Homeಕರ್ನಾಟಕಎಕೆ-ಎಡಿ ಗೊಂದಲ ನಿವಾರಣೆ ಮುಂದಾದ ಸರ್ಕಾರ; ಜಾತಿ ಪ್ರಮಾಣ ಪತ್ರದಲ್ಲಿ 'ಪ್ರವರ್ಗ' ಉಲ್ಲೇಖಿಸುವಂತೆ ಆದೇಶ

ಎಕೆ-ಎಡಿ ಗೊಂದಲ ನಿವಾರಣೆ ಮುಂದಾದ ಸರ್ಕಾರ; ಜಾತಿ ಪ್ರಮಾಣ ಪತ್ರದಲ್ಲಿ ‘ಪ್ರವರ್ಗ’ ಉಲ್ಲೇಖಿಸುವಂತೆ ಆದೇಶ

- Advertisement -
- Advertisement -

ಒಳಮಿಸಲಾತಿ ಜಾರಿ ಸಂಬಂಧ ಜಸ್ಟೀಸ್ ಎಚ್‌.ಎನ್‌. ನಾಗಮೋಹನ್‌ ದಾಸ್ ಆಯೋಗಕ್ಕೆ ಸಮೀಕ್ಷೆ ಸಂದರ್ಭದಲ್ಲಿ ಮೂಲ ಜಾತಿ ತಿಳಿಸದೆ, ‘ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ’ ಎಂದು ಬರೆಸಿರುವವರು ಜಾತಿ ಪ್ರಮಾಣ ಪತ್ರ ಪಡೆಯುವಾಗ ‘ಪ್ರವರ್ಗ’ ನಮೂದಿಸಬೇಕು ಮತ್ತು ಒಮ್ಮೆ ಒಂದು ಗುಂಪಿನಲ್ಲಿ ಮೀಸಲಾತಿ ಸೌಲಭ್ಯ ಪಡೆದರೆ, ಅವರ ಇಡೀ ಕುಟುಂಬ ಮುಂದೆ ಅದೇ ಗುಂಪಿನಲ್ಲಿ ಮುಂದುವರಿಯಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಸರ್ಕಾರ ಇಂದು ಆದೇಶ ಹೊರಡಿಸಿದ್ದು, “ರಾಜ್ಯದ ಪರಿಶಿಷ್ಟ ಜಾತಿ ಪಟ್ಟಿಯಲ್ಲಿನ 101 ಜಾತಿಗಳನ್ನು ಒಳಮೀಸಲಾತಿಗಾಗಿ ಸಂವಿಧಾನದ ಅನುಚ್ಛೇಧ 15 ಮತ್ತು ಅನುಚ್ಛೇಧ 16 ರನ್ವಯ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಲು ಪ್ರವರ್ಗ- ಎ ರಲ್ಲಿ 16 ಜಾತಿಗಳು, ಪ್ರವರ್ಗ-ಬಿ ನಲ್ಲಿ 19 ಜಾತಿಗಳು ಮತ್ತು ಪ್ರವರ್ಗ-ಸಿ ನಲ್ಲಿ 63 ಜಾತಿಗಳನ್ನು ಸೇರಿಸಿ, ಮೂರು ಪ್ರವರ್ಗಗಳಾಗಿ ವರ್ಗೀಕರಿಸಿ, ಆದೇಶ ಹೊರಡಿಸಲಾಗಿದೆ. ಮುಂದುವರೆದು, ಆದಿ ಆಂಧ್ರ, ಆದಿ ದ್ರಾವಿಡ ಮತ್ತು ಆದಿ ಕರ್ನಾಟಕ ಸಮುದಾಯಗಳನ್ನು ಪ್ರವರ್ಗ-ಎ ಮತ್ತು ಪ್ರವರ್ಗ-ಬಿ ನಲ್ಲಿ ಮೀಸಲಾತಿ ಸೌಲಭ್ಯವನ್ನು ಪಡೆಯಬಹುದೆಂದು ಆದೇಶಿಸಲಾಗಿದೆ. ಈ ಆದೇಶವನ್ನು ಅನುಷ್ಠಾನಗೊಳಿಸಲು ಕೆಲವೊಂದು ಸ್ಪಷ್ಟೀಕರಣ ನೀಡುವುದು ಅಗತ್ಯವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ ಪಡೆಯುವುದಕ್ಕೆ ಕೆಲವು ವಿಧಾನ ಅನುಸರಿಸಬೇಕು” ಎಂದು ಹೇಳಿದೆ.

