Homeಮುಖಪುಟಕಳೆದುಹೋದ ಸಹಕಾರಿ ಹೆಗ್ಗಳಿಕೆ: ನಿರಾಣಿ ಶುಗರ್ಸ್ ಪಾಲಾದ PSSK ಸಕ್ಕರೆ ಕಾರ್ಖಾನೆ

ಕಳೆದುಹೋದ ಸಹಕಾರಿ ಹೆಗ್ಗಳಿಕೆ: ನಿರಾಣಿ ಶುಗರ್ಸ್ ಪಾಲಾದ PSSK ಸಕ್ಕರೆ ಕಾರ್ಖಾನೆ

- Advertisement -
- Advertisement -

ರಾಜ್ಯದ ಏಕೈಕ ಸಹಕಾರಿ ಸಕ್ಕರೆ ಕಾರ್ಖಾನೆ ಎಂಬ ಹೆಗ್ಗಳಿಕೆಗೆ ಕಾರಣವಾಗಿದ್ದ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿರುವ PSSK ಸಕ್ಕರೆ ಕಾರ್ಖಾನೆ ಕೊನೆಗೂ ತನ್ನ ಹೆಗ್ಗಳಿಕೆ ಕಳೆದುಕೊಂಡು ಖಾಸಗಿಯವರ ಪಾಲಾಗಿವೆ. ನಾಲ್ಕು ವರ್ಷಗಳಿಂದಲೂ ಚೇತರಿಸಿಕೊಳ್ಳಲು ಹೆಣಗಾಡುತ್ತಿದ್ದ ಈ ಕಾರ್ಖಾನೆಯನ್ನು ಪುನಶ್ಚೇತನದ ಹೆಸರಿನಲ್ಲಿ ಸರ್ಕಾರ ಮಾಜಿ ಸಚಿವ ಮುರುಗೇಶ್‌ ನಿರಾಣಿ ಮಾಲೀಕತ್ವದ ನಿರಾಣಿ ಶುಗರ್ಸ್‌ಗೆ 40 ವರ್ಷಗಳ ಕಾಲ ಗುತ್ತಿಗೆಗೆ ನೀಡಿದೆ.

ಇಂದು ನಡೆದ ಬಿಡ್‌ನಲ್ಲಿ ಈ ಕಾರ್ಖಾನೆ ನಿರಾಣಿ ಶುಗರ್ಸ್‌ ಪಾಲಾಗಿದೆ. ಹಲವು ದಿನಗಳಿಂದ ರೈತರು ಮತ್ತು ಸರ್ಕಾರದ ನಡುವೆ ಜಟಾಪಟಿಗೆ ಕಾರಣವಾಗಿದ್ದ ಈ ಕಾರ್ಖಾನೆ ಕೊನೆಗೂ ಖಾಸಗಿ ತೆಕ್ಕೆಗೆ ಹೊರಳಿದ್ದು ಮುಂದೆ ಅದರ ಅಭಿವೃದ್ದಿ ಏನಾಗಲಿದೆ ಎಂಬುದು ಸದ್ಯಕ್ಕೆ ಊಹಿಸಲು ಸಾಧ್ಯವಿಲ್ಲದಂತಾಗಿದೆ.

ಪಿಎಸ್‌ಎಸ್‌ಕೆ ಇತಿಹಾಸ

1959ರಲ್ಲಿ ಬಿ.ವೈ ನೀಲೇಗೌಡರು ಆರಂಭಿಸಿದ್ದ ಈ ಸಹಕಾರಿ ಕಾರ್ಖಾನೆಯನ್ನು ಪಾಂಡವಪುರ, ಶ್ರೀರಂಗಪಟ್ಟಣ ಮತ್ತು ಕೆ.ಆರ್.ಪೇಟೆ ತಾಲೂಕು ಭಾಗದ ಕಬ್ಬು ಬೆಳೆಗಾರ ರೈತರು ಈ ಕಾರ್ಖಾನೆಯನ್ನು ಅವಲಂಬಿಸಿದ್ದಾರೆ. 2003ರವರೆಗೂ ರೈತರ ಸಹಕಾರದಲ್ಲಿ ಅಚ್ಚುಕಟ್ಟಾಗಿ ನಡೆಯುತ್ತಿದ್ದ ಈ ಕಾರ್ಖಾನೆ ವಿ.ಸಿ ನಾಲೆ ಆಧುನೀಕರಣದಿಂದಾಗಿ ಕೆ.ಆರ್‌.ಎಸ್‌ ನೀರು ನಿಂತ ಪರಿಣಾಮ ಒಂದು ವರ್ಷ ಕಬ್ಬು ಸರಬರಾಜು ಆಗದೇ ಸ್ಥಗಿತಗೊಂಡು ನಷ್ಟಕ್ಕೆ ಸಿಲುಕಿತು. ನಂತರ ಕೊಥಾರಿ ಕಂಪನಿ ಏಳು ವರ್ಷದ ಅವಧಿಗೆ ಗುತ್ತಿಗೆಗೆ ತೆಗೆದುಕೊಂಡು ಕಾರ್ಖಾನೆಯನ್ನು ನಡೆಸಿತು.

ಆದರೆ 2009ರಲ್ಲಿ ಕೊಥಾರಿ ಕಂಪನಿಯು 30 ವರ್ಷಗಳ ಗುತ್ತಿಗೆಗೆ ಬಯಸಿದಾಗ ಸರ್ಕಾರ ಅದನ್ನು ನಿರಾಕರಿಸಿತು. ಆಗ ಕೊಥಾರಿ ಕಂಪನಿ ತನ್ನ ಗುತ್ತಿಗೆ ಹಿಂತೆಗೆತುಕೊಂಡಿತು. ಅಲ್ಲಿಗೆ ಕಾರ್ಖಾನೆ ಮತ್ತೆ ನಷ್ಟಕ್ಕೆ ಸಿಲುಕಿತು. ಅಷ್ಟರಲ್ಲಿ ಆಗಲೇ ನಷ್ಟದಲ್ಲಿದ್ದ ಮಂಡ್ಯದ ಮೈಷುಗರ್‌ ಸರ್ಕಾರಿ ಸಕ್ಕರೆ ಕಂಪನಿಯೊಂದಿಗೆ ಇದರ ಆಡಳಿತ ಮಂಡಳಿಯನ್ನು ವಿಲೀನ ಮಾಡಲಾಯ್ತು. ರೈತರ ಬಾಕಿ ಸೇರಿದಂತೆ ಹಲವು ಸಮಸ್ಯೆಗಳಿಗೆ ಕಾರ್ಖಾನೆ ಸಿಲಕಿತು. ಸರ್ಕಾರದ ನಿರ್ಲಕ್ಷದಿಂದಾಗಿ ಇಂದು ಅದು ಸಂಪೂರ್ಣ ಖಾಸಗೀಯವರ ಪಾಲಾಗುವಲ್ಲಿಗೆ ಬಂದು ನಿಂತಿದೆ.

ಮುಂದೇನು?

ಒಂದು ಕಾಲದಲ್ಲಿ ರೈತರ ನೆಚ್ಚಿನ ಕಂಪನಿಯಾಗಿದ್ದ ಪಿಎಸ್‌ಎಸ್‌ಕೆ ಈಗ ತನ್ನ ನೌಕರರಿಗೆ ಮೂರು ವರ್ಷಗಳಿಂದ ಸಂಬಳ ಕೊಟ್ಟಿಲ್ಲ. ಸದ್ಯಕ್ಕೆ ಪ್ರತಿನಿತ್ಯ 3500 ಟನ್‌ ಕಬ್ಬು ಅರೆಯುವ ಸಾಮರ್ಥ್ಯ ಹೊಂದಿರು ಇದನ್ನು ನಿರಾಣಿ ಶುಗರ್ಸ್ 5000 ಟನ್‌ಗಳಿಗೆ ಏರಿಸಲಿದೆ. ಅಲ್ಲದೇ ಡಿಸ್ಟಲರಿ ಮತ್ತು ಕೋಜನ್‌ ಘಟಕಗಳು ಆರಂಭಿಸುತ್ತೇವೆ ಎಂದು ನಿಬಂಧನೆಗಳಲ್ಲಿ ಅದು ಹೇಳಿಕೊಂಡಿದೆ. ಈ ಮೊದಲು ರೈತರಿಗೆ ಮುಂಗಡ ಕೊಟ್ಟು ಕಂಪನಿಗಳು ಕಬ್ಬ ಖರೀದಿಸುತ್ತಿದ್ದವು. ಈಗ ನಿರಾಣಿ ಷುಗರ್ಸ್‌‌ಗೆ ಅದರಿಂದ ವಿನಾಯಿತಿ ನೀಡಲಾಗಿದೆ ಎನ್ನಲಾಗಿದೆ.

