Homeಕರ್ನಾಟಕಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಬಗ್ಗೆ ತುಟಿ ಬಿಚ್ಚದ ಸರ್ಕಾರ; 'ಬೆಳಗಾವಿ ಚಲೋ' ಹೋರಾಟಕ್ಕೆ ಕರೆ

ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಬಗ್ಗೆ ತುಟಿ ಬಿಚ್ಚದ ಸರ್ಕಾರ; ‘ಬೆಳಗಾವಿ ಚಲೋ’ ಹೋರಾಟಕ್ಕೆ ಕರೆ

- Advertisement -
- Advertisement -

ಗುರುವಾರ (ಡಿ.4) ನಡೆದ ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಮೀಸಲಾತಿ ಬಗ್ಗೆ ತುಟಿ ಬಿಚ್ಚದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತವಾಗಿದ್ದು, ‘ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ’ ‘ಬೆಳಗಾವಿ ಚಲೋ’ ಹೋರಾಟಕ್ಕೆ ಕರೆ ಕೊಟ್ಟಿದೆ.

ಈ ಬಗ್ಗೆ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟದ ಮುಖಂಡರು, “ಸಚಿವ ಸಂಪುಟ ಸಭೆಯಲ್ಲಿ ಅನೇಕ ವಿಚಾರಗಳ ನಿರ್ಧಾರ ತೆಗೆದುಕೊಂಡಿದೆ. ಆದರೆ, ಒಳ ಮೀಸಲಾತಿ ವಿಚಾರದಲ್ಲಿ ಅಲೆಮಾರಿಗಳ ಕುರಿತು ಯಾವುದೇ ಚರ್ಚೆಯಾಗಲಿ, ತೀರ್ಮಾನವನ್ನು ತೆಗೆದುಕೊಳ್ಳದೆ ಸಚಿವ ಸಂಪುಟ ಮುಕ್ತಾಯಗೊಂಡಿರುವುದು ಅಲೆಮಾರಿಗಳಿಗೆ ಆತಂಕ ಹೆಚ್ಚು ಮಾಡಿದೆ. ಒಳ ಮೀಸಲಾತಿಯ ವಿಷಯದಲ್ಲಿ ಕರ್ನಾಟಕದ 49 ಅಲೆಮಾರಿ ಸಮುದಾಯಗಳಿಗೆ ಮತ್ತು 10 ಸೂಕ್ಷ್ಮ ಪರಿಶಿಷ್ಟ ಜಾತಿಗಳನ್ನು ಪ್ರತ್ಯೇಕವಾಗಿ ಗುರುತಿಸಿ ಈ ಸಮುದಾಯಗಳ ಶೇಕಡ ಒಂದು ಪರ್ಸೆಂಟ್ ಮೀಸಲಾತಿಯನ್ನು ಪ್ರತ್ಯೇಕ ಅಭಿವೃದ್ಧಿ ನಿಗಮ ಮತ್ತು ಅಲೆಮಾರಿಗಳ ಅಭಿವೃದ್ಧಿಯ ವಿಶೇಷ ಪ್ಯಾಕೇಜ್ ಅನ್ನು ನೀಡಬೇಕೆಂದು ನಾವು ಒತ್ತಾಯಿಸಿದ್ದೆವು” ಎಂದರು.

