Homeಮುಖಪುಟಮಧ್ಯಪ್ರದೇಶದ ಸರ್ಕಾರಿ ಉದ್ಯೋಗಗಳು ಸ್ಥಳೀಯರಿಗೆ ಮಾತ್ರ: ಶಿವರಾಜ್ ಚೌಹಾಣ್

ಮಧ್ಯಪ್ರದೇಶದ ಸರ್ಕಾರಿ ಉದ್ಯೋಗಗಳು ಸ್ಥಳೀಯರಿಗೆ ಮಾತ್ರ: ಶಿವರಾಜ್ ಚೌಹಾಣ್

ಸರ್ಕಾರಿ ಉದ್ಯೋಗಗಳು ಶೇಕಡಾ 2.5 ರಷ್ಟು ಕುಗ್ಗಿವೆ ಎಂದು ಮಧ್ಯಪ್ರದೇಶದ ಅಧಿಕಾರಿಗಳು ತಿಳಿಸಿದ್ದಾರೆ. ಹಾಗಾಗಿ ಸರ್ಕಾರಿ ಉದ್ಯೋಗಗಳೆ ಕಡಿಮೆ ಇರುವಾಗ ಇಂತಹ ಘೋಷಣೆಗಳಿಗೆ ಮಹತ್ವವಿಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಮಧ್ಯಪ್ರದೇಶದಲ್ಲಿ ಸರ್ಕಾರಿ ಉದ್ಯೋಗಗಳನ್ನು ರಾಜ್ಯದ ಸ್ಥಳೀಯರಿಗೆ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಘೋಷಿಸಿದ್ದಾರೆ. ಇದನ್ನು ಜಾರಿಗೆ ತರಲು ಶೀಘ್ರದಲ್ಲೇ ಕಾನೂನನ್ನು ಬದಲಾಯಿಸಲಾಗುವುದು ಎಂದು ಹೇಳಿದ್ದಾರೆ

“ಮಧ್ಯಪ್ರದೇಶ ಸರ್ಕಾರ ಇಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಮಧ್ಯಪ್ರದೇಶದಲ್ಲಿ ಸರ್ಕಾರಿ ಉದ್ಯೋಗಗಳನ್ನು ರಾಜ್ಯದ ಯುವಜನರಿಗೆ ಮಾತ್ರ ನೀಡಲು ನಾವು ಅಗತ್ಯ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಮಧ್ಯಪ್ರದೇಶದ ಸಂಪನ್ಮೂಲಗಳು ಮಧ್ಯಪ್ರದೇಶದ ಪ್ರಜೆಗಳಿಗೆ ಮಾತ್ರ” ಎಂದು ಶಿವರಾಜ್ ಸಿಂಗ್ ಚೌಹಾನ್ ಹೇಳಿದ್ದಾರೆ.

ಶೀಘ್ರದಲ್ಲಿಯೇ ನಡೆಯುವ 27 ವಿಧಾನಸಭೆ ಸ್ಥಾನಗಳಿಗೆ ಉಪಚುನಾವಣೆ ಹಿನ್ನೆಲೆಯಲ್ಲಿ ಈ ಪ್ರಕಟಣೆ ಬಂದಿದೆ ಎಂದು ಹೇಳಲಾಗುತ್ತಿದೆ. ಚುನಾವಣೆಯ ದಿನಾಂಕ ಇನ್ನೂ ನಿಗಧಿಯಾಗಿಲ್ಲ.

