Homeಕರ್ನಾಟಕಬಿಜೆಪಿಯೊಳಗೆಯೇ ಭಿನ್ನಾಭಿಪ್ರಾಯ ಸೃಷ್ಟಿಸಿದ ಮಾಧುಸ್ವಾಮಿ ಆಡಿಯೊ!

ಬಿಜೆಪಿಯೊಳಗೆಯೇ ಭಿನ್ನಾಭಿಪ್ರಾಯ ಸೃಷ್ಟಿಸಿದ ಮಾಧುಸ್ವಾಮಿ ಆಡಿಯೊ!

ಅವರ ಹೇಳಿಕೆಯ ಬಗ್ಗೆ ಇತರ ಸಚಿವರು ಗೊಂದಲಕಾರಿ ಹೇಳಿಕೆ ನೀಡುತ್ತಿದ್ದಾರೆ

- Advertisement -
- Advertisement -

ರಾಜ್ಯದ ಕಾನೂನು ಸಚಿವ ಮಾಧುಸ್ವಾಮಿ ಅವರ ಆಡಿಯೊವೊಂದು ಸೋರಿಕೆಯಾಗಿರುವ ಪರಿಣಾಮ ಬಿಜೆಪಿ ಸರ್ಕಾರ ತೀವ್ರ ಮುಜುಗರಕ್ಕೊಳಗಾಗಿದ್ದು ಸರ್ಕಾರದೊಳಗೆ ಆಕ್ರೋಶ ಭುಗಿಲೆದ್ದಿದೆ. ಆಡಿಯೊದಲ್ಲಿ ಅವರು, “ನಾವು ಸರ್ಕಾರವನ್ನು ನಡೆಸುತ್ತಿಲ್ಲ, ಮ್ಯಾನೇಜ್ ಮಾಡುತ್ತಿದ್ದು ತಳ್ಳಿಕೊಂಡು ಹೋಗುತ್ತಿದ್ದೇವೆ” ಎಂದು ಹೇಳಿದ್ದಾರೆ. ಆಡಿಯೊ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಅವರ ಹೇಳಿಕೆಯ ಬಗ್ಗೆ ಇತರ ಸಚಿವರು ಗೊಂದಲಕಾರಿ ಹೇಳಿಕೆ ನೀಡುತ್ತಿದ್ದಾರೆ.

ಸಚಿವ ಮಾಧುಸ್ವಾಮಿ ಅವರೊಂದಿಗೆ ಫೊನ್ ಕರೆಯಲ್ಲಿ ಮಾತನಾಡಿದ್ದ ಚನ್ನಪಟ್ಟಣದಿಂದ ಭಾಸ್ಕರ್‌ ಎಂಬ ಸಾಮಾಜಿಕ ಕಾರ್ಯಕರ್ತರೊಬ್ಬರು, ‘‘ರೈತರು ವಿಎಸ್‌ಎಸ್‌ಎನ್ ಬ್ಯಾಂಕಿನಿಂದ 50 ಸಾವಿರ ರೂ ಸಾಲ ತೆಗೆದುಕೊಂಡಿದ್ದರು. ಸಾಲ ಕಟ್ಟಲು ಹೋದರೆ ಸಾಲ ನವೀಕರಣದ ಹೆಸರಿನಲ್ಲಿ ಬ್ಯಾಂಕ್ ಸಿಬ್ಬಂದಿ 1300 ರೂ. ಪಡೆಯುತ್ತಿದ್ದಾರೆ. ಫುಲ್ ದುಡ್ಡನ್ನು ಅವರು ಪಡೆದು ಮತ್ತೆ ಬಡ್ಡಿಗೆ ಅಂತ ಹಾಕ್ತಾ ಇದ್ದಾರೆ. ಇದು ಇಡೀ ಕರ್ನಾಟಕದಲ್ಲಿ ನಡೆಯುತ್ತಿದೆ” ಎಂದು ಹೇಳಿಕೊಂಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಮಾಧುಸ್ವಾಮಿ, “ಏನಪ್ಪ ಮಾಡ್ಲಿ, ಇದೆಲ್ಲಾ ನನಗೆ ಗೊತ್ತು. ಎಲ್ಲವನ್ನೂ ಸಚಿವ ಸೋಮಶೇಖರ್‌ ಅವರ ಗಮನಕ್ಕೆ ತೆಗೆದುಕೊಂಡು ಹೋಗಿದ್ದೇವೆ. ಬಡ್ಡಿ ಹೊಡೆದುಕೊಂಡು ತಿಂತಾ ಇದ್ದಾರೆ. ಹೆಚ್ಚುವರಿ ಸೆಸ್ ಅಂತ ತೆಗೆದುಕೊಳ್ಳುತ್ತಿದ್ದಾರೆ. ಬಡ್ಡಿ ವಸೂಲಿ ಮಾಡ್ತಿದ್ದಾರೆ ಎಂದೂ ಹೇಳಿದ್ದೇನೆ. ಅವರೇನೂ ಕ್ರಮ ಜರುಗಿಸುತ್ತಿಲ್ಲ ಅಲ್ವಾ, ಏನು ಮಾಡೋಣ?” ಎಂದು ಕೇಳಿದ್ದಾರೆ.

ಇದನ್ನೂ ಓದಿ: ಎಸ್.ಆರ್‌.ಹಿರೇಮಠ ಸಂದರ್ಶನ| ಎಸಿಬಿ ರದ್ದಾಗಿದ್ದು ಐತಿಹಾಸಿಕ ಗೆಲುವು, ಆದರೆ…!

