Homeಕರ್ನಾಟಕಬಿಜೆಪಿಯೊಳಗೆಯೇ ಭಿನ್ನಾಭಿಪ್ರಾಯ ಸೃಷ್ಟಿಸಿದ ಮಾಧುಸ್ವಾಮಿ ಆಡಿಯೊ!

ಬಿಜೆಪಿಯೊಳಗೆಯೇ ಭಿನ್ನಾಭಿಪ್ರಾಯ ಸೃಷ್ಟಿಸಿದ ಮಾಧುಸ್ವಾಮಿ ಆಡಿಯೊ!

ಅವರ ಹೇಳಿಕೆಯ ಬಗ್ಗೆ ಇತರ ಸಚಿವರು ಗೊಂದಲಕಾರಿ ಹೇಳಿಕೆ ನೀಡುತ್ತಿದ್ದಾರೆ

- Advertisement -
- Advertisement -

ರಾಜ್ಯದ ಕಾನೂನು ಸಚಿವ ಮಾಧುಸ್ವಾಮಿ ಅವರ ಆಡಿಯೊವೊಂದು ಸೋರಿಕೆಯಾಗಿರುವ ಪರಿಣಾಮ ಬಿಜೆಪಿ ಸರ್ಕಾರ ತೀವ್ರ ಮುಜುಗರಕ್ಕೊಳಗಾಗಿದ್ದು ಸರ್ಕಾರದೊಳಗೆ ಆಕ್ರೋಶ ಭುಗಿಲೆದ್ದಿದೆ. ಆಡಿಯೊದಲ್ಲಿ ಅವರು, “ನಾವು ಸರ್ಕಾರವನ್ನು ನಡೆಸುತ್ತಿಲ್ಲ, ಮ್ಯಾನೇಜ್ ಮಾಡುತ್ತಿದ್ದು ತಳ್ಳಿಕೊಂಡು ಹೋಗುತ್ತಿದ್ದೇವೆ” ಎಂದು ಹೇಳಿದ್ದಾರೆ. ಆಡಿಯೊ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಅವರ ಹೇಳಿಕೆಯ ಬಗ್ಗೆ ಇತರ ಸಚಿವರು ಗೊಂದಲಕಾರಿ ಹೇಳಿಕೆ ನೀಡುತ್ತಿದ್ದಾರೆ.

ಸಚಿವ ಮಾಧುಸ್ವಾಮಿ ಅವರೊಂದಿಗೆ ಫೊನ್ ಕರೆಯಲ್ಲಿ ಮಾತನಾಡಿದ್ದ ಚನ್ನಪಟ್ಟಣದಿಂದ ಭಾಸ್ಕರ್‌ ಎಂಬ ಸಾಮಾಜಿಕ ಕಾರ್ಯಕರ್ತರೊಬ್ಬರು, ‘‘ರೈತರು ವಿಎಸ್‌ಎಸ್‌ಎನ್ ಬ್ಯಾಂಕಿನಿಂದ 50 ಸಾವಿರ ರೂ ಸಾಲ ತೆಗೆದುಕೊಂಡಿದ್ದರು. ಸಾಲ ಕಟ್ಟಲು ಹೋದರೆ ಸಾಲ ನವೀಕರಣದ ಹೆಸರಿನಲ್ಲಿ ಬ್ಯಾಂಕ್ ಸಿಬ್ಬಂದಿ 1300 ರೂ. ಪಡೆಯುತ್ತಿದ್ದಾರೆ. ಫುಲ್ ದುಡ್ಡನ್ನು ಅವರು ಪಡೆದು ಮತ್ತೆ ಬಡ್ಡಿಗೆ ಅಂತ ಹಾಕ್ತಾ ಇದ್ದಾರೆ. ಇದು ಇಡೀ ಕರ್ನಾಟಕದಲ್ಲಿ ನಡೆಯುತ್ತಿದೆ” ಎಂದು ಹೇಳಿಕೊಂಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಮಾಧುಸ್ವಾಮಿ, “ಏನಪ್ಪ ಮಾಡ್ಲಿ, ಇದೆಲ್ಲಾ ನನಗೆ ಗೊತ್ತು. ಎಲ್ಲವನ್ನೂ ಸಚಿವ ಸೋಮಶೇಖರ್‌ ಅವರ ಗಮನಕ್ಕೆ ತೆಗೆದುಕೊಂಡು ಹೋಗಿದ್ದೇವೆ. ಬಡ್ಡಿ ಹೊಡೆದುಕೊಂಡು ತಿಂತಾ ಇದ್ದಾರೆ. ಹೆಚ್ಚುವರಿ ಸೆಸ್ ಅಂತ ತೆಗೆದುಕೊಳ್ಳುತ್ತಿದ್ದಾರೆ. ಬಡ್ಡಿ ವಸೂಲಿ ಮಾಡ್ತಿದ್ದಾರೆ ಎಂದೂ ಹೇಳಿದ್ದೇನೆ. ಅವರೇನೂ ಕ್ರಮ ಜರುಗಿಸುತ್ತಿಲ್ಲ ಅಲ್ವಾ, ಏನು ಮಾಡೋಣ?” ಎಂದು ಕೇಳಿದ್ದಾರೆ.

ಇದನ್ನೂ ಓದಿ: ಎಸ್.ಆರ್‌.ಹಿರೇಮಠ ಸಂದರ್ಶನ| ಎಸಿಬಿ ರದ್ದಾಗಿದ್ದು ಐತಿಹಾಸಿಕ ಗೆಲುವು, ಆದರೆ…!