“ಆದಿ ಆಂಧ್ರ, ಆದಿ ದ್ರಾವಿಡ ಮತ್ತು ಆದಿ ಕರ್ನಾಟಕ ಸಮುದಾಯಗಳನ್ನು ಹೊರತುಪಡಿಸಿ ಉಳಿದ 98 ಜಾತಿಗಳನ್ನು ಪ್ರವರ್ಗ- ಎ, ಪ್ರವರ್ಗ-ಬಿ ಮತ್ತು ಪ್ರವರ್ಗ -ಸಿ ಗಳಲ್ಲಿ ವರ್ಗೀಕರಿಸಲಾಗಿದೆ. ಈಗಾಗಲೇ 988 ಸಮುದಾಯದವರು ತಮ್ಮ ಜಾತಿ ಪ್ರಮಾಣ ಪತ್ರ ಪಡೆದಿರುತ್ತಾರೆ. ಈ 98 ಜಾತಿಗಳು ತಮ್ಮ ಜಾತಿಯನ್ನು ಸ್ಪಷ್ಟವಾಗಿ ತಿಳಿಸಿ, ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದಿರುವುದರಿಂದ  ಅವರುಅದೇ ಜಾತಿ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ಪ್ರವರ್ಗದೊಂದಿಗೆ ಮೀಸಲಾತಿ ಸೌಲಭ್ಯ ಪಡೆಯಲು ಉಪಯೋಗಿಸಬಹುದು. ಆದ್ದರಿಂದ, ಸಂಬಂಧಪಟ್ಟ ಪ್ರಾಧಿಕಾರಿಗಳು ಈ ಜಾತಿ ಪ್ರಮಾಣ ಪತ್ರಗಳಿಗೆ ಉಲ್ಲೇಖ(1) ರ ಆದೇಶದಲ್ಲಿ ವರ್ಗೀಕರಿಸಿರುವಂತೆ ಆಯಾ ಜಾತಿಗಳಿಗೆ ಸಂಬಂಧಿಸಿದ ಪ್ರವರ್ಗವನ್ನು ಅಟಲ್‌ ಜೀ ಜನಸ್ನೇಹಿ ಕೇಂದ್ರದ ತಂತ್ರಾಂಶದಲ್ಲಿ ಅಳವಡಿಸಿಕೊಂಡು ಜಾತಿ. ಪ್ರಮಾಣ ಪತ್ರದಲ್ಲಿ ಜಾತಿ ನಮೂದಿಸುವ ಬಗ್ಗೆ ಅಗತ್ಯ ಕ್ರಮವಹಿಸಬೇಕು” ಎಂದು ಸರ್ಕಾರ ಆದೇಶ ಮಾಡಿದೆ.