ಇದಕ್ಕೆ ಪ್ರತಿಕ್ರಿಸಿದ ಭಾಸ್ಕರ್‌ ಅವರು, “ನೋಡಿ ಸರ್‌, ಬ್ಯಾಂಕ್‌ನವರು ರೈತರನ್ನು ಮಂಗಗಳು ತರ ಮಾಡಿಬಿಟ್ಟಿದ್ದಾರೆ” ಎಂದು ಹೇಳುತ್ತಾರೆ.

ಇದಕ್ಕೆ ಮಾಧುಸ್ವಾಮಿ, ರೈತರು ಮಾತ್ರವಲ್ಲ ನಾನೇ ಕಟ್ಟಿದ್ದೇನೆ ಮಾರಾಯ. ನನ್ನಿಂದನೇ ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದು, ‘ಇಲ್ಲಿ ಸರ್ಕಾರ ನಡೆಸುತ್ತಿಲ್ಲ, ಮ್ಯಾನೇಜ್‌ಮೆಂಟ್ ಮಾಡುತ್ತಿದ್ದೇವೆ ಅಷ್ಟೆ. ಇನ್ನು ಎಂಟು ತಿಂಗಳು ತಳ್ಳಿದರೆ ಸಾಕು ಎಂದು ತಳ್ಳುತ್ತಾ ಇದ್ದೇವೆ ಕಣಪ್ಪಾ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸೋರಿಕೆಯಾದ ಆಡಿಯೊ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ತಳ್ಳಿಕೊಂಡು ಹೋಗ್ತಿರುವ ಬಿಜೆಪಿ ಸರ್ಕಾರದಲ್ಲಿ MMSಗಳು ಹೊರಬರುತ್ತಲೇ ಇರುತ್ತವೆ! ಬಿಜೆಪಿ ನಾಯಕರ ಅಶ್ಲೀಲ ಚಿತ್ರಗಳ MMSಗಳು ಒಂದೆಡೆಯಾದರೆ, #BJPvsBJP ಕಿತ್ತಾಟದಲ್ಲಿರುವ MMS ಮತ್ತೊಂದೆಡೆ! Mಮುನಿರತ್ನ, Mಮಾಧುಸ್ವಾಮಿ, Sಸೋಮಶೇಖರ್! ಈ ಕಿತ್ತಾಟ ನಿಲ್ಲಿಸಲಾಗದೆ ಕೈಲಾಡುವ ಗೊಂಬೆಯಂತೆ ‘ಮ್ಯಾನೇಜ್’ ಮಾಡುತ್ತಿದ್ದಾರೆ ಸಿಎಂ!” ಎಂದು ಹೇಳಿದೆ.

ಇದನ್ನೂ ಓದಿ: ಶಿವಮೊಗ್ಗ: ಸಾವರ್ಕರ್‌ ಫೋಟೋ ತೆರವು ಮಾಡಿಸಿದ ಜನತೆ; ವಿಡಿಯೊ ವೈರಲ್

ಈ ಮಧ್ಯೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಡ್ಯಾಮೇಜ್ ಕಂಟ್ರೋಲ್ ಮಾಡುವ ಪ್ರಯತ್ನ ಮಾಡಿದ್ದು, “ಸರ್ಕಾರದಲ್ಲಿ ಎಲ್ಲವೂ ಚೆನ್ನಾಗಿದೆ, ಯಾವುದೇ ತೊಂದರೆ ಇಲ್ಲ. ಹೇಳಿಕೆಯನ್ನು ವಿಭಿನ್ನ ಅರ್ಥದಲ್ಲಿ ಹೇಳಲಾಗಿದೆ” ಎಂದು ಹೇಳಿದ್ದಾರೆ.

ಈ ಮಧ್ಯೆ ಮಾಧುಸ್ವಾಮಿ ಅವರ ಹೇಳಿಕೆಯಿಂದ ಅಸಮಾಧಾನಗೊಂಡಿದ್ದು, ಸಚಿವ ಸೋಮಶೇಖರ್‌ ಅವರು,“ಮಾಧುಸ್ವಾಮಿ ಅವರು ತಾನೊಬ್ಬನೇ ಮೇಧಾವಿ ಎಂದು ತಿಳಿದುಕೊಂಡಿದ್ದಾರೆ” ಎಂದು ಆಕ್ರೋಶ ವ್ಯಕ್ತವಾಗಿದೆ.

ಮತ್ತೊಬ್ಬ ಸಚಿವ ಮುನಿಸ್ವಾಮಿ ಅವರು ಮಾಧುಸ್ವಾಮಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಈ ನಡುವೆ ಸಚಿವ ಅಶ್ವಥ್‌ನಾರಾಯಣ ಅವರು ಮಾತ್ರ ಆಡಿಯೊ ನಕಲಿ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನೆಹರೂ ಫೋಟೋ- ಪರಿಚಯ ಕಿತ್ತೆಸೆದ ಬಿಜೆಪಿ ಸರ್ಕಾರ; ಜನಾಕ್ರೋಶ

ಮಾಧುಸ್ವಾಮಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿರುವ ಇತರ ಸಚಿವರೊಂದಿಗೂ ಮಾತುಕತೆ ನಡೆಸಿದ್ದೇನೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ. “ಸಂಬಂಧಿಸಿದ ಎಲ್ಲರೊಂದಿಗೆ ಮಾತನಾಡುತ್ತೇನೆ ಮತ್ತು ಸಮಸ್ಯೆಯನ್ನು ಇತ್ಯರ್ಥಪಡಿಸುತ್ತೇನೆ” ಎಂದು ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮಾಧುಸ್ವಾಮಿಯವರು ಆಡಿಯೊ ನಿನ್ನದೆ ಅನ್ನುತ್ತಿರುವಾಗ ಅವ್ಯವಸ್ಥೆ ನಾರಾಯಣರೂ ಆಡಿಯೊ ನಕಲಿ ಎನ್ನುತ್ತಿದ್ದಾರೆ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...