Homeಕರ್ನಾಟಕಬಿಜೆಪಿಯೊಳಗೆಯೇ ಭಿನ್ನಾಭಿಪ್ರಾಯ ಸೃಷ್ಟಿಸಿದ ಮಾಧುಸ್ವಾಮಿ ಆಡಿಯೊ!

ಬಿಜೆಪಿಯೊಳಗೆಯೇ ಭಿನ್ನಾಭಿಪ್ರಾಯ ಸೃಷ್ಟಿಸಿದ ಮಾಧುಸ್ವಾಮಿ ಆಡಿಯೊ!

ಅವರ ಹೇಳಿಕೆಯ ಬಗ್ಗೆ ಇತರ ಸಚಿವರು ಗೊಂದಲಕಾರಿ ಹೇಳಿಕೆ ನೀಡುತ್ತಿದ್ದಾರೆ

- Advertisement -
- Advertisement -

ರಾಜ್ಯದ ಕಾನೂನು ಸಚಿವ ಮಾಧುಸ್ವಾಮಿ ಅವರ ಆಡಿಯೊವೊಂದು ಸೋರಿಕೆಯಾಗಿರುವ ಪರಿಣಾಮ ಬಿಜೆಪಿ ಸರ್ಕಾರ ತೀವ್ರ ಮುಜುಗರಕ್ಕೊಳಗಾಗಿದ್ದು ಸರ್ಕಾರದೊಳಗೆ ಆಕ್ರೋಶ ಭುಗಿಲೆದ್ದಿದೆ. ಆಡಿಯೊದಲ್ಲಿ ಅವರು, “ನಾವು ಸರ್ಕಾರವನ್ನು ನಡೆಸುತ್ತಿಲ್ಲ, ಮ್ಯಾನೇಜ್ ಮಾಡುತ್ತಿದ್ದು ತಳ್ಳಿಕೊಂಡು ಹೋಗುತ್ತಿದ್ದೇವೆ” ಎಂದು ಹೇಳಿದ್ದಾರೆ. ಆಡಿಯೊ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಅವರ ಹೇಳಿಕೆಯ ಬಗ್ಗೆ ಇತರ ಸಚಿವರು ಗೊಂದಲಕಾರಿ ಹೇಳಿಕೆ ನೀಡುತ್ತಿದ್ದಾರೆ.

ಸಚಿವ ಮಾಧುಸ್ವಾಮಿ ಅವರೊಂದಿಗೆ ಫೊನ್ ಕರೆಯಲ್ಲಿ ಮಾತನಾಡಿದ್ದ ಚನ್ನಪಟ್ಟಣದಿಂದ ಭಾಸ್ಕರ್‌ ಎಂಬ ಸಾಮಾಜಿಕ ಕಾರ್ಯಕರ್ತರೊಬ್ಬರು, ‘‘ರೈತರು ವಿಎಸ್‌ಎಸ್‌ಎನ್ ಬ್ಯಾಂಕಿನಿಂದ 50 ಸಾವಿರ ರೂ ಸಾಲ ತೆಗೆದುಕೊಂಡಿದ್ದರು. ಸಾಲ ಕಟ್ಟಲು ಹೋದರೆ ಸಾಲ ನವೀಕರಣದ ಹೆಸರಿನಲ್ಲಿ ಬ್ಯಾಂಕ್ ಸಿಬ್ಬಂದಿ 1300 ರೂ. ಪಡೆಯುತ್ತಿದ್ದಾರೆ. ಫುಲ್ ದುಡ್ಡನ್ನು ಅವರು ಪಡೆದು ಮತ್ತೆ ಬಡ್ಡಿಗೆ ಅಂತ ಹಾಕ್ತಾ ಇದ್ದಾರೆ. ಇದು ಇಡೀ ಕರ್ನಾಟಕದಲ್ಲಿ ನಡೆಯುತ್ತಿದೆ” ಎಂದು ಹೇಳಿಕೊಂಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಮಾಧುಸ್ವಾಮಿ, “ಏನಪ್ಪ ಮಾಡ್ಲಿ, ಇದೆಲ್ಲಾ ನನಗೆ ಗೊತ್ತು. ಎಲ್ಲವನ್ನೂ ಸಚಿವ ಸೋಮಶೇಖರ್‌ ಅವರ ಗಮನಕ್ಕೆ ತೆಗೆದುಕೊಂಡು ಹೋಗಿದ್ದೇವೆ. ಬಡ್ಡಿ ಹೊಡೆದುಕೊಂಡು ತಿಂತಾ ಇದ್ದಾರೆ. ಹೆಚ್ಚುವರಿ ಸೆಸ್ ಅಂತ ತೆಗೆದುಕೊಳ್ಳುತ್ತಿದ್ದಾರೆ. ಬಡ್ಡಿ ವಸೂಲಿ ಮಾಡ್ತಿದ್ದಾರೆ ಎಂದೂ ಹೇಳಿದ್ದೇನೆ. ಅವರೇನೂ ಕ್ರಮ ಜರುಗಿಸುತ್ತಿಲ್ಲ ಅಲ್ವಾ, ಏನು ಮಾಡೋಣ?” ಎಂದು ಕೇಳಿದ್ದಾರೆ.

ಇದನ್ನೂ ಓದಿ: ಎಸ್.ಆರ್‌.ಹಿರೇಮಠ ಸಂದರ್ಶನ| ಎಸಿಬಿ ರದ್ದಾಗಿದ್ದು ಐತಿಹಾಸಿಕ ಗೆಲುವು, ಆದರೆ…!