“ಕರ್ನಾಟಕ ಸರ್ಕಾರವು ನಮ್ಮ ಬೇಡಿಕೆಯನ್ನು ಈಡೇರಿಸದ ಕಾರಣಕ್ಕೆ ನಮ್ಮ ಮಹಾ ಒಕ್ಕೂಟವು ಅಕ್ಟೋಬರ್ 2ರಂದು ದೆಹಲಿ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದೆವು. ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ. ಮಹದೇವಪ್ಪ ಅವರು, ಅಲೆಮಾರಿಗಳಿಗೆ ಶೇ.1 ರಷ್ಟು ಪ್ರತ್ಯೇಕ ಮೀಸಲಾತಿ ಮತ್ತು ಅಭಿವೃದ್ಧಿ ನಿಗಮ, ಅಲೆಮಾರಿ ಅಭಿವೃದ್ದಿಗೆ ವಿಶೇಷ ಪ್ಯಾಕೇಜ್ ಅನ್ನು ನೀಡಲು ನಮ್ಮ ಸರ್ಕಾರಕ್ಕೆ ತಾತ್ವಿಕ ಒಪ್ಪಿಗೆ ಇದೆ ಎಂದು ಭರವಸೆ ನೀಡುವ ಮೂಲಕ ದೆಹಲಿಯಿಂದ ನಮ್ಮನ್ನು ವಾಪಸ್ಸು ಕರೆಸಿಕೊಂಡಿದ್ದರು. ನಂತರ ಅಕ್ಟೋಬರ್ 31 ರಂದು ಅಲೆಮಾರಿ ಸಮುದಾಯಗಳ ಮುಖಂಡರನ್ನು ಕರೆದ ಮುಖ್ಯಮಂತ್ರಿಗಳು, ಶೇ.1 ರಷ್ಟು ಪ್ರತ್ಯೇಕ ಮೀಸಲಾತಿಯನ್ನು ನೀಡುವ ಭರವಸೆಯನ್ನು ಕೊಟ್ಟು ಮತ್ತು ನಮ್ಮ ಬದ್ಧತೆಯ ಬಗ್ಗೆ ಅನುಮಾನ ಬೇಡವೆಂದು ಸಭೆಯಲ್ಲಿ ತಿಳಿಸಿದ್ದರು. ಅವರ ಮಾತಿಗೆ ಬೆಲೆಕೊಟ್ಟು ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿದ್ದ ಅಹೋರಾತ್ರಿ ಪ್ರತಿಭಟನೆಯನ್ನು ಕೈಬಿಟ್ಟೆವು” ಎಂದು ವಿವರಿಸಿದರು.

“ಕಾನೂನು ತಜ್ಞರು, ಕಾನೂನು ಸಲಹೆಗಾರರು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು, ಸಚಿವರು ಒಮ್ಮತದ ನಿರ್ಧಾರಕ್ಕೆ ಬಂದು ಚರ್ಚಿಸಿ ಅಲೆಮಾರಿಗಳಿಗೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದ್ದರು. ಆದರೆ ಇಲ್ಲಿಯವರೆಗೂ ಕರ್ನಾಟಕ ಸರ್ಕಾರವು ನಮ್ಮ ಜೊತೆ ಯಾವುದೇ ಸಭೆ ಸಮಲೋಚನೆ ಮಾಡದೆ ವಂಚಿಸುತ್ತಾ ಬಂದಿದೆ. ಕೋರ್ಟಿನಲ್ಲಿ ಕೇಸ್ ಇದ್ದರು ಕನಿಷ್ಠ ಅಪಿಡವಿಟ್ ಕೂಡ ಸಲ್ಲಿಸಿಲ್ಲ. ಸರ್ಕಾರ ಅಲೆಮಾರಿ ಸಮುದಾಯಕ್ಕೆ ಕೊಟ್ಟ ಮಾತಿಗೆ ಬದ್ಧವಾಗಿದೆ ಎಂಬ ಅನುಮಾನ ನಮಗೆ ಇದೆ. ಮನಿನ್ನೆ ನಡೆದ ಸಚಿವ ಸಂಪುಟದಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳದೆ ಇರುವುದು ನಮ್ಮ ಆತಂಕವನ್ನು ಹೆಚ್ಚಿಸಿದೆ” ಎಂದು ಬೇಸರ ಹೊರಹಾಕಿದರು.

