Homeಕರೋನಾ ತಲ್ಲಣಕೋಲಾರದ ಆಸ್ಪತ್ರೆ ಅವ್ಯವಸ್ಥೆ ಬಗ್ಗೆ ಸರ್ಕಾರದ ನಿರ್ಲಕ್ಷ್ಯ: ರೈತ ಹೋರಾಟಗಾರರ ಆರೋಪ

ಕೋಲಾರದ ಆಸ್ಪತ್ರೆ ಅವ್ಯವಸ್ಥೆ ಬಗ್ಗೆ ಸರ್ಕಾರದ ನಿರ್ಲಕ್ಷ್ಯ: ರೈತ ಹೋರಾಟಗಾರರ ಆರೋಪ

- Advertisement -
- Advertisement -

ಆಕ್ಸಿಜನ್ ಕೊರತೆ, ವೈದ್ಯರು ಮತ್ತು ದಾದಿಯರ ಅಭಾವದಿಂದಾಗಿ ಸೋಮವಾರ 8 ಜನ ರೋಗಿಗಳು ಮೃತಪಟ್ಟ ಕೋಲಾರದ ಎಸ್‌ಎನ್‌ಆರ್ ಜಿಲ್ಲಾ ಆಸ್ಪತ್ರೆಯಲ್ಲಿನ ಕೊರತೆಗಳನ್ನು ಸರಿಪಡಿಸಲು ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಹೋರಾಟಗಾರರು ಆರೋಪಿಸಿದ್ದಾರೆ.

ಆಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್ ಸಿಗದೇ ಬಹಳಷ್ಟು ರೋಗಿಗಳು ಮನೆಗೆ ವಾಪಸ್ ಹೋಗಿ ಕ್ವಾರಂಟೈನ್ ಆಗಬೇಕಾದ ಪರಿಸ್ಥಿತಿ ಇದೆ. ಒಂದಷ್ಟು ರೋಗಿಗಳು ಬೆಡ್‌ಗಾಗಿ ದಿನವಿಡೀ ಕಾಯಬೇಕಾದ ಸ್ಥಿತಿ ಇದೆ. ಸಾಕಷ್ಟು ಸಂಖ್ಯೆಯ ವೈದ್ಯರುಗಳು ಇಲ್ಲ. ಆದರೆ ಈ ಕುರಿತು ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ್‌ರವರನ್ನು ಪ್ರಶ್ನಿಸಿದರೆ ರಾಜ್ಯದಲ್ಲಿ ಆಕ್ಸಿಜನ್ ಕೊರತೆ , ಬೆಡ್ ಕೊರತೆ ಇಲ್ಲ ಎನ್ನುತ್ತಾರೆ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 8 ಸಾವುಗಳಾದರೂ ಎಚ್ಚೆತ್ತುಕೊಳ್ಳದ ಕೋಲಾರದ ಜಿಲ್ಲಾಸ್ಪತ್ರೆ: ಅಲ್ಲೆ ದಾಖಲಾಗಿರುವ ಮಹಿಳಾ ಮುಖಂಡೆ ವಿ.ಗೀತಾ ಆಕ್ರೋಶ – ವಿಡಿಯೋ ನೋಡಿ

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಯುವ ರೈತ ಹೋರಾಟಗಾರ್ತಿ ನಳಿನಿ, “ನಿನ್ನೆ ಈ ಆಸ್ಪತ್ರೆಗೆ ಉಪಮುಖ್ಯಮಂತ್ರಿಗಳಾದ ಡಾ.ಸಿ.ಎನ್ ಅಶ್ವಥ್ ನಾರಾಯಣ್‌ರವರು ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಮತ್ತು ವೈದ್ಯರ ನಿರ್ಲಕ್ಷ್ಯದಿಂದಾಗಿ ಸಾವನಪ್ಪಿದ ರೋಗಿಗಳ ಕುಟುಂಬಕ್ಕೆ ಪರಿಹಾರ ನೀಡಬೇಕು, ಕೂಡಲೇ ಇಲ್ಲಿನ ಅವ್ಯವಸ್ಥೆಗಳನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದವು. ಆದರೆ ಯಾವುದೇ ಸಮಸ್ಯೆಯಿಲ್ಲ, ಎಲ್ಲವೂ ಸರಿಯಿದೆ ಎಂದು ಅವರು ನಿರ್ಲಕ್ಷ್ಯ ತೋರಿದ್ದಾರೆ” ಎಂದು ಆರೋಪಿಸಿದರು.

