Homeಚಳವಳಿಮಾರುತಿ ಮಾನ್ಪಡೆಯವರ ಸಾವಿಗೆ ಸರ್ಕಾರವೇ ನೇರ ಹೊಣೆ: ಐಕ್ಯ ಹೋರಾಟ ಸಮಿತಿ

ಮಾರುತಿ ಮಾನ್ಪಡೆಯವರ ಸಾವಿಗೆ ಸರ್ಕಾರವೇ ನೇರ ಹೊಣೆ: ಐಕ್ಯ ಹೋರಾಟ ಸಮಿತಿ

ಸದಾ ಕಾಲವೂ ಸಮೃದ್ಧ ಆಹಾರ, ಹಾಲು, ಹಣ್ಣು, ತರಕಾರಿಗಳನ್ನು ದೇಶಕ್ಕೆ ಒದಗಿಸುವ ರೈತಾಪಿ ವರ್ಗಕ್ಕೆ ಸರ್ಕಾರ ಎಲ್ಲ ರೀತಿಯ ನೆರವು ನೀಡುವ ಬದಲು ಅನಗತ್ಯ ಆತಂಕ, ಅಸಮಾಧಾನ ಉಂಟು ಮಾಡಿ, ಅವರು ಬೀದಿಗಿಳಿಯುವಂತೆ ಮಾಡಿದೆ.

- Advertisement -
- Advertisement -

ಮಾರುತಿ ಮಾನ್ಪಡೆಯವರ ಸಾವಿಗೆ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಕಾರಣ ಎಂದ ಕೇಂದ್ರ ಸಚಿವ ಡಿ.ವಿ ಸದಾನಂದಗೌಡರವರ ಹೇಳಿಕೆಯನ್ನು ಐಕ್ಯಹೋರಾಟ ಸಮಿತಿ ಖಂಡಿಸಿದೆ. ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ರೈತವಿರೋಧಿ, ಬಡಜನ ವಿರೋಧಿ ಸುಗ್ರೀವಾಜ್ಞೆಗಳನ್ನು ಜಾರಿಗೆ ತಂದ ಸರ್ಕಾರವೇ ಅದಕ್ಕೆ ನೇರ ಹೊಣೆ ಎಂದು ಸಮಿತಿ ತಿಳಿಸಿದೆ.

ಇಂದು ನಗರದ ಗಾಂಧಿಭವನದಲ್ಲಿ ನಡೆದ ಅಗಲಿದ ಹೋರಾಟಗಾರ ಮಾರುತಿ ಮಾನ್ಪಡೆಯವರಿಗೆ ಶ್ರಧ್ಧಾಂಜಲಿ ಮತ್ತು ರೈತ-ದಲಿತ-ಕಾರ್ಮಿಕ ಐಕ್ಯ ಹೋರಾಟ ಸಮಿತಿಯ ಸಭೆಯಲ್ಲಿ ಉಪಚುನಾವಣೆಯಲ್ಲಿ ರೈತರ ವಿಷಯ ಮುನ್ನೆಲೆಗೆ ಬರಲಿ ಎಂಬ ತೀರ್ಮಾನ ತೆಗೆದುಕೊಳ್ಳಲಾಯಿತು.

ನಿನ್ನೆ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಸದಾನಂದಗೌಡರು, “ಹಳ್ಳಿಗಳಿಂದ ರೈತರನ್ನು ಬಲವಂತವಾಗಿ ಬೆಂಗಳೂರಿಗೆ ಕರೆ ತಂದು ಪ್ರತಿಭಟನೆ ನಡೆಸಲಾಯಿತು. ಆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಜೊತೆಗೆ ಕಾರ್ಮಿಕ ಹೋರಾಟಗಾರರಾದ ಮಾರುತಿ ಮಾನ್ಪಡೆಯವರು ಭಾಗವಹಿಸಿದ್ದರು. ಹಾಗಾಗಿ ಅವರಿಗೆ ಕೊರೊನಾ ಸೋಂಕು ತಗುಲಿ ಮೃತಪಟ್ಟಿದ್ದರೆ” ಎಂದು ಹೇಳಿದ್ದರು.

“ಇಡೀ ದೇಶವೇ ಕೊರೊನಾ ಮಹಾ ಪಿಡುಗಿನ ಹೊಡೆತಕ್ಕೆ ಸಿಕ್ಕಿ ಕೈ, ಕಾಲು, ಬಾಯಿ ಕಟ್ಟಿ ಬಿದ್ದಿರುವಾಗ
ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ‘ನೋಟಿನ ರಾಜಕೀಯ’ಕ್ಕಾಗಿ ಕಾರ್ಪೋರೇಟ್ ವಲಯಕ್ಕೆ ತಲೆಬಾಗಿ ಉಳ್ಳವರಿಗೆ ಮಣೆ ಹಾಕುವ, ರೈತರ ಭೂಮಿ ಕಬಳಿಸುವ, ಕೃಷಿ ಮಾರುಕಟ್ಟೆಯನ್ನು ಸಂಪೂರ್ಣ ಖಾಸಗೀಕರಣಗೊಳಿಸುವ, ಭೂಮಿಯ ಹಂಚಿಕೆಯಲ್ಲಿ ದಲಿತರನ್ನು ಪೂರ್ತಿ ವಂಚಿಸುವ, ಕಾರ್ಮಿಕರ ಉದ್ಯೋಗದ ಹಕ್ಕು ಕಸಿಯುವ ಹುನ್ನಾರದಲ್ಲಿ ತೊಡಗಿವೆ” ಎಂದು ಹೋರಾಟಗಾರರು ಕಿಡಿಕಾರಿದ್ದಾರೆ.

