Homeಎಕಾನಮಿಸರ್ಕಾರ ತಪ್ಪು ದಿಕ್ಕಿನಲ್ಲಿ ಚಲಿಸುತ್ತಿದೆ: ಕೋವಿಡ್‌ ಪ್ಯಾಕೇಜ್‌ ಟೀಕಿಸಿದ ಆರ್‌ಎಸ್‌ಎಸ್ ಅಂಗಸಂಸ್ಥೆ ಬಿಎಂಎಸ್

ಸರ್ಕಾರ ತಪ್ಪು ದಿಕ್ಕಿನಲ್ಲಿ ಚಲಿಸುತ್ತಿದೆ: ಕೋವಿಡ್‌ ಪ್ಯಾಕೇಜ್‌ ಟೀಕಿಸಿದ ಆರ್‌ಎಸ್‌ಎಸ್ ಅಂಗಸಂಸ್ಥೆ ಬಿಎಂಎಸ್

- Advertisement -
- Advertisement -

8 ವಲಯಗಳಲ್ಲಿನ ಕಾರ್ಪೋರೇಟಿಕರಣ ಮತ್ತು ಖಾಸಗೀಕರಣದ ಕುರಿತ ನಿರ್ಮಲಾ ಸೀತಾರಾಮನ್‌ರವರ ಪ್ರಕಟಣೆಗಳಿಗೆ ಆರ್‌ಎಸ್‌ಎಸ್ ಅಂಗಸಂಸ್ಥೆ ಬಿಎಂಎಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಸರ್ಕಾರವು ಕಾರ್ಮಿಕ ಸಂಘಗಳೊಂದಿಗೆ ಸಮಾಲೋಚಿಸುವುದರಿಂದ ದೂರ ಸರಿಯುತ್ತಿದೆ ಎಂದು ಅದು ಆರೋಪಿಸಿದೆ.

ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಘೋಷಿಸಿದ ಆರ್ಥಿಕ ಪ್ಯಾಕೇಜ್‌ನ ನಾಲ್ಕನೇ ಹಂತದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಭಾರತೀಯ ಮಜ್ದೂರ್ ಸಂಘವು ಸರ್ಕಾರವು ತಪ್ಪು ದಿಕ್ಕಿನಲ್ಲಿ ಸಾಗುತ್ತಿದೆ ಮತ್ತು ವಿಚಾರಗಳ ಕೊರತೆ ಎದುರಿಸುತ್ತಿದೆ ಎಂದು ಹೇಳಿದೆ.

ರಕ್ಷಣಾ ಉತ್ಪಾದನೆಯಲ್ಲಿ ವಿದೇಶಿ ನೇರ ಹೂಡಿಕೆಯ ಮಿತಿಗಳನ್ನು ಸಡಿಲಿಸುವುದು, ಆರು ವಿಮಾನ ನಿಲ್ದಾಣಗಳ ಖಾಸಗೀಕರಣ, ವಿಮಾನಯಾಗಳಲ್ಲಿ ಖಾಸಗಿಯವರಿಗೆ ಹೆಚ್ಚಿನ ಅವಕಾಶ ಮತ್ತು ವಾಣಿಜ್ಯ ಕಲ್ಲಿದ್ದಲು ಗಣಿಗಾರಿಕೆಯಲ್ಲಿ ಖಾಸಗಿ ವಲಯಕ್ಕೆ ಅವಕಾಶ ನೀಡುವುದು ಸೇರಿದಂತೆ ಮುಂತಾದ ಕ್ರಮಗಳನ್ನು ಕೇಂದ್ರ ಸಚಿವೆ ಶನಿವಾರ ಪ್ರಕಟಿಸಿದ್ದರು. ಕರೋನವೈರಸ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ 20 ಲಕ್ಷ ಕೋಟಿ ರೂ.ಗಳ ಆರ್ಥಿಕ ಪ್ಯಾಕೇಜ್‌ನ ನಾಲ್ಕನೇ ಹಂತದ ವಿವರಗಳನ್ನು ಹಂಚಿಕೊಳ್ಳುವಾಗ ಅವರು ಈ ಪ್ರಕಟಣೆಗಳನ್ನು ಮಾಡಿದ್ದಾರೆ.

