Homeಕರ್ನಾಟಕಎಕೆ-ಎಡಿ ಗೊಂದಲ ನಿವಾರಣೆ ಮುಂದಾದ ಸರ್ಕಾರ; ಜಾತಿ ಪ್ರಮಾಣ ಪತ್ರದಲ್ಲಿ 'ಪ್ರವರ್ಗ' ಉಲ್ಲೇಖಿಸುವಂತೆ ಆದೇಶ

ಎಕೆ-ಎಡಿ ಗೊಂದಲ ನಿವಾರಣೆ ಮುಂದಾದ ಸರ್ಕಾರ; ಜಾತಿ ಪ್ರಮಾಣ ಪತ್ರದಲ್ಲಿ ‘ಪ್ರವರ್ಗ’ ಉಲ್ಲೇಖಿಸುವಂತೆ ಆದೇಶ

- Advertisement -
- Advertisement -

ಒಳಮಿಸಲಾತಿ ಜಾರಿ ಸಂಬಂಧ ಜಸ್ಟೀಸ್ ಎಚ್‌.ಎನ್‌. ನಾಗಮೋಹನ್‌ ದಾಸ್ ಆಯೋಗಕ್ಕೆ ಸಮೀಕ್ಷೆ ಸಂದರ್ಭದಲ್ಲಿ ಮೂಲ ಜಾತಿ ತಿಳಿಸದೆ, ‘ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ’ ಎಂದು ಬರೆಸಿರುವವರು ಜಾತಿ ಪ್ರಮಾಣ ಪತ್ರ ಪಡೆಯುವಾಗ ‘ಪ್ರವರ್ಗ’ ನಮೂದಿಸಬೇಕು ಮತ್ತು ಒಮ್ಮೆ ಒಂದು ಗುಂಪಿನಲ್ಲಿ ಮೀಸಲಾತಿ ಸೌಲಭ್ಯ ಪಡೆದರೆ, ಅವರ ಇಡೀ ಕುಟುಂಬ ಮುಂದೆ ಅದೇ ಗುಂಪಿನಲ್ಲಿ ಮುಂದುವರಿಯಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಸರ್ಕಾರ ಇಂದು ಆದೇಶ ಹೊರಡಿಸಿದ್ದು, “ರಾಜ್ಯದ ಪರಿಶಿಷ್ಟ ಜಾತಿ ಪಟ್ಟಿಯಲ್ಲಿನ 101 ಜಾತಿಗಳನ್ನು ಒಳಮೀಸಲಾತಿಗಾಗಿ ಸಂವಿಧಾನದ ಅನುಚ್ಛೇಧ 15 ಮತ್ತು ಅನುಚ್ಛೇಧ 16 ರನ್ವಯ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಲು ಪ್ರವರ್ಗ- ಎ ರಲ್ಲಿ 16 ಜಾತಿಗಳು, ಪ್ರವರ್ಗ-ಬಿ ನಲ್ಲಿ 19 ಜಾತಿಗಳು ಮತ್ತು ಪ್ರವರ್ಗ-ಸಿ ನಲ್ಲಿ 63 ಜಾತಿಗಳನ್ನು ಸೇರಿಸಿ, ಮೂರು ಪ್ರವರ್ಗಗಳಾಗಿ ವರ್ಗೀಕರಿಸಿ, ಆದೇಶ ಹೊರಡಿಸಲಾಗಿದೆ. ಮುಂದುವರೆದು, ಆದಿ ಆಂಧ್ರ, ಆದಿ ದ್ರಾವಿಡ ಮತ್ತು ಆದಿ ಕರ್ನಾಟಕ ಸಮುದಾಯಗಳನ್ನು ಪ್ರವರ್ಗ-ಎ ಮತ್ತು ಪ್ರವರ್ಗ-ಬಿ ನಲ್ಲಿ ಮೀಸಲಾತಿ ಸೌಲಭ್ಯವನ್ನು ಪಡೆಯಬಹುದೆಂದು ಆದೇಶಿಸಲಾಗಿದೆ. ಈ ಆದೇಶವನ್ನು ಅನುಷ್ಠಾನಗೊಳಿಸಲು ಕೆಲವೊಂದು ಸ್ಪಷ್ಟೀಕರಣ ನೀಡುವುದು ಅಗತ್ಯವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ ಪಡೆಯುವುದಕ್ಕೆ ಕೆಲವು ವಿಧಾನ ಅನುಸರಿಸಬೇಕು” ಎಂದು ಹೇಳಿದೆ.

