Homeಮುಖಪುಟಕಳೆದುಹೋದ ಸಹಕಾರಿ ಹೆಗ್ಗಳಿಕೆ: ನಿರಾಣಿ ಶುಗರ್ಸ್ ಪಾಲಾದ PSSK ಸಕ್ಕರೆ ಕಾರ್ಖಾನೆ

ಕಳೆದುಹೋದ ಸಹಕಾರಿ ಹೆಗ್ಗಳಿಕೆ: ನಿರಾಣಿ ಶುಗರ್ಸ್ ಪಾಲಾದ PSSK ಸಕ್ಕರೆ ಕಾರ್ಖಾನೆ

- Advertisement -
- Advertisement -

ರಾಜ್ಯದ ಏಕೈಕ ಸಹಕಾರಿ ಸಕ್ಕರೆ ಕಾರ್ಖಾನೆ ಎಂಬ ಹೆಗ್ಗಳಿಕೆಗೆ ಕಾರಣವಾಗಿದ್ದ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿರುವ PSSK ಸಕ್ಕರೆ ಕಾರ್ಖಾನೆ ಕೊನೆಗೂ ತನ್ನ ಹೆಗ್ಗಳಿಕೆ ಕಳೆದುಕೊಂಡು ಖಾಸಗಿಯವರ ಪಾಲಾಗಿವೆ. ನಾಲ್ಕು ವರ್ಷಗಳಿಂದಲೂ ಚೇತರಿಸಿಕೊಳ್ಳಲು ಹೆಣಗಾಡುತ್ತಿದ್ದ ಈ ಕಾರ್ಖಾನೆಯನ್ನು ಪುನಶ್ಚೇತನದ ಹೆಸರಿನಲ್ಲಿ ಸರ್ಕಾರ ಮಾಜಿ ಸಚಿವ ಮುರುಗೇಶ್‌ ನಿರಾಣಿ ಮಾಲೀಕತ್ವದ ನಿರಾಣಿ ಶುಗರ್ಸ್‌ಗೆ 40 ವರ್ಷಗಳ ಕಾಲ ಗುತ್ತಿಗೆಗೆ ನೀಡಿದೆ.

ಇಂದು ನಡೆದ ಬಿಡ್‌ನಲ್ಲಿ ಈ ಕಾರ್ಖಾನೆ ನಿರಾಣಿ ಶುಗರ್ಸ್‌ ಪಾಲಾಗಿದೆ. ಹಲವು ದಿನಗಳಿಂದ ರೈತರು ಮತ್ತು ಸರ್ಕಾರದ ನಡುವೆ ಜಟಾಪಟಿಗೆ ಕಾರಣವಾಗಿದ್ದ ಈ ಕಾರ್ಖಾನೆ ಕೊನೆಗೂ ಖಾಸಗಿ ತೆಕ್ಕೆಗೆ ಹೊರಳಿದ್ದು ಮುಂದೆ ಅದರ ಅಭಿವೃದ್ದಿ ಏನಾಗಲಿದೆ ಎಂಬುದು ಸದ್ಯಕ್ಕೆ ಊಹಿಸಲು ಸಾಧ್ಯವಿಲ್ಲದಂತಾಗಿದೆ.