ಪ್ರಕಟಣೆಗಳಿಗೆ ಪ್ರತಿಕ್ರಿಯಿಸಿದ ಬಿಎಂಎಸ್, ಕಾರ್ಪೋರೇಟಿಕರಣ ಮತ್ತು ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ)ವು ಖಾಸಗೀಕರಣ ಮತ್ತು “ವಿದೇಶೀಕರಣ” ದ ಮಾರ್ಗಗಳಾಗಿವೆ ಎಂದು ಹೇಳಿದೆ.

ಬಿಕ್ಕಟ್ಟಿನ ಸಮಯದಲ್ಲಿ ಆರ್ಥಿಕ ಪುನರುಜ್ಜೀವನದ ಕುರಿತ ಆಲೋಚನೆಗಳ ಕೊರತೆಯನ್ನು ಸರ್ಕಾರ ಹೊಂದಿದೆ ಎಂದು ಇದು ತೋರಿಸುತ್ತದೆ ಎಂದು ಆರ್‌ಎಸ್‌ಎಸ್ ಬೆಂಬಲಿತ ಸಂಸ್ಥೆ ಆರೋಪಿಸಿದೆ.

ಎಂಟು ಕ್ಷೇತ್ರಗಳಲ್ಲಿನ ಕಾರ್ಪೋರೇಟಿಕರಣ ಮತ್ತು ಖಾಸಗೀಕರಣದ ಕುರಿತ ಪ್ರಕಟಣೆಗಳನ್ನು ಬಿಎಂಎಸ್ ಬಲವಾಗಿ ಆಕ್ಷೇಪಿಸುತ್ತದೆ ಎಂದು ಟ್ರೇಡ್ ಯೂನಿಯನ್ ಹೇಳಿಕೆಯಲ್ಲಿ ತಿಳಿಸಿದೆ.

ಖಾಸಗೀಕರಣ ಎಂದರೆ ಉದ್ಯೋಗಿಗಳಿಗೆ ಭಾರಿ ಉದ್ಯೋಗ ನಷ್ಟ, ಕಳಪೆ ಗುಣಮಟ್ಟದ ಉದ್ಯೋಗ, ಲಾಭ ಮತ್ತು ಶೋಷಣೆಯ ನಿಯಮವಾಗಿರುತ್ತದೆ ಎಂದು ಬಿಎಂಎಸ್ ಹೇಳಿದೆ.

ಕೊರೊನಾವೈರಸ್ ಸಾಂಕ್ರಾಮಿಕದ ಮಧ್ಯೆ ಖಾಸಗಿ ಕಂಪನಿಗಳು ಮತ್ತು ಮಾರುಕಟ್ಟೆ ಸಂಕಷ್ಟಕ್ಕೊಳಗಾದಾಗ  “ಸಾರ್ವಜನಿಕ ವಲಯವು ನಿರ್ಣಾಯಕ ಪಾತ್ರ ವಹಿಸಿದೆ” ಎಂದು ಬಿಎಂಎಸ್‌ ಪ್ರತಿಪಾದಿಸಿದೆ.

ಕಾರ್ಮಿಕ ಸಂಘಗಳು, ಸಾಮಾಜಿಕ ಪ್ರತಿನಿಧಿಗಳು ಮತ್ತು ಭಾದ್ಯಸ್ಥರೊಂದಿಗೆ ಸಮಾಲೋಚಿಸುವುದರಿಂದ ಸರ್ಕಾರ ದೂರ ಸರಿಯುತ್ತಿದೆ ಎಂದು ಅದು ಹೇಳಿದೆ.

ಆದಾಗ್ಯೂ, ಹಣಕಾಸು ಸಚಿವರು ಘೋಷಿಸಿದ ಪ್ಯಾಕೇಜಿನ ಮೊದಲ ಮೂರು ಹಂತದ ಬಗ್ಗೆ ಬಿಎಂಎಸ್ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿತ್ತು.


ಇದನ್ನೂ ಓದಿ: ಸ್ನೇಹಿತನ ತೊಡೆಮೇಲೆ ಪ್ರಾಣಬಿಟ್ಟ ಯುವಕ : ನಿಲ್ಲದ ವಲಸೆ ಕಾರ್ಮಿಕರ ಕಣ್ಣೀರ ಕಥೆಗಳು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...