“ಆದಿ ಆಂಧ್ರ, ಆದಿ ದ್ರಾವಿಡ ಮತ್ತು ಆದಿ ಕರ್ನಾಟಕ ಸಮುದಾಯಗಳನ್ನು ಹೊರತುಪಡಿಸಿ ಉಳಿದ 98 ಜಾತಿಗಳನ್ನು ಪ್ರವರ್ಗ- ಎ, ಪ್ರವರ್ಗ-ಬಿ ಮತ್ತು ಪ್ರವರ್ಗ -ಸಿ ಗಳಲ್ಲಿ ವರ್ಗೀಕರಿಸಲಾಗಿದೆ. ಈಗಾಗಲೇ 988 ಸಮುದಾಯದವರು ತಮ್ಮ ಜಾತಿ ಪ್ರಮಾಣ ಪತ್ರ ಪಡೆದಿರುತ್ತಾರೆ. ಈ 98 ಜಾತಿಗಳು ತಮ್ಮ ಜಾತಿಯನ್ನು ಸ್ಪಷ್ಟವಾಗಿ ತಿಳಿಸಿ, ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದಿರುವುದರಿಂದ  ಅವರುಅದೇ ಜಾತಿ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ಪ್ರವರ್ಗದೊಂದಿಗೆ ಮೀಸಲಾತಿ ಸೌಲಭ್ಯ ಪಡೆಯಲು ಉಪಯೋಗಿಸಬಹುದು. ಆದ್ದರಿಂದ, ಸಂಬಂಧಪಟ್ಟ ಪ್ರಾಧಿಕಾರಿಗಳು ಈ ಜಾತಿ ಪ್ರಮಾಣ ಪತ್ರಗಳಿಗೆ ಉಲ್ಲೇಖ(1) ರ ಆದೇಶದಲ್ಲಿ ವರ್ಗೀಕರಿಸಿರುವಂತೆ ಆಯಾ ಜಾತಿಗಳಿಗೆ ಸಂಬಂಧಿಸಿದ ಪ್ರವರ್ಗವನ್ನು ಅಟಲ್‌ ಜೀ ಜನಸ್ನೇಹಿ ಕೇಂದ್ರದ ತಂತ್ರಾಂಶದಲ್ಲಿ ಅಳವಡಿಸಿಕೊಂಡು ಜಾತಿ. ಪ್ರಮಾಣ ಪತ್ರದಲ್ಲಿ ಜಾತಿ ನಮೂದಿಸುವ ಬಗ್ಗೆ ಅಗತ್ಯ ಕ್ರಮವಹಿಸಬೇಕು” ಎಂದು ಸರ್ಕಾರ ಆದೇಶ ಮಾಡಿದೆ.

