಲೆ ಅನಿಶ್ಚಿತತೆಯ ಕತ್ತಿ ತೂಗುತ್ತಿದೆ. ಶಾಲಾಕಾಲೇಜುಗಳ ಶೈಕ್ಷಣಿಕ ವಾತಾವರಣ ಕಲುಷಿತಗೊಳ್ಳುತ್ತಿದೆ. ಕೋವಿಡ್‌ನ ಕಾರಣದಿಂದ ಅಪಾರ ಏರುಪೇರುಗಳನ್ನು ಕಂಡಿದ್ದ ಶಿಕ್ಷಣ ವ್ಯವಸ್ಥೆಯು ನಿಧಾನವಾಗಿ ಒಂದಿಷ್ಟು ಚೇತರಿಸಿಕೊಳ್ಳುತ್ತಿರುವಂತೆಯೇ ಆರಂಭಿಸಲಾಗಿರುವ ಈ ಗದ್ದಲದಿಂದ ದೂರಗಾಮಿ ದುಷ್ಪರಿಣಾಮಗಳು ಉಂಟಾಗಲಿವೆ” ಎಂದು ಹೇಳಿದೆ.

“ದುಬಾರಿ ಫೀಸು ಮತ್ತು ಡೋನೆಷನ್ ಹಾವಳಿ ಬಡ ವಿದ್ಯಾರ್ಥಿಗಳನ್ನು ಹಿಂಡುತ್ತಿದೆ ಮತ್ತು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿದೆ. ಹಾಗೆಯೇ ಕಾಲೇಜು ಶಿಕ್ಷಣ ಮುಗಿಸುವ ವಿದ್ಯಾರ್ಥಿಗಳಿಗೆ ತಕ್ಕನಾದ ಸಾಕಷ್ಟು ಉದ್ಯೋಗಾವಕಾಶಗಳಿಲ್ಲದೆ, ಅಭದ್ರ ಉದ್ಯೋಗಗಳಲ್ಲಿ ನಮ್ಮ ಯುವಜನರು ನಲುಗುತ್ತಿದ್ದಾರೆ. ವಸ್ತುಸ್ಥಿತಿ ಹೀಗಿರುವಾಗ, ಯುವಜನರ ಈ ಮೂಲ ಸಮಸ್ಯೆಗಳನ್ನು ಸರ್ಕಾರ ಕೇಸರಿ ಶಾಲಿನ ಹಿಂದೆ ಮರೆಮಾಚಲು ಹೊರಟಿದೆ” ಎಂದು ಆಕ್ರೋಶ ವ್ಯಕ್ತವಾಗಿದೆ.

“ಇಂತಹ ಸಂದಿಗ್ಧ ಸನ್ನಿವೇಶದಲ್ಲಿ ಸಂವಿಧಾನದ ತತ್ವಗಳಲ್ಲಿ ನಂಬಿಕೆಯುಳ್ಳ ನಾಡಿನ ಎಲ್ಲ ಸೌಹಾರ್ದಪ್ರೇಮಿ ಬಂಧುಗಳೂ ಒಕ್ಕೊರಲಿನಿಂದ ಶಿಕ್ಷಣದ ಹಕ್ಕು ಮತ್ತು ಆಯ್ಕೆಯ ಸ್ವಾತಂತ್ರ‍್ಯದ ಪರವಾಗಿ ದೊಡ್ಡಮಟ್ಟದಲ್ಲಿ ದನಿಯೆತ್ತಬೇಕಾದ ಅಗತ್ಯವಿದೆ” ಎಂದು ಹೇಳಿದೆ.

ಇದನ್ನೂ ಓದಿ: ವಿಜಯಪುರ: ಮುಸ್ಲಿಮರ ನರಹತ್ಯೆಗೆ ಎಬಿವಿಪಿ ಸದಸ್ಯೆಯಿಂದ ಕರೆ; ವಿಡಿಯೊ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...