Homeಮುಖಪುಟಕಳೆದುಹೋದ ಸಹಕಾರಿ ಹೆಗ್ಗಳಿಕೆ: ನಿರಾಣಿ ಶುಗರ್ಸ್ ಪಾಲಾದ PSSK ಸಕ್ಕರೆ ಕಾರ್ಖಾನೆ

ಕಳೆದುಹೋದ ಸಹಕಾರಿ ಹೆಗ್ಗಳಿಕೆ: ನಿರಾಣಿ ಶುಗರ್ಸ್ ಪಾಲಾದ PSSK ಸಕ್ಕರೆ ಕಾರ್ಖಾನೆ

- Advertisement -
- Advertisement -

ರಾಜ್ಯದ ಏಕೈಕ ಸಹಕಾರಿ ಸಕ್ಕರೆ ಕಾರ್ಖಾನೆ ಎಂಬ ಹೆಗ್ಗಳಿಕೆಗೆ ಕಾರಣವಾಗಿದ್ದ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿರುವ PSSK ಸಕ್ಕರೆ ಕಾರ್ಖಾನೆ ಕೊನೆಗೂ ತನ್ನ ಹೆಗ್ಗಳಿಕೆ ಕಳೆದುಕೊಂಡು ಖಾಸಗಿಯವರ ಪಾಲಾಗಿವೆ. ನಾಲ್ಕು ವರ್ಷಗಳಿಂದಲೂ ಚೇತರಿಸಿಕೊಳ್ಳಲು ಹೆಣಗಾಡುತ್ತಿದ್ದ ಈ ಕಾರ್ಖಾನೆಯನ್ನು ಪುನಶ್ಚೇತನದ ಹೆಸರಿನಲ್ಲಿ ಸರ್ಕಾರ ಮಾಜಿ ಸಚಿವ ಮುರುಗೇಶ್‌ ನಿರಾಣಿ ಮಾಲೀಕತ್ವದ ನಿರಾಣಿ ಶುಗರ್ಸ್‌ಗೆ 40 ವರ್ಷಗಳ ಕಾಲ ಗುತ್ತಿಗೆಗೆ ನೀಡಿದೆ.

ಇಂದು ನಡೆದ ಬಿಡ್‌ನಲ್ಲಿ ಈ ಕಾರ್ಖಾನೆ ನಿರಾಣಿ ಶುಗರ್ಸ್‌ ಪಾಲಾಗಿದೆ. ಹಲವು ದಿನಗಳಿಂದ ರೈತರು ಮತ್ತು ಸರ್ಕಾರದ ನಡುವೆ ಜಟಾಪಟಿಗೆ ಕಾರಣವಾಗಿದ್ದ ಈ ಕಾರ್ಖಾನೆ ಕೊನೆಗೂ ಖಾಸಗಿ ತೆಕ್ಕೆಗೆ ಹೊರಳಿದ್ದು ಮುಂದೆ ಅದರ ಅಭಿವೃದ್ದಿ ಏನಾಗಲಿದೆ ಎಂಬುದು ಸದ್ಯಕ್ಕೆ ಊಹಿಸಲು ಸಾಧ್ಯವಿಲ್ಲದಂತಾಗಿದೆ.

