Homeಕರ್ನಾಟಕಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಬಗ್ಗೆ ತುಟಿ ಬಿಚ್ಚದ ಸರ್ಕಾರ; 'ಬೆಳಗಾವಿ ಚಲೋ' ಹೋರಾಟಕ್ಕೆ ಕರೆ

ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಬಗ್ಗೆ ತುಟಿ ಬಿಚ್ಚದ ಸರ್ಕಾರ; ‘ಬೆಳಗಾವಿ ಚಲೋ’ ಹೋರಾಟಕ್ಕೆ ಕರೆ

- Advertisement -
- Advertisement -

ಗುರುವಾರ (ಡಿ.4) ನಡೆದ ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಮೀಸಲಾತಿ ಬಗ್ಗೆ ತುಟಿ ಬಿಚ್ಚದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತವಾಗಿದ್ದು, ‘ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ’ ‘ಬೆಳಗಾವಿ ಚಲೋ’ ಹೋರಾಟಕ್ಕೆ ಕರೆ ಕೊಟ್ಟಿದೆ.

ಈ ಬಗ್ಗೆ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟದ ಮುಖಂಡರು, “ಸಚಿವ ಸಂಪುಟ ಸಭೆಯಲ್ಲಿ ಅನೇಕ ವಿಚಾರಗಳ ನಿರ್ಧಾರ ತೆಗೆದುಕೊಂಡಿದೆ. ಆದರೆ, ಒಳ ಮೀಸಲಾತಿ ವಿಚಾರದಲ್ಲಿ ಅಲೆಮಾರಿಗಳ ಕುರಿತು ಯಾವುದೇ ಚರ್ಚೆಯಾಗಲಿ, ತೀರ್ಮಾನವನ್ನು ತೆಗೆದುಕೊಳ್ಳದೆ ಸಚಿವ ಸಂಪುಟ ಮುಕ್ತಾಯಗೊಂಡಿರುವುದು ಅಲೆಮಾರಿಗಳಿಗೆ ಆತಂಕ ಹೆಚ್ಚು ಮಾಡಿದೆ. ಒಳ ಮೀಸಲಾತಿಯ ವಿಷಯದಲ್ಲಿ ಕರ್ನಾಟಕದ 49 ಅಲೆಮಾರಿ ಸಮುದಾಯಗಳಿಗೆ ಮತ್ತು 10 ಸೂಕ್ಷ್ಮ ಪರಿಶಿಷ್ಟ ಜಾತಿಗಳನ್ನು ಪ್ರತ್ಯೇಕವಾಗಿ ಗುರುತಿಸಿ ಈ ಸಮುದಾಯಗಳ ಶೇಕಡ ಒಂದು ಪರ್ಸೆಂಟ್ ಮೀಸಲಾತಿಯನ್ನು ಪ್ರತ್ಯೇಕ ಅಭಿವೃದ್ಧಿ ನಿಗಮ ಮತ್ತು ಅಲೆಮಾರಿಗಳ ಅಭಿವೃದ್ಧಿಯ ವಿಶೇಷ ಪ್ಯಾಕೇಜ್ ಅನ್ನು ನೀಡಬೇಕೆಂದು ನಾವು ಒತ್ತಾಯಿಸಿದ್ದೆವು” ಎಂದರು.

“ಕರ್ನಾಟಕ ಸರ್ಕಾರವು ನಮ್ಮ ಬೇಡಿಕೆಯನ್ನು ಈಡೇರಿಸದ ಕಾರಣಕ್ಕೆ ನಮ್ಮ ಮಹಾ ಒಕ್ಕೂಟವು ಅಕ್ಟೋಬರ್ 2ರಂದು ದೆಹಲಿ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದೆವು. ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ. ಮಹದೇವಪ್ಪ ಅವರು, ಅಲೆಮಾರಿಗಳಿಗೆ ಶೇ.1 ರಷ್ಟು ಪ್ರತ್ಯೇಕ ಮೀಸಲಾತಿ ಮತ್ತು ಅಭಿವೃದ್ಧಿ ನಿಗಮ, ಅಲೆಮಾರಿ ಅಭಿವೃದ್ದಿಗೆ ವಿಶೇಷ ಪ್ಯಾಕೇಜ್ ಅನ್ನು ನೀಡಲು ನಮ್ಮ ಸರ್ಕಾರಕ್ಕೆ ತಾತ್ವಿಕ ಒಪ್ಪಿಗೆ ಇದೆ ಎಂದು ಭರವಸೆ ನೀಡುವ ಮೂಲಕ ದೆಹಲಿಯಿಂದ ನಮ್ಮನ್ನು ವಾಪಸ್ಸು ಕರೆಸಿಕೊಂಡಿದ್ದರು. ನಂತರ ಅಕ್ಟೋಬರ್ 31 ರಂದು ಅಲೆಮಾರಿ ಸಮುದಾಯಗಳ ಮುಖಂಡರನ್ನು ಕರೆದ ಮುಖ್ಯಮಂತ್ರಿಗಳು, ಶೇ.1 ರಷ್ಟು ಪ್ರತ್ಯೇಕ ಮೀಸಲಾತಿಯನ್ನು ನೀಡುವ ಭರವಸೆಯನ್ನು ಕೊಟ್ಟು ಮತ್ತು ನಮ್ಮ ಬದ್ಧತೆಯ ಬಗ್ಗೆ ಅನುಮಾನ ಬೇಡವೆಂದು ಸಭೆಯಲ್ಲಿ ತಿಳಿಸಿದ್ದರು. ಅವರ ಮಾತಿಗೆ ಬೆಲೆಕೊಟ್ಟು ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿದ್ದ ಅಹೋರಾತ್ರಿ ಪ್ರತಿಭಟನೆಯನ್ನು ಕೈಬಿಟ್ಟೆವು” ಎಂದು ವಿವರಿಸಿದರು.

“ಕಾನೂನು ತಜ್ಞರು, ಕಾನೂನು ಸಲಹೆಗಾರರು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು, ಸಚಿವರು ಒಮ್ಮತದ ನಿರ್ಧಾರಕ್ಕೆ ಬಂದು ಚರ್ಚಿಸಿ ಅಲೆಮಾರಿಗಳಿಗೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದ್ದರು. ಆದರೆ ಇಲ್ಲಿಯವರೆಗೂ ಕರ್ನಾಟಕ ಸರ್ಕಾರವು ನಮ್ಮ ಜೊತೆ ಯಾವುದೇ ಸಭೆ ಸಮಲೋಚನೆ ಮಾಡದೆ ವಂಚಿಸುತ್ತಾ ಬಂದಿದೆ. ಕೋರ್ಟಿನಲ್ಲಿ ಕೇಸ್ ಇದ್ದರು ಕನಿಷ್ಠ ಅಪಿಡವಿಟ್ ಕೂಡ ಸಲ್ಲಿಸಿಲ್ಲ. ಸರ್ಕಾರ ಅಲೆಮಾರಿ ಸಮುದಾಯಕ್ಕೆ ಕೊಟ್ಟ ಮಾತಿಗೆ ಬದ್ಧವಾಗಿದೆ ಎಂಬ ಅನುಮಾನ ನಮಗೆ ಇದೆ. ಮನಿನ್ನೆ ನಡೆದ ಸಚಿವ ಸಂಪುಟದಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳದೆ ಇರುವುದು ನಮ್ಮ ಆತಂಕವನ್ನು ಹೆಚ್ಚಿಸಿದೆ” ಎಂದು ಬೇಸರ ಹೊರಹಾಕಿದರು.

“6-12-2025ರಂದು ಒಳ ಮೀಸಲಾತಿ ಕುರಿತು ತೀರ್ಮಾನ ತೆಗೆದುಕೊಳ್ಳಲು ಮತ್ತೊಂದು ಸಮಾಲೋಚನೆಗಾಗಿ, ಅಧಿಕಾರಿಗಳು ಮತ್ತು ಸಚಿವರುಗಳ ಸಮಾಲೋಚನೆ ಸಭೆಯನ್ನು ಕರೆದಿದ್ದಾರೆ ಎಂದು ತಿಳಿದುಬಂದಿದೆ. ಈ ಸಭೆಯನ್ನು ಸಹ ಅಲೆಮಾರಿಗಳ ಪ್ರತ್ಯೇಕ ಮೀಸಲಾತಿ ಕುರಿತು ಚರ್ಚೆ ಮಾಡುತ್ತಾರೋ ಇಲ್ಲದೆ, ಪರಿಶಿಷ್ಟ ಜಾತಿಯ ಮೀಸಲಾತಿ ಶೇ.15 ಅಥವಾ ಶೇ.17 ಬಗ್ಗೆ ಚರ್ಚೆ ಮಾಡುತ್ತಾರಾ ಎಂಬ ದೊಡ್ಡ ಪ್ರಶ್ನೆ ನಮ್ಮ ಮುಂದಿದೆ. ನಾವು ಈ ವಿಚಾರದಲ್ಲಿ ಸ್ಪಷ್ಟಪಡಿಸ ಬಯಸುವುದೇನೆಂದರೆ, ಶೇ.15 ಮತ್ತೆ ಶೇ.17 ವಿಚಾರ ಕೂಡ ತುಂಬಾ ಗಂಭೀರವಾಗಿದೆ. ಇದೇ ಸಂದರ್ಭದಲ್ಲಿ ಅಲೆಮಾರಿಗಳ ಕುರಿತು ಏನು ನಿಲುವು ತೆಗೆದುಕೊಳ್ಳುತ್ತಾರೆ ಎಂಬುದು ಕೂಡ ನಮಗೆ ಅಷ್ಟೇ ಗಂಭೀರವಾದ ವಿಚಾರವಾಗಿರುತ್ತದೆ” ಎಂದರು.

“ಈ ಸಂದರ್ಭದಲ್ಲಿ ಸರ್ಕಾರವು ಯಾವುದೇ ತೀರ್ಮಾನ ತೆಗೆದುಕೊಂಡರು, ಬಿಲ್ ತಂದರು ಕೂಡ ಅಲೆಮಾರಿಗಳು ಹಾಕಿರುವ ತಡೆಯಾಜ್ಞೆಯನ್ನು ವಾಪಸ್ ತೆಗೆದುಕೊಳ್ಳದಿದ್ದರೆ ಯಾವುದೇ ಒಳಮಿಸಲಾತಿ ಜಾರಿಯಾಗುವುದಿಲ್ಲ. ಅಷ್ಟೇ ಅಲ್ಲದೆ, ಇಡೀ ನೇಮಕಾತಿ ಪ್ರಕ್ರಿಯೆಯು ಜಾರಿಯಾಗುವುದಿಲ್ಲ. ಈಗಾಗಲೇ ಎಲ್ಲವೂ ನಿಂತು ಹೋಗಿವೆ, ಈ ಎಲ್ಲಾ ಪ್ರಕ್ರಿಯೆ ನಡೆಯಬೇಕಾದರೆ ಅಲೆಮಾರಿಗಳ ವಿಚಾರದಲ್ಲಿ ಸರ್ಕಾರ ಒಂದು ತೀರ್ಮಾನಕ್ಕೆ ಬರಲೇಬೇಕಾಗಿದೆ. ಅಲೆಮಾರಿಗಳ ಮೀಸಲಾತಿ ವಿಚಾರದಲ್ಲಿ ಉಡಾಫೆ ಮಾಡಿ ಸರ್ಕಾರವು ಸಂಪೂರ್ಣ ಒಳಮೀಸಲಾತಿ ಮತ್ತು ಇಡೀ ನೇಮಕಾತಿಯನ್ನೇ ಬಿಕ್ಕಟ್ಟಿಗೆ ಸಿಕ್ಕಿಸಿದೆ” ಎಂದು ಹೇಳಿದರು.

ಸರ್ಕಾರ ಅಲೆಮಾರಿಗಳ ಬಗ್ಗೆ ಯಾವುದೇ ರೀತಿಯ ಪ್ರಕ್ರಿಯೆ ಮುಂದುವರಿಸದೆ ಇರುವುದರಿಂದ ಇದನ್ನು ಪ್ರತಿಭಟಿಸಿ ಸರ್ಕಾರದ ಮತ್ತು ಸಮಾಜದ ಗಮನಕ್ಕೆ ಅಲೆಮಾರಿ ಸಮುದಾಯಗಳ ಹಕ್ಕೊತ್ತಾಯವನ್ನು ಮುನ್ನಲೆಗೆ ತರುವುದಕ್ಕೆ ನಾವು “ಬೆಳಗಾವಿ ಚಲೋ”ಗೆ ಕರೆ ಕೊಡುತ್ತಿದ್ದೇವೆ ಎಂದು ಘೋಷಿಸಿದರು.

ನಾವು ಬೆಳಗಾವಿಯಲ್ಲಿ ಅನಿರ್ದಿಷ್ಟ ಅವಧಿ ಹೋರಾಟ ಮುಂದುವರಿಸುತ್ತೇವೆ. ನ್ಯಾಯಾಂಗ ಹೋರಾಟ ಮತ್ತು ಬೀದಿ ಹೋರಾಟ ಎರಡನ್ನೂ ಕೂಡ ನಡೆಸುತ್ತೇವೆ. ಯಾವುದೇ ಕಾರಣಕ್ಕೂ ಕೂಡ ಅಲೆಮಾರಿಗಳಿಗೆ ಆಗಿರುವಂತಹ ಅನ್ಯಾಯವನ್ನು ಸರಿಪಡಿಸದೆ ಇದ್ದರೆ ನಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ, ವಸಂತಹಂದಿಗೊಂದಿ, ಶಾಂತರಾಜು, ಹನುಮಂತು, ಮಂಡ್ಯ ರಾಜಣ್ಣ, ಶರಣಪ್ಪ, ವೆಂಕಟೇಶ್, ರಾಘವೇಂದ್ರ ಮುಕ್ರಿ, ದುರ್ಗೇಶ ವಿಭೂತಿ, ಸುಭಾಸ ಚವ್ಹಾಣ, ನಾಗಪ್ಪ ಧೂಮಳ್, ಸಂದೀಪ್ ದಾಸರ್ ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ಚನ್ನರಾಯಪಟ್ಟಣ ರೈತರಿಗೆ ಅಂತಿಮ ವಿಜಯ; ​ಬೆಂಬಲಕ್ಕೆ ನಿಂತವರಿಗೆ ಧನ್ಯವಾದ ತಿಳಿಸಿದ ‘ಹೋರಾಟ ಸಮಿತಿ’

​ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಭೂ ಹೋರಾಟ ಕೊನೆಗೂ ಸುಖಾಂತ್ಯವಾಗಿದೆ. ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಜೊತೆಗೆ ರಾಜ್ಯದ ಹತ್ತಾರು ಜನಪರ ಸಂಘಟನೆಗಳು ನಡೆಸಿದ ಸುದೀರ್ಘ ಹೋರಾಟ...

ಅಖಂಡ ಕರ್ನಾಟಕದ ಪ್ರದೇಶಗಳನ್ನು ಸಾಂಸ್ಕೃತಿಕವಾಗಿ ವಿಲೀನಗೊಳಿಸಲು ಇದು ಸಕಾಲ: ಡಾ.ಪುರುಷೋತ್ತಮ ಬಿಳಿಮಲೆ

ಕರ್ನಾಟಕ ಮತ್ತು ನೆರೆ ರಾಜ್ಯಗಳ ಅಚ್ಚ ಕನ್ನಡ ಪ್ರದೇಶಗಳ ನಡುವಿನ ಭೌತಿಕ ಗಡಿಗಳು ಇದ್ದಂತೆ ಇದ್ದರೂ ಸಾಂಸ್ಕೃತಿಕವಾಗಿ ಹೇರಲಾಗುತ್ತಿರುವ ಗಡಿಗಳನ್ನು ಅಪ್ರಸ್ತುತವಾಗಿಸುವುದು ಸಾಧ್ಯವಿದೆ. ಇಂತಹ ಪ್ರದೇಶಗಳೊಂದಿಗೆ ಕರ್ನಾಟಕದ ಭಾವನಾತ್ಮಕ ಸಂಬಂಧದ ವಿಸ್ತರಣೆಗೆ ಇದು...

ಅರುಂಧತಿ ರಾಯ್ ಅವರ ಪುಸ್ತಕದ ಮುಖಪುಟ ವಿರೋಧಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಖ್ಯಾತ ಲೇಖಕಿ ಅರುಂಧತಿ ರಾಯ್ ಅವರ 'ಮದರ್ ಮೇರಿ ಕಮ್ಸ್ ಟು ಮಿ' ಪುಸ್ತಕದ ಮುಖಪುಟ ಚಿತ್ರದ ಪ್ರಸಾರದ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಸುಪ್ರಿಂ ಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ. ಏಕೆಂದರೆ, ಲೇಖಕರು ಧೂಮಪಾನವನ್ನು...

ರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ ಮುಕ್ತ ಪತ್ರ

ರೋಹಿಂಗ್ಯಾಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೀಡಿದ್ದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು ಸೂರ್ಯಕಾಂತ್ ಅವರಿಗೆ ಮುಕ್ತ ಪತ್ರ ಬರೆದಿದ್ದಾರೆ.  ಕಿರುಕುಳದಿಂದ ಪಲಾಯನ ಮಾಡಿದ...

ಛತ್ತೀಸ್‌ಗಢ: ‘ಎಸ್‌ಇಸಿಎಲ್‌ ಅಮೇರಾ’ ಕಲ್ಲಿದ್ದಲು ಗಣಿ ವಿಸ್ತರಣೆ ವಿರೋಧಿಸಿ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ

ಛತ್ತೀಸ್‌ಗಢದ ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ನ (ಎಸ್‌ಇಸಿಎಲ್‌) ಅಮೇರಾ ಕಲ್ಲಿದ್ದಲು ಗಣಿಗಾರಿಕೆ ವಿಸ್ತರಣೆ ವಿರೋಧಿಸಿ ಡಿ.3 ರಂದು ಅಂಬಿಕಾಪುರದ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರ ಮೇಲೆ ಗ್ರಾಮಸ್ಥರು...

ಗಂಟೆಗಟ್ಟಲೆ ಇಂಡಿಗೋ ವಿಮಾನ ವಿಳಂಬ: ‘ನನ್ನ ಮಗಳಿಗೆ ಸ್ಯಾನಿಟರಿ ಪ್ಯಾಡ್‌ ಕೊಡಿ..’ ಎಂದು ಬೇಡಿಕೊಂಡ ತಂದೆ

ದೇಶಾದ್ಯಂತ ಇಂಡಿಗೋ ಪ್ರಯಾಣಿಕರು ಭಾರಿ ಅನಾನುಕೂಲತೆಯನ್ನು ಎದುರಿಸುತ್ತಿದ್ದಾರೆ. ಏಕೆಂದರೆ, ವಿಮಾನಯಾನ ಸಂಸ್ಥೆಯ ವಿಳಂಬ ಮತ್ತು ರದ್ದತಿ ನಿರ್ಧಾರವು ಸತತ ನಾಲ್ಕನೇ ದಿನವೂ (ಡಿ. 5) ಮುಂದುವರೆದಿದೆ. ಅವ್ಯವಸ್ಥೆಯ ನಡುವೆಯೇ, ವಿಮಾನ ನಿಲ್ದಾಣದಿಂದ ಬಂದ...

ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ: ಪುಟಿನ್‌ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಮೋದಿ ಹೇಳಿಕೆ

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ. ಶಾಂತಿಯ ಪರವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎರಡು ದಿನಗಳ ಭೇಟಿಗೆಂದು ಭಾರತಕ್ಕೆ ಆಗಮಿಸಿದ್ದು,...

ಮನೆ ಕಟ್ಟಲು, ವಾಹನ ಖರೀದಿಸಲು ಇದು ಸುಸಮಯ: ರೆಪೊ ದರ ಕಡಿತಗೊಳಿಸಿದ ಆರ್.ಬಿ.ಐ

ಡಿಸೆಂಬರ್ 05, ಶುಕ್ರವಾರದಂದು ನಡೆದ ಹಣಕಾಸು ನೀತಿ ಸಭೆಯಲ್ಲಿ (MPC) ಭಾರತೀಯ ರಿಸರ್ವ್ ಬ್ಯಾಂಕ್ (RBI) ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದೆ. ಇಂದಿನ ಕಡಿತದ ನಂತರ, ಕೇಂದ್ರ ಬ್ಯಾಂಕ್ ಈ...

ಉತ್ತರ ಪ್ರದೇಶ| ದಲಿತ ಯುವಕನ ಮೇಲೆ ಹಲ್ಲೆ; ಬಂದೂಕು ತೋರಿಸಿ ವಿವಸ್ತ್ರಗೊಳಿಸಿದ ಗುಂಪು

ಸಿಗರೇಟ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಗುಂಪೊಂದು ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಗುಂಪು ದಲಿತ ಯುವಕನನ್ನು ಚಪ್ಪಲಿಯಿಂದ ಹೊಡೆದು, ಮುಷ್ಟಿ, ಕಾಲು ಮತ್ತು...

ಶುಕ್ರವಾರ ದೆಹಲಿ ವಿಮಾನ ನಿಲ್ದಾಣದಿಂದ ಎಲ್ಲಾ ದೇಶೀಯ ವಿಮಾನಗಳನ್ನು ರದ್ದುಗೊಳಿಸಿದ ಇಂಡಿಗೋ

ಶುಕ್ರವಾರ ದೆಹಲಿ ವಿಮಾನ ನಿಲ್ದಾಣದಿಂದ ಎಲ್ಲಾ ದೇಶೀಯ ವಿಮಾನಗಳನ್ನು ಇಂಡಿಗೋ ರದ್ದುಗೊಳಿಸಿದೆ. ಶುಕ್ರವಾರ ಹಲವಾರು ವಿಮಾನ ನಿಲ್ದಾಣಗಳಲ್ಲಿ 400 ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಿರುವುದಾಗಿ ತಿಳಿದುಬಂದಿದೆ.  ಶುಕ್ರವಾರ (ಡಿಸೆಂಬರ್ 5, 2025) ಮಧ್ಯರಾತ್ರಿಯವರೆಗೆ ಎಲ್ಲಾ...