Homeಮುಖಪುಟಕಳೆದುಹೋದ ಸಹಕಾರಿ ಹೆಗ್ಗಳಿಕೆ: ನಿರಾಣಿ ಶುಗರ್ಸ್ ಪಾಲಾದ PSSK ಸಕ್ಕರೆ ಕಾರ್ಖಾನೆ

ಕಳೆದುಹೋದ ಸಹಕಾರಿ ಹೆಗ್ಗಳಿಕೆ: ನಿರಾಣಿ ಶುಗರ್ಸ್ ಪಾಲಾದ PSSK ಸಕ್ಕರೆ ಕಾರ್ಖಾನೆ

- Advertisement -
- Advertisement -

ರಾಜ್ಯದ ಏಕೈಕ ಸಹಕಾರಿ ಸಕ್ಕರೆ ಕಾರ್ಖಾನೆ ಎಂಬ ಹೆಗ್ಗಳಿಕೆಗೆ ಕಾರಣವಾಗಿದ್ದ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿರುವ PSSK ಸಕ್ಕರೆ ಕಾರ್ಖಾನೆ ಕೊನೆಗೂ ತನ್ನ ಹೆಗ್ಗಳಿಕೆ ಕಳೆದುಕೊಂಡು ಖಾಸಗಿಯವರ ಪಾಲಾಗಿವೆ. ನಾಲ್ಕು ವರ್ಷಗಳಿಂದಲೂ ಚೇತರಿಸಿಕೊಳ್ಳಲು ಹೆಣಗಾಡುತ್ತಿದ್ದ ಈ ಕಾರ್ಖಾನೆಯನ್ನು ಪುನಶ್ಚೇತನದ ಹೆಸರಿನಲ್ಲಿ ಸರ್ಕಾರ ಮಾಜಿ ಸಚಿವ ಮುರುಗೇಶ್‌ ನಿರಾಣಿ ಮಾಲೀಕತ್ವದ ನಿರಾಣಿ ಶುಗರ್ಸ್‌ಗೆ 40 ವರ್ಷಗಳ ಕಾಲ ಗುತ್ತಿಗೆಗೆ ನೀಡಿದೆ.

ಇಂದು ನಡೆದ ಬಿಡ್‌ನಲ್ಲಿ ಈ ಕಾರ್ಖಾನೆ ನಿರಾಣಿ ಶುಗರ್ಸ್‌ ಪಾಲಾಗಿದೆ. ಹಲವು ದಿನಗಳಿಂದ ರೈತರು ಮತ್ತು ಸರ್ಕಾರದ ನಡುವೆ ಜಟಾಪಟಿಗೆ ಕಾರಣವಾಗಿದ್ದ ಈ ಕಾರ್ಖಾನೆ ಕೊನೆಗೂ ಖಾಸಗಿ ತೆಕ್ಕೆಗೆ ಹೊರಳಿದ್ದು ಮುಂದೆ ಅದರ ಅಭಿವೃದ್ದಿ ಏನಾಗಲಿದೆ ಎಂಬುದು ಸದ್ಯಕ್ಕೆ ಊಹಿಸಲು ಸಾಧ್ಯವಿಲ್ಲದಂತಾಗಿದೆ.