“ಉದಾಹರಣೆಗೆ, ಅಭ್ಯರ್ಥಿಯು ಕೊರಚ ಎಂದು ಜಾತಿ ಪ್ರಮಾಣ ಪತ್ರ ಈಗಾಗಲೇ ಪಡೆದಿದ್ದು.ಅಟಲ್‌ ಜೀ ಜನಸ್ನೇಹಿ ಕೇಂದ್ರದವರು ಉಲ್ಲೇಖ(1)ರಲ್ಲಿನ ಆದೇಶದಂತೆ ಕೊರಚ ಸಮುದಾಯವನ್ನು ಪ್ರವರ್ಗ-ಸಿ ಯಲ್ಲಿ ವರ್ಗೀಕರಿಸಿರುವುದರಿಂದ ಜಾತಿ ಪ್ರಮಾಣ ಪತ್ರವನ್ನು ಕೊರಚ (ಪ್ರವರ್ಗ-ಸಿ) ಎಂದು ನೀಡಲು ತಂ೦ತ್ರಾಂಶದಲ್ಲಿ ಅಳವಡಿಸುವ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಅಭ್ಯರ್ಥಿಯು ಪರೆಯನ್‌, ಪರೆಯ ಎಂದು ಜಾತಿ ಪ್ರಮಾಣ ಪತ್ರ ಈಗಾಗಲೇ ಪಡೆದಿದ್ದು.ಅಟಲ್‌ ಜೀ ಜನಸ್ನೇಹಿ ಕೇಂದ್ರದವರು ಉಲ್ಲೆಖ(1)ರಲ್ಲಿನ ಆದೇಶದಂತೆ ಪರೆಯನ್‌, ಪರೆಯ ಸಮುದಾಯವನ್ನು ಪ್ರವರ್ಗ- ಬಿ ಯಲ್ಲಿ ವರ್ಗೀಕರಿಸಿರುವುದರಿಂದ ಜಾತಿ ಪ್ರಮಾಣ ಪತ್ರವನ್ನು ಪರೆಯನ್‌, ಪರೆಯ ಎಂದು ನೀಡಲು ತಂತ್ರಾಂಶದಲ್ಲಿ ಅಳವಡಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಹೇಳಲಾಗಿದೆ.

“ಈಗಾಗಲೇ ಆದಿ ಆಂಧ್ರ, ಆದಿ ದ್ರಾವಿಡ ಮತ್ತು ಆದಿ ಕರ್ನಾಟಕ ಎಂದು ಜಾತಿ ಪ್ರಮಾಣ ಪತ್ರ ಪಡೆದವರು, ಸಂಬಂಧಿಸಿದ ಪ್ರವರ್ಗ-ಎ ಅಥವಾ ಪ್ರವರ್ಗ-ಬಿ ನಲ್ಲಿ ಮೀಸಲಾತಿ ಸೌಲಭ್ಯ ಪಡೆಯಬೇಕಾದಲ್ಲಿ ತಮ್ಮ ಮೂಲ ಜಾತಿ ಹಾಗೂ ಪ್ರವರ್ಗವನ್ನು ಸ್ಪಷ್ಟವಾಗಿ ನಮೂದಿಸಿ, ಅರ್ಜಿ ನಮೂನೆ -1 ರಲ್ಲಿ ಪ್ರಸ್ತುತ ಜಾರಿಯಲ್ಲಿರುವ ಪದ್ಧತಿಯಂತೆ ಆನ್‌ ಲೈನ್‌ ನಲ್ಲಿ ಅರ್ಜಿ ಸಲ್ಲಿಸಬೇಕು” ಎಂದು ಸರ್ಕಾರ ಸ್ಪಷ್ಟ ಸೂಚನೆ ನೀಡಿದೆ.

“ಅರ್ಜಿ ಸ್ವೀಕರಿಸಿದ ಪ್ರಾಧಿಕಾರಗಳು ಕರ್ನಾಟಕ ಅನುಸೂಚಿತ ಜಾತಿಗಳು ಹಾಗೂ ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಹಿ೦ದುಳಿದ ವರ್ಗಗಳ ಅಧಿನಿಯಮ 1990 ತಿದ್ದುಪಡಿ ಅಧಿನಿಯಮ 2024 ಮತ್ತು ನಿಯಮಗಳು 1992’ರ ಅನ್ವಯ ಪರಿಶೀಲಿಸಿ, ಅಭ್ಯರ್ಥಿಗಳ ಮೂಲ ಜಾತಿಯ ಬಗ್ಗೆ ಸ್ಮಳೀಯ ವಿಚಾರಣೆ ನಡೆಸಿ, ಮೂಲ ಜಾತಿಯನ್ನು ಖಾತರಿಪಡಿಸಿಕೊಂಡು ಜಾತಿ ಪ್ರಮಾಣ ಪತ್ರ ನೀಡಬೇಕು. ಉದಾಹರಣೆಗೆ, ಅಭ್ಯರ್ಥಿಯು ಆದಿ ಕರ್ನಾಟಕ ಎಂದು ಜಾತಿ ಪ್ರಮಾಣ ಪತ್ರ ಪಡೆದಿದ್ದು ಹಾಗೂ ಮೂಲ ಜಾತಿಯು ಹೊಲೆಯ ಎಂದು ಇದ್ದಲ್ಲಿ, ಜಾತಿ ಪ್ರಮಾಣ ಪತ್ರದಲ್ಲಿ ಆದಿ ಕರ್ನಾಟಕ (ಹೊಲೆಯ/ಪ್ರವರ್ಗ-ಬಿ) ಎಂದು ನಮೂದಿಸಿ ಜಾತಿ ಪ್ರಮಾಣ ಪತ್ರ ನೀಡಬೇಕು” ಎಂದು ಸರ್ಕಾರ ಸೂಚಿಸಿದೆ.