ಕಳೆದ ವರ್ಷದ ತುಮಕೂರು ರಸ್ತೆಯ ವಸ್ತು ಪ್ರದರ್ಶನ ಮೈದಾನದಲ್ಲಿ ಸ್ಥಾಪಿಸಿದ್ದ 10100 ಬೆಡ್‌ಗಳ ಕೋವಿಡ್ ಕೇರ್ ಸೆಂಟರ್ ಏನಾಯಿತು? ಅಲ್ಲಿ ರೋಗಿಗಳನ್ನು ದಾಖಲು ಮಾಡಿಕೊಂಡು ಚಿಕಿತ್ಸೆ ಮಾಡಬಹುದಲ್ಲವೇ ಎಂಬ ಪ್ರಶ್ನೆಗೆ ‘ಆ ಕೋವಿಡ್ ಕೇರ್ ಸೆಂಟರ್ ಅನ್ನು ಉಪಯೋಗಿಸುವ ಅವಶ್ಯಕತೆ ಬರಲಿಲ್ಲ. ಅವಶ್ಯಕತೆ ಬಂದರೆ ಉಪಯೋಗ ಮಾಡುತ್ತೇವೆ ಎಂದರು’ ಎಂದು ನಳಿನಿ ತಿಳಿಸಿದ್ದಾರೆ.

ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಪ್ರತಿದಿನ 200 ಬೆಡ್ ವ್ಯವಸ್ಥೆ ಮಾಡಬೇಕು, ಸಮರ್ಪಕ ಆಕ್ಸಿಜನ್ ವ್ಯವಸ್ಥೆ ಮಾಡಬೇಕು ಎಂಬ ಹಕ್ಕೊತ್ತಾಯ ಪತ್ರ ನೀಡಲಾಯಿತು ಎಂದು ಅವರು ಹೇಳಿದರು.


ಇದನ್ನೂ ಓದಿ: ಬೆಡ್‌ಗಾಗಿ ಸೋಂಕಿತರ ಪರದಾಟ: ಬೆಂಗಳೂರಿನ 10,100 ಬೆಡ್‌ಗಳ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಏನಾಯಿತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇತ್ತೀಚಿನ ಕೆಲವು ದಿನಗಳಿಂದ ನಿಮ್ಮ ನ್ಯೂಸ್ ಅನ್ನು ಫೆಸಬುಕ್ನ ನನ್ನ ಅಕೌಂಟಿಗೆ ಅಪ್ ಲೋಡ್ ಮಾಡಲು ಸಾಧ್ಯವಾಗುತ್ತಿಲ್ಲ… ವಾಟ್ಸಾಪ್ ಗೆ ಸುಲಭವಾಗಿ ಅಪ್ಲೋಡ್ ಆಗ್ತಿದೆ.. ದಯವಿಟ್ಟು ಇದರ ಹಿಂದಿನ ರಾಜಕೀಯ ಕೈವಾಡವನ್ನು ಬಯಲಿಗೆಳೆಯಬೇಕೆಂದು ನನ್ನ ಕೋರಿಕೆ.. ನಿಮ್ಮ ಈ ಗ್ರೂಪ್ ಪ್ರಾರಂಭವಾದಗಿನಿಂದ ಇಂದಿನವರೆಗೆ ಯಾವುದೇ ತೊಂದರೆ ಇರಲಿಲ್ಲ..ಆದರೆ ಇತ್ತೀಚೆಗೆ ಹೀಗೆ ಆಗುತ್ತಿದೆ.. ನೈಜ ಸಮಾಚಾರಗಳನ್ನು ಪಸರಿಸದಂತೆ ಮಾಡುವ ಹುನ್ನಾರ ಎಂದು ನನಗನ್ನಿಸುತ್ತಿದೆ..

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...