ಪಿಎಸ್‌ಎಸ್‌ಕೆ ಇತಿಹಾಸ

1959ರಲ್ಲಿ ಬಿ.ವೈ ನೀಲೇಗೌಡರು ಆರಂಭಿಸಿದ್ದ ಈ ಸಹಕಾರಿ ಕಾರ್ಖಾನೆಯನ್ನು ಪಾಂಡವಪುರ, ಶ್ರೀರಂಗಪಟ್ಟಣ ಮತ್ತು ಕೆ.ಆರ್.ಪೇಟೆ ತಾಲೂಕು ಭಾಗದ ಕಬ್ಬು ಬೆಳೆಗಾರ ರೈತರು ಈ ಕಾರ್ಖಾನೆಯನ್ನು ಅವಲಂಬಿಸಿದ್ದಾರೆ. 2003ರವರೆಗೂ ರೈತರ ಸಹಕಾರದಲ್ಲಿ ಅಚ್ಚುಕಟ್ಟಾಗಿ ನಡೆಯುತ್ತಿದ್ದ ಈ ಕಾರ್ಖಾನೆ ವಿ.ಸಿ ನಾಲೆ ಆಧುನೀಕರಣದಿಂದಾಗಿ ಕೆ.ಆರ್‌.ಎಸ್‌ ನೀರು ನಿಂತ ಪರಿಣಾಮ ಒಂದು ವರ್ಷ ಕಬ್ಬು ಸರಬರಾಜು ಆಗದೇ ಸ್ಥಗಿತಗೊಂಡು ನಷ್ಟಕ್ಕೆ ಸಿಲುಕಿತು. ನಂತರ ಕೊಥಾರಿ ಕಂಪನಿ ಏಳು ವರ್ಷದ ಅವಧಿಗೆ ಗುತ್ತಿಗೆಗೆ ತೆಗೆದುಕೊಂಡು ಕಾರ್ಖಾನೆಯನ್ನು ನಡೆಸಿತು.

ಆದರೆ 2009ರಲ್ಲಿ ಕೊಥಾರಿ ಕಂಪನಿಯು 30 ವರ್ಷಗಳ ಗುತ್ತಿಗೆಗೆ ಬಯಸಿದಾಗ ಸರ್ಕಾರ ಅದನ್ನು ನಿರಾಕರಿಸಿತು. ಆಗ ಕೊಥಾರಿ ಕಂಪನಿ ತನ್ನ ಗುತ್ತಿಗೆ ಹಿಂತೆಗೆತುಕೊಂಡಿತು. ಅಲ್ಲಿಗೆ ಕಾರ್ಖಾನೆ ಮತ್ತೆ ನಷ್ಟಕ್ಕೆ ಸಿಲುಕಿತು. ಅಷ್ಟರಲ್ಲಿ ಆಗಲೇ ನಷ್ಟದಲ್ಲಿದ್ದ ಮಂಡ್ಯದ ಮೈಷುಗರ್‌ ಸರ್ಕಾರಿ ಸಕ್ಕರೆ ಕಂಪನಿಯೊಂದಿಗೆ ಇದರ ಆಡಳಿತ ಮಂಡಳಿಯನ್ನು ವಿಲೀನ ಮಾಡಲಾಯ್ತು. ರೈತರ ಬಾಕಿ ಸೇರಿದಂತೆ ಹಲವು ಸಮಸ್ಯೆಗಳಿಗೆ ಕಾರ್ಖಾನೆ ಸಿಲಕಿತು. ಸರ್ಕಾರದ ನಿರ್ಲಕ್ಷದಿಂದಾಗಿ ಇಂದು ಅದು ಸಂಪೂರ್ಣ ಖಾಸಗೀಯವರ ಪಾಲಾಗುವಲ್ಲಿಗೆ ಬಂದು ನಿಂತಿದೆ.

ಮುಂದೇನು?

ಒಂದು ಕಾಲದಲ್ಲಿ ರೈತರ ನೆಚ್ಚಿನ ಕಂಪನಿಯಾಗಿದ್ದ ಪಿಎಸ್‌ಎಸ್‌ಕೆ ಈಗ ತನ್ನ ನೌಕರರಿಗೆ ಮೂರು ವರ್ಷಗಳಿಂದ ಸಂಬಳ ಕೊಟ್ಟಿಲ್ಲ. ಸದ್ಯಕ್ಕೆ ಪ್ರತಿನಿತ್ಯ 3500 ಟನ್‌ ಕಬ್ಬು ಅರೆಯುವ ಸಾಮರ್ಥ್ಯ ಹೊಂದಿರು ಇದನ್ನು ನಿರಾಣಿ ಶುಗರ್ಸ್ 5000 ಟನ್‌ಗಳಿಗೆ ಏರಿಸಲಿದೆ. ಅಲ್ಲದೇ ಡಿಸ್ಟಲರಿ ಮತ್ತು ಕೋಜನ್‌ ಘಟಕಗಳು ಆರಂಭಿಸುತ್ತೇವೆ ಎಂದು ನಿಬಂಧನೆಗಳಲ್ಲಿ ಅದು ಹೇಳಿಕೊಂಡಿದೆ. ಈ ಮೊದಲು ರೈತರಿಗೆ ಮುಂಗಡ ಕೊಟ್ಟು ಕಂಪನಿಗಳು ಕಬ್ಬ ಖರೀದಿಸುತ್ತಿದ್ದವು. ಈಗ ನಿರಾಣಿ ಷುಗರ್ಸ್‌‌ಗೆ ಅದರಿಂದ ವಿನಾಯಿತಿ ನೀಡಲಾಗಿದೆ ಎನ್ನಲಾಗಿದೆ.