ಪಿಎಸ್‌ಎಸ್‌ಕೆ ಇತಿಹಾಸ

1959ರಲ್ಲಿ ಬಿ.ವೈ ನೀಲೇಗೌಡರು ಆರಂಭಿಸಿದ್ದ ಈ ಸಹಕಾರಿ ಕಾರ್ಖಾನೆಯನ್ನು ಪಾಂಡವಪುರ, ಶ್ರೀರಂಗಪಟ್ಟಣ ಮತ್ತು ಕೆ.ಆರ್.ಪೇಟೆ ತಾಲೂಕು ಭಾಗದ ಕಬ್ಬು ಬೆಳೆಗಾರ ರೈತರು ಈ ಕಾರ್ಖಾನೆಯನ್ನು ಅವಲಂಬಿಸಿದ್ದಾರೆ. 2003ರವರೆಗೂ ರೈತರ ಸಹಕಾರದಲ್ಲಿ ಅಚ್ಚುಕಟ್ಟಾಗಿ ನಡೆಯುತ್ತಿದ್ದ ಈ ಕಾರ್ಖಾನೆ ವಿ.ಸಿ ನಾಲೆ ಆಧುನೀಕರಣದಿಂದಾಗಿ ಕೆ.ಆರ್‌.ಎಸ್‌ ನೀರು ನಿಂತ ಪರಿಣಾಮ ಒಂದು ವರ್ಷ ಕಬ್ಬು ಸರಬರಾಜು ಆಗದೇ ಸ್ಥಗಿತಗೊಂಡು ನಷ್ಟಕ್ಕೆ ಸಿಲುಕಿತು. ನಂತರ ಕೊಥಾರಿ ಕಂಪನಿ ಏಳು ವರ್ಷದ ಅವಧಿಗೆ ಗುತ್ತಿಗೆಗೆ ತೆಗೆದುಕೊಂಡು ಕಾರ್ಖಾನೆಯನ್ನು ನಡೆಸಿತು.

ಆದರೆ 2009ರಲ್ಲಿ ಕೊಥಾರಿ ಕಂಪನಿಯು 30 ವರ್ಷಗಳ ಗುತ್ತಿಗೆಗೆ ಬಯಸಿದಾಗ ಸರ್ಕಾರ ಅದನ್ನು ನಿರಾಕರಿಸಿತು. ಆಗ ಕೊಥಾರಿ ಕಂಪನಿ ತನ್ನ ಗುತ್ತಿಗೆ ಹಿಂತೆಗೆತುಕೊಂಡಿತು. ಅಲ್ಲಿಗೆ ಕಾರ್ಖಾನೆ ಮತ್ತೆ ನಷ್ಟಕ್ಕೆ ಸಿಲುಕಿತು. ಅಷ್ಟರಲ್ಲಿ ಆಗಲೇ ನಷ್ಟದಲ್ಲಿದ್ದ ಮಂಡ್ಯದ ಮೈಷುಗರ್‌ ಸರ್ಕಾರಿ ಸಕ್ಕರೆ ಕಂಪನಿಯೊಂದಿಗೆ ಇದರ ಆಡಳಿತ ಮಂಡಳಿಯನ್ನು ವಿಲೀನ ಮಾಡಲಾಯ್ತು. ರೈತರ ಬಾಕಿ ಸೇರಿದಂತೆ ಹಲವು ಸಮಸ್ಯೆಗಳಿಗೆ ಕಾರ್ಖಾನೆ ಸಿಲಕಿತು. ಸರ್ಕಾರದ ನಿರ್ಲಕ್ಷದಿಂದಾಗಿ ಇಂದು ಅದು ಸಂಪೂರ್ಣ ಖಾಸಗೀಯವರ ಪಾಲಾಗುವಲ್ಲಿಗೆ ಬಂದು ನಿಂತಿದೆ.

ಮುಂದೇನು?

ಒಂದು ಕಾಲದಲ್ಲಿ ರೈತರ ನೆಚ್ಚಿನ ಕಂಪನಿಯಾಗಿದ್ದ ಪಿಎಸ್‌ಎಸ್‌ಕೆ ಈಗ ತನ್ನ ನೌಕರರಿಗೆ ಮೂರು ವರ್ಷಗಳಿಂದ ಸಂಬಳ ಕೊಟ್ಟಿಲ್ಲ. ಸದ್ಯಕ್ಕೆ ಪ್ರತಿನಿತ್ಯ 3500 ಟನ್‌ ಕಬ್ಬು ಅರೆಯುವ ಸಾಮರ್ಥ್ಯ ಹೊಂದಿರು ಇದನ್ನು ನಿರಾಣಿ ಶುಗರ್ಸ್ 5000 ಟನ್‌ಗಳಿಗೆ ಏರಿಸಲಿದೆ. ಅಲ್ಲದೇ ಡಿಸ್ಟಲರಿ ಮತ್ತು ಕೋಜನ್‌ ಘಟಕಗಳು ಆರಂಭಿಸುತ್ತೇವೆ ಎಂದು ನಿಬಂಧನೆಗಳಲ್ಲಿ ಅದು ಹೇಳಿಕೊಂಡಿದೆ. ಈ ಮೊದಲು ರೈತರಿಗೆ ಮುಂಗಡ ಕೊಟ್ಟು ಕಂಪನಿಗಳು ಕಬ್ಬ ಖರೀದಿಸುತ್ತಿದ್ದವು. ಈಗ ನಿರಾಣಿ ಷುಗರ್ಸ್‌‌ಗೆ ಅದರಿಂದ ವಿನಾಯಿತಿ ನೀಡಲಾಗಿದೆ ಎನ್ನಲಾಗಿದೆ.