ಪಿಎಸ್‌ಎಸ್‌ಕೆ ಇತಿಹಾಸ

1959ರಲ್ಲಿ ಬಿ.ವೈ ನೀಲೇಗೌಡರು ಆರಂಭಿಸಿದ್ದ ಈ ಸಹಕಾರಿ ಕಾರ್ಖಾನೆಯನ್ನು ಪಾಂಡವಪುರ, ಶ್ರೀರಂಗಪಟ್ಟಣ ಮತ್ತು ಕೆ.ಆರ್.ಪೇಟೆ ತಾಲೂಕು ಭಾಗದ ಕಬ್ಬು ಬೆಳೆಗಾರ ರೈತರು ಈ ಕಾರ್ಖಾನೆಯನ್ನು ಅವಲಂಬಿಸಿದ್ದಾರೆ. 2003ರವರೆಗೂ ರೈತರ ಸಹಕಾರದಲ್ಲಿ ಅಚ್ಚುಕಟ್ಟಾಗಿ ನಡೆಯುತ್ತಿದ್ದ ಈ ಕಾರ್ಖಾನೆ ವಿ.ಸಿ ನಾಲೆ ಆಧುನೀಕರಣದಿಂದಾಗಿ ಕೆ.ಆರ್‌.ಎಸ್‌ ನೀರು ನಿಂತ ಪರಿಣಾಮ ಒಂದು ವರ್ಷ ಕಬ್ಬು ಸರಬರಾಜು ಆಗದೇ ಸ್ಥಗಿತಗೊಂಡು ನಷ್ಟಕ್ಕೆ ಸಿಲುಕಿತು. ನಂತರ ಕೊಥಾರಿ ಕಂಪನಿ ಏಳು ವರ್ಷದ ಅವಧಿಗೆ ಗುತ್ತಿಗೆಗೆ ತೆಗೆದುಕೊಂಡು ಕಾರ್ಖಾನೆಯನ್ನು ನಡೆಸಿತು.

ಆದರೆ 2009ರಲ್ಲಿ ಕೊಥಾರಿ ಕಂಪನಿಯು 30 ವರ್ಷಗಳ ಗುತ್ತಿಗೆಗೆ ಬಯಸಿದಾಗ ಸರ್ಕಾರ ಅದನ್ನು ನಿರಾಕರಿಸಿತು. ಆಗ ಕೊಥಾರಿ ಕಂಪನಿ ತನ್ನ ಗುತ್ತಿಗೆ ಹಿಂತೆಗೆತುಕೊಂಡಿತು. ಅಲ್ಲಿಗೆ ಕಾರ್ಖಾನೆ ಮತ್ತೆ ನಷ್ಟಕ್ಕೆ ಸಿಲುಕಿತು. ಅಷ್ಟರಲ್ಲಿ ಆಗಲೇ ನಷ್ಟದಲ್ಲಿದ್ದ ಮಂಡ್ಯದ ಮೈಷುಗರ್‌ ಸರ್ಕಾರಿ ಸಕ್ಕರೆ ಕಂಪನಿಯೊಂದಿಗೆ ಇದರ ಆಡಳಿತ ಮಂಡಳಿಯನ್ನು ವಿಲೀನ ಮಾಡಲಾಯ್ತು. ರೈತರ ಬಾಕಿ ಸೇರಿದಂತೆ ಹಲವು ಸಮಸ್ಯೆಗಳಿಗೆ ಕಾರ್ಖಾನೆ ಸಿಲಕಿತು. ಸರ್ಕಾರದ ನಿರ್ಲಕ್ಷದಿಂದಾಗಿ ಇಂದು ಅದು ಸಂಪೂರ್ಣ ಖಾಸಗೀಯವರ ಪಾಲಾಗುವಲ್ಲಿಗೆ ಬಂದು ನಿಂತಿದೆ.

ಮುಂದೇನು?

ಒಂದು ಕಾಲದಲ್ಲಿ ರೈತರ ನೆಚ್ಚಿನ ಕಂಪನಿಯಾಗಿದ್ದ ಪಿಎಸ್‌ಎಸ್‌ಕೆ ಈಗ ತನ್ನ ನೌಕರರಿಗೆ ಮೂರು ವರ್ಷಗಳಿಂದ ಸಂಬಳ ಕೊಟ್ಟಿಲ್ಲ. ಸದ್ಯಕ್ಕೆ ಪ್ರತಿನಿತ್ಯ 3500 ಟನ್‌ ಕಬ್ಬು ಅರೆಯುವ ಸಾಮರ್ಥ್ಯ ಹೊಂದಿರು ಇದನ್ನು ನಿರಾಣಿ ಶುಗರ್ಸ್ 5000 ಟನ್‌ಗಳಿಗೆ ಏರಿಸಲಿದೆ. ಅಲ್ಲದೇ ಡಿಸ್ಟಲರಿ ಮತ್ತು ಕೋಜನ್‌ ಘಟಕಗಳು ಆರಂಭಿಸುತ್ತೇವೆ ಎಂದು ನಿಬಂಧನೆಗಳಲ್ಲಿ ಅದು ಹೇಳಿಕೊಂಡಿದೆ. ಈ ಮೊದಲು ರೈತರಿಗೆ ಮುಂಗಡ ಕೊಟ್ಟು ಕಂಪನಿಗಳು ಕಬ್ಬ ಖರೀದಿಸುತ್ತಿದ್ದವು. ಈಗ ನಿರಾಣಿ ಷುಗರ್ಸ್‌‌ಗೆ ಅದರಿಂದ ವಿನಾಯಿತಿ ನೀಡಲಾಗಿದೆ ಎನ್ನಲಾಗಿದೆ.

