Homeಕರ್ನಾಟಕಲಾಕ್‌ಡೌನ್: ರೈತರ ಸಮಸ್ಯೆಗಳಿಗೆ ಸರಕಾರ ನೆರವಾಗುತ್ತೇವೆ- ಯಡಿಯೂರಪ್ಪ

ಲಾಕ್‌ಡೌನ್: ರೈತರ ಸಮಸ್ಯೆಗಳಿಗೆ ಸರಕಾರ ನೆರವಾಗುತ್ತೇವೆ- ಯಡಿಯೂರಪ್ಪ

- Advertisement -
- Advertisement -

ದೇಶಾದ್ಯಂತ ಲಾಕ್‌ಡೌನ್ ಜಾರಿಯಲ್ಲಿರುವುದರಿಂದ ರಾಜ್ಯದ ರೈತರು ತಾವು ಬೆಳೆದ ಉತ್ಪನ್ನಗಳನ್ನು ಮಾರುಕಟ್ಟೆಗೆ  ಸಾಗಿಸಲಾಗದೆ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪನವರು ರೈತರ ನೆರವಿಗಿದ್ದೇವೆ ಎಂದು ಹೇಳಿದ್ದಾರೆ.

ಕರ್ನಾಟಕದಿಂದ ಟೊಮೆಟೊ, ಕಲ್ಲಂಗಡಿ, ಕರಬೂಜ, ದ್ರಾಕ್ಷಿ, ನಿಂಬೆ ಮೊದಲಾದ ಹಣ್ಣು ತರಕಾರಿಗಳು ದೊಡ್ಡ ಪ್ರಮಾಣದಲ್ಲಿ ಹೊರ ರಾಜ್ಯಗಳಿಗೆ ರಫ್ತಾಗುತ್ತಿದ್ದವು. ಈಗ ದೇಶದಾದ್ಯಂತ ಲಾಕ್‌ಡೌನ್ ಇರುವುದರಿಂದ ಸಾರಿಗೆ ಸಮಸ್ಯೆಯಿಂದ ಬೇಡಿಕೆ ಕುಸಿದಿದೆ. ಈ ನಿಟ್ಟಿನಲ್ಲಿ ಈ ಅವಶ್ಯಕ ವಸ್ತುಗಳ ಸಾಗಾಣಿಕೆಗೆ ಯಾವುದೇ ರೀತಿಯ ಅಡಚಣೆಯಾಗದಂತೆ ಕ್ರಮ ವಹಿಸಲು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.


ಇದನ್ನೂ ಓದಿ: ಲಾಕ್‌ಡೌನ್‌ನಿಂದ ರೈತರಿಗೆ ಸಮಸ್ಯೆ: ಮುಖ್ಯಮಂತ್ರಿಗಳನ್ನು ತರಾಟೆಗೆ ತೆಗೆದುಕೊಂಡ ಕೃಷಿ ತಜ್ಞರು


ಟೊಮೆಟೊ ಸಂಸ್ಕರಣಾ ಘಟಕಗಳ ಮೂಲಕ ಕೆಚಪ್ ತಯಾರಿಕೆ ಮಾಡಲು ಸೂಚಿಸಲಾಗಿದೆ. ಹಾಪ್ ಕಾಮ್ಸ್ ಮೂಲಕವೂ ತರಕಾರಿ ಪೂರೈಕೆಗೆ ಹಾಗೂ ಮೊಟ್ಟೆ ಮಾರಾಟಕ್ಕೆ ಸಹ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ವಾಹನಗಳ ಮೂಲಕ ಪೂರೈಕೆಗೆ ಕೂಡ ಕ್ರಮ ವಹಿಸಿ, ಗ್ರಾಹಕರಿಗೂ ಸೂಕ್ತ ದರದಲ್ಲಿ ಹಣ್ಣು ತರಕಾರಿ ಲಭ್ಯವಾಗುವಂತೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಹಣ್ಣು, ತರಕಾರಿ ದಿನಸಿ ಮತ್ತಿತರ ಅಗತ್ಯ ವಸ್ತುಗಳ ಅಂಗಡಿಗಳು ದಿನವಿಡೀ ತೆರೆದಿಡಲು ಸೂಚಿಸಿದ್ದು, ಖರೀದಿದಾರರು ಸಾಮಾಜಿಕ ಅಂತರ ಕಾಯ್ದುಕೊಂಡು ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ಖರೀದಿಸುವಂತೆ ಕೋರಿದೆ.

ರೈಲುಗಳ ಮೂಲಕ ಹೊರ ರಾಜ್ಯಗಳಿಗೆ ಹಣ್ಣು-ತರಕಾರಿ ಮೊದಲಾದ ವಸ್ತುಗಳ ಮಾರಾಟಕ್ಕೆ ಅನುವು ಮಾಡಿಕೊಡಲಾಗುವುದು ಎಂದಿದೆ.

