Homeಮುಖಪುಟಕಳೆದುಹೋದ ಸಹಕಾರಿ ಹೆಗ್ಗಳಿಕೆ: ನಿರಾಣಿ ಶುಗರ್ಸ್ ಪಾಲಾದ PSSK ಸಕ್ಕರೆ ಕಾರ್ಖಾನೆ

ಕಳೆದುಹೋದ ಸಹಕಾರಿ ಹೆಗ್ಗಳಿಕೆ: ನಿರಾಣಿ ಶುಗರ್ಸ್ ಪಾಲಾದ PSSK ಸಕ್ಕರೆ ಕಾರ್ಖಾನೆ

- Advertisement -
- Advertisement -

ರಾಜ್ಯದ ಏಕೈಕ ಸಹಕಾರಿ ಸಕ್ಕರೆ ಕಾರ್ಖಾನೆ ಎಂಬ ಹೆಗ್ಗಳಿಕೆಗೆ ಕಾರಣವಾಗಿದ್ದ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿರುವ PSSK ಸಕ್ಕರೆ ಕಾರ್ಖಾನೆ ಕೊನೆಗೂ ತನ್ನ ಹೆಗ್ಗಳಿಕೆ ಕಳೆದುಕೊಂಡು ಖಾಸಗಿಯವರ ಪಾಲಾಗಿವೆ. ನಾಲ್ಕು ವರ್ಷಗಳಿಂದಲೂ ಚೇತರಿಸಿಕೊಳ್ಳಲು ಹೆಣಗಾಡುತ್ತಿದ್ದ ಈ ಕಾರ್ಖಾನೆಯನ್ನು ಪುನಶ್ಚೇತನದ ಹೆಸರಿನಲ್ಲಿ ಸರ್ಕಾರ ಮಾಜಿ ಸಚಿವ ಮುರುಗೇಶ್‌ ನಿರಾಣಿ ಮಾಲೀಕತ್ವದ ನಿರಾಣಿ ಶುಗರ್ಸ್‌ಗೆ 40 ವರ್ಷಗಳ ಕಾಲ ಗುತ್ತಿಗೆಗೆ ನೀಡಿದೆ.

ಇಂದು ನಡೆದ ಬಿಡ್‌ನಲ್ಲಿ ಈ ಕಾರ್ಖಾನೆ ನಿರಾಣಿ ಶುಗರ್ಸ್‌ ಪಾಲಾಗಿದೆ. ಹಲವು ದಿನಗಳಿಂದ ರೈತರು ಮತ್ತು ಸರ್ಕಾರದ ನಡುವೆ ಜಟಾಪಟಿಗೆ ಕಾರಣವಾಗಿದ್ದ ಈ ಕಾರ್ಖಾನೆ ಕೊನೆಗೂ ಖಾಸಗಿ ತೆಕ್ಕೆಗೆ ಹೊರಳಿದ್ದು ಮುಂದೆ ಅದರ ಅಭಿವೃದ್ದಿ ಏನಾಗಲಿದೆ ಎಂಬುದು ಸದ್ಯಕ್ಕೆ ಊಹಿಸಲು ಸಾಧ್ಯವಿಲ್ಲದಂತಾಗಿದೆ.