“ಅಭ್ಯರ್ಥಿಯು ಆದಿ ಕರ್ನಾಟಕ ಎಂದು ಜಾತಿ ಪ್ರಮಾಣ ಪತ್ರ ಪಡೆದಿದ್ದು ಹಾಗೂ ಮೂಲ ಜಾತಿಯು ಮಾದಿಗ ಎಂದು ಇದ್ದಲ್ಲಿ, ಜಾತಿ ಪ್ರಮಾಣ ಪತ್ರದಲ್ಲಿ ಆದಿ ಕರ್ನಾಟಕ (ಮಾದಿಗ/ಪ್ರವರ್ಗ- ಎ) ಎಂದು ನಮೂದಿಸಿ, ಜಾತಿ ಪ್ರಮಾಣ ಪತ್ರ ನೀಡಬೇಕು. ಉದಾಹರಣೆ, ಆದಿ ದ್ರಾವಿಡ ಮತ್ತು ಅದಿ ಆಮಧ್ರ ಅಭ್ಯರ್ಥಿಗಳು ಇದೇ ರೀತಿ ಜಾತಿ ಪ್ರಮಾಣ ಪತ್ರ ನೀಡಲು ಕ್ರಮವಹಿಸಬೇಕು. ಈ ಪ್ರಕ್ರಿಯೆಯು ಆದಿ ದ್ರಾವಿಡ, ಆದಿ ಆಂಧ್ರ ಮತ್ತು ಆದಿ ಕರ್ನಾಟಕ ಎಂದು ಜಾತಿ ಪ್ರಮಾಣ ಪತ್ರ ಪಡೆದವರಿಗೆ ಮಾತ್ರ ಅನ್ವಯಿಸುತ್ತದೆ” ಎಮದು ಸರ್ಕಾರ ಸ್ಪಷ್ಟನೆ ನೀಡಿದೆ.

“ಆದಿ ಆಂಧ್ರ, ಆದಿ ದ್ರಾವಿಡ ಮತ್ತು ಆದಿ ಕರ್ನಾಟಕಕ್ಕೆ ಸೇರಿದ ಇತರೆ ಮೂಲ ಜಾತಿಯನ್ನು ತಿಳಿಸದ ಅಭ್ಯರ್ಥಿಗಳು, ಪ್ರವರ್ಗ- ಎ ಅಥವಾ ಪ್ರವರ್ಗ- ಬಿ ಯನ್ನು ಆಯ್ಕೆ ಮಾಡಿಕೊಂಡು ಸ್ಪಷ್ಟವಾಗಿ ನಮೂದಿಸಿ, ಮುಚ್ಚಳಿಕೆ ಪತ್ರದೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸ್ವೀಕರಿಸಿದ ಪ್ರಾಧಿಕಾರಗಳು ಕರ್ನಾಟಕ ಅನುಸೂಚಿತ ಜಾತಿಗಳು ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಹಿ೦ದುಳಿದ ವರ್ಗಗಳ ಅಧಿನಿಯಮದ ಅನ್ವಯ ಪರಿಶೀಲಿಸಿ, ಅಭ್ಯರ್ಥಿಗಳೂ ಪರಿಶಿಷ್ಟ ಜಾತಿಗೆ ಸೇರಿರುವ ಬಗ್ಗೆ ಖಾತರಿಪಡಿಸಿಕೊಮಡು ಅಭ್ಯರ್ಥಿ ಘೋಷಿಸಿರುವ ಪ್ರವರ್ಗವನ್ನು ನಮೂದಿಸಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ನೀಡಬೇಕು” ಎಂದು ಹೇಳಿದೆ.

