Homeಮುಖಪುಟಕಳೆದುಹೋದ ಸಹಕಾರಿ ಹೆಗ್ಗಳಿಕೆ: ನಿರಾಣಿ ಶುಗರ್ಸ್ ಪಾಲಾದ PSSK ಸಕ್ಕರೆ ಕಾರ್ಖಾನೆ

ಕಳೆದುಹೋದ ಸಹಕಾರಿ ಹೆಗ್ಗಳಿಕೆ: ನಿರಾಣಿ ಶುಗರ್ಸ್ ಪಾಲಾದ PSSK ಸಕ್ಕರೆ ಕಾರ್ಖಾನೆ

- Advertisement -
- Advertisement -

ರಾಜ್ಯದ ಏಕೈಕ ಸಹಕಾರಿ ಸಕ್ಕರೆ ಕಾರ್ಖಾನೆ ಎಂಬ ಹೆಗ್ಗಳಿಕೆಗೆ ಕಾರಣವಾಗಿದ್ದ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿರುವ PSSK ಸಕ್ಕರೆ ಕಾರ್ಖಾನೆ ಕೊನೆಗೂ ತನ್ನ ಹೆಗ್ಗಳಿಕೆ ಕಳೆದುಕೊಂಡು ಖಾಸಗಿಯವರ ಪಾಲಾಗಿವೆ. ನಾಲ್ಕು ವರ್ಷಗಳಿಂದಲೂ ಚೇತರಿಸಿಕೊಳ್ಳಲು ಹೆಣಗಾಡುತ್ತಿದ್ದ ಈ ಕಾರ್ಖಾನೆಯನ್ನು ಪುನಶ್ಚೇತನದ ಹೆಸರಿನಲ್ಲಿ ಸರ್ಕಾರ ಮಾಜಿ ಸಚಿವ ಮುರುಗೇಶ್‌ ನಿರಾಣಿ ಮಾಲೀಕತ್ವದ ನಿರಾಣಿ ಶುಗರ್ಸ್‌ಗೆ 40 ವರ್ಷಗಳ ಕಾಲ ಗುತ್ತಿಗೆಗೆ ನೀಡಿದೆ.

ಇಂದು ನಡೆದ ಬಿಡ್‌ನಲ್ಲಿ ಈ ಕಾರ್ಖಾನೆ ನಿರಾಣಿ ಶುಗರ್ಸ್‌ ಪಾಲಾಗಿದೆ. ಹಲವು ದಿನಗಳಿಂದ ರೈತರು ಮತ್ತು ಸರ್ಕಾರದ ನಡುವೆ ಜಟಾಪಟಿಗೆ ಕಾರಣವಾಗಿದ್ದ ಈ ಕಾರ್ಖಾನೆ ಕೊನೆಗೂ ಖಾಸಗಿ ತೆಕ್ಕೆಗೆ ಹೊರಳಿದ್ದು ಮುಂದೆ ಅದರ ಅಭಿವೃದ್ದಿ ಏನಾಗಲಿದೆ ಎಂಬುದು ಸದ್ಯಕ್ಕೆ ಊಹಿಸಲು ಸಾಧ್ಯವಿಲ್ಲದಂತಾಗಿದೆ.