“ಉದಾಹರಣೆಗೆ, ಅಭ್ಯರ್ಥಿಯು ಕೊರಚ ಎಂದು ಜಾತಿ ಪ್ರಮಾಣ ಪತ್ರ ಈಗಾಗಲೇ ಪಡೆದಿದ್ದು.ಅಟಲ್‌ ಜೀ ಜನಸ್ನೇಹಿ ಕೇಂದ್ರದವರು ಉಲ್ಲೇಖ(1)ರಲ್ಲಿನ ಆದೇಶದಂತೆ ಕೊರಚ ಸಮುದಾಯವನ್ನು ಪ್ರವರ್ಗ-ಸಿ ಯಲ್ಲಿ ವರ್ಗೀಕರಿಸಿರುವುದರಿಂದ ಜಾತಿ ಪ್ರಮಾಣ ಪತ್ರವನ್ನು ಕೊರಚ (ಪ್ರವರ್ಗ-ಸಿ) ಎಂದು ನೀಡಲು ತಂ೦ತ್ರಾಂಶದಲ್ಲಿ ಅಳವಡಿಸುವ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಅಭ್ಯರ್ಥಿಯು ಪರೆಯನ್‌, ಪರೆಯ ಎಂದು ಜಾತಿ ಪ್ರಮಾಣ ಪತ್ರ ಈಗಾಗಲೇ ಪಡೆದಿದ್ದು.ಅಟಲ್‌ ಜೀ ಜನಸ್ನೇಹಿ ಕೇಂದ್ರದವರು ಉಲ್ಲೆಖ(1)ರಲ್ಲಿನ ಆದೇಶದಂತೆ ಪರೆಯನ್‌, ಪರೆಯ ಸಮುದಾಯವನ್ನು ಪ್ರವರ್ಗ- ಬಿ ಯಲ್ಲಿ ವರ್ಗೀಕರಿಸಿರುವುದರಿಂದ ಜಾತಿ ಪ್ರಮಾಣ ಪತ್ರವನ್ನು ಪರೆಯನ್‌, ಪರೆಯ ಎಂದು ನೀಡಲು ತಂತ್ರಾಂಶದಲ್ಲಿ ಅಳವಡಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಹೇಳಲಾಗಿದೆ.

“ಈಗಾಗಲೇ ಆದಿ ಆಂಧ್ರ, ಆದಿ ದ್ರಾವಿಡ ಮತ್ತು ಆದಿ ಕರ್ನಾಟಕ ಎಂದು ಜಾತಿ ಪ್ರಮಾಣ ಪತ್ರ ಪಡೆದವರು, ಸಂಬಂಧಿಸಿದ ಪ್ರವರ್ಗ-ಎ ಅಥವಾ ಪ್ರವರ್ಗ-ಬಿ ನಲ್ಲಿ ಮೀಸಲಾತಿ ಸೌಲಭ್ಯ ಪಡೆಯಬೇಕಾದಲ್ಲಿ ತಮ್ಮ ಮೂಲ ಜಾತಿ ಹಾಗೂ ಪ್ರವರ್ಗವನ್ನು ಸ್ಪಷ್ಟವಾಗಿ ನಮೂದಿಸಿ, ಅರ್ಜಿ ನಮೂನೆ -1 ರಲ್ಲಿ ಪ್ರಸ್ತುತ ಜಾರಿಯಲ್ಲಿರುವ ಪದ್ಧತಿಯಂತೆ ಆನ್‌ ಲೈನ್‌ ನಲ್ಲಿ ಅರ್ಜಿ ಸಲ್ಲಿಸಬೇಕು” ಎಂದು ಸರ್ಕಾರ ಸ್ಪಷ್ಟ ಸೂಚನೆ ನೀಡಿದೆ.

“ಅರ್ಜಿ ಸ್ವೀಕರಿಸಿದ ಪ್ರಾಧಿಕಾರಗಳು ಕರ್ನಾಟಕ ಅನುಸೂಚಿತ ಜಾತಿಗಳು ಹಾಗೂ ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಹಿ೦ದುಳಿದ ವರ್ಗಗಳ ಅಧಿನಿಯಮ 1990 ತಿದ್ದುಪಡಿ ಅಧಿನಿಯಮ 2024 ಮತ್ತು ನಿಯಮಗಳು 1992’ರ ಅನ್ವಯ ಪರಿಶೀಲಿಸಿ, ಅಭ್ಯರ್ಥಿಗಳ ಮೂಲ ಜಾತಿಯ ಬಗ್ಗೆ ಸ್ಮಳೀಯ ವಿಚಾರಣೆ ನಡೆಸಿ, ಮೂಲ ಜಾತಿಯನ್ನು ಖಾತರಿಪಡಿಸಿಕೊಂಡು ಜಾತಿ ಪ್ರಮಾಣ ಪತ್ರ ನೀಡಬೇಕು. ಉದಾಹರಣೆಗೆ, ಅಭ್ಯರ್ಥಿಯು ಆದಿ ಕರ್ನಾಟಕ ಎಂದು ಜಾತಿ ಪ್ರಮಾಣ ಪತ್ರ ಪಡೆದಿದ್ದು ಹಾಗೂ ಮೂಲ ಜಾತಿಯು ಹೊಲೆಯ ಎಂದು ಇದ್ದಲ್ಲಿ, ಜಾತಿ ಪ್ರಮಾಣ ಪತ್ರದಲ್ಲಿ ಆದಿ ಕರ್ನಾಟಕ (ಹೊಲೆಯ/ಪ್ರವರ್ಗ-ಬಿ) ಎಂದು ನಮೂದಿಸಿ ಜಾತಿ ಪ್ರಮಾಣ ಪತ್ರ ನೀಡಬೇಕು” ಎಂದು ಸರ್ಕಾರ ಸೂಚಿಸಿದೆ.