“ಉದಾಹರಣೆಗೆ ಅಭ್ಯರ್ಥಿಯು ಆದಿ ಕರ್ನಾಟಕ ಎ೦ದು ಜಾತಿ ಪ್ರಮಾಣ ಪತ್ರ ಪಡೆದಿದ್ದು ಅರ್ಜಿಯಲ್ಲಿ ಮೂಲ ಜಾತಿಯನ್ನು ತಿಳಿಸದೇ ಇದ್ದಲ್ಲಿ, ಜಾತಿ ಪ್ರಮಾಣ ಪತ್ರದಲ್ಲಿ ಆದಿ ಕರ್ನಾಟಕ (ಪ್ರವರ್ಗ-ಎ ಆಥವಾ ಪ್ರವರ್ಗ-ಬಿ) ಎಂದು ನಮೂದಿಸಿ ಜಾತಿ ಪ್ರಮಾಣ ಪತ್ರ ನೀಡುವುದು. ಆದಿ ದ್ರಾವಿಡ ಮತ್ತು ಅದಿ ಆಂಧ್ರ ಅಭ್ಯರ್ಥಿಗಳಿಗೆ ಇದೇ ರೀತಿ ಜಾತಿ ಪ್ರಮಾಣ ಪತ್ರ ನೀಡಲು ಕ್ರಮವಹಿಸುವುದು. ಈ ಪ್ರಕ್ರಿಯೆಯು ಆದಿ ದ್ರಾವಿಡ, ಆದಿ ಆಂಧ್ರ ಮತ್ತು ಆದಿ ಕರ್ನಾಟಕ ಎಂದು ಜಾತಿ ಪ್ರಮಾಣ ಪತ್ರ ಪಡೆದು ಮೂಲಜಾತಿಯನ್ನು ಅರ್ಜಿಯಲ್ಲಿ ತಿಳಿಸದೇ ಇರುವ ಅಭ್ಯರ್ಥಿಗಳಿಗೆ ಮಾತ್ರ ಅನಸ್ಪಯಿಸುತ್ತದೆ” ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

“ಅಭ್ಯರ್ಥಿಗಳು ಮೇಲಿನ ಕ್ರಮಸ೦ಖ್ಯೆಯಂತೆ ಆಯ್ಕೆ ಮಾಡಿಕೊಂಡು ಯಾವ ಪ್ರವರ್ಗದಲ್ಲಿ ಜಾತಿ ಪ್ರಮಾಣ ಪತ್ರ ಪಡೆದಿರುತ್ತಾರೆಯೋ ಅದೇ ಪ್ರವರ್ಗ ಅವರ ಕುಟುಂಬ ಶಾಶ್ವತವಾಗಿ ಮುಂದುವರೆಯುತ್ತದೆ. ಯಾವುದೇ ಕಾರಣಕ್ಕೂ ಬದಲಾವಣೆಗೆ ಅವಕಾಶವಿರುವುದಿಲ್ಲ” ಆದೇಶದಲ್ಲಿ ಖಚಿತಪಡಿಸಲಾಗಿದೆ.

ಒಳಮೀಸಲಾತಿ ಜಾರಿಗೆ ವಿಳಂಬ; ರಾಜಿನಾಮೆಗೆ ಆಗ್ರಹಿಸಿ ಸಮಾಜ ಕಲ್ಯಾಣ ಸಚಿವ ಮಹದೇವಪ್ಪ ಮನೆಗೆ ಮುತ್ತಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...