Homeಕರ್ನಾಟಕಸರ್ಕಾರದ ವೈಫಲ್ಯಗಳನ್ನು ಕೇಸರಿ ಶಾಲುಗಳ ಹಿಂದೆ ಅಡಗಿಸಿಡಲು ಸಾಧ್ಯವಿಲ್ಲ: ಜನಪರ ಸಂಘಟನೆಗಳ ಆಕ್ರೋಶ

ಸರ್ಕಾರದ ವೈಫಲ್ಯಗಳನ್ನು ಕೇಸರಿ ಶಾಲುಗಳ ಹಿಂದೆ ಅಡಗಿಸಿಡಲು ಸಾಧ್ಯವಿಲ್ಲ: ಜನಪರ ಸಂಘಟನೆಗಳ ಆಕ್ರೋಶ

- Advertisement -
- Advertisement -

ಸಂವಿಧಾನ ಬದ್ಧವಾದ ಶಿಕ್ಷಣದ ಹಕ್ಕು ಮತ್ತು ಆಯ್ಕೆಯ ಸ್ವಾತಂತ್ರ್ಯದ ಪರವಾಗಿ ಹಾಗೂ ಕೇಸರಿ ಶಾಲು – ಹಿಜಾಬ್ ಹೆಸರಿನಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಷಡ್ಯಂತ್ರವನ್ನು ಜನಪರ ಸಂಘಟನೆಗಳು ವಿರೋಧಿಸಿದ್ದು, ಇದರ ವಿರುದ್ಧ ಒಕ್ಕೊರಲಿನ ದನಿಯೆತ್ತಲು ದೃಢ ನಿರ್ಧಾರ ತೆಗದುಕೊಳ್ಳಲಾಗಿದೆ. ಸರ್ಕಾರದ ಆಡಳಿತ ವೈಫಲ್ಯಗಳನ್ನು ಕೇಸರಿಶಾಲುಗಳ ಹಿಂದೆ ಅಡಗಿಸಿಡಲು ಸಾಧ್ಯವಿಲ್ಲ ಎಂದು ಜನಪರ ಸಂಘಟನೆಗಳು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

“ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ರಾಜ್ಯದಲ್ಲಿ ಕೇಸರಿಶಾಲು- ಹಿಜಾಬ್ ಎಂಬ ವಿಷಯದ ಸುತ್ತ ಕೋಮು ಗಲಭೆಯ ಜ್ವಾಲೆ ಹತ್ತಿ ಉರಿಯುತ್ತಿರುವುದು ಎಲ್ಲರನ್ನೂ ಕಂಗೆಡಿಸಿದೆ. ಮುಖ್ಯವಾಗಿ, ರಾಜ್ಯದ ಸಾವಿರಾರು ಅಲ್ಪಸಂಖ್ಯಾತ ಸಮುದಾಯದ ಹೆಣ್ಣುಮಕ್ಕಳು ತಮ್ಮ ತಪ್ಪೇನೂ ಇಲ್ಲದಿದ್ದರೂ ಶಿಕ್ಷಣದ ಹಕ್ಕಿನಿಂದ ವಂಚಿತರಾಗುತ್ತಾ, ಪ್ರತಿದಿನ ಕಾಲೇಜುಗಳ ಗೇಟುಗಳ ಮುಂದೆ ಏಕಾಂಗಿ ಪ್ರತಿಭಟನೆಗಳನ್ನು ನಡೆಸುತ್ತಾ ತೀವ್ರವಾದ ತೊಂದರೆಗೆ ಗುರಿಯಾಗಿದ್ದಾರೆ. ಆಡಳಿತ ನಡೆಸಬೇಕಾದ ಸರ್ಕಾರದ ಪ್ರತಿನಿಧಿಗಳು ತಮ್ಮ ದ್ವೇಷಪೂರಿತ ತಪ್ಪುಮಾಹಿತಿಯ ಭಾಷಣಗಳಿಂದ ಕೋಮು ಸಂಘರ್ಷದ ಬೀಜ ಬಿತ್ತುತ್ತಿದ್ದರೆ, ಜನರ ನೋವುಗಳಿಗೆ ಸ್ಪಂದಿಸಬೇಕಾದ ಸರ್ಕಾರದ ಯಂತ್ರಾಂಗಗಳೂ ಮಾಧ್ಯಮಗಳೂ ಏಕಪಕ್ಷೀಯ ನಡವಳಿಕೆಯಿಂದ ಉರಿಯುವ ಬೆಂಕಿಗೆ ತುಪ್ಪ ಸುರಿಯುತ್ತಿವೆ” ಎಂದು ಜನಪರ ಸಂಘಟನೆಗಳ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ.

