Homeಚಳವಳಿಮಾರುತಿ ಮಾನ್ಪಡೆಯವರ ಸಾವಿಗೆ ಸರ್ಕಾರವೇ ನೇರ ಹೊಣೆ: ಐಕ್ಯ ಹೋರಾಟ ಸಮಿತಿ

ಮಾರುತಿ ಮಾನ್ಪಡೆಯವರ ಸಾವಿಗೆ ಸರ್ಕಾರವೇ ನೇರ ಹೊಣೆ: ಐಕ್ಯ ಹೋರಾಟ ಸಮಿತಿ

ಸದಾ ಕಾಲವೂ ಸಮೃದ್ಧ ಆಹಾರ, ಹಾಲು, ಹಣ್ಣು, ತರಕಾರಿಗಳನ್ನು ದೇಶಕ್ಕೆ ಒದಗಿಸುವ ರೈತಾಪಿ ವರ್ಗಕ್ಕೆ ಸರ್ಕಾರ ಎಲ್ಲ ರೀತಿಯ ನೆರವು ನೀಡುವ ಬದಲು ಅನಗತ್ಯ ಆತಂಕ, ಅಸಮಾಧಾನ ಉಂಟು ಮಾಡಿ, ಅವರು ಬೀದಿಗಿಳಿಯುವಂತೆ ಮಾಡಿದೆ.

- Advertisement -
- Advertisement -

ಮಾರುತಿ ಮಾನ್ಪಡೆಯವರ ಸಾವಿಗೆ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಕಾರಣ ಎಂದ ಕೇಂದ್ರ ಸಚಿವ ಡಿ.ವಿ ಸದಾನಂದಗೌಡರವರ ಹೇಳಿಕೆಯನ್ನು ಐಕ್ಯಹೋರಾಟ ಸಮಿತಿ ಖಂಡಿಸಿದೆ. ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ರೈತವಿರೋಧಿ, ಬಡಜನ ವಿರೋಧಿ ಸುಗ್ರೀವಾಜ್ಞೆಗಳನ್ನು ಜಾರಿಗೆ ತಂದ ಸರ್ಕಾರವೇ ಅದಕ್ಕೆ ನೇರ ಹೊಣೆ ಎಂದು ಸಮಿತಿ ತಿಳಿಸಿದೆ.

ಇಂದು ನಗರದ ಗಾಂಧಿಭವನದಲ್ಲಿ ನಡೆದ ಅಗಲಿದ ಹೋರಾಟಗಾರ ಮಾರುತಿ ಮಾನ್ಪಡೆಯವರಿಗೆ ಶ್ರಧ್ಧಾಂಜಲಿ ಮತ್ತು ರೈತ-ದಲಿತ-ಕಾರ್ಮಿಕ ಐಕ್ಯ ಹೋರಾಟ ಸಮಿತಿಯ ಸಭೆಯಲ್ಲಿ ಉಪಚುನಾವಣೆಯಲ್ಲಿ ರೈತರ ವಿಷಯ ಮುನ್ನೆಲೆಗೆ ಬರಲಿ ಎಂಬ ತೀರ್ಮಾನ ತೆಗೆದುಕೊಳ್ಳಲಾಯಿತು.

ನಿನ್ನೆ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಸದಾನಂದಗೌಡರು, “ಹಳ್ಳಿಗಳಿಂದ ರೈತರನ್ನು ಬಲವಂತವಾಗಿ ಬೆಂಗಳೂರಿಗೆ ಕರೆ ತಂದು ಪ್ರತಿಭಟನೆ ನಡೆಸಲಾಯಿತು. ಆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಜೊತೆಗೆ ಕಾರ್ಮಿಕ ಹೋರಾಟಗಾರರಾದ ಮಾರುತಿ ಮಾನ್ಪಡೆಯವರು ಭಾಗವಹಿಸಿದ್ದರು. ಹಾಗಾಗಿ ಅವರಿಗೆ ಕೊರೊನಾ ಸೋಂಕು ತಗುಲಿ ಮೃತಪಟ್ಟಿದ್ದರೆ” ಎಂದು ಹೇಳಿದ್ದರು.

“ಇಡೀ ದೇಶವೇ ಕೊರೊನಾ ಮಹಾ ಪಿಡುಗಿನ ಹೊಡೆತಕ್ಕೆ ಸಿಕ್ಕಿ ಕೈ, ಕಾಲು, ಬಾಯಿ ಕಟ್ಟಿ ಬಿದ್ದಿರುವಾಗ
ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ‘ನೋಟಿನ ರಾಜಕೀಯ’ಕ್ಕಾಗಿ ಕಾರ್ಪೋರೇಟ್ ವಲಯಕ್ಕೆ ತಲೆಬಾಗಿ ಉಳ್ಳವರಿಗೆ ಮಣೆ ಹಾಕುವ, ರೈತರ ಭೂಮಿ ಕಬಳಿಸುವ, ಕೃಷಿ ಮಾರುಕಟ್ಟೆಯನ್ನು ಸಂಪೂರ್ಣ ಖಾಸಗೀಕರಣಗೊಳಿಸುವ, ಭೂಮಿಯ ಹಂಚಿಕೆಯಲ್ಲಿ ದಲಿತರನ್ನು ಪೂರ್ತಿ ವಂಚಿಸುವ, ಕಾರ್ಮಿಕರ ಉದ್ಯೋಗದ ಹಕ್ಕು ಕಸಿಯುವ ಹುನ್ನಾರದಲ್ಲಿ ತೊಡಗಿವೆ” ಎಂದು ಹೋರಾಟಗಾರರು ಕಿಡಿಕಾರಿದ್ದಾರೆ.