ಪಿಎಸ್‌ಎಸ್‌ಕೆ ಇತಿಹಾಸ

1959ರಲ್ಲಿ ಬಿ.ವೈ ನೀಲೇಗೌಡರು ಆರಂಭಿಸಿದ್ದ ಈ ಸಹಕಾರಿ ಕಾರ್ಖಾನೆಯನ್ನು ಪಾಂಡವಪುರ, ಶ್ರೀರಂಗಪಟ್ಟಣ ಮತ್ತು ಕೆ.ಆರ್.ಪೇಟೆ ತಾಲೂಕು ಭಾಗದ ಕಬ್ಬು ಬೆಳೆಗಾರ ರೈತರು ಈ ಕಾರ್ಖಾನೆಯನ್ನು ಅವಲಂಬಿಸಿದ್ದಾರೆ. 2003ರವರೆಗೂ ರೈತರ ಸಹಕಾರದಲ್ಲಿ ಅಚ್ಚುಕಟ್ಟಾಗಿ ನಡೆಯುತ್ತಿದ್ದ ಈ ಕಾರ್ಖಾನೆ ವಿ.ಸಿ ನಾಲೆ ಆಧುನೀಕರಣದಿಂದಾಗಿ ಕೆ.ಆರ್‌.ಎಸ್‌ ನೀರು ನಿಂತ ಪರಿಣಾಮ ಒಂದು ವರ್ಷ ಕಬ್ಬು ಸರಬರಾಜು ಆಗದೇ ಸ್ಥಗಿತಗೊಂಡು ನಷ್ಟಕ್ಕೆ ಸಿಲುಕಿತು. ನಂತರ ಕೊಥಾರಿ ಕಂಪನಿ ಏಳು ವರ್ಷದ ಅವಧಿಗೆ ಗುತ್ತಿಗೆಗೆ ತೆಗೆದುಕೊಂಡು ಕಾರ್ಖಾನೆಯನ್ನು ನಡೆಸಿತು.

ಆದರೆ 2009ರಲ್ಲಿ ಕೊಥಾರಿ ಕಂಪನಿಯು 30 ವರ್ಷಗಳ ಗುತ್ತಿಗೆಗೆ ಬಯಸಿದಾಗ ಸರ್ಕಾರ ಅದನ್ನು ನಿರಾಕರಿಸಿತು. ಆಗ ಕೊಥಾರಿ ಕಂಪನಿ ತನ್ನ ಗುತ್ತಿಗೆ ಹಿಂತೆಗೆತುಕೊಂಡಿತು. ಅಲ್ಲಿಗೆ ಕಾರ್ಖಾನೆ ಮತ್ತೆ ನಷ್ಟಕ್ಕೆ ಸಿಲುಕಿತು. ಅಷ್ಟರಲ್ಲಿ ಆಗಲೇ ನಷ್ಟದಲ್ಲಿದ್ದ ಮಂಡ್ಯದ ಮೈಷುಗರ್‌ ಸರ್ಕಾರಿ ಸಕ್ಕರೆ ಕಂಪನಿಯೊಂದಿಗೆ ಇದರ ಆಡಳಿತ ಮಂಡಳಿಯನ್ನು ವಿಲೀನ ಮಾಡಲಾಯ್ತು. ರೈತರ ಬಾಕಿ ಸೇರಿದಂತೆ ಹಲವು ಸಮಸ್ಯೆಗಳಿಗೆ ಕಾರ್ಖಾನೆ ಸಿಲಕಿತು. ಸರ್ಕಾರದ ನಿರ್ಲಕ್ಷದಿಂದಾಗಿ ಇಂದು ಅದು ಸಂಪೂರ್ಣ ಖಾಸಗೀಯವರ ಪಾಲಾಗುವಲ್ಲಿಗೆ ಬಂದು ನಿಂತಿದೆ.

ಮುಂದೇನು?

ಒಂದು ಕಾಲದಲ್ಲಿ ರೈತರ ನೆಚ್ಚಿನ ಕಂಪನಿಯಾಗಿದ್ದ ಪಿಎಸ್‌ಎಸ್‌ಕೆ ಈಗ ತನ್ನ ನೌಕರರಿಗೆ ಮೂರು ವರ್ಷಗಳಿಂದ ಸಂಬಳ ಕೊಟ್ಟಿಲ್ಲ. ಸದ್ಯಕ್ಕೆ ಪ್ರತಿನಿತ್ಯ 3500 ಟನ್‌ ಕಬ್ಬು ಅರೆಯುವ ಸಾಮರ್ಥ್ಯ ಹೊಂದಿರು ಇದನ್ನು ನಿರಾಣಿ ಶುಗರ್ಸ್ 5000 ಟನ್‌ಗಳಿಗೆ ಏರಿಸಲಿದೆ. ಅಲ್ಲದೇ ಡಿಸ್ಟಲರಿ ಮತ್ತು ಕೋಜನ್‌ ಘಟಕಗಳು ಆರಂಭಿಸುತ್ತೇವೆ ಎಂದು ನಿಬಂಧನೆಗಳಲ್ಲಿ ಅದು ಹೇಳಿಕೊಂಡಿದೆ. ಈ ಮೊದಲು ರೈತರಿಗೆ ಮುಂಗಡ ಕೊಟ್ಟು ಕಂಪನಿಗಳು ಕಬ್ಬ ಖರೀದಿಸುತ್ತಿದ್ದವು. ಈಗ ನಿರಾಣಿ ಷುಗರ್ಸ್‌‌ಗೆ ಅದರಿಂದ ವಿನಾಯಿತಿ ನೀಡಲಾಗಿದೆ ಎನ್ನಲಾಗಿದೆ.

