Homeಚಳವಳಿಮಾರುತಿ ಮಾನ್ಪಡೆಯವರ ಸಾವಿಗೆ ಸರ್ಕಾರವೇ ನೇರ ಹೊಣೆ: ಐಕ್ಯ ಹೋರಾಟ ಸಮಿತಿ

ಮಾರುತಿ ಮಾನ್ಪಡೆಯವರ ಸಾವಿಗೆ ಸರ್ಕಾರವೇ ನೇರ ಹೊಣೆ: ಐಕ್ಯ ಹೋರಾಟ ಸಮಿತಿ

ಸದಾ ಕಾಲವೂ ಸಮೃದ್ಧ ಆಹಾರ, ಹಾಲು, ಹಣ್ಣು, ತರಕಾರಿಗಳನ್ನು ದೇಶಕ್ಕೆ ಒದಗಿಸುವ ರೈತಾಪಿ ವರ್ಗಕ್ಕೆ ಸರ್ಕಾರ ಎಲ್ಲ ರೀತಿಯ ನೆರವು ನೀಡುವ ಬದಲು ಅನಗತ್ಯ ಆತಂಕ, ಅಸಮಾಧಾನ ಉಂಟು ಮಾಡಿ, ಅವರು ಬೀದಿಗಿಳಿಯುವಂತೆ ಮಾಡಿದೆ.

- Advertisement -
- Advertisement -

ಮಾರುತಿ ಮಾನ್ಪಡೆಯವರ ಸಾವಿಗೆ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಕಾರಣ ಎಂದ ಕೇಂದ್ರ ಸಚಿವ ಡಿ.ವಿ ಸದಾನಂದಗೌಡರವರ ಹೇಳಿಕೆಯನ್ನು ಐಕ್ಯಹೋರಾಟ ಸಮಿತಿ ಖಂಡಿಸಿದೆ. ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ರೈತವಿರೋಧಿ, ಬಡಜನ ವಿರೋಧಿ ಸುಗ್ರೀವಾಜ್ಞೆಗಳನ್ನು ಜಾರಿಗೆ ತಂದ ಸರ್ಕಾರವೇ ಅದಕ್ಕೆ ನೇರ ಹೊಣೆ ಎಂದು ಸಮಿತಿ ತಿಳಿಸಿದೆ.

ಇಂದು ನಗರದ ಗಾಂಧಿಭವನದಲ್ಲಿ ನಡೆದ ಅಗಲಿದ ಹೋರಾಟಗಾರ ಮಾರುತಿ ಮಾನ್ಪಡೆಯವರಿಗೆ ಶ್ರಧ್ಧಾಂಜಲಿ ಮತ್ತು ರೈತ-ದಲಿತ-ಕಾರ್ಮಿಕ ಐಕ್ಯ ಹೋರಾಟ ಸಮಿತಿಯ ಸಭೆಯಲ್ಲಿ ಉಪಚುನಾವಣೆಯಲ್ಲಿ ರೈತರ ವಿಷಯ ಮುನ್ನೆಲೆಗೆ ಬರಲಿ ಎಂಬ ತೀರ್ಮಾನ ತೆಗೆದುಕೊಳ್ಳಲಾಯಿತು.

ನಿನ್ನೆ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಸದಾನಂದಗೌಡರು, “ಹಳ್ಳಿಗಳಿಂದ ರೈತರನ್ನು ಬಲವಂತವಾಗಿ ಬೆಂಗಳೂರಿಗೆ ಕರೆ ತಂದು ಪ್ರತಿಭಟನೆ ನಡೆಸಲಾಯಿತು. ಆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಜೊತೆಗೆ ಕಾರ್ಮಿಕ ಹೋರಾಟಗಾರರಾದ ಮಾರುತಿ ಮಾನ್ಪಡೆಯವರು ಭಾಗವಹಿಸಿದ್ದರು. ಹಾಗಾಗಿ ಅವರಿಗೆ ಕೊರೊನಾ ಸೋಂಕು ತಗುಲಿ ಮೃತಪಟ್ಟಿದ್ದರೆ” ಎಂದು ಹೇಳಿದ್ದರು.

“ಇಡೀ ದೇಶವೇ ಕೊರೊನಾ ಮಹಾ ಪಿಡುಗಿನ ಹೊಡೆತಕ್ಕೆ ಸಿಕ್ಕಿ ಕೈ, ಕಾಲು, ಬಾಯಿ ಕಟ್ಟಿ ಬಿದ್ದಿರುವಾಗ
ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ‘ನೋಟಿನ ರಾಜಕೀಯ’ಕ್ಕಾಗಿ ಕಾರ್ಪೋರೇಟ್ ವಲಯಕ್ಕೆ ತಲೆಬಾಗಿ ಉಳ್ಳವರಿಗೆ ಮಣೆ ಹಾಕುವ, ರೈತರ ಭೂಮಿ ಕಬಳಿಸುವ, ಕೃಷಿ ಮಾರುಕಟ್ಟೆಯನ್ನು ಸಂಪೂರ್ಣ ಖಾಸಗೀಕರಣಗೊಳಿಸುವ, ಭೂಮಿಯ ಹಂಚಿಕೆಯಲ್ಲಿ ದಲಿತರನ್ನು ಪೂರ್ತಿ ವಂಚಿಸುವ, ಕಾರ್ಮಿಕರ ಉದ್ಯೋಗದ ಹಕ್ಕು ಕಸಿಯುವ ಹುನ್ನಾರದಲ್ಲಿ ತೊಡಗಿವೆ” ಎಂದು ಹೋರಾಟಗಾರರು ಕಿಡಿಕಾರಿದ್ದಾರೆ.