“ಸದಾ ಕಾಲವೂ ಸಮೃದ್ಧ ಆಹಾರ, ಹಾಲು, ಹಣ್ಣು, ತರಕಾರಿಗಳನ್ನು ದೇಶಕ್ಕೆ ಒದಗಿಸುವ ರೈತಾಪಿ ವರ್ಗಕ್ಕೆ ಸರ್ಕಾರ ಎಲ್ಲ ರೀತಿಯ ನೆರವು ನೀಡುವ ಬದಲು ಅನಗತ್ಯ ಆತಂಕ, ಅಸಮಾಧಾನ ಉಂಟು ಮಾಡಿ, ಅವರು ಬೀದಿಗಿಳಿಯುವಂತೆ ಮಾಡಿದೆ. ಪರಿಣಾಮವಾಗಿ ಕಾಮ್ರೆಡ್ ಮಾರುತಿ ಮಾನ್ಪಡೆಯವರಂತಹ ಹಿರಿಯ ರೈತ ಮುಖಂಡರು ಕೊರೊನಾಕ್ಕೆ ತುತ್ತಾಗಿ ಅಮೂಲ್ಯ ಜೀವ ತೆರುವಂತಾದುದಕ್ಕೆ ಸರ್ಕಾರವೇ ನೇರ ಹೊಣೆಗಾರನಾಗಿದೆ” ಎಂದು ಸಮಿತಿ ಪ್ರತಿಪಾದಿಸಿದೆ.

ಈ ಎಲ್ಲ ವಿಚಾರಗಳು ಈಗ ಬಂದಿರುವ ಉಪ ಚುನಾವಣೆಯಲ್ಲಿ ಮುಖ್ಯವಾಗಿ ಮತಪಟ್ಟಿಗೆಯಲ್ಲಿ ಅಭಿವ್ಯಕ್ತವಾಗಬೇಕು. ಸರ್ಕಾರ ಭೂಸುಧಾರಣೆ, ಎಪಿಎಂಸಿ ಮತ್ತು ಕಾರ್ಮಿಕ ಕಾಯ್ದೆಗಳಿಗೆ ತಂದಿರುವ ಸುಗ್ರೀವಾಜ್ಞೆಗಳನ್ನು ಯಾವುದೇ ಕಾರಣಕ್ಕೂ ಮುಂದುವರಿಸಬಾರದು ಅಥವಾ ಮರು ಹೊರಡಿಸಬಾರದು. ಈ ಕಾಯ್ದೆಗಳಿಗಿಂತ ಹಿಂದಿನ ಯಥಾಸ್ಥಿತಿಯನ್ನು ಉಳಿಸಿಕೊಳ್ಳಬೇಕು, ಭೂಸುಧಾರಣೆಯ ಮೂಲ ಆಶಯವಾದ ‘ಹೊಲದ ಒಡೆತನವನ್ನು ಉಳುವವನ ಕೈಯಿಂದ ಕಿತ್ತುಕೊಳ್ಳಕೂಡದು’. ಹಾಗೆ, ದಲಿತರು, ಭೂರಹಿತರು, ಕೃಷಿ ಕಾರ್ಮಿಕರಿಗೆ ಹೆಚ್ಚುವರಿ ಭೂಮಿ ಹಂಚಿಕೆ ಮೊದಲು ಆಗಬೇಕು ಎಂದು ಸಮಿತಿ ಒತ್ತಾಯಿಸಿದೆ.

ಕರ್ನಾಟಕ ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ, ಚಾಮರಸಮಾಲಿ ಪಾಟೀಲ್, ಕೃಷಿ ಬೆಲೆ ನಿಗಧಿ ಆಯೋಗದ ಮಾಜಿ ಅಧ್ಯಕ್ಷ ಪ್ರಕಾಶ್ ಕಮ್ಮರಡಿ, ದಸಸಂ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು, ಭೂಮಿ ವಸತಿ ಹೋರಾಟ ಸಮಿತಿಯ ಸಿರಿಮನೆ ನಾಗರಾಜ್, ಕರ್ನಾಟಕ ಜನಶಕ್ತಿಯ ಮಲ್ಲಿಗೆ ಮುಂತಾದವರು ಸಭೆಯಲ್ಲಿದ್ದರು.


ಇದನ್ನೂ ಓದಿ: ಮುಖ್ಯಮಂತ್ರಿಯನ್ನು ಕಂಡಕಂಡಲ್ಲಿ ಘೇರಾವ್ ಮಾಡಿ: ರೈತ-ದಲಿತ ಕಾರ್ಮಿಕ ಐಕ್ಯ ಹೋರಾಟ ಸಮಿತಿ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...