Homeಎಕಾನಮಿಸರ್ಕಾರ ತಪ್ಪು ದಿಕ್ಕಿನಲ್ಲಿ ಚಲಿಸುತ್ತಿದೆ: ಕೋವಿಡ್‌ ಪ್ಯಾಕೇಜ್‌ ಟೀಕಿಸಿದ ಆರ್‌ಎಸ್‌ಎಸ್ ಅಂಗಸಂಸ್ಥೆ ಬಿಎಂಎಸ್

ಸರ್ಕಾರ ತಪ್ಪು ದಿಕ್ಕಿನಲ್ಲಿ ಚಲಿಸುತ್ತಿದೆ: ಕೋವಿಡ್‌ ಪ್ಯಾಕೇಜ್‌ ಟೀಕಿಸಿದ ಆರ್‌ಎಸ್‌ಎಸ್ ಅಂಗಸಂಸ್ಥೆ ಬಿಎಂಎಸ್

- Advertisement -
- Advertisement -

8 ವಲಯಗಳಲ್ಲಿನ ಕಾರ್ಪೋರೇಟಿಕರಣ ಮತ್ತು ಖಾಸಗೀಕರಣದ ಕುರಿತ ನಿರ್ಮಲಾ ಸೀತಾರಾಮನ್‌ರವರ ಪ್ರಕಟಣೆಗಳಿಗೆ ಆರ್‌ಎಸ್‌ಎಸ್ ಅಂಗಸಂಸ್ಥೆ ಬಿಎಂಎಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಸರ್ಕಾರವು ಕಾರ್ಮಿಕ ಸಂಘಗಳೊಂದಿಗೆ ಸಮಾಲೋಚಿಸುವುದರಿಂದ ದೂರ ಸರಿಯುತ್ತಿದೆ ಎಂದು ಅದು ಆರೋಪಿಸಿದೆ.

ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಘೋಷಿಸಿದ ಆರ್ಥಿಕ ಪ್ಯಾಕೇಜ್‌ನ ನಾಲ್ಕನೇ ಹಂತದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಭಾರತೀಯ ಮಜ್ದೂರ್ ಸಂಘವು ಸರ್ಕಾರವು ತಪ್ಪು ದಿಕ್ಕಿನಲ್ಲಿ ಸಾಗುತ್ತಿದೆ ಮತ್ತು ವಿಚಾರಗಳ ಕೊರತೆ ಎದುರಿಸುತ್ತಿದೆ ಎಂದು ಹೇಳಿದೆ.

ರಕ್ಷಣಾ ಉತ್ಪಾದನೆಯಲ್ಲಿ ವಿದೇಶಿ ನೇರ ಹೂಡಿಕೆಯ ಮಿತಿಗಳನ್ನು ಸಡಿಲಿಸುವುದು, ಆರು ವಿಮಾನ ನಿಲ್ದಾಣಗಳ ಖಾಸಗೀಕರಣ, ವಿಮಾನಯಾಗಳಲ್ಲಿ ಖಾಸಗಿಯವರಿಗೆ ಹೆಚ್ಚಿನ ಅವಕಾಶ ಮತ್ತು ವಾಣಿಜ್ಯ ಕಲ್ಲಿದ್ದಲು ಗಣಿಗಾರಿಕೆಯಲ್ಲಿ ಖಾಸಗಿ ವಲಯಕ್ಕೆ ಅವಕಾಶ ನೀಡುವುದು ಸೇರಿದಂತೆ ಮುಂತಾದ ಕ್ರಮಗಳನ್ನು ಕೇಂದ್ರ ಸಚಿವೆ ಶನಿವಾರ ಪ್ರಕಟಿಸಿದ್ದರು. ಕರೋನವೈರಸ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ 20 ಲಕ್ಷ ಕೋಟಿ ರೂ.ಗಳ ಆರ್ಥಿಕ ಪ್ಯಾಕೇಜ್‌ನ ನಾಲ್ಕನೇ ಹಂತದ ವಿವರಗಳನ್ನು ಹಂಚಿಕೊಳ್ಳುವಾಗ ಅವರು ಈ ಪ್ರಕಟಣೆಗಳನ್ನು ಮಾಡಿದ್ದಾರೆ.