ಇದಕ್ಕೆ ಪ್ರತಿಕ್ರಿಸಿದ ಭಾಸ್ಕರ್‌ ಅವರು, “ನೋಡಿ ಸರ್‌, ಬ್ಯಾಂಕ್‌ನವರು ರೈತರನ್ನು ಮಂಗಗಳು ತರ ಮಾಡಿಬಿಟ್ಟಿದ್ದಾರೆ” ಎಂದು ಹೇಳುತ್ತಾರೆ.

ಇದಕ್ಕೆ ಮಾಧುಸ್ವಾಮಿ, ರೈತರು ಮಾತ್ರವಲ್ಲ ನಾನೇ ಕಟ್ಟಿದ್ದೇನೆ ಮಾರಾಯ. ನನ್ನಿಂದನೇ ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದು, ‘ಇಲ್ಲಿ ಸರ್ಕಾರ ನಡೆಸುತ್ತಿಲ್ಲ, ಮ್ಯಾನೇಜ್‌ಮೆಂಟ್ ಮಾಡುತ್ತಿದ್ದೇವೆ ಅಷ್ಟೆ. ಇನ್ನು ಎಂಟು ತಿಂಗಳು ತಳ್ಳಿದರೆ ಸಾಕು ಎಂದು ತಳ್ಳುತ್ತಾ ಇದ್ದೇವೆ ಕಣಪ್ಪಾ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸೋರಿಕೆಯಾದ ಆಡಿಯೊ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ತಳ್ಳಿಕೊಂಡು ಹೋಗ್ತಿರುವ ಬಿಜೆಪಿ ಸರ್ಕಾರದಲ್ಲಿ MMSಗಳು ಹೊರಬರುತ್ತಲೇ ಇರುತ್ತವೆ! ಬಿಜೆಪಿ ನಾಯಕರ ಅಶ್ಲೀಲ ಚಿತ್ರಗಳ MMSಗಳು ಒಂದೆಡೆಯಾದರೆ, #BJPvsBJP ಕಿತ್ತಾಟದಲ್ಲಿರುವ MMS ಮತ್ತೊಂದೆಡೆ! Mಮುನಿರತ್ನ, Mಮಾಧುಸ್ವಾಮಿ, Sಸೋಮಶೇಖರ್! ಈ ಕಿತ್ತಾಟ ನಿಲ್ಲಿಸಲಾಗದೆ ಕೈಲಾಡುವ ಗೊಂಬೆಯಂತೆ ‘ಮ್ಯಾನೇಜ್’ ಮಾಡುತ್ತಿದ್ದಾರೆ ಸಿಎಂ!” ಎಂದು ಹೇಳಿದೆ.

ಇದನ್ನೂ ಓದಿ: ಶಿವಮೊಗ್ಗ: ಸಾವರ್ಕರ್‌ ಫೋಟೋ ತೆರವು ಮಾಡಿಸಿದ ಜನತೆ; ವಿಡಿಯೊ ವೈರಲ್

ಈ ಮಧ್ಯೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಡ್ಯಾಮೇಜ್ ಕಂಟ್ರೋಲ್ ಮಾಡುವ ಪ್ರಯತ್ನ ಮಾಡಿದ್ದು, “ಸರ್ಕಾರದಲ್ಲಿ ಎಲ್ಲವೂ ಚೆನ್ನಾಗಿದೆ, ಯಾವುದೇ ತೊಂದರೆ ಇಲ್ಲ. ಹೇಳಿಕೆಯನ್ನು ವಿಭಿನ್ನ ಅರ್ಥದಲ್ಲಿ ಹೇಳಲಾಗಿದೆ” ಎಂದು ಹೇಳಿದ್ದಾರೆ.

ಈ ಮಧ್ಯೆ ಮಾಧುಸ್ವಾಮಿ ಅವರ ಹೇಳಿಕೆಯಿಂದ ಅಸಮಾಧಾನಗೊಂಡಿದ್ದು, ಸಚಿವ ಸೋಮಶೇಖರ್‌ ಅವರು,“ಮಾಧುಸ್ವಾಮಿ ಅವರು ತಾನೊಬ್ಬನೇ ಮೇಧಾವಿ ಎಂದು ತಿಳಿದುಕೊಂಡಿದ್ದಾರೆ” ಎಂದು ಆಕ್ರೋಶ ವ್ಯಕ್ತವಾಗಿದೆ.

ಮತ್ತೊಬ್ಬ ಸಚಿವ ಮುನಿಸ್ವಾಮಿ ಅವರು ಮಾಧುಸ್ವಾಮಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಈ ನಡುವೆ ಸಚಿವ ಅಶ್ವಥ್‌ನಾರಾಯಣ ಅವರು ಮಾತ್ರ ಆಡಿಯೊ ನಕಲಿ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನೆಹರೂ ಫೋಟೋ- ಪರಿಚಯ ಕಿತ್ತೆಸೆದ ಬಿಜೆಪಿ ಸರ್ಕಾರ; ಜನಾಕ್ರೋಶ

ಮಾಧುಸ್ವಾಮಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿರುವ ಇತರ ಸಚಿವರೊಂದಿಗೂ ಮಾತುಕತೆ ನಡೆಸಿದ್ದೇನೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ. “ಸಂಬಂಧಿಸಿದ ಎಲ್ಲರೊಂದಿಗೆ ಮಾತನಾಡುತ್ತೇನೆ ಮತ್ತು ಸಮಸ್ಯೆಯನ್ನು ಇತ್ಯರ್ಥಪಡಿಸುತ್ತೇನೆ” ಎಂದು ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮಾಧುಸ್ವಾಮಿಯವರು ಆಡಿಯೊ ನಿನ್ನದೆ ಅನ್ನುತ್ತಿರುವಾಗ ಅವ್ಯವಸ್ಥೆ ನಾರಾಯಣರೂ ಆಡಿಯೊ ನಕಲಿ ಎನ್ನುತ್ತಿದ್ದಾರೆ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...