“ಅಭ್ಯರ್ಥಿಯು ಆದಿ ಕರ್ನಾಟಕ ಎಂದು ಜಾತಿ ಪ್ರಮಾಣ ಪತ್ರ ಪಡೆದಿದ್ದು ಹಾಗೂ ಮೂಲ ಜಾತಿಯು ಮಾದಿಗ ಎಂದು ಇದ್ದಲ್ಲಿ, ಜಾತಿ ಪ್ರಮಾಣ ಪತ್ರದಲ್ಲಿ ಆದಿ ಕರ್ನಾಟಕ (ಮಾದಿಗ/ಪ್ರವರ್ಗ- ಎ) ಎಂದು ನಮೂದಿಸಿ, ಜಾತಿ ಪ್ರಮಾಣ ಪತ್ರ ನೀಡಬೇಕು. ಉದಾಹರಣೆ, ಆದಿ ದ್ರಾವಿಡ ಮತ್ತು ಅದಿ ಆಮಧ್ರ ಅಭ್ಯರ್ಥಿಗಳು ಇದೇ ರೀತಿ ಜಾತಿ ಪ್ರಮಾಣ ಪತ್ರ ನೀಡಲು ಕ್ರಮವಹಿಸಬೇಕು. ಈ ಪ್ರಕ್ರಿಯೆಯು ಆದಿ ದ್ರಾವಿಡ, ಆದಿ ಆಂಧ್ರ ಮತ್ತು ಆದಿ ಕರ್ನಾಟಕ ಎಂದು ಜಾತಿ ಪ್ರಮಾಣ ಪತ್ರ ಪಡೆದವರಿಗೆ ಮಾತ್ರ ಅನ್ವಯಿಸುತ್ತದೆ” ಎಮದು ಸರ್ಕಾರ ಸ್ಪಷ್ಟನೆ ನೀಡಿದೆ.

“ಆದಿ ಆಂಧ್ರ, ಆದಿ ದ್ರಾವಿಡ ಮತ್ತು ಆದಿ ಕರ್ನಾಟಕಕ್ಕೆ ಸೇರಿದ ಇತರೆ ಮೂಲ ಜಾತಿಯನ್ನು ತಿಳಿಸದ ಅಭ್ಯರ್ಥಿಗಳು, ಪ್ರವರ್ಗ- ಎ ಅಥವಾ ಪ್ರವರ್ಗ- ಬಿ ಯನ್ನು ಆಯ್ಕೆ ಮಾಡಿಕೊಂಡು ಸ್ಪಷ್ಟವಾಗಿ ನಮೂದಿಸಿ, ಮುಚ್ಚಳಿಕೆ ಪತ್ರದೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸ್ವೀಕರಿಸಿದ ಪ್ರಾಧಿಕಾರಗಳು ಕರ್ನಾಟಕ ಅನುಸೂಚಿತ ಜಾತಿಗಳು ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಹಿ೦ದುಳಿದ ವರ್ಗಗಳ ಅಧಿನಿಯಮದ ಅನ್ವಯ ಪರಿಶೀಲಿಸಿ, ಅಭ್ಯರ್ಥಿಗಳೂ ಪರಿಶಿಷ್ಟ ಜಾತಿಗೆ ಸೇರಿರುವ ಬಗ್ಗೆ ಖಾತರಿಪಡಿಸಿಕೊಮಡು ಅಭ್ಯರ್ಥಿ ಘೋಷಿಸಿರುವ ಪ್ರವರ್ಗವನ್ನು ನಮೂದಿಸಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ನೀಡಬೇಕು” ಎಂದು ಹೇಳಿದೆ.

