Homeಕರೋನಾ ತಲ್ಲಣಕೋಲಾರದ ಆಸ್ಪತ್ರೆ ಅವ್ಯವಸ್ಥೆ ಬಗ್ಗೆ ಸರ್ಕಾರದ ನಿರ್ಲಕ್ಷ್ಯ: ರೈತ ಹೋರಾಟಗಾರರ ಆರೋಪ

ಕೋಲಾರದ ಆಸ್ಪತ್ರೆ ಅವ್ಯವಸ್ಥೆ ಬಗ್ಗೆ ಸರ್ಕಾರದ ನಿರ್ಲಕ್ಷ್ಯ: ರೈತ ಹೋರಾಟಗಾರರ ಆರೋಪ

- Advertisement -
- Advertisement -

ಆಕ್ಸಿಜನ್ ಕೊರತೆ, ವೈದ್ಯರು ಮತ್ತು ದಾದಿಯರ ಅಭಾವದಿಂದಾಗಿ ಸೋಮವಾರ 8 ಜನ ರೋಗಿಗಳು ಮೃತಪಟ್ಟ ಕೋಲಾರದ ಎಸ್‌ಎನ್‌ಆರ್ ಜಿಲ್ಲಾ ಆಸ್ಪತ್ರೆಯಲ್ಲಿನ ಕೊರತೆಗಳನ್ನು ಸರಿಪಡಿಸಲು ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಹೋರಾಟಗಾರರು ಆರೋಪಿಸಿದ್ದಾರೆ.

ಆಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್ ಸಿಗದೇ ಬಹಳಷ್ಟು ರೋಗಿಗಳು ಮನೆಗೆ ವಾಪಸ್ ಹೋಗಿ ಕ್ವಾರಂಟೈನ್ ಆಗಬೇಕಾದ ಪರಿಸ್ಥಿತಿ ಇದೆ. ಒಂದಷ್ಟು ರೋಗಿಗಳು ಬೆಡ್‌ಗಾಗಿ ದಿನವಿಡೀ ಕಾಯಬೇಕಾದ ಸ್ಥಿತಿ ಇದೆ. ಸಾಕಷ್ಟು ಸಂಖ್ಯೆಯ ವೈದ್ಯರುಗಳು ಇಲ್ಲ. ಆದರೆ ಈ ಕುರಿತು ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ್‌ರವರನ್ನು ಪ್ರಶ್ನಿಸಿದರೆ ರಾಜ್ಯದಲ್ಲಿ ಆಕ್ಸಿಜನ್ ಕೊರತೆ , ಬೆಡ್ ಕೊರತೆ ಇಲ್ಲ ಎನ್ನುತ್ತಾರೆ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 8 ಸಾವುಗಳಾದರೂ ಎಚ್ಚೆತ್ತುಕೊಳ್ಳದ ಕೋಲಾರದ ಜಿಲ್ಲಾಸ್ಪತ್ರೆ: ಅಲ್ಲೆ ದಾಖಲಾಗಿರುವ ಮಹಿಳಾ ಮುಖಂಡೆ ವಿ.ಗೀತಾ ಆಕ್ರೋಶ – ವಿಡಿಯೋ ನೋಡಿ

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಯುವ ರೈತ ಹೋರಾಟಗಾರ್ತಿ ನಳಿನಿ, “ನಿನ್ನೆ ಈ ಆಸ್ಪತ್ರೆಗೆ ಉಪಮುಖ್ಯಮಂತ್ರಿಗಳಾದ ಡಾ.ಸಿ.ಎನ್ ಅಶ್ವಥ್ ನಾರಾಯಣ್‌ರವರು ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಮತ್ತು ವೈದ್ಯರ ನಿರ್ಲಕ್ಷ್ಯದಿಂದಾಗಿ ಸಾವನಪ್ಪಿದ ರೋಗಿಗಳ ಕುಟುಂಬಕ್ಕೆ ಪರಿಹಾರ ನೀಡಬೇಕು, ಕೂಡಲೇ ಇಲ್ಲಿನ ಅವ್ಯವಸ್ಥೆಗಳನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದವು. ಆದರೆ ಯಾವುದೇ ಸಮಸ್ಯೆಯಿಲ್ಲ, ಎಲ್ಲವೂ ಸರಿಯಿದೆ ಎಂದು ಅವರು ನಿರ್ಲಕ್ಷ್ಯ ತೋರಿದ್ದಾರೆ” ಎಂದು ಆರೋಪಿಸಿದರು.