ಈ ಕಾರ್ಖಾನೆ ಸಹಕಾರಿಯಾಗಿಯೇ ಉಳಿಯುವಲ್ಲಿ ರೈತರು ಸಾಕಷ್ಟು ಹೋರಾಟ ಮಾಡಿದ್ದರು. ಆದರೆ ಈಗ PSSK ಸಕ್ಕರೆ ಕಾರ್ಖಾನೆ ಮುಚ್ಚಲ್ಪಟ್ಟಿದ್ದರಿಂದ ಈ ಭಾಗದ ಸುಮಾರು 4 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಕಬ್ಬು ಬೆಳೆದ ರೈತರು ಬೇರೆ ವಿಧಿ ಇಲ್ಲದೆ ತಾವು ಬೆಳೆದ ಕಬ್ಬನ್ನು ಬೇರೆ ಬೇರೆ ಕಾರ್ಖಾನೆಗೆ ಸಾಗಿಸಲು ಪರದಾಡಿ ನಷ್ಟ ಅನುಭವಿಸುತ್ತಿದ್ದರು. ಹೀಗಾಗಿ ಈ ಕಾರ್ಖಾನೆಯ ಅಭಿವೃದ್ದಿಗೆ ಸರ್ಕಾರ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಬೇಕು ಎಂಬ ಕೂಗು ಕೇಳಿ ಬಂದಿತ್ತು. ಆದರೆ, ವಿಶೇಷ ಪ್ಯಾಕೇಜ್‌ ಘೋಷಣೆಗೆ ಮುಂದಾಗದ ಸರ್ಕಾರ ಇದೀಗ ಈ ಕಾರ್ಖಾನೆಯನ್ನೇ ಖಾಸಗಿ ವಲಯಕ್ಕೆ 40 ವರ್ಷ ಗುತ್ತಿಗೆ ನೀಡಿರುವುದು ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನು ಕೊಥಾರಿ ಕಂಪನಿ ಸೇರಿದಂತೆ ಹತ್ತು ಕಂಪನಿಗಳು ಗುತ್ತಿಗೆಯ ಟೆಂಡರ್‌ನಲ್ಲಿ ಆಕಾಂಕ್ಷಿಗಳಾಗಿದ್ದರು. ಸದ್ಯಕ್ಕೆ ಸಚಿವ ಸ್ಥಾನಕ್ಕಾಗಿ ಆಗಾಗ ಬಂಡಾಯವೇಳುತ್ತಿದ್ದ ನಿರಾಣಿಯವರಿಗೆ ಈ ಕಾರ್ಖಾನೆಯ ಗುತ್ತಿಗೆ ನೀಡಿ ಸಮಾಧಾನ ಮಾಡಲಾಗಿದೆ ಎಂಬ ಮಾತುಗಳ ಸಹ ಕೇಳಿಬರುತ್ತಿವೆ.


ಇದನ್ನೂ ಓದಿ: ಸಕ್ಕರೆ ದಾಹಕ್ಕೆ ಕಾರ್ಮಿಕರಿಗೇ ಬೆಂಕಿಯಿಟ್ಟ ನಿರಾಣಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...