“ಉದಾಹರಣೆಗೆ ಅಭ್ಯರ್ಥಿಯು ಆದಿ ಕರ್ನಾಟಕ ಎ೦ದು ಜಾತಿ ಪ್ರಮಾಣ ಪತ್ರ ಪಡೆದಿದ್ದು ಅರ್ಜಿಯಲ್ಲಿ ಮೂಲ ಜಾತಿಯನ್ನು ತಿಳಿಸದೇ ಇದ್ದಲ್ಲಿ, ಜಾತಿ ಪ್ರಮಾಣ ಪತ್ರದಲ್ಲಿ ಆದಿ ಕರ್ನಾಟಕ (ಪ್ರವರ್ಗ-ಎ ಆಥವಾ ಪ್ರವರ್ಗ-ಬಿ) ಎಂದು ನಮೂದಿಸಿ ಜಾತಿ ಪ್ರಮಾಣ ಪತ್ರ ನೀಡುವುದು. ಆದಿ ದ್ರಾವಿಡ ಮತ್ತು ಅದಿ ಆಂಧ್ರ ಅಭ್ಯರ್ಥಿಗಳಿಗೆ ಇದೇ ರೀತಿ ಜಾತಿ ಪ್ರಮಾಣ ಪತ್ರ ನೀಡಲು ಕ್ರಮವಹಿಸುವುದು. ಈ ಪ್ರಕ್ರಿಯೆಯು ಆದಿ ದ್ರಾವಿಡ, ಆದಿ ಆಂಧ್ರ ಮತ್ತು ಆದಿ ಕರ್ನಾಟಕ ಎಂದು ಜಾತಿ ಪ್ರಮಾಣ ಪತ್ರ ಪಡೆದು ಮೂಲಜಾತಿಯನ್ನು ಅರ್ಜಿಯಲ್ಲಿ ತಿಳಿಸದೇ ಇರುವ ಅಭ್ಯರ್ಥಿಗಳಿಗೆ ಮಾತ್ರ ಅನಸ್ಪಯಿಸುತ್ತದೆ” ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

“ಅಭ್ಯರ್ಥಿಗಳು ಮೇಲಿನ ಕ್ರಮಸ೦ಖ್ಯೆಯಂತೆ ಆಯ್ಕೆ ಮಾಡಿಕೊಂಡು ಯಾವ ಪ್ರವರ್ಗದಲ್ಲಿ ಜಾತಿ ಪ್ರಮಾಣ ಪತ್ರ ಪಡೆದಿರುತ್ತಾರೆಯೋ ಅದೇ ಪ್ರವರ್ಗ ಅವರ ಕುಟುಂಬ ಶಾಶ್ವತವಾಗಿ ಮುಂದುವರೆಯುತ್ತದೆ. ಯಾವುದೇ ಕಾರಣಕ್ಕೂ ಬದಲಾವಣೆಗೆ ಅವಕಾಶವಿರುವುದಿಲ್ಲ” ಆದೇಶದಲ್ಲಿ ಖಚಿತಪಡಿಸಲಾಗಿದೆ.

ಒಳಮೀಸಲಾತಿ ಜಾರಿಗೆ ವಿಳಂಬ; ರಾಜಿನಾಮೆಗೆ ಆಗ್ರಹಿಸಿ ಸಮಾಜ ಕಲ್ಯಾಣ ಸಚಿವ ಮಹದೇವಪ್ಪ ಮನೆಗೆ ಮುತ್ತಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...