ಪಿಎಸ್‌ಎಸ್‌ಕೆ ಇತಿಹಾಸ

1959ರಲ್ಲಿ ಬಿ.ವೈ ನೀಲೇಗೌಡರು ಆರಂಭಿಸಿದ್ದ ಈ ಸಹಕಾರಿ ಕಾರ್ಖಾನೆಯನ್ನು ಪಾಂಡವಪುರ, ಶ್ರೀರಂಗಪಟ್ಟಣ ಮತ್ತು ಕೆ.ಆರ್.ಪೇಟೆ ತಾಲೂಕು ಭಾಗದ ಕಬ್ಬು ಬೆಳೆಗಾರ ರೈತರು ಈ ಕಾರ್ಖಾನೆಯನ್ನು ಅವಲಂಬಿಸಿದ್ದಾರೆ. 2003ರವರೆಗೂ ರೈತರ ಸಹಕಾರದಲ್ಲಿ ಅಚ್ಚುಕಟ್ಟಾಗಿ ನಡೆಯುತ್ತಿದ್ದ ಈ ಕಾರ್ಖಾನೆ ವಿ.ಸಿ ನಾಲೆ ಆಧುನೀಕರಣದಿಂದಾಗಿ ಕೆ.ಆರ್‌.ಎಸ್‌ ನೀರು ನಿಂತ ಪರಿಣಾಮ ಒಂದು ವರ್ಷ ಕಬ್ಬು ಸರಬರಾಜು ಆಗದೇ ಸ್ಥಗಿತಗೊಂಡು ನಷ್ಟಕ್ಕೆ ಸಿಲುಕಿತು. ನಂತರ ಕೊಥಾರಿ ಕಂಪನಿ ಏಳು ವರ್ಷದ ಅವಧಿಗೆ ಗುತ್ತಿಗೆಗೆ ತೆಗೆದುಕೊಂಡು ಕಾರ್ಖಾನೆಯನ್ನು ನಡೆಸಿತು.

ಆದರೆ 2009ರಲ್ಲಿ ಕೊಥಾರಿ ಕಂಪನಿಯು 30 ವರ್ಷಗಳ ಗುತ್ತಿಗೆಗೆ ಬಯಸಿದಾಗ ಸರ್ಕಾರ ಅದನ್ನು ನಿರಾಕರಿಸಿತು. ಆಗ ಕೊಥಾರಿ ಕಂಪನಿ ತನ್ನ ಗುತ್ತಿಗೆ ಹಿಂತೆಗೆತುಕೊಂಡಿತು. ಅಲ್ಲಿಗೆ ಕಾರ್ಖಾನೆ ಮತ್ತೆ ನಷ್ಟಕ್ಕೆ ಸಿಲುಕಿತು. ಅಷ್ಟರಲ್ಲಿ ಆಗಲೇ ನಷ್ಟದಲ್ಲಿದ್ದ ಮಂಡ್ಯದ ಮೈಷುಗರ್‌ ಸರ್ಕಾರಿ ಸಕ್ಕರೆ ಕಂಪನಿಯೊಂದಿಗೆ ಇದರ ಆಡಳಿತ ಮಂಡಳಿಯನ್ನು ವಿಲೀನ ಮಾಡಲಾಯ್ತು. ರೈತರ ಬಾಕಿ ಸೇರಿದಂತೆ ಹಲವು ಸಮಸ್ಯೆಗಳಿಗೆ ಕಾರ್ಖಾನೆ ಸಿಲಕಿತು. ಸರ್ಕಾರದ ನಿರ್ಲಕ್ಷದಿಂದಾಗಿ ಇಂದು ಅದು ಸಂಪೂರ್ಣ ಖಾಸಗೀಯವರ ಪಾಲಾಗುವಲ್ಲಿಗೆ ಬಂದು ನಿಂತಿದೆ.

ಮುಂದೇನು?

ಒಂದು ಕಾಲದಲ್ಲಿ ರೈತರ ನೆಚ್ಚಿನ ಕಂಪನಿಯಾಗಿದ್ದ ಪಿಎಸ್‌ಎಸ್‌ಕೆ ಈಗ ತನ್ನ ನೌಕರರಿಗೆ ಮೂರು ವರ್ಷಗಳಿಂದ ಸಂಬಳ ಕೊಟ್ಟಿಲ್ಲ. ಸದ್ಯಕ್ಕೆ ಪ್ರತಿನಿತ್ಯ 3500 ಟನ್‌ ಕಬ್ಬು ಅರೆಯುವ ಸಾಮರ್ಥ್ಯ ಹೊಂದಿರು ಇದನ್ನು ನಿರಾಣಿ ಶುಗರ್ಸ್ 5000 ಟನ್‌ಗಳಿಗೆ ಏರಿಸಲಿದೆ. ಅಲ್ಲದೇ ಡಿಸ್ಟಲರಿ ಮತ್ತು ಕೋಜನ್‌ ಘಟಕಗಳು ಆರಂಭಿಸುತ್ತೇವೆ ಎಂದು ನಿಬಂಧನೆಗಳಲ್ಲಿ ಅದು ಹೇಳಿಕೊಂಡಿದೆ. ಈ ಮೊದಲು ರೈತರಿಗೆ ಮುಂಗಡ ಕೊಟ್ಟು ಕಂಪನಿಗಳು ಕಬ್ಬ ಖರೀದಿಸುತ್ತಿದ್ದವು. ಈಗ ನಿರಾಣಿ ಷುಗರ್ಸ್‌‌ಗೆ ಅದರಿಂದ ವಿನಾಯಿತಿ ನೀಡಲಾಗಿದೆ ಎನ್ನಲಾಗಿದೆ.