ಇದಕ್ಕೆ ಪ್ರತಿಕ್ರಿಸಿದ ಭಾಸ್ಕರ್‌ ಅವರು, “ನೋಡಿ ಸರ್‌, ಬ್ಯಾಂಕ್‌ನವರು ರೈತರನ್ನು ಮಂಗಗಳು ತರ ಮಾಡಿಬಿಟ್ಟಿದ್ದಾರೆ” ಎಂದು ಹೇಳುತ್ತಾರೆ.

ಇದಕ್ಕೆ ಮಾಧುಸ್ವಾಮಿ, ರೈತರು ಮಾತ್ರವಲ್ಲ ನಾನೇ ಕಟ್ಟಿದ್ದೇನೆ ಮಾರಾಯ. ನನ್ನಿಂದನೇ ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದು, ‘ಇಲ್ಲಿ ಸರ್ಕಾರ ನಡೆಸುತ್ತಿಲ್ಲ, ಮ್ಯಾನೇಜ್‌ಮೆಂಟ್ ಮಾಡುತ್ತಿದ್ದೇವೆ ಅಷ್ಟೆ. ಇನ್ನು ಎಂಟು ತಿಂಗಳು ತಳ್ಳಿದರೆ ಸಾಕು ಎಂದು ತಳ್ಳುತ್ತಾ ಇದ್ದೇವೆ ಕಣಪ್ಪಾ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸೋರಿಕೆಯಾದ ಆಡಿಯೊ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ತಳ್ಳಿಕೊಂಡು ಹೋಗ್ತಿರುವ ಬಿಜೆಪಿ ಸರ್ಕಾರದಲ್ಲಿ MMSಗಳು ಹೊರಬರುತ್ತಲೇ ಇರುತ್ತವೆ! ಬಿಜೆಪಿ ನಾಯಕರ ಅಶ್ಲೀಲ ಚಿತ್ರಗಳ MMSಗಳು ಒಂದೆಡೆಯಾದರೆ, #BJPvsBJP ಕಿತ್ತಾಟದಲ್ಲಿರುವ MMS ಮತ್ತೊಂದೆಡೆ! Mಮುನಿರತ್ನ, Mಮಾಧುಸ್ವಾಮಿ, Sಸೋಮಶೇಖರ್! ಈ ಕಿತ್ತಾಟ ನಿಲ್ಲಿಸಲಾಗದೆ ಕೈಲಾಡುವ ಗೊಂಬೆಯಂತೆ ‘ಮ್ಯಾನೇಜ್’ ಮಾಡುತ್ತಿದ್ದಾರೆ ಸಿಎಂ!” ಎಂದು ಹೇಳಿದೆ.

ಇದನ್ನೂ ಓದಿ: ಶಿವಮೊಗ್ಗ: ಸಾವರ್ಕರ್‌ ಫೋಟೋ ತೆರವು ಮಾಡಿಸಿದ ಜನತೆ; ವಿಡಿಯೊ ವೈರಲ್

ಈ ಮಧ್ಯೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಡ್ಯಾಮೇಜ್ ಕಂಟ್ರೋಲ್ ಮಾಡುವ ಪ್ರಯತ್ನ ಮಾಡಿದ್ದು, “ಸರ್ಕಾರದಲ್ಲಿ ಎಲ್ಲವೂ ಚೆನ್ನಾಗಿದೆ, ಯಾವುದೇ ತೊಂದರೆ ಇಲ್ಲ. ಹೇಳಿಕೆಯನ್ನು ವಿಭಿನ್ನ ಅರ್ಥದಲ್ಲಿ ಹೇಳಲಾಗಿದೆ” ಎಂದು ಹೇಳಿದ್ದಾರೆ.

ಈ ಮಧ್ಯೆ ಮಾಧುಸ್ವಾಮಿ ಅವರ ಹೇಳಿಕೆಯಿಂದ ಅಸಮಾಧಾನಗೊಂಡಿದ್ದು, ಸಚಿವ ಸೋಮಶೇಖರ್‌ ಅವರು,“ಮಾಧುಸ್ವಾಮಿ ಅವರು ತಾನೊಬ್ಬನೇ ಮೇಧಾವಿ ಎಂದು ತಿಳಿದುಕೊಂಡಿದ್ದಾರೆ” ಎಂದು ಆಕ್ರೋಶ ವ್ಯಕ್ತವಾಗಿದೆ.

ಮತ್ತೊಬ್ಬ ಸಚಿವ ಮುನಿಸ್ವಾಮಿ ಅವರು ಮಾಧುಸ್ವಾಮಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಈ ನಡುವೆ ಸಚಿವ ಅಶ್ವಥ್‌ನಾರಾಯಣ ಅವರು ಮಾತ್ರ ಆಡಿಯೊ ನಕಲಿ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನೆಹರೂ ಫೋಟೋ- ಪರಿಚಯ ಕಿತ್ತೆಸೆದ ಬಿಜೆಪಿ ಸರ್ಕಾರ; ಜನಾಕ್ರೋಶ

ಮಾಧುಸ್ವಾಮಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿರುವ ಇತರ ಸಚಿವರೊಂದಿಗೂ ಮಾತುಕತೆ ನಡೆಸಿದ್ದೇನೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ. “ಸಂಬಂಧಿಸಿದ ಎಲ್ಲರೊಂದಿಗೆ ಮಾತನಾಡುತ್ತೇನೆ ಮತ್ತು ಸಮಸ್ಯೆಯನ್ನು ಇತ್ಯರ್ಥಪಡಿಸುತ್ತೇನೆ” ಎಂದು ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮಾಧುಸ್ವಾಮಿಯವರು ಆಡಿಯೊ ನಿನ್ನದೆ ಅನ್ನುತ್ತಿರುವಾಗ ಅವ್ಯವಸ್ಥೆ ನಾರಾಯಣರೂ ಆಡಿಯೊ ನಕಲಿ ಎನ್ನುತ್ತಿದ್ದಾರೆ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...