ಈ ಕಾರ್ಖಾನೆ ಸಹಕಾರಿಯಾಗಿಯೇ ಉಳಿಯುವಲ್ಲಿ ರೈತರು ಸಾಕಷ್ಟು ಹೋರಾಟ ಮಾಡಿದ್ದರು. ಆದರೆ ಈಗ PSSK ಸಕ್ಕರೆ ಕಾರ್ಖಾನೆ ಮುಚ್ಚಲ್ಪಟ್ಟಿದ್ದರಿಂದ ಈ ಭಾಗದ ಸುಮಾರು 4 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಕಬ್ಬು ಬೆಳೆದ ರೈತರು ಬೇರೆ ವಿಧಿ ಇಲ್ಲದೆ ತಾವು ಬೆಳೆದ ಕಬ್ಬನ್ನು ಬೇರೆ ಬೇರೆ ಕಾರ್ಖಾನೆಗೆ ಸಾಗಿಸಲು ಪರದಾಡಿ ನಷ್ಟ ಅನುಭವಿಸುತ್ತಿದ್ದರು. ಹೀಗಾಗಿ ಈ ಕಾರ್ಖಾನೆಯ ಅಭಿವೃದ್ದಿಗೆ ಸರ್ಕಾರ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಬೇಕು ಎಂಬ ಕೂಗು ಕೇಳಿ ಬಂದಿತ್ತು. ಆದರೆ, ವಿಶೇಷ ಪ್ಯಾಕೇಜ್‌ ಘೋಷಣೆಗೆ ಮುಂದಾಗದ ಸರ್ಕಾರ ಇದೀಗ ಈ ಕಾರ್ಖಾನೆಯನ್ನೇ ಖಾಸಗಿ ವಲಯಕ್ಕೆ 40 ವರ್ಷ ಗುತ್ತಿಗೆ ನೀಡಿರುವುದು ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನು ಕೊಥಾರಿ ಕಂಪನಿ ಸೇರಿದಂತೆ ಹತ್ತು ಕಂಪನಿಗಳು ಗುತ್ತಿಗೆಯ ಟೆಂಡರ್‌ನಲ್ಲಿ ಆಕಾಂಕ್ಷಿಗಳಾಗಿದ್ದರು. ಸದ್ಯಕ್ಕೆ ಸಚಿವ ಸ್ಥಾನಕ್ಕಾಗಿ ಆಗಾಗ ಬಂಡಾಯವೇಳುತ್ತಿದ್ದ ನಿರಾಣಿಯವರಿಗೆ ಈ ಕಾರ್ಖಾನೆಯ ಗುತ್ತಿಗೆ ನೀಡಿ ಸಮಾಧಾನ ಮಾಡಲಾಗಿದೆ ಎಂಬ ಮಾತುಗಳ ಸಹ ಕೇಳಿಬರುತ್ತಿವೆ.


ಇದನ್ನೂ ಓದಿ: ಸಕ್ಕರೆ ದಾಹಕ್ಕೆ ಕಾರ್ಮಿಕರಿಗೇ ಬೆಂಕಿಯಿಟ್ಟ ನಿರಾಣಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...