“ಸದಾ ಕಾಲವೂ ಸಮೃದ್ಧ ಆಹಾರ, ಹಾಲು, ಹಣ್ಣು, ತರಕಾರಿಗಳನ್ನು ದೇಶಕ್ಕೆ ಒದಗಿಸುವ ರೈತಾಪಿ ವರ್ಗಕ್ಕೆ ಸರ್ಕಾರ ಎಲ್ಲ ರೀತಿಯ ನೆರವು ನೀಡುವ ಬದಲು ಅನಗತ್ಯ ಆತಂಕ, ಅಸಮಾಧಾನ ಉಂಟು ಮಾಡಿ, ಅವರು ಬೀದಿಗಿಳಿಯುವಂತೆ ಮಾಡಿದೆ. ಪರಿಣಾಮವಾಗಿ ಕಾಮ್ರೆಡ್ ಮಾರುತಿ ಮಾನ್ಪಡೆಯವರಂತಹ ಹಿರಿಯ ರೈತ ಮುಖಂಡರು ಕೊರೊನಾಕ್ಕೆ ತುತ್ತಾಗಿ ಅಮೂಲ್ಯ ಜೀವ ತೆರುವಂತಾದುದಕ್ಕೆ ಸರ್ಕಾರವೇ ನೇರ ಹೊಣೆಗಾರನಾಗಿದೆ” ಎಂದು ಸಮಿತಿ ಪ್ರತಿಪಾದಿಸಿದೆ.

ಈ ಎಲ್ಲ ವಿಚಾರಗಳು ಈಗ ಬಂದಿರುವ ಉಪ ಚುನಾವಣೆಯಲ್ಲಿ ಮುಖ್ಯವಾಗಿ ಮತಪಟ್ಟಿಗೆಯಲ್ಲಿ ಅಭಿವ್ಯಕ್ತವಾಗಬೇಕು. ಸರ್ಕಾರ ಭೂಸುಧಾರಣೆ, ಎಪಿಎಂಸಿ ಮತ್ತು ಕಾರ್ಮಿಕ ಕಾಯ್ದೆಗಳಿಗೆ ತಂದಿರುವ ಸುಗ್ರೀವಾಜ್ಞೆಗಳನ್ನು ಯಾವುದೇ ಕಾರಣಕ್ಕೂ ಮುಂದುವರಿಸಬಾರದು ಅಥವಾ ಮರು ಹೊರಡಿಸಬಾರದು. ಈ ಕಾಯ್ದೆಗಳಿಗಿಂತ ಹಿಂದಿನ ಯಥಾಸ್ಥಿತಿಯನ್ನು ಉಳಿಸಿಕೊಳ್ಳಬೇಕು, ಭೂಸುಧಾರಣೆಯ ಮೂಲ ಆಶಯವಾದ ‘ಹೊಲದ ಒಡೆತನವನ್ನು ಉಳುವವನ ಕೈಯಿಂದ ಕಿತ್ತುಕೊಳ್ಳಕೂಡದು’. ಹಾಗೆ, ದಲಿತರು, ಭೂರಹಿತರು, ಕೃಷಿ ಕಾರ್ಮಿಕರಿಗೆ ಹೆಚ್ಚುವರಿ ಭೂಮಿ ಹಂಚಿಕೆ ಮೊದಲು ಆಗಬೇಕು ಎಂದು ಸಮಿತಿ ಒತ್ತಾಯಿಸಿದೆ.

ಕರ್ನಾಟಕ ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ, ಚಾಮರಸಮಾಲಿ ಪಾಟೀಲ್, ಕೃಷಿ ಬೆಲೆ ನಿಗಧಿ ಆಯೋಗದ ಮಾಜಿ ಅಧ್ಯಕ್ಷ ಪ್ರಕಾಶ್ ಕಮ್ಮರಡಿ, ದಸಸಂ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು, ಭೂಮಿ ವಸತಿ ಹೋರಾಟ ಸಮಿತಿಯ ಸಿರಿಮನೆ ನಾಗರಾಜ್, ಕರ್ನಾಟಕ ಜನಶಕ್ತಿಯ ಮಲ್ಲಿಗೆ ಮುಂತಾದವರು ಸಭೆಯಲ್ಲಿದ್ದರು.


ಇದನ್ನೂ ಓದಿ: ಮುಖ್ಯಮಂತ್ರಿಯನ್ನು ಕಂಡಕಂಡಲ್ಲಿ ಘೇರಾವ್ ಮಾಡಿ: ರೈತ-ದಲಿತ ಕಾರ್ಮಿಕ ಐಕ್ಯ ಹೋರಾಟ ಸಮಿತಿ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...