ಕಳೆದ ವರ್ಷದ ತುಮಕೂರು ರಸ್ತೆಯ ವಸ್ತು ಪ್ರದರ್ಶನ ಮೈದಾನದಲ್ಲಿ ಸ್ಥಾಪಿಸಿದ್ದ 10100 ಬೆಡ್‌ಗಳ ಕೋವಿಡ್ ಕೇರ್ ಸೆಂಟರ್ ಏನಾಯಿತು? ಅಲ್ಲಿ ರೋಗಿಗಳನ್ನು ದಾಖಲು ಮಾಡಿಕೊಂಡು ಚಿಕಿತ್ಸೆ ಮಾಡಬಹುದಲ್ಲವೇ ಎಂಬ ಪ್ರಶ್ನೆಗೆ ‘ಆ ಕೋವಿಡ್ ಕೇರ್ ಸೆಂಟರ್ ಅನ್ನು ಉಪಯೋಗಿಸುವ ಅವಶ್ಯಕತೆ ಬರಲಿಲ್ಲ. ಅವಶ್ಯಕತೆ ಬಂದರೆ ಉಪಯೋಗ ಮಾಡುತ್ತೇವೆ ಎಂದರು’ ಎಂದು ನಳಿನಿ ತಿಳಿಸಿದ್ದಾರೆ.

ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಪ್ರತಿದಿನ 200 ಬೆಡ್ ವ್ಯವಸ್ಥೆ ಮಾಡಬೇಕು, ಸಮರ್ಪಕ ಆಕ್ಸಿಜನ್ ವ್ಯವಸ್ಥೆ ಮಾಡಬೇಕು ಎಂಬ ಹಕ್ಕೊತ್ತಾಯ ಪತ್ರ ನೀಡಲಾಯಿತು ಎಂದು ಅವರು ಹೇಳಿದರು.


ಇದನ್ನೂ ಓದಿ: ಬೆಡ್‌ಗಾಗಿ ಸೋಂಕಿತರ ಪರದಾಟ: ಬೆಂಗಳೂರಿನ 10,100 ಬೆಡ್‌ಗಳ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಏನಾಯಿತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇತ್ತೀಚಿನ ಕೆಲವು ದಿನಗಳಿಂದ ನಿಮ್ಮ ನ್ಯೂಸ್ ಅನ್ನು ಫೆಸಬುಕ್ನ ನನ್ನ ಅಕೌಂಟಿಗೆ ಅಪ್ ಲೋಡ್ ಮಾಡಲು ಸಾಧ್ಯವಾಗುತ್ತಿಲ್ಲ… ವಾಟ್ಸಾಪ್ ಗೆ ಸುಲಭವಾಗಿ ಅಪ್ಲೋಡ್ ಆಗ್ತಿದೆ.. ದಯವಿಟ್ಟು ಇದರ ಹಿಂದಿನ ರಾಜಕೀಯ ಕೈವಾಡವನ್ನು ಬಯಲಿಗೆಳೆಯಬೇಕೆಂದು ನನ್ನ ಕೋರಿಕೆ.. ನಿಮ್ಮ ಈ ಗ್ರೂಪ್ ಪ್ರಾರಂಭವಾದಗಿನಿಂದ ಇಂದಿನವರೆಗೆ ಯಾವುದೇ ತೊಂದರೆ ಇರಲಿಲ್ಲ..ಆದರೆ ಇತ್ತೀಚೆಗೆ ಹೀಗೆ ಆಗುತ್ತಿದೆ.. ನೈಜ ಸಮಾಚಾರಗಳನ್ನು ಪಸರಿಸದಂತೆ ಮಾಡುವ ಹುನ್ನಾರ ಎಂದು ನನಗನ್ನಿಸುತ್ತಿದೆ..

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...