ಈ ಕಾರ್ಖಾನೆ ಸಹಕಾರಿಯಾಗಿಯೇ ಉಳಿಯುವಲ್ಲಿ ರೈತರು ಸಾಕಷ್ಟು ಹೋರಾಟ ಮಾಡಿದ್ದರು. ಆದರೆ ಈಗ PSSK ಸಕ್ಕರೆ ಕಾರ್ಖಾನೆ ಮುಚ್ಚಲ್ಪಟ್ಟಿದ್ದರಿಂದ ಈ ಭಾಗದ ಸುಮಾರು 4 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಕಬ್ಬು ಬೆಳೆದ ರೈತರು ಬೇರೆ ವಿಧಿ ಇಲ್ಲದೆ ತಾವು ಬೆಳೆದ ಕಬ್ಬನ್ನು ಬೇರೆ ಬೇರೆ ಕಾರ್ಖಾನೆಗೆ ಸಾಗಿಸಲು ಪರದಾಡಿ ನಷ್ಟ ಅನುಭವಿಸುತ್ತಿದ್ದರು. ಹೀಗಾಗಿ ಈ ಕಾರ್ಖಾನೆಯ ಅಭಿವೃದ್ದಿಗೆ ಸರ್ಕಾರ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಬೇಕು ಎಂಬ ಕೂಗು ಕೇಳಿ ಬಂದಿತ್ತು. ಆದರೆ, ವಿಶೇಷ ಪ್ಯಾಕೇಜ್‌ ಘೋಷಣೆಗೆ ಮುಂದಾಗದ ಸರ್ಕಾರ ಇದೀಗ ಈ ಕಾರ್ಖಾನೆಯನ್ನೇ ಖಾಸಗಿ ವಲಯಕ್ಕೆ 40 ವರ್ಷ ಗುತ್ತಿಗೆ ನೀಡಿರುವುದು ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನು ಕೊಥಾರಿ ಕಂಪನಿ ಸೇರಿದಂತೆ ಹತ್ತು ಕಂಪನಿಗಳು ಗುತ್ತಿಗೆಯ ಟೆಂಡರ್‌ನಲ್ಲಿ ಆಕಾಂಕ್ಷಿಗಳಾಗಿದ್ದರು. ಸದ್ಯಕ್ಕೆ ಸಚಿವ ಸ್ಥಾನಕ್ಕಾಗಿ ಆಗಾಗ ಬಂಡಾಯವೇಳುತ್ತಿದ್ದ ನಿರಾಣಿಯವರಿಗೆ ಈ ಕಾರ್ಖಾನೆಯ ಗುತ್ತಿಗೆ ನೀಡಿ ಸಮಾಧಾನ ಮಾಡಲಾಗಿದೆ ಎಂಬ ಮಾತುಗಳ ಸಹ ಕೇಳಿಬರುತ್ತಿವೆ.


ಇದನ್ನೂ ಓದಿ: ಸಕ್ಕರೆ ದಾಹಕ್ಕೆ ಕಾರ್ಮಿಕರಿಗೇ ಬೆಂಕಿಯಿಟ್ಟ ನಿರಾಣಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...