Homeಮುಖಪುಟ'ಐಎಎಫ್ ಕೇಳಿದ್ದಕ್ಕಿಂತ ಹೆಚ್ಚಿನ ಸೌಲಭ್ಯಗಳನ್ನು ಸರ್ಕಾರ ನೀಡಿದೆ..'; ಏರ್ ಶೋ ದುರಂತದ ಕುರಿತು ಸ್ಟಾಲಿನ್ ಪ್ರತಿಕ್ರಿಯೆ

‘ಐಎಎಫ್ ಕೇಳಿದ್ದಕ್ಕಿಂತ ಹೆಚ್ಚಿನ ಸೌಲಭ್ಯಗಳನ್ನು ಸರ್ಕಾರ ನೀಡಿದೆ..’; ಏರ್ ಶೋ ದುರಂತದ ಕುರಿತು ಸ್ಟಾಲಿನ್ ಪ್ರತಿಕ್ರಿಯೆ

- Advertisement -
- Advertisement -

ಚೆನ್ನೈನ ಮರೀನಾ ಬೀಚ್‌ನಲ್ಲಿ ಭಾನುವಾರ ನಡೆದ  ಏರ್ ಶೋಗಾಗಿ ಭಾರತೀಯ ವಾಯುಪಡೆ (ಐಎಎಫ್‌) ಕೋರಿದ್ದಕ್ಕಿಂತ ಹೆಚ್ಚಿನ ಸೌಲಭ್ಯಗಳನ್ನು ರಾಜ್ಯದ ಅಧಿಕಾರಿಗಳು ಒದಗಿಸಿದ್ದಾರೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸೋಮವಾರ ಹೇಳಿದ್ದಾರೆ.

ಮರೀನಾ ಬೀಚ್‌ನಲ್ಲಿ ಏರ್ ಫೋರ್ಸ್‌ನ ಏರ್ ಶೋ ನಂತರ ಶಾಖ-ಸಂಬಂಧಿತ ಸಮಸ್ಯೆಗಳಿಂದ ಕನಿಷ್ಠ ಐದು ಜನರು ಸಾವನ್ನಪ್ಪಿದರು. 100 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೈಮಾನಿಕ ಪ್ರದರ್ಶನದ ನಂತರ ಶಾಖ-ಸಂಬಂಧಿತ ಸಮಸ್ಯೆಗಳಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ಸ್ಟಾಲಿನ್ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದರು.

ಈ ವಿಷಯದ ಕುರಿತು ಮಾತನಾಡಿದ ಸ್ಟಾಲಿನ್, ಜನರು ಹಿಂತಿರುಗುವಾಗ ತಮ್ಮ ವಾಹನಗಳನ್ನು ತಲುಪಲು “ಸಾಕಷ್ಟು ತೊಂದರೆಗಳನ್ನು” ಎದುರಿಸಿದರು. ಈ ಅಂಶಗಳ ಬಗ್ಗೆ ಹೆಚ್ಚಿನ ಗಮನ ಹರಿಸಲಾಗುವುದು ಮತ್ತು ಭವಿಷ್ಯದಲ್ಲಿ ಅದಕ್ಕೆ ಅನುಗುಣವಾಗಿ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗುವುದು” ಎಂದು ಹೇಳಿದರು.

ತಮಿಳುನಾಡು ಸರ್ಕಾರವು ಐಎಎಫ್‌ ಕೋರಿದ್ದನ್ನು ಮೀರಿ ವೈಮಾನಿಕ ಪ್ರದರ್ಶನಕ್ಕೆ ಅಗತ್ಯವಾದ ಆಡಳಿತಾತ್ಮಕ ಸಹಕಾರ ಮತ್ತು ಸೌಲಭ್ಯಗಳನ್ನು ಒದಗಿಸಿದೆ. ಜನರು ತಮ್ಮ ವಾಹನಗಳನ್ನು ತಲುಪಲು ಮತ್ತು ಸಾರ್ವಜನಿಕ ಸಾರಿಗೆಯನ್ನು ಪಡೆಯಲು ಸಾಕಷ್ಟು ತೊಂದರೆಗಳನ್ನು ಅನುಭವಿಸಿದರು ಎಂದು ನಾನು ತಿಳಿದುಕೊಂಡಿದ್ದೇನೆ. ನಿರೀಕ್ಷೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು ಎಂದು ಎಂಕೆ ಸ್ಟಾಲಿನ್ ಹೇಳಿದ್ದಾರೆ.