ಈ ಕಾರ್ಖಾನೆ ಸಹಕಾರಿಯಾಗಿಯೇ ಉಳಿಯುವಲ್ಲಿ ರೈತರು ಸಾಕಷ್ಟು ಹೋರಾಟ ಮಾಡಿದ್ದರು. ಆದರೆ ಈಗ PSSK ಸಕ್ಕರೆ ಕಾರ್ಖಾನೆ ಮುಚ್ಚಲ್ಪಟ್ಟಿದ್ದರಿಂದ ಈ ಭಾಗದ ಸುಮಾರು 4 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಕಬ್ಬು ಬೆಳೆದ ರೈತರು ಬೇರೆ ವಿಧಿ ಇಲ್ಲದೆ ತಾವು ಬೆಳೆದ ಕಬ್ಬನ್ನು ಬೇರೆ ಬೇರೆ ಕಾರ್ಖಾನೆಗೆ ಸಾಗಿಸಲು ಪರದಾಡಿ ನಷ್ಟ ಅನುಭವಿಸುತ್ತಿದ್ದರು. ಹೀಗಾಗಿ ಈ ಕಾರ್ಖಾನೆಯ ಅಭಿವೃದ್ದಿಗೆ ಸರ್ಕಾರ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಬೇಕು ಎಂಬ ಕೂಗು ಕೇಳಿ ಬಂದಿತ್ತು. ಆದರೆ, ವಿಶೇಷ ಪ್ಯಾಕೇಜ್‌ ಘೋಷಣೆಗೆ ಮುಂದಾಗದ ಸರ್ಕಾರ ಇದೀಗ ಈ ಕಾರ್ಖಾನೆಯನ್ನೇ ಖಾಸಗಿ ವಲಯಕ್ಕೆ 40 ವರ್ಷ ಗುತ್ತಿಗೆ ನೀಡಿರುವುದು ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನು ಕೊಥಾರಿ ಕಂಪನಿ ಸೇರಿದಂತೆ ಹತ್ತು ಕಂಪನಿಗಳು ಗುತ್ತಿಗೆಯ ಟೆಂಡರ್‌ನಲ್ಲಿ ಆಕಾಂಕ್ಷಿಗಳಾಗಿದ್ದರು. ಸದ್ಯಕ್ಕೆ ಸಚಿವ ಸ್ಥಾನಕ್ಕಾಗಿ ಆಗಾಗ ಬಂಡಾಯವೇಳುತ್ತಿದ್ದ ನಿರಾಣಿಯವರಿಗೆ ಈ ಕಾರ್ಖಾನೆಯ ಗುತ್ತಿಗೆ ನೀಡಿ ಸಮಾಧಾನ ಮಾಡಲಾಗಿದೆ ಎಂಬ ಮಾತುಗಳ ಸಹ ಕೇಳಿಬರುತ್ತಿವೆ.


ಇದನ್ನೂ ಓದಿ: ಸಕ್ಕರೆ ದಾಹಕ್ಕೆ ಕಾರ್ಮಿಕರಿಗೇ ಬೆಂಕಿಯಿಟ್ಟ ನಿರಾಣಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...