ಈ ಕಾರ್ಖಾನೆ ಸಹಕಾರಿಯಾಗಿಯೇ ಉಳಿಯುವಲ್ಲಿ ರೈತರು ಸಾಕಷ್ಟು ಹೋರಾಟ ಮಾಡಿದ್ದರು. ಆದರೆ ಈಗ PSSK ಸಕ್ಕರೆ ಕಾರ್ಖಾನೆ ಮುಚ್ಚಲ್ಪಟ್ಟಿದ್ದರಿಂದ ಈ ಭಾಗದ ಸುಮಾರು 4 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಕಬ್ಬು ಬೆಳೆದ ರೈತರು ಬೇರೆ ವಿಧಿ ಇಲ್ಲದೆ ತಾವು ಬೆಳೆದ ಕಬ್ಬನ್ನು ಬೇರೆ ಬೇರೆ ಕಾರ್ಖಾನೆಗೆ ಸಾಗಿಸಲು ಪರದಾಡಿ ನಷ್ಟ ಅನುಭವಿಸುತ್ತಿದ್ದರು. ಹೀಗಾಗಿ ಈ ಕಾರ್ಖಾನೆಯ ಅಭಿವೃದ್ದಿಗೆ ಸರ್ಕಾರ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಬೇಕು ಎಂಬ ಕೂಗು ಕೇಳಿ ಬಂದಿತ್ತು. ಆದರೆ, ವಿಶೇಷ ಪ್ಯಾಕೇಜ್‌ ಘೋಷಣೆಗೆ ಮುಂದಾಗದ ಸರ್ಕಾರ ಇದೀಗ ಈ ಕಾರ್ಖಾನೆಯನ್ನೇ ಖಾಸಗಿ ವಲಯಕ್ಕೆ 40 ವರ್ಷ ಗುತ್ತಿಗೆ ನೀಡಿರುವುದು ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನು ಕೊಥಾರಿ ಕಂಪನಿ ಸೇರಿದಂತೆ ಹತ್ತು ಕಂಪನಿಗಳು ಗುತ್ತಿಗೆಯ ಟೆಂಡರ್‌ನಲ್ಲಿ ಆಕಾಂಕ್ಷಿಗಳಾಗಿದ್ದರು. ಸದ್ಯಕ್ಕೆ ಸಚಿವ ಸ್ಥಾನಕ್ಕಾಗಿ ಆಗಾಗ ಬಂಡಾಯವೇಳುತ್ತಿದ್ದ ನಿರಾಣಿಯವರಿಗೆ ಈ ಕಾರ್ಖಾನೆಯ ಗುತ್ತಿಗೆ ನೀಡಿ ಸಮಾಧಾನ ಮಾಡಲಾಗಿದೆ ಎಂಬ ಮಾತುಗಳ ಸಹ ಕೇಳಿಬರುತ್ತಿವೆ.


ಇದನ್ನೂ ಓದಿ: ಸಕ್ಕರೆ ದಾಹಕ್ಕೆ ಕಾರ್ಮಿಕರಿಗೇ ಬೆಂಕಿಯಿಟ್ಟ ನಿರಾಣಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...