Homeಮುಖಪುಟವೇಗದ ಸೇವೆ ಬೇಕಿದ್ದರೆ ಮುಂಗಡ ಟಿಪ್‌ಗೆ ಒತ್ತಾಯ: ಉಬರ್‌ಗೆ ಸರ್ಕಾರದಿಂದ ನೋಟಿಸ್

ವೇಗದ ಸೇವೆ ಬೇಕಿದ್ದರೆ ಮುಂಗಡ ಟಿಪ್‌ಗೆ ಒತ್ತಾಯ: ಉಬರ್‌ಗೆ ಸರ್ಕಾರದಿಂದ ನೋಟಿಸ್

- Advertisement -
- Advertisement -

ವೇಗವಾಗಿ ಸೇವೆ ಪಡೆಯಲು ಮುಂಚಿತವಾಗಿ ಟಿಪ್ ಪಾವತಿಸುವಂತೆ ಬಳಕೆದಾರರ ಮೇಲೆ ಒತ್ತಡ ಹೇರಿದ ಆರೋಪದ ಮೇಲೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (CCPA) ಉಬರ್‌ಗೆ ನೋಟಿಸ್ ನೀಡಿದೆ.  ಇತ್ತೀಚಿನ ತಿಂಗಳುಗಳಲ್ಲಿ, ಅಪ್ಲಿಕೇಶನ್ ಆಧಾರಿತ ಟ್ಯಾಕ್ಸಿ ವೇದಿಕೆಯಾದ ತ್ವರಿತ ಸೇವೆಗಾಗಿ ಮುಂಚಿತವಾಗಿ ಟಿಪ್ ಪಾವತಿಸಲು ಬಳಕೆದಾರರನ್ನು ಪ್ರೋತ್ಸಾಹಿಸುತ್ತಿದೆ. ವೇಗದ ಸೇವೆ ಬೇಕಿದ್ದರೆ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಇಂತಹ ಪದ್ಧತಿಗಳು “ಅನ್ಯಾಯ ವ್ಯವಹಾರ”ಕ್ಕೆ ಸಮನಾಗಿರುತ್ತದೆ ಮತ್ತು ಅದನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಪ್ರಹ್ಲಾದ್ ಜೋಶಿ, ‘ಮುಂಗಡ ಟಿಪ್ಪಿಂಗ್’ ಅಭ್ಯಾಸ ತೀವ್ರ ಕಳವಳಕಾರಿ ವಿಚಾರವಾಗಿದೆ. ಟಿಪ್ಪಿಂಗ್ ಐಚ್ಛಿಕವಾಗಿರಬೇಕಿದ್ದು ಮತ್ತು ಗ್ರಾಹಕರು ತಮ್ಮ ಸೇವಾ ಅನುಭವದ ಆಧಾರದ ಮೇಲೆ ನಿರ್ಧರಿಸಬೇಕು ಎಂದು ಅವರು ಒತ್ತಿ ಹೇಳಿದ್ದಾರೆ.

“ವೇಗದ ಸೇವೆಗಾಗಿ ಮುಂಚಿತವಾಗಿ ಟಿಪ್ ಪಾವತಿಸಲು ಬಳಕೆದಾರರನ್ನು ಒತ್ತಾಯಿಸುವುದು ಅಥವಾ ಅದನ್ನು ಮುಂದಕ್ಕೆ ತಳ್ಳುವುದು ಅನೈತಿಕ ಮತ್ತು ಶೋಷಣೆಯಾಗಿದೆ. ಅಂತಹ ಕ್ರಮಗಳು ಅನ್ಯಾಯದ ವ್ಯವಹಾರದ ಪದ್ಧತಿಗಳ ಅಡಿಯಲ್ಲಿ ಬರುತ್ತವೆ. ಟಿಪ್ ಕೃತಜ್ಞತೆಯ ಸಂಕೇತವಾಗಿದ್ದು, ಬಾಧ್ಯತೆಯಲ್ಲ, ಮತ್ತು ಸೇವೆಯನ್ನು ಒದಗಿಸಿದ ನಂತರ ಅದನ್ನು ನೀಡಬೇಕು” ಎಂದು ಅವರು ಬರೆದಿದ್ದಾರೆ.

ಈ ಬಗ್ಗೆ ತನಿಖೆ ಮಾಡಲು CCPA ಗೆ ನಿರ್ದೇಶನ ನೀಡಿದ್ದೇನೆ ಎಂದು ಜೋಶಿ ಹೇಳಿದ್ದಾರೆ. “ಇಂದು, CCPA ಈ ವಿಷಯದ ಬಗ್ಗೆ ಉಬರ್‌ಗೆ ನೋಟಿಸ್ ನೀಡಿ, ವೇದಿಕೆಯಿಂದ ವಿವರಣೆಯನ್ನು ಕೋರಿದೆ. ಎಲ್ಲಾ ಗ್ರಾಹಕರ ಸಂವಹನಗಳಲ್ಲಿ ನ್ಯಾಯಸಮ್ಮತತೆ, ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಎತ್ತಿಹಿಡಿಯಬೇಕು” ಎಂದು ಅವರು ಹೇಳಿದ್ದಾರೆ.

ಮತ್ತೊಂದೆಡೆ ರ್‍ಯಾಪಿಡೊ ಕೂಡಾ ವೇಗದ ಸೇವೆಗಾಗಿ ಬಳಕೆದಾರರಿಗೆ ಮುಂಚಿತವಾಗಿ ಟಿಪ್ ನೀಡಬೇಕೆಂದು ಒತ್ತಾಯಿಸುತ್ತಿದೆ ಎಂದು ವರದಿಯಾಗಿದೆ. ಆದಾಗ್ಯೂ ಸರ್ಕಾರ ಈ ವಿಷಯದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಗ್ರಾಹಕರ ಕಳವಳವನ್ನು ಎತ್ತಿ ತೋರಿಸುವ ಡಿಜಿಟಲ್ ಸಮುದಾಯ ವೇದಿಕೆಯಾದ ಲೋಕಲ್‌ಸರ್ಕಲ್ಸ್‌ನ ಸಂಸ್ಥಾಪಕ ಸಚಿನ್ ತಪರಿಯಾ, ಅಂತಹ ಅಭ್ಯಾಸಗಳು “ಡಾರ್ಕ್ ಪ್ಯಾಟರ್ನ್ಸ್” ಎಂದು ಕರೆಯಲ್ಪಡುವ ವಿದ್ಯಮಾನದ ಭಾಗವಾಗಿದೆ ಎಂದು ಹೇಳಿದ್ದಾರೆ. “ಲೋಕಲ್‌ಸರ್ಕಲ್ಸ್ ನಡೆಸಿದ ಆನ್‌ಲೈನ್ ಸಮೀಕ್ಷೆಯಲ್ಲಿ ವರದಿಯಾಗಿರುವಂತೆ ಗ್ರಾಹಕರು ವಿವಿಧ ಡಾರ್ಕ್ ಪ್ಯಾಟರ್ನ್‌ಗಳ ಬಗ್ಗೆ ಜಾಗೃತರಾಗುತ್ತಿದ್ದಾರೆ” ಎಂದು ತಪರಿಯಾ ಹೇಳಿದ್ದಾರೆ.

ಡಾರ್ಕ್ ಪ್ಯಾಟರ್ನ್ ಒಂದು ಮೋಸಗೊಳಿಸುವ ಬಳಕೆದಾರ ಇಂಟರ್ಫೇಸ್ ವಿನ್ಯಾಸವನ್ನು ಸೂಚಿಸುತ್ತದೆ. ಅದು ಬಳಕೆದಾರರು ತಾವು ಆಯ್ಕೆ ಮಾಡದೇ ಇರುವ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮಾಡುತ್ತದೆ ಮತ್ತು ಗ್ರಾಹಕರ ಸ್ವಾಯತ್ತತೆ ಮತ್ತು ಆಯ್ಕೆಯನ್ನು ದುರ್ಬಲಗೊಳಿಸುತ್ತದೆ. ಉದಾಹರಣೆಗೆ ವಹಿವಾಟುಗಳನ್ನು ರದ್ದುಗೊಳಿಸುವುದು ಕಷ್ಟಕರವಾಗಿಸುವುದು, ಅತಿಯಾದ ಸ್ಕ್ರೋಲಿಂಗ್, ಸ್ವಯಂ-ಪ್ಲೇಯಿಂಗ್ ವೀಡಿಯೊಗಳು ಮತ್ತು ಆಗಾಗ್ಗೆ ಬರುವ ನೋಟಿಫಿಕೇಷನ್‌ಗಳು ಇದರಲ್ಲಿ ಸೇರಿವೆ. ವೇಗದ ಸೇವೆ ಬೇಕಿದ್ದರೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹಿಂದೂ ಧಾರ್ಮಿಕ ದತ್ತಿ ಮಂಡಳಿಗಳ ಜೊತೆ ವಕ್ಫ್ ಬೋರ್ಡ್ ಹೋಲಿಕೆ ಸಲ್ಲದು: ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ ವಾದ

ಹಿಂದೂ ಧಾರ್ಮಿಕ ದತ್ತಿ ಮಂಡಳಿಗಳ ಜೊತೆ ವಕ್ಫ್ ಬೋರ್ಡ್ ಹೋಲಿಕೆ ಸಲ್ಲದು: ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ ವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...