“ಮುಂದಿನ ಬಾರಿ, ಅಂತಹ ದೊಡ್ಡ ಕಾರ್ಯಕ್ರಮಗಳನ್ನು ಆಯೋಜಿಸಿದಾಗ, ಈ ಅಂಶಗಳ ಬಗ್ಗೆ ಹೆಚ್ಚಿನ ಗಮನವನ್ನು ನೀಡಲಾಗುತ್ತದೆ ಮತ್ತು ಅದಕ್ಕೆ ಅನುಗುಣವಾಗಿ ವ್ಯವಸ್ಥೆಗಳನ್ನು ಮಾಡಲಾಗುವುದು” ಎಂದು ಸ್ಟಾಲಿನ್ ಹೇಳಿದರು.

ಘಟನೆ ಬಗ್ಗೆ ನಟ ಕಮ್ ರಾಜಕಾರಣಿ ಥಲಪತಿ ವಿಜಯ್ ಅವರು ವಾಯುಪಡೆಯ ಕಾರ್ಯಕ್ರಮದ ಸಮಯದಲ್ಲಿ ಸಾವಿಗೆ ಸಂತಾಪ ಸೂಚಿಸಿದರು. ಭವಿಷ್ಯದಲ್ಲಿ ಈ ಪ್ರಮಾಣದ ಯಾವುದೇ ಘಟನೆಯ ಸಂದರ್ಭದಲ್ಲಿ ಸೌಲಭ್ಯಗಳು ಮತ್ತು ಭದ್ರತೆಯ ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

“ಕಾರ್ಯಕ್ರಮದಲ್ಲಿ ಸಾರ್ವಜನಿಕರು ಮೂಲ ಸೌಕರ್ಯ, ಸಾರಿಗೆ ಸೌಲಭ್ಯ, ಭದ್ರತೆ ಇತ್ಯಾದಿಗಳ ಬಗ್ಗೆ ಸಾಕಷ್ಟು ಗಮನ ಹರಿಸಿಲ್ಲ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ” ಎಂದು ವಿಜಯ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸ್ಥಳಗಳಲ್ಲಿ ಮೂಲಭೂತ ಸೌಲಭ್ಯಗಳು ಮತ್ತು ಭದ್ರತೆಗಳ ಪರಿಣಾಮಕಾರಿ ಅನುಷ್ಠಾನದ ಮೇಲೆ ಕೇಂದ್ರೀಕರಿಸಲು ತಮಿಳುನಾಡು ಸರ್ಕಾರವನ್ನು ನಾನು ವಿನಂತಿಸುತ್ತೇನೆ” ಎಂದು ಅವರು ಹೇಳಿದರು.

ರಾಜ್ಯದ ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಪ್ರಕಾರ, ಐದು ಜನರು ಶಾಖದ ಸಮಸ್ಯೆಗಳಿಂದ ಸಾವನ್ನಪ್ಪಿದ್ದಾರೆ.

ಮರೀನಾ ಬೀಚ್ ಬಳಿ ಅಸ್ವಸ್ಥರಾಗಿದ್ದ ಸುಮಾರು 100 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಅವರಲ್ಲಿ ಏಳು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು 93 ಜನರನ್ನು ಬಿಡುಗಡೆ ಮಾಡಲಾಗಿದೆ.

ಭಾನುವಾರ ಮರೀನಾ ಬೀಚ್‌ನ ಆಕಾಶದಲ್ಲಿ ಭಾರತೀಯ ವಾಯುಪಡೆಯ ವಿಮಾನದ ವೈಮಾನಿಕ ಪ್ರದರ್ಶನವು ಸಾವಿರಾರು ಪ್ರೇಕ್ಷಕರನ್ನು ಆಕರ್ಷಿಸಿತು.

ಸುಮಾರು ಮೂರು ಗಂಟೆಗಳ ಕಾಲ ಜನರು ಸುಡುವ ಬಿಸಿಲಿನಲ್ಲಿ ನಿಂತಿದ್ದರು ಮತ್ತು ಹೆಚ್ಚಿನವರು ಶಾಖದಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಛತ್ರಿ ಹಿಡಿದಿದ್ದರು. ಏರ್ ಶೋ ಬೆಳಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ನಡೆಯಿತಾದರೂ, ಕನಿಷ್ಠ ಒಂದು ಗಂಟೆಗೂ ಮುನ್ನವೇ ಹೆಚ್ಚಿನ ಜನರು ಸ್ಥಳದಲ್ಲಿ ಜಮಾಯಿಸಿದ್ದರು.

ಇದನ್ನೂ ಓದಿ; ಚೆನ್ನೈ: ವಾಯುಪಡೆ ಏರ್‌ಶೋ ಅವಘಡ; ಬಿಸಿಲಿನ ಝಳಕ್ಕೆ ಐವರು ಪ್ರೇಕ್ಷಕರು ಸಾವು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...