“ಕ್ಷುಲ್ಲಕ ನೆಪವೊಡ್ಡಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಶಿಕ್ಷಣದ ಗೇಟುಗಳನ್ನು ಮುಚ್ಚುತ್ತಿರುವುದು, ಶಾಲಾ-ಕಾಲೇಜುಗಳಲ್ಲಿ ಎಳೆವಯಸ್ಸಿನ ವಿದ್ಯಾರ್ಥಿಗಳನ್ನು ರಾಜಕಾರಣದ ಕೆಸರಿನೊಳಕ್ಕೆ ಎಳೆದು ತರುತ್ತಿರುವುದು ನಾಗರಿಕರನ್ನು ತಲೆತಗ್ಗಿಸುವಂತೆ ಮಾಡಿದೆ. ಇದು ಸಮವಸ್ತ್ರದ ಸುತ್ತಲಿನ ಸಮಸ್ಯೆಯೆಂಬಂತೆ ಬಿಂಬಿಸಲಾಗುತ್ತಿದ್ದರೂ, ಇದರ ಹಿಂದೆ ಸಂಘಪರಿವಾರದ ಕೋಮುವಾದಿ ರಾಜಕಾರಣ ಕೆಲಸ ಮಾಡುತ್ತಿರುವುದು ನಿಚ್ಚಳವಾಗಿ ಗೋಚರಿಸುತ್ತಿದೆ. ಇದ್ಯಾವುದೂ ಆಕಸ್ಮಿಕವಾಗಿ ಸಂಭವಿಸುತ್ತಿರುವುದೆಂದು ಅಥವಾ ವಿದ್ಯಾರ್ಥಿಗಳು ತಮ್ಮಂತೆ ತಾವೇ ಇಂತಹ ಗದ್ದಲಕ್ಕಿಳಿದಿದ್ದಾರೆಂದು ನಂಬಲು ಸಾಧ್ಯವಿಲ್ಲ” ಎಂದು ಸಂಘಟನೆಗಳು ಸಂಶಯ ವ್ಯಕ್ತಪಡಿಸಿದೆ.

“ಈ ಇಡೀ ಗದ್ದಲದಲ್ಲಿ ವಿದ್ಯಾರ್ಥಿಗಳ, ವಿಶೇಷವಾಗಿ ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ದೊಡ್ಡ ಹೊಡೆತ ಬೀಳುತ್ತಿದೆ. ಒಂದೆಡೆ, ಸಾಚಾರ್ ವರದಿ ಸ್ಪಷ್ಟವಾಗಿ ಮುಸ್ಲಿಂ ಸಮುದಾಯದ ಶೈಕ್ಷಣಿಕ ಸ್ಥಿತಿಗತಿ ಎಷ್ಟು ಶೋಚನೀಯವಾಗಿದೆಯೆಂಬುದನ್ನು ಎತ್ತಿ ತೋರಿಸಿದೆ. ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳು ಕಾಲೇಜಿನ ಮೆಟ್ಟಿಲು ಹತ್ತುತ್ತಿರುವುದನ್ನು ಸ್ವಾಗತಿಸಬೇಕೇ ಹೊರತು ಅವರನ್ನು ಧಾರ್ಮಿಕ ಆಚರಣೆಗಳ ಕಾರಣ ಮುಂದಿಟ್ಟು ಕಾಲೇಜುಗಳ ಗೇಟುಗಳ ಹೊರಗೆ ನಿಲ್ಲಿಸುವುದಲ್ಲ” ಸಂಘಟನೆಗಳು ಹೇಳಿದೆ.

“ಈ ರೀತಿ ಮಾಡುವುದರಿಂದ ಆ ಹೆಣ್ಣುಮಕ್ಕಳು ಮಾತ್ರವಲ್ಲದೆ ಇಡೀ ವಿದ್ಯಾರ್ಥಿ ಸಮುದಾಯದ ಮೇಲೆ ಅನಿಶ್ಚಿತತೆಯ ಕತ್ತಿ ತೂಗುತ್ತಿದೆ. ಶಾಲಾಕಾಲೇಜುಗಳ ಶೈಕ್ಷಣಿಕ ವಾತಾವರಣ ಕಲುಷಿತಗೊಳ್ಳುತ್ತಿದೆ. ಕೋವಿಡ್‌ನ ಕಾರಣದಿಂದ ಅಪಾರ ಏರುಪೇರುಗಳನ್ನು ಕಂಡಿದ್ದ ಶಿಕ್ಷಣ ವ್ಯವಸ್ಥೆಯು ನಿಧಾನವಾಗಿ ಒಂದಿಷ್ಟು ಚೇತರಿಸಿಕೊಳ್ಳುತ್ತಿರುವಂತೆಯೇ ಆರಂಭಿಸಲಾಗಿರುವ ಈ ಗದ್ದಲದಿಂದ ದೂರಗಾಮಿ ದುಷ್ಪರಿಣಾಮಗಳು ಉಂಟಾಗಲಿವೆ” ಎಂದು ಹೇಳಿದೆ.

“ದುಬಾರಿ ಫೀಸು ಮತ್ತು ಡೋನೆಷನ್ ಹಾವಳಿ ಬಡ ವಿದ್ಯಾರ್ಥಿಗಳನ್ನು ಹಿಂಡುತ್ತಿದೆ ಮತ್ತು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿದೆ. ಹಾಗೆಯೇ ಕಾಲೇಜು ಶಿಕ್ಷಣ ಮುಗಿಸುವ ವಿದ್ಯಾರ್ಥಿಗಳಿಗೆ ತಕ್ಕನಾದ ಸಾಕಷ್ಟು ಉದ್ಯೋಗಾವಕಾಶಗಳಿಲ್ಲದೆ, ಅಭದ್ರ ಉದ್ಯೋಗಗಳಲ್ಲಿ ನಮ್ಮ ಯುವಜನರು ನಲುಗುತ್ತಿದ್ದಾರೆ. ವಸ್ತುಸ್ಥಿತಿ ಹೀಗಿರುವಾಗ, ಯುವಜನರ ಈ ಮೂಲ ಸಮಸ್ಯೆಗಳನ್ನು ಸರ್ಕಾರ ಕೇಸರಿ ಶಾಲಿನ ಹಿಂದೆ ಮರೆಮಾಚಲು ಹೊರಟಿದೆ” ಎಂದು ಆಕ್ರೋಶ ವ್ಯಕ್ತವಾಗಿದೆ.

“ಇಂತಹ ಸಂದಿಗ್ಧ ಸನ್ನಿವೇಶದಲ್ಲಿ ಸಂವಿಧಾನದ ತತ್ವಗಳಲ್ಲಿ ನಂಬಿಕೆಯುಳ್ಳ ನಾಡಿನ ಎಲ್ಲ ಸೌಹಾರ್ದಪ್ರೇಮಿ ಬಂಧುಗಳೂ ಒಕ್ಕೊರಲಿನಿಂದ ಶಿಕ್ಷಣದ ಹಕ್ಕು ಮತ್ತು ಆಯ್ಕೆಯ ಸ್ವಾತಂತ್ರ‍್ಯದ ಪರವಾಗಿ ದೊಡ್ಡಮಟ್ಟದಲ್ಲಿ ದನಿಯೆತ್ತಬೇಕಾದ ಅಗತ್ಯವಿದೆ” ಎಂದು ಹೇಳಿದೆ.

ಇದನ್ನೂ ಓದಿ: ವಿಜಯಪುರ: ಮುಸ್ಲಿಮರ ನರಹತ್ಯೆಗೆ ಎಬಿವಿಪಿ ಸದಸ್ಯೆಯಿಂದ ಕರೆ; ವಿಡಿಯೊ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...