ಲಾಕ್‌ಡೌನ್ ಹಿನ್ನೆಲೆಯಲ್ಲಿ ದಿನಸಿ ಮತ್ತು ತರಕಾರಿಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುವವರ ಪರವಾನಿಗೆ ರದ್ದು ಮಾಡುವ ಎಚ್ಚರಿಕೆ ನೀಡಿದೆ. ಅಡುಗೆ ಎಣ್ಣೆ ದಾಸ್ತಾನು ಲಭ್ಯವಿದ್ದು, ಪ್ಯಾಕೇಜಿಂಗ್ ವ್ಯವಸ್ಥೆ ಮಾಡಿ ಪೂರೈಕೆಗೆ ಕ್ರಮ ವಹಿಸಲು ಸೂಚಿಸಲಾಗಿದ್ದು, ಮಾರುಕಟ್ಟೆಗಳಲ್ಲಿ ದಾಸ್ತಾನು ಕೊರತೆ ಇಲ್ಲವಾದ್ದರಿಂದ ಜನರು ವದಂತಿಗಳಿಗೆ ಕಿವಿಗೊಡಬಾರದು ಎಂದು ರಾಜ್ಯ ಸರಕಾರ ಹೇಳಿದೆ.

ಬೆಳೆ ಕಟಾವಿಗೆ ನೆರೆಯ ರಾಜ್ಯಗಳಿಂದ ಕಟಾವು ಯಂತ್ರಗಳನ್ನು ತರಿಸಿ, ಕಟಾವಿಗೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದಿರುವ ಸರಕಾರ, ಮುಂದಿನ ತಿಂಗಳಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಬಿತ್ತನೆಯಾಗಲಿದ್ದು, ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಲಭ್ಯವಿದೆ ಹಾಗೂ 15 ಅಕ್ಕಿ ಮಿಲ್‌ಗಳನ್ನು ಪ್ರಾರಂಭಿಸಲು ಸೂಚನೆ ನೀಡಲಾಗಿದೆ ಎಂದು ಸರ್ಕಾರ ತಿಳಿಸಿದೆ.

27 ರೇಷ್ಮೆ ಮಾರುಕಟ್ಟೆ ತೆರೆಯಲು ಕ್ರಮ ವಹಿಸಲಾಗಿದ್ದು 14 ಮಾರುಕಟ್ಟೆಗಳಲ್ಲಿ ತಂಡಗಳನ್ನು ರಚಿಸಿ, ರೈತರನ್ನು ನೇರವಾಗಿ ಸಂಪರ್ಕ ಕಲ್ಪಿಸುವಂತೆ ಸೂಚಿಸಲಾಗಿದೆ ಎಂದು ಸರ್ಕಾರ ಹೇಳಿದೆ. ಏಜೆಂಟರನ್ನು ಮನೆಗೆ ಕಳುಹಿಸಿ ಕಡಿಮೆ ದರಕ್ಕೆ ಖರೀದಿ ಮಾಡುತ್ತಿರುವವರ ಬಗ್ಗೆ ಸರ್ಕಾರ ಎಚ್ಚರಿಸಿದ್ದು ಇಂತಹ ಅಧಿಕಾರಿ, ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದೆಯಲ್ಲದೆ, ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ರೇಷ್ಮೆ ಮಾರುಕಟ್ಟೆಯನ್ನು ತೆರೆಯಲು ಸೂಚನೆ ನೀಡಲಾಗಿದೆ ಎಂದಿದೆ.

ಕೆಎಂಎಫ್ ಮೂಲಕ 69 ಲಕ್ಷ ಲೀಟರ್ ಹಾಲು ಖರೀದಿಯಾಗುತ್ತಿದ್ದು, 42 ಲಕ್ಷ ಲೀಟರ್ ಹಾಲು ಮಾರಾಟ ಮಾಡಲಾಗುತ್ತಿದೆ. 7.5 ಲಕ್ಷ ಲೀಟರ್ ಹಾಲು ಉಳಿತಾಯವಾಗುತ್ತಿದೆ  ಎಂದಿರುವ ಸರಕಾರ ಇದನ್ನು ಲಾಕ್‌ಡೌನ್ ಮುಗಿಯುವ ವರೆಗೆ ಸರ್ಕಾರವೇ ಖರೀದಿಸಿ ಕೊಳೆಗೇರಿಗಳು ಮತ್ತು ಕಾರ್ಮಿಕರ ಬಡಾವಣೆಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಮೂಲಕ ಉಚಿತವಾಗಿ ವಿತರಿಸಲು ಕ್ರಮ ವಹಿಸಲಾಗುವುದು ಎಂದಿದೆ.

ಲಾಕ್‌ಡೌನ್‌ನಿಂದ ನಗರದಲ್ಲಿ ಸಿಲುಕಿಕೊಂಡಿರುವ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಬಿಲ್ಡರುಗಳೇ ಊಟ, ವಸತಿ ವ್ಯವಸ್ಥೆ ಒದಗಿಸುವಂತೆ ಸೂಚಿಸಲಾಗುವುದು ಎಂದು ರಾಜ್ಯ ಸರ್ಕಾರ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...