“ಸದಾ ಕಾಲವೂ ಸಮೃದ್ಧ ಆಹಾರ, ಹಾಲು, ಹಣ್ಣು, ತರಕಾರಿಗಳನ್ನು ದೇಶಕ್ಕೆ ಒದಗಿಸುವ ರೈತಾಪಿ ವರ್ಗಕ್ಕೆ ಸರ್ಕಾರ ಎಲ್ಲ ರೀತಿಯ ನೆರವು ನೀಡುವ ಬದಲು ಅನಗತ್ಯ ಆತಂಕ, ಅಸಮಾಧಾನ ಉಂಟು ಮಾಡಿ, ಅವರು ಬೀದಿಗಿಳಿಯುವಂತೆ ಮಾಡಿದೆ. ಪರಿಣಾಮವಾಗಿ ಕಾಮ್ರೆಡ್ ಮಾರುತಿ ಮಾನ್ಪಡೆಯವರಂತಹ ಹಿರಿಯ ರೈತ ಮುಖಂಡರು ಕೊರೊನಾಕ್ಕೆ ತುತ್ತಾಗಿ ಅಮೂಲ್ಯ ಜೀವ ತೆರುವಂತಾದುದಕ್ಕೆ ಸರ್ಕಾರವೇ ನೇರ ಹೊಣೆಗಾರನಾಗಿದೆ” ಎಂದು ಸಮಿತಿ ಪ್ರತಿಪಾದಿಸಿದೆ.

ಈ ಎಲ್ಲ ವಿಚಾರಗಳು ಈಗ ಬಂದಿರುವ ಉಪ ಚುನಾವಣೆಯಲ್ಲಿ ಮುಖ್ಯವಾಗಿ ಮತಪಟ್ಟಿಗೆಯಲ್ಲಿ ಅಭಿವ್ಯಕ್ತವಾಗಬೇಕು. ಸರ್ಕಾರ ಭೂಸುಧಾರಣೆ, ಎಪಿಎಂಸಿ ಮತ್ತು ಕಾರ್ಮಿಕ ಕಾಯ್ದೆಗಳಿಗೆ ತಂದಿರುವ ಸುಗ್ರೀವಾಜ್ಞೆಗಳನ್ನು ಯಾವುದೇ ಕಾರಣಕ್ಕೂ ಮುಂದುವರಿಸಬಾರದು ಅಥವಾ ಮರು ಹೊರಡಿಸಬಾರದು. ಈ ಕಾಯ್ದೆಗಳಿಗಿಂತ ಹಿಂದಿನ ಯಥಾಸ್ಥಿತಿಯನ್ನು ಉಳಿಸಿಕೊಳ್ಳಬೇಕು, ಭೂಸುಧಾರಣೆಯ ಮೂಲ ಆಶಯವಾದ ‘ಹೊಲದ ಒಡೆತನವನ್ನು ಉಳುವವನ ಕೈಯಿಂದ ಕಿತ್ತುಕೊಳ್ಳಕೂಡದು’. ಹಾಗೆ, ದಲಿತರು, ಭೂರಹಿತರು, ಕೃಷಿ ಕಾರ್ಮಿಕರಿಗೆ ಹೆಚ್ಚುವರಿ ಭೂಮಿ ಹಂಚಿಕೆ ಮೊದಲು ಆಗಬೇಕು ಎಂದು ಸಮಿತಿ ಒತ್ತಾಯಿಸಿದೆ.

ಕರ್ನಾಟಕ ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ, ಚಾಮರಸಮಾಲಿ ಪಾಟೀಲ್, ಕೃಷಿ ಬೆಲೆ ನಿಗಧಿ ಆಯೋಗದ ಮಾಜಿ ಅಧ್ಯಕ್ಷ ಪ್ರಕಾಶ್ ಕಮ್ಮರಡಿ, ದಸಸಂ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು, ಭೂಮಿ ವಸತಿ ಹೋರಾಟ ಸಮಿತಿಯ ಸಿರಿಮನೆ ನಾಗರಾಜ್, ಕರ್ನಾಟಕ ಜನಶಕ್ತಿಯ ಮಲ್ಲಿಗೆ ಮುಂತಾದವರು ಸಭೆಯಲ್ಲಿದ್ದರು.


ಇದನ್ನೂ ಓದಿ: ಮುಖ್ಯಮಂತ್ರಿಯನ್ನು ಕಂಡಕಂಡಲ್ಲಿ ಘೇರಾವ್ ಮಾಡಿ: ರೈತ-ದಲಿತ ಕಾರ್ಮಿಕ ಐಕ್ಯ ಹೋರಾಟ ಸಮಿತಿ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...