ಮಧ್ಯಪ್ರದೇಶದ ಯುವಜನರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಆದ್ಯತೆ ನೀಡಲಾಗುವುದು ಎಂದು ಚೌಹಾನ್ ಈ ಹಿಂದೆ ಹೇಳಿದ್ದರು. “ಮಧ್ಯಪ್ರದೇಶದ ಸ್ಥಳೀಯರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಆದ್ಯತೆ ನೀಡಲಾಗುವುದು. ಉದ್ಯೋಗಾವಕಾಶಗಳ ಕೊರತೆಯಿರುವ ಸಮಯದಲ್ಲಿ ನಮ್ಮ ರಾಜ್ಯದ  ಯುವಕರ ಬಗ್ಗೆ ಕಾಳಜಿ ವಹಿಸುವುದು ನಮ್ಮ ಕರ್ತವ್ಯ” ಎಂದು ಅವರು ಸ್ವಾತಂತ್ರ್ಯ ದಿನಾಚರಣೆಯಂದು ರಾಜ್ಯವನ್ನು ಉದ್ದೇಶಿಸಿ ಹೇಳಿದ್ದರು.

“ಸ್ಥಳೀಯ ಯುವಕರಿಗೆ ಅವರ ಹನ್ನೆರಡನೆಯ ತರಗತಿಯ ಮಾರ್ಕ್‌ಶೀಟ್‌ಗಳ ಆಧಾರದ ಮೇಲೆ ಉದ್ಯೋಗವನ್ನು ಖಾತ್ರಿಪಡಿಸುವ ವ್ಯವಸ್ಥೆಯನ್ನು ನಾವು ಮಾಡುತ್ತೇವೆ” ಎಂದು ಅವರು ಹೇಳಿದರು.

ಉದ್ಯೋಗಗಳಲ್ಲಿ ಒಬಿಸಿ ಕೋಟಾವನ್ನು ರಾಜ್ಯದಲ್ಲಿ ಶೇಕಡಾ 14 ರಿಂದ 27 ಕ್ಕೆ ಹೆಚ್ಚಿಸಿದ್ದಕ್ಕಾಗಿ ನ್ಯಾಯಾಲಯದಲ್ಲಿ ಹೋರಾಡುವ ಬಗ್ಗೆಯೂ ಮುಖ್ಯಮಂತ್ರಿ ಮಾತನಾಡಿದ್ದರು.

ಹೊರ ರಾಜ್ಯದವರಿಗೆ ಅವಕಾಶಗಳನ್ನು ರಾಜ್ಯಗಳು ನಿರಾಕರಿಸುವುದು ಸರಿಯಲ್ಲ ಎಂದು ಹಲವರು ಈ ನಿರ್ಧಾರವನ್ನು ಟೀಕಿಸುತ್ತಿದ್ದಾರೆ ಎನ್ನಲಾಗಿದೆ.

ಕಳೆದ 10 ವರ್ಷಗಳಲ್ಲಿ ರಾಜ್ಯದ ಜನಸಂಖ್ಯೆಯು ಶೇಕಡಾ 10 ರಷ್ಟು ಏರಿಕೆಯಾಗಿದೆ ಆದರೆ ಸರ್ಕಾರಿ ಉದ್ಯೋಗಗಳು ಶೇಕಡಾ 2.5 ರಷ್ಟು ಕುಗ್ಗಿವೆ ಎಂದು ಮಧ್ಯಪ್ರದೇಶದ ಅಧಿಕಾರಿಗಳು ತಿಳಿಸಿದ್ದಾರೆ. ಹಾಗಾಗಿ ಸರ್ಕಾರಿ ಉದ್ಯೋಗಗಳೆ ಕಡಿಮೆ ಇರುವಾಗ ಇಂತಹ ಘೋಷಣೆಗಳಿಗೆ ಮಹತ್ವವಿಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

5.6 ಲಕ್ಷಕ್ಕೂ ಹೆಚ್ಚು ಸರ್ಕಾರಿ ಉದ್ಯೋಗಗಳಲ್ಲಿ, ಸುಮಾರು 93,500 ಖಾಲಿ ಇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಇದನ್ನೂ ಓದಿ: ಉದ್ಯೋಗದಲ್ಲಿ 75% ಸ್ಥಳೀಯರಿಗೆ ಆದ್ಯತೆ: ಹರಿಯಾಣ ಸರ್ಕಾರದ ನಿರ್ಧಾರಕ್ಕೆ ವಿರೋಧ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...