ಪ್ರಕಟಣೆಗಳಿಗೆ ಪ್ರತಿಕ್ರಿಯಿಸಿದ ಬಿಎಂಎಸ್, ಕಾರ್ಪೋರೇಟಿಕರಣ ಮತ್ತು ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ)ವು ಖಾಸಗೀಕರಣ ಮತ್ತು “ವಿದೇಶೀಕರಣ” ದ ಮಾರ್ಗಗಳಾಗಿವೆ ಎಂದು ಹೇಳಿದೆ.

ಬಿಕ್ಕಟ್ಟಿನ ಸಮಯದಲ್ಲಿ ಆರ್ಥಿಕ ಪುನರುಜ್ಜೀವನದ ಕುರಿತ ಆಲೋಚನೆಗಳ ಕೊರತೆಯನ್ನು ಸರ್ಕಾರ ಹೊಂದಿದೆ ಎಂದು ಇದು ತೋರಿಸುತ್ತದೆ ಎಂದು ಆರ್‌ಎಸ್‌ಎಸ್ ಬೆಂಬಲಿತ ಸಂಸ್ಥೆ ಆರೋಪಿಸಿದೆ.

ಎಂಟು ಕ್ಷೇತ್ರಗಳಲ್ಲಿನ ಕಾರ್ಪೋರೇಟಿಕರಣ ಮತ್ತು ಖಾಸಗೀಕರಣದ ಕುರಿತ ಪ್ರಕಟಣೆಗಳನ್ನು ಬಿಎಂಎಸ್ ಬಲವಾಗಿ ಆಕ್ಷೇಪಿಸುತ್ತದೆ ಎಂದು ಟ್ರೇಡ್ ಯೂನಿಯನ್ ಹೇಳಿಕೆಯಲ್ಲಿ ತಿಳಿಸಿದೆ.

ಖಾಸಗೀಕರಣ ಎಂದರೆ ಉದ್ಯೋಗಿಗಳಿಗೆ ಭಾರಿ ಉದ್ಯೋಗ ನಷ್ಟ, ಕಳಪೆ ಗುಣಮಟ್ಟದ ಉದ್ಯೋಗ, ಲಾಭ ಮತ್ತು ಶೋಷಣೆಯ ನಿಯಮವಾಗಿರುತ್ತದೆ ಎಂದು ಬಿಎಂಎಸ್ ಹೇಳಿದೆ.

ಕೊರೊನಾವೈರಸ್ ಸಾಂಕ್ರಾಮಿಕದ ಮಧ್ಯೆ ಖಾಸಗಿ ಕಂಪನಿಗಳು ಮತ್ತು ಮಾರುಕಟ್ಟೆ ಸಂಕಷ್ಟಕ್ಕೊಳಗಾದಾಗ  “ಸಾರ್ವಜನಿಕ ವಲಯವು ನಿರ್ಣಾಯಕ ಪಾತ್ರ ವಹಿಸಿದೆ” ಎಂದು ಬಿಎಂಎಸ್‌ ಪ್ರತಿಪಾದಿಸಿದೆ.

ಕಾರ್ಮಿಕ ಸಂಘಗಳು, ಸಾಮಾಜಿಕ ಪ್ರತಿನಿಧಿಗಳು ಮತ್ತು ಭಾದ್ಯಸ್ಥರೊಂದಿಗೆ ಸಮಾಲೋಚಿಸುವುದರಿಂದ ಸರ್ಕಾರ ದೂರ ಸರಿಯುತ್ತಿದೆ ಎಂದು ಅದು ಹೇಳಿದೆ.

ಆದಾಗ್ಯೂ, ಹಣಕಾಸು ಸಚಿವರು ಘೋಷಿಸಿದ ಪ್ಯಾಕೇಜಿನ ಮೊದಲ ಮೂರು ಹಂತದ ಬಗ್ಗೆ ಬಿಎಂಎಸ್ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿತ್ತು.


ಇದನ್ನೂ ಓದಿ: ಸ್ನೇಹಿತನ ತೊಡೆಮೇಲೆ ಪ್ರಾಣಬಿಟ್ಟ ಯುವಕ : ನಿಲ್ಲದ ವಲಸೆ ಕಾರ್ಮಿಕರ ಕಣ್ಣೀರ ಕಥೆಗಳು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...