Homeಕರೋನಾ ತಲ್ಲಣಕೋಲಾರದ ಆಸ್ಪತ್ರೆ ಅವ್ಯವಸ್ಥೆ ಬಗ್ಗೆ ಸರ್ಕಾರದ ನಿರ್ಲಕ್ಷ್ಯ: ರೈತ ಹೋರಾಟಗಾರರ ಆರೋಪ

ಕೋಲಾರದ ಆಸ್ಪತ್ರೆ ಅವ್ಯವಸ್ಥೆ ಬಗ್ಗೆ ಸರ್ಕಾರದ ನಿರ್ಲಕ್ಷ್ಯ: ರೈತ ಹೋರಾಟಗಾರರ ಆರೋಪ

- Advertisement -
- Advertisement -

ಆಕ್ಸಿಜನ್ ಕೊರತೆ, ವೈದ್ಯರು ಮತ್ತು ದಾದಿಯರ ಅಭಾವದಿಂದಾಗಿ ಸೋಮವಾರ 8 ಜನ ರೋಗಿಗಳು ಮೃತಪಟ್ಟ ಕೋಲಾರದ ಎಸ್‌ಎನ್‌ಆರ್ ಜಿಲ್ಲಾ ಆಸ್ಪತ್ರೆಯಲ್ಲಿನ ಕೊರತೆಗಳನ್ನು ಸರಿಪಡಿಸಲು ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಹೋರಾಟಗಾರರು ಆರೋಪಿಸಿದ್ದಾರೆ.

ಆಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್ ಸಿಗದೇ ಬಹಳಷ್ಟು ರೋಗಿಗಳು ಮನೆಗೆ ವಾಪಸ್ ಹೋಗಿ ಕ್ವಾರಂಟೈನ್ ಆಗಬೇಕಾದ ಪರಿಸ್ಥಿತಿ ಇದೆ. ಒಂದಷ್ಟು ರೋಗಿಗಳು ಬೆಡ್‌ಗಾಗಿ ದಿನವಿಡೀ ಕಾಯಬೇಕಾದ ಸ್ಥಿತಿ ಇದೆ. ಸಾಕಷ್ಟು ಸಂಖ್ಯೆಯ ವೈದ್ಯರುಗಳು ಇಲ್ಲ. ಆದರೆ ಈ ಕುರಿತು ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ್‌ರವರನ್ನು ಪ್ರಶ್ನಿಸಿದರೆ ರಾಜ್ಯದಲ್ಲಿ ಆಕ್ಸಿಜನ್ ಕೊರತೆ , ಬೆಡ್ ಕೊರತೆ ಇಲ್ಲ ಎನ್ನುತ್ತಾರೆ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 8 ಸಾವುಗಳಾದರೂ ಎಚ್ಚೆತ್ತುಕೊಳ್ಳದ ಕೋಲಾರದ ಜಿಲ್ಲಾಸ್ಪತ್ರೆ: ