Homeಕರ್ನಾಟಕಸರ್ಕಾರದ ವೈಫಲ್ಯಗಳನ್ನು ಕೇಸರಿ ಶಾಲುಗಳ ಹಿಂದೆ ಅಡಗಿಸಿಡಲು ಸಾಧ್ಯವಿಲ್ಲ: ಜನಪರ ಸಂಘಟನೆಗಳ ಆಕ್ರೋಶ

ಸರ್ಕಾರದ ವೈಫಲ್ಯಗಳನ್ನು ಕೇಸರಿ ಶಾಲುಗಳ ಹಿಂದೆ ಅಡಗಿಸಿಡಲು ಸಾಧ್ಯವಿಲ್ಲ: ಜನಪರ ಸಂಘಟನೆಗಳ ಆಕ್ರೋಶ

- Advertisement -
- Advertisement -

ಸಂವಿಧಾನ ಬದ್ಧವಾದ ಶಿಕ್ಷಣದ ಹಕ್ಕು ಮತ್ತು ಆಯ್ಕೆಯ ಸ್ವಾತಂತ್ರ್ಯದ ಪರವಾಗಿ ಹಾಗೂ ಕೇಸರಿ ಶಾಲು – ಹಿಜಾಬ್ ಹೆಸರಿನಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಷಡ್ಯಂತ್ರವನ್ನು ಜನಪರ ಸಂಘಟನೆಗಳು ವಿರೋಧಿಸಿದ್ದು, ಇದರ ವಿರುದ್ಧ ಒಕ್ಕೊರಲಿನ ದನಿಯೆತ್ತಲು ದೃಢ ನಿರ್ಧಾರ ತೆಗದುಕೊಳ್ಳಲಾಗಿದೆ. ಸರ್ಕಾರದ ಆಡಳಿತ ವೈಫಲ್ಯಗಳನ್ನು ಕೇಸರಿಶಾಲುಗಳ ಹಿಂದೆ ಅಡಗಿಸಿಡಲು ಸಾಧ್ಯವಿಲ್ಲ ಎಂದು ಜನಪರ ಸಂಘಟನೆಗಳು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

“ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ರಾಜ್ಯದಲ್ಲಿ ಕೇಸರಿಶಾಲು- ಹಿಜಾಬ್ ಎಂಬ ವಿಷಯದ ಸುತ್ತ ಕೋಮು ಗಲಭೆಯ ಜ್ವಾಲೆ ಹತ್ತಿ ಉರಿಯುತ್ತಿರುವುದು ಎಲ್ಲರನ್ನೂ ಕಂಗೆಡಿಸಿದೆ. ಮುಖ್ಯವಾಗಿ, ರಾಜ್ಯದ ಸಾವಿರಾರು ಅಲ್ಪಸಂಖ್ಯಾತ ಸಮುದಾಯದ ಹೆಣ್ಣುಮಕ್ಕಳು ತಮ್ಮ ತಪ್ಪೇನೂ ಇಲ್ಲದಿದ್ದರೂ ಶಿಕ್ಷಣದ ಹಕ್ಕಿನಿಂದ ವಂಚಿತರಾಗುತ್ತಾ, ಪ್ರತಿದಿನ ಕಾಲೇಜುಗಳ ಗೇಟುಗಳ ಮುಂದೆ ಏಕಾಂಗಿ ಪ್ರತಿಭಟನೆಗಳನ್ನು ನಡೆಸುತ್ತಾ ತೀವ್ರವಾದ ತೊಂದರೆಗೆ ಗುರಿಯಾಗಿದ್ದಾರೆ. ಆಡಳಿತ ನಡೆಸಬೇಕಾದ ಸರ್ಕಾರದ ಪ್ರತಿನಿಧಿಗಳು ತಮ್ಮ ದ್ವೇಷಪೂರಿತ ತಪ್ಪುಮಾಹಿತಿಯ ಭಾಷಣಗಳಿಂದ ಕೋಮು ಸಂಘರ್ಷದ ಬೀಜ ಬಿತ್ತುತ್ತಿದ್ದರೆ, ಜನರ ನೋವುಗಳಿಗೆ ಸ್ಪಂದಿಸಬೇಕಾದ ಸರ್ಕಾರದ ಯಂತ್ರಾಂಗಗಳೂ ಮಾಧ್ಯಮಗಳೂ ಏಕಪಕ್ಷೀಯ ನಡವಳಿಕೆಯಿಂದ ಉರಿಯುವ ಬೆಂಕಿಗೆ ತುಪ್ಪ ಸುರಿಯುತ್ತಿವೆ” ಎಂದು ಜನಪರ ಸಂಘಟನೆಗಳ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ.

“ಕ್ಷುಲ್ಲಕ ನೆಪವೊಡ್ಡಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಶಿಕ್ಷಣದ ಗೇಟುಗಳನ್ನು ಮುಚ್ಚುತ್ತಿರುವುದು, ಶಾಲಾ-ಕಾಲೇಜುಗಳಲ್ಲಿ ಎಳೆವಯಸ್ಸಿನ ವಿದ್ಯಾರ್ಥಿಗಳನ್ನು ರಾಜಕಾರಣದ ಕೆಸರಿನೊಳಕ್ಕೆ ಎಳೆದು ತರುತ್ತಿರುವುದು ನಾಗರಿಕರನ್ನು ತಲೆತಗ್ಗಿಸುವಂತೆ ಮಾಡಿದೆ. ಇದು ಸಮವಸ್ತ್ರದ ಸುತ್ತಲಿನ ಸಮಸ್ಯೆಯೆಂಬಂತೆ ಬಿಂಬಿಸಲಾಗುತ್ತಿದ್ದರೂ, ಇದರ ಹಿಂದೆ ಸಂಘಪರಿವಾರದ ಕೋಮುವಾದಿ ರಾಜಕಾರಣ ಕೆಲಸ ಮಾಡುತ್ತಿರುವುದು ನಿಚ್ಚಳವಾಗಿ ಗೋಚರಿಸುತ್ತಿದೆ. ಇದ್ಯಾವುದೂ ಆಕಸ್ಮಿಕವಾಗಿ ಸಂಭವಿಸುತ್ತಿರುವುದೆಂದು ಅಥವಾ ವಿದ್ಯಾರ್ಥಿಗಳು ತಮ್ಮಂತೆ ತಾವೇ ಇಂತಹ ಗದ್ದಲಕ್ಕಿಳಿದಿದ್ದಾರೆಂದು ನಂಬಲು ಸಾಧ್ಯವಿಲ್ಲ” ಎಂದು ಸಂಘಟನೆಗಳು ಸಂಶಯ ವ್ಯಕ್ತಪಡಿಸಿದೆ.

“ಈ ಇಡೀ ಗದ್ದಲದಲ್ಲಿ ವಿದ್ಯಾರ್ಥಿಗಳ, ವಿಶೇಷವಾಗಿ ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ದೊಡ್ಡ ಹೊಡೆತ ಬೀಳುತ್ತಿದೆ. ಒಂದೆಡೆ, ಸಾಚಾರ್ ವರದಿ ಸ್ಪಷ್ಟವಾಗಿ ಮುಸ್ಲಿಂ ಸಮುದಾಯದ ಶೈಕ್ಷಣಿಕ ಸ್ಥಿತಿಗತಿ ಎಷ್ಟು ಶೋಚನೀಯವಾಗಿದೆಯೆಂಬುದನ್ನು ಎತ್ತಿ ತೋರಿಸಿದೆ. ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳು ಕಾಲೇಜಿನ ಮೆಟ್ಟಿಲು ಹತ್ತುತ್ತಿರುವುದನ್ನು ಸ್ವಾಗತಿಸಬೇಕೇ ಹೊರತು ಅವರನ್ನು ಧಾರ್ಮಿಕ ಆಚರಣೆಗಳ ಕಾರಣ ಮುಂದಿಟ್ಟು ಕಾಲೇಜುಗಳ ಗೇಟುಗಳ ಹೊರಗೆ ನಿಲ್ಲಿಸುವುದಲ್ಲ” ಸಂಘಟನೆಗಳು ಹೇಳಿದೆ.

“ಈ ರೀತಿ ಮಾಡುವುದರಿಂದ ಆ ಹೆಣ್ಣುಮಕ್ಕಳು ಮಾತ್ರವಲ್ಲದೆ ಇಡೀ ವಿದ್ಯಾರ್ಥಿ ಸಮುದಾಯದ ಮೇಲೆ ಅನಿಶ್ಚಿತತೆಯ ಕತ್ತಿ ತೂಗುತ್ತಿದೆ. ಶಾಲಾಕಾಲೇಜುಗಳ ಶೈಕ್ಷಣಿಕ ವಾತಾವರಣ ಕಲುಷಿತಗೊಳ್ಳುತ್ತಿದೆ. ಕೋವಿಡ್‌ನ ಕಾರಣದಿಂದ ಅಪಾರ ಏರುಪೇರುಗಳನ್ನು ಕಂಡಿದ್ದ ಶಿಕ್ಷಣ ವ್ಯವಸ್ಥೆಯು ನಿಧಾನವಾಗಿ ಒಂದಿಷ್ಟು ಚೇತರಿಸಿಕೊಳ್ಳುತ್ತಿರುವಂತೆಯೇ ಆರಂಭಿಸಲಾಗಿರುವ ಈ ಗದ್ದಲದಿಂದ ದೂರಗಾಮಿ ದುಷ್ಪರಿಣಾಮಗಳು ಉಂಟಾಗಲಿವೆ” ಎಂದು ಹೇಳಿದೆ.

“ದುಬಾರಿ ಫೀಸು ಮತ್ತು ಡೋನೆಷನ್ ಹಾವಳಿ ಬಡ ವಿದ್ಯಾರ್ಥಿಗಳನ್ನು ಹಿಂಡುತ್ತಿದೆ ಮತ್ತು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿದೆ. ಹಾಗೆಯೇ ಕಾಲೇಜು ಶಿಕ್ಷಣ ಮುಗಿಸುವ ವಿದ್ಯಾರ್ಥಿಗಳಿಗೆ ತಕ್ಕನಾದ ಸಾಕಷ್ಟು ಉದ್ಯೋಗಾವಕಾಶಗಳಿಲ್ಲದೆ, ಅಭದ್ರ ಉದ್ಯೋಗಗಳಲ್ಲಿ ನಮ್ಮ ಯುವಜನರು ನಲುಗುತ್ತಿದ್ದಾರೆ. ವಸ್ತುಸ್ಥಿತಿ ಹೀಗಿರುವಾಗ, ಯುವಜನರ ಈ ಮೂಲ ಸಮಸ್ಯೆಗಳನ್ನು ಸರ್ಕಾರ ಕೇಸರಿ ಶಾಲಿನ ಹಿಂದೆ ಮರೆಮಾಚಲು ಹೊರಟಿದೆ” ಎಂದು ಆಕ್ರೋಶ ವ್ಯಕ್ತವಾಗಿದೆ.

“ಇಂತಹ ಸಂದಿಗ್ಧ ಸನ್ನಿವೇಶದಲ್ಲಿ ಸಂವಿಧಾನದ ತತ್ವಗಳಲ್ಲಿ ನಂಬಿಕೆಯುಳ್ಳ ನಾಡಿನ ಎಲ್ಲ ಸೌಹಾರ್ದಪ್ರೇಮಿ ಬಂಧುಗಳೂ ಒಕ್ಕೊರಲಿನಿಂದ ಶಿಕ್ಷಣದ ಹಕ್ಕು ಮತ್ತು ಆಯ್ಕೆಯ ಸ್ವಾತಂತ್ರ‍್ಯದ ಪರವಾಗಿ ದೊಡ್ಡಮಟ್ಟದಲ್ಲಿ ದನಿಯೆತ್ತಬೇಕಾದ ಅಗತ್ಯವಿದೆ” ಎಂದು ಹೇಳಿದೆ.

ಇದನ್ನೂ ಓದಿ: ವಿಜಯಪುರ: ಮುಸ್ಲಿಮರ ನರಹತ್ಯೆಗೆ ಎಬಿವಿಪಿ ಸದಸ್ಯೆಯಿಂದ ಕರೆ; ವಿಡಿಯೊ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...