Homeಮುಖಪುಟತಡರಾತ್ರಿ ಶರದ್ ಪವಾರ್ ಭೇಟಿಯಾದ ಉದ್ಧವ್ ಠಾಕ್ರೆ: ಅಂತಿಮ ಹಂತಕ್ಕೆ ತಲುಪಿದ ಸರ್ಕಾರ ರಚನೆ ಕಸರತ್ತು.

ತಡರಾತ್ರಿ ಶರದ್ ಪವಾರ್ ಭೇಟಿಯಾದ ಉದ್ಧವ್ ಠಾಕ್ರೆ: ಅಂತಿಮ ಹಂತಕ್ಕೆ ತಲುಪಿದ ಸರ್ಕಾರ ರಚನೆ ಕಸರತ್ತು.

- Advertisement -
- Advertisement -

ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸುವ ಪ್ರಯತ್ನವನ್ನು ಶಿವಸೇನೆ ಮುಂದುವರೆಸಿದ್ದು ಇಂದು ಸುಖಾಂತ್ಯ ಕಾಣುವ ನಿರೀಕ್ಷೆಯಲ್ಲಿದೆ. ಎನ್‌ಸಿಪಿ ಮತ್ತು ಕಾಂಗ್ರೆಸ್ ಬೆಂಬಲದೊಂದಿಗೆ ಅಧಿಕಾರಕ್ಕೇರುವ ಉತ್ಸಾಹದಲ್ಲಿದೆ. ಈ ಕುರಿತು ಗುರುವಾರ ತಡರಾತ್ರಿ ಮುಂಬೈನಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಪುತ್ರ ಆದಿತ್ಯ ಠಾಕ್ರೆ  ಭೇಟಿಯಾಗಿದ್ದಾರೆ.

ದಕ್ಷಿಣ ಮುಂಬೈನಲ್ಲಿರುವ ಪವಾರ್ ಅವರ ನಿವಾಸ ‘ಸಿಲ್ವರ್ ಓಕ್’ನಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಸಭೆ ನಡೆಸಿದರು.  ನಡೆದ ಸಭೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ಬೆಂಬಲದೊಂದಿಗೆ ಶಿವಸೇನೆ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸುವುದು ಬಹುತೇಕ ಖಚಿತ ಎಂದಿದ್ದಾರೆ. ಉದ್ಧವ್ ಜತೆಗೆ ಶಿವಸೇನೆ ವಕ್ತಾರ ಸಂಜಯ್ ರಾವತ್ ಸಹ ಇದ್ದರು. ಸಭೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಜರಿರಲಿಲ್ಲ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ನಿರ್ಣಾಯಕ ಹಂತ ತಲುಪಿದ ಸರ್ಕಾರ ರಚನೆ ಗುದ್ದಾಟ: ಸೇನಾಗೆ ಕಾಂಗ್ರೆಸ್‌ ಬೆಂಬಲ..!

ಉಭಯ ಪಕ್ಷಗಳ ನಾಯಕರ ನಡುವೆ ನಡೆದ ಸಭೆ ಸರ್ಕಾರ ರಚನೆಯ ಅಂತಿಮ ಘಟ್ಟದ ಕುರಿತು ಹಾಗೂ ಹುದ್ದೆ ಹಂಚಿಕೆಗೆ ಅಂತಿಮ ಸ್ಪರ್ಶ ನೀಡುವ ಕುರಿತಾಗಿತ್ತು. ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸುವ ಎಲ್ಲಾ ವಿಷಯಗಳ ಬಗ್ಗೆ ಎನ್ ಸಿಪಿ, ಶಿವಸೇನೆ ಮತ್ತು ಕಾಂಗ್ರೆಸ್ ಒಮ್ಮತ ಹೊಂದಿವೆ ಎಂದು ಎನ್ ಸಿಪಿ ಮುಖಂಡರೊಬ್ಬರು ಮಾಹಿತಿ ನೀಡಿದ್ದಾರೆ.

ಶಿವಸೇನೆ 15, ಎನ್‌ಸಿಪಿ 15 ಮತ್ತು ಕಾಂಗ್ರೆಸ್‌ಗೆ 12 ಸಚಿವ ಸ್ಥಾನಗಳು ಸಿಗುವ ನಿರೀಕ್ಷೆಯಿದ್ದು ಮುಖ್ಯಮಂತ್ರಿ ಹುದ್ದೆಯನ್ನು ಶಿವಸೇನೆಯೊಂದೇ ಕೇಳುತ್ತಿದೆ. ಆದರೂ ಪಟ್ಟುಬಿಡದ ಎನ್‌ಸಿಪಿ ತಲಾ ಎರಡೂವರೆ ವರ್ಷ ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿದೆ. ಇನ್ನು ಕಾಂಗ್ರೆಸ್‌ಗೆ ಉಪಮುಖ್ಯಮಂತ್ರಿ ಹುದ್ದೆ ದೊರೆಯಲಿದ್ದು, ಸ್ಪೀಕರ್‌ ಹುದ್ದೆಯನ್ನು ಕಾಂಗ್ರೆಸ್‌ ಮತ್ತು ಎನ್‌ಸಿಪಿ ಎರಡೂ ಬಯಸಿವೆ ಎನ್ನಲಾಗುತ್ತಿದೆ.

ಇನ್ನು ಮುಂಬೈನಲ್ಲಿ ಕಾಂಗ್ರೆಸ್ ಮತ್ತು ಎನ್‌ಸಿಪಿ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿವೆ. ತಮ್ಮ ಇತರೆ ಮಿತ್ರ ಪಕ್ಷಗಳಾದ ರೈತರ ವರ್ಕರ್ಸ್ ಪಾರ್ಟಿ, ಸಮಾಜವಾದಿ ಪಕ್ಷ, ಸ್ವಾಭಿಮಾನಿ ಪಕ್ಷ ಮತ್ತು ಸಿಪಿಐ (ಎಂ) ಗಳ ನಾಯಕರ ಜತೆ ಮಾತುಕತೆ ನಡೆಸಲಿವೆ. ನಂತರ ಸೇನಾ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ಇದಾದ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಎನ್ ಸಿಪಿ ಮತ್ತು ಕಾಂಗ್ರೆಸ್ ನಾಯಕರು ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...