“6-12-2025ರಂದು ಒಳ ಮೀಸಲಾತಿ ಕುರಿತು ತೀರ್ಮಾನ ತೆಗೆದುಕೊಳ್ಳಲು ಮತ್ತೊಂದು ಸಮಾಲೋಚನೆಗಾಗಿ, ಅಧಿಕಾರಿಗಳು ಮತ್ತು ಸಚಿವರುಗಳ ಸಮಾಲೋಚನೆ ಸಭೆಯನ್ನು ಕರೆದಿದ್ದಾರೆ ಎಂದು ತಿಳಿದುಬಂದಿದೆ. ಈ ಸಭೆಯನ್ನು ಸಹ ಅಲೆಮಾರಿಗಳ ಪ್ರತ್ಯೇಕ ಮೀಸಲಾತಿ ಕುರಿತು ಚರ್ಚೆ ಮಾಡುತ್ತಾರೋ ಇಲ್ಲದೆ, ಪರಿಶಿಷ್ಟ ಜಾತಿಯ ಮೀಸಲಾತಿ ಶೇ.15 ಅಥವಾ ಶೇ.17 ಬಗ್ಗೆ ಚರ್ಚೆ ಮಾಡುತ್ತಾರಾ ಎಂಬ ದೊಡ್ಡ ಪ್ರಶ್ನೆ ನಮ್ಮ ಮುಂದಿದೆ. ನಾವು ಈ ವಿಚಾರದಲ್ಲಿ ಸ್ಪಷ್ಟಪಡಿಸ ಬಯಸುವುದೇನೆಂದರೆ, ಶೇ.15 ಮತ್ತೆ ಶೇ.17 ವಿಚಾರ ಕೂಡ ತುಂಬಾ ಗಂಭೀರವಾಗಿದೆ. ಇದೇ ಸಂದರ್ಭದಲ್ಲಿ ಅಲೆಮಾರಿಗಳ ಕುರಿತು ಏನು ನಿಲುವು ತೆಗೆದುಕೊಳ್ಳುತ್ತಾರೆ ಎಂಬುದು ಕೂಡ ನಮಗೆ ಅಷ್ಟೇ ಗಂಭೀರವಾದ ವಿಚಾರವಾಗಿರುತ್ತದೆ” ಎಂದರು.

“ಈ ಸಂದರ್ಭದಲ್ಲಿ ಸರ್ಕಾರವು ಯಾವುದೇ ತೀರ್ಮಾನ ತೆಗೆದುಕೊಂಡರು, ಬಿಲ್ ತಂದರು ಕೂಡ ಅಲೆಮಾರಿಗಳು ಹಾಕಿರುವ ತಡೆಯಾಜ್ಞೆಯನ್ನು ವಾಪಸ್ ತೆಗೆದುಕೊಳ್ಳದಿದ್ದರೆ ಯಾವುದೇ ಒಳಮಿಸಲಾತಿ ಜಾರಿಯಾಗುವುದಿಲ್ಲ. ಅಷ್ಟೇ ಅಲ್ಲದೆ, ಇಡೀ ನೇಮಕಾತಿ ಪ್ರಕ್ರಿಯೆಯು ಜಾರಿಯಾಗುವುದಿಲ್ಲ. ಈಗಾಗಲೇ ಎಲ್ಲವೂ ನಿಂತು ಹೋಗಿವೆ, ಈ ಎಲ್ಲಾ ಪ್ರಕ್ರಿಯೆ ನಡೆಯಬೇಕಾದರೆ ಅಲೆಮಾರಿಗಳ ವಿಚಾರದಲ್ಲಿ ಸರ್ಕಾರ ಒಂದು ತೀರ್ಮಾನಕ್ಕೆ ಬರಲೇಬೇಕಾಗಿದೆ. ಅಲೆಮಾರಿಗಳ ಮೀಸಲಾತಿ ವಿಚಾರದಲ್ಲಿ ಉಡಾಫೆ ಮಾಡಿ ಸರ್ಕಾರವು ಸಂಪೂರ್ಣ ಒಳಮೀಸಲಾತಿ ಮತ್ತು ಇಡೀ ನೇಮಕಾತಿಯನ್ನೇ ಬಿಕ್ಕಟ್ಟಿಗೆ ಸಿಕ್ಕಿಸಿದೆ” ಎಂದು ಹೇಳಿದರು.

ಸರ್ಕಾರ ಅಲೆಮಾರಿಗಳ ಬಗ್ಗೆ ಯಾವುದೇ ರೀತಿಯ ಪ್ರಕ್ರಿಯೆ ಮುಂದುವರಿಸದೆ ಇರುವುದರಿಂದ ಇದನ್ನು ಪ್ರತಿಭಟಿಸಿ ಸರ್ಕಾರದ ಮತ್ತು ಸಮಾಜದ ಗಮನಕ್ಕೆ ಅಲೆಮಾರಿ ಸಮುದಾಯಗಳ ಹಕ್ಕೊತ್ತಾಯವನ್ನು ಮುನ್ನಲೆಗೆ ತರುವುದಕ್ಕೆ ನಾವು “ಬೆಳಗಾವಿ ಚಲೋ”ಗೆ ಕರೆ ಕೊಡುತ್ತಿದ್ದೇವೆ ಎಂದು ಘೋಷಿಸಿದರು.

ನಾವು ಬೆಳಗಾವಿಯಲ್ಲಿ ಅನಿರ್ದಿಷ್ಟ ಅವಧಿ ಹೋರಾಟ ಮುಂದುವರಿಸುತ್ತೇವೆ. ನ್ಯಾಯಾಂಗ ಹೋರಾಟ ಮತ್ತು ಬೀದಿ ಹೋರಾಟ ಎರಡನ್ನೂ ಕೂಡ ನಡೆಸುತ್ತೇವೆ. ಯಾವುದೇ ಕಾರಣಕ್ಕೂ ಕೂಡ ಅಲೆಮಾರಿಗಳಿಗೆ ಆಗಿರುವಂತಹ ಅನ್ಯಾಯವನ್ನು ಸರಿಪಡಿಸದೆ ಇದ್ದರೆ ನಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ, ವಸಂತಹಂದಿಗೊಂದಿ, ಶಾಂತರಾಜು, ಹನುಮಂತು, ಮಂಡ್ಯ ರಾಜಣ್ಣ, ಶರಣಪ್ಪ, ವೆಂಕಟೇಶ್, ರಾಘವೇಂದ್ರ ಮುಕ್ರಿ, ದುರ್ಗೇಶ ವಿಭೂತಿ, ಸುಭಾಸ ಚವ್ಹಾಣ, ನಾಗಪ್ಪ ಧೂಮಳ್, ಸಂದೀಪ್ ದಾಸರ್ ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

1962ರ ಯುದ್ಧದಲ್ಲಿ ಸೈನ್ಯಕ್ಕೆ 600 ಕೆಜಿ ಚಿನ್ನ ದಾನ ಮಾಡಿದ್ದ ದರ್ಭಂಗಾದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ ನಿಧನ

ದರ್ಭಾಂಗ ರಾಜಮನೆತನದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ 2025 ಜನವರಿ 12 ರಂದು ನಿಧನರಾಗಿದ್ದಾರೆ.  ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಣಿ ಕಾಮಸುಂದರಿ ಅವರು, ಬಿಹಾರದ ದರ್ಭಾಂಗದಲ್ಲಿರುವ ತಮ್ಮ ಐತಿಹಾಸಿಕ ನಿವಾಸ 'ಕಲ್ಯಾಣಿ'ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದೊಂದಿಗೆ...

ವಿಧಾನಸಭೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

2027 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸೇರಿದಂತೆ ದೇಶಾದ್ಯಂತ ಎಲ್ಲಾ ಚುನಾವಣೆಗಳಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)...

ಐ-ಪ್ಯಾಕ್ ದಾಳಿ | ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ : ಮಮತಾ ಬ್ಯಾನರ್ಜಿ, ಪ.ಬಂಗಾಳ ಸರ್ಕಾರಕ್ಕೆ ನೋಟಿಸ್

ಐ-ಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಧಿಕಾರಿಗಳ ವಿರುದ್ದ ಕೋಲ್ಕತ್ತಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ಗುರುವಾರ (ಜ.15) ತಡೆ ನೀಡಿದೆ. ಇದರಿಂದ...

ಕಾಶ್ಮೀರ: ಭಯೋತ್ಪಾದನಾ ಪ್ರಕರಣದಲ್ಲಿ ಆಸಿಯಾ ಅಂದ್ರಾಬಿ ಮತ್ತು ಅವರ ಇಬ್ಬರು ಸಹಚರರು ದೋಷಿಗಳು ಎಂದು ತೀರ್ಪು ನೀಡಿದ ದೆಹಲಿ ನ್ಯಾಯಾಲಯ 

ದೆಹಲಿಯ ಎನ್ಐಎ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಬುಧವಾರ ನಿಷೇಧಿತ ಕಾಶ್ಮೀರಿ ಸಂಘಟನೆ ದುಖ್ತರನ್-ಎ-ಮಿಲ್ಲತ್ (ಡಿಇಎಂ) ಮುಖ್ಯಸ್ಥೆ ಆಸಿಯಾ ಅಂದ್ರಾಬಿ ಮತ್ತು ಆಕೆಯ ಇಬ್ಬರು ಸಹಚರರಾದ ಸೋಫಿ ಫೆಹ್ಮಿದಾ...

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ: ಉದ್ಧವ್ ಠಾಕ್ರೆ ಆರೋಪ

ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವವನ್ನು ಕೊಲೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ. ನಗರಸಭೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ...

2025ರಲ್ಲಿ ಭಾರತದಲ್ಲಿ 1,318 ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ ಶೇ. 98 ಮುಸ್ಲಿಮರನ್ನು ಗುರಿಯಾಗಿಸಿಕೊಂಡಿವೆ; ವರದಿ

2025ರಲ್ಲಿ ಭಾರತವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡ ಕನಿಷ್ಠ 1,318 ದ್ವೇಷ ಭಾಷಣ ಘಟನೆಗಳಿಗೆ ಸಾಕ್ಷಿಯಾಗಿದೆ. ದಿನಕ್ಕೆ ಸರಾಸರಿ ನಾಲ್ಕು ದ್ವೇಷ ಭಾಷಣ...

ಪಶ್ಚಿಮ ಬಂಗಾಳ ಎಸ್‌ಐಆರ್ ಪ್ರತಿಭಟನೆ; ಉತ್ತರ ದಿನಾಜ್‌ಪುರದ ಸರ್ಕಾರಿ ಕಚೇರಿ ಧ್ವಂಸ

ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾನೆಯಿಂದಲೇ, ಚಾಕುಲಿಯಾದಲ್ಲಿನ ಕಹಾಟಾ...

ಕೇರಳದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ

ಕೇರಳದ ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಹಾಸ್ಟೆಲ್‌ನಲ್ಲಿ ತಂಗಿದ್ದ ಇಬ್ಬರು ಹುಡುಗಿಯರು ಗುರುವಾರ ಬೆಳಿಗ್ಗೆ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೋಝಿಕ್ಕೋಡ್ ಜಿಲ್ಲೆಯ ಸಾಂಡ್ರಾ (17) ಮತ್ತು...

ಪಿಎಚ್‌ಡಿ ಪ್ರವೇಶ ನಿರಾಕರಿಸಿದ ಜಾಮಿಯಾ ಯೂನಿವರ್ಸಿಟಿ; ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿ

2025–26 ಶೈಕ್ಷಣಿಕ ಅವಧಿಗೆ ಅಧಿಕೃತ ಪ್ರವೇಶ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ತನ್ನನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿನಾಕಾರಣ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯುಜಿಸಿ-ನೆಟ್ ವಿನಾಯಿತಿ...

ಮದ್ರಸಾ ನಿರ್ಮಾಣದ ವದಂತಿ : ಖಾಸಗಿ ಶಾಲಾ ಕಟ್ಟಡ ಕೆಡವಿದ ಅಧಿಕಾರಿಗಳು

ಅನಧಿಕೃತವಾಗಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ವದಂತಿ ಹರಡಿದ ಹಿನ್ನೆಲೆ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಅಧಿಕಾರಿಗಳು ಬುಲ್ಡೋಝರ್ ಬಳಸಿ ಕೆಡವಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...