ಈ ಕಾರ್ಖಾನೆ ಸಹಕಾರಿಯಾಗಿಯೇ ಉಳಿಯುವಲ್ಲಿ ರೈತರು ಸಾಕಷ್ಟು ಹೋರಾಟ ಮಾಡಿದ್ದರು. ಆದರೆ ಈಗ PSSK ಸಕ್ಕರೆ ಕಾರ್ಖಾನೆ ಮುಚ್ಚಲ್ಪಟ್ಟಿದ್ದರಿಂದ ಈ ಭಾಗದ ಸುಮಾರು 4 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಕಬ್ಬು ಬೆಳೆದ ರೈತರು ಬೇರೆ ವಿಧಿ ಇಲ್ಲದೆ ತಾವು ಬೆಳೆದ ಕಬ್ಬನ್ನು ಬೇರೆ ಬೇರೆ ಕಾರ್ಖಾನೆಗೆ ಸಾಗಿಸಲು ಪರದಾಡಿ ನಷ್ಟ ಅನುಭವಿಸುತ್ತಿದ್ದರು. ಹೀಗಾಗಿ ಈ ಕಾರ್ಖಾನೆಯ ಅಭಿವೃದ್ದಿಗೆ ಸರ್ಕಾರ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಬೇಕು ಎಂಬ ಕೂಗು ಕೇಳಿ ಬಂದಿತ್ತು. ಆದರೆ, ವಿಶೇಷ ಪ್ಯಾಕೇಜ್‌ ಘೋಷಣೆಗೆ ಮುಂದಾಗದ ಸರ್ಕಾರ ಇದೀಗ ಈ ಕಾರ್ಖಾನೆಯನ್ನೇ ಖಾಸಗಿ ವಲಯಕ್ಕೆ 40 ವರ್ಷ ಗುತ್ತಿಗೆ ನೀಡಿರುವುದು ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನು ಕೊಥಾರಿ ಕಂಪನಿ ಸೇರಿದಂತೆ ಹತ್ತು ಕಂಪನಿಗಳು ಗುತ್ತಿಗೆಯ ಟೆಂಡರ್‌ನಲ್ಲಿ ಆಕಾಂಕ್ಷಿಗಳಾಗಿದ್ದರು. ಸದ್ಯಕ್ಕೆ ಸಚಿವ ಸ್ಥಾನಕ್ಕಾಗಿ ಆಗಾಗ ಬಂಡಾಯವೇಳುತ್ತಿದ್ದ ನಿರಾಣಿಯವರಿಗೆ ಈ ಕಾರ್ಖಾನೆಯ ಗುತ್ತಿಗೆ ನೀಡಿ ಸಮಾಧಾನ ಮಾಡಲಾಗಿದೆ ಎಂಬ ಮಾತುಗಳ ಸಹ ಕೇಳಿಬರುತ್ತಿವೆ.


ಇದನ್ನೂ ಓದಿ: ಸಕ್ಕರೆ ದಾಹಕ್ಕೆ ಕಾರ್ಮಿಕರಿಗೇ ಬೆಂಕಿಯಿಟ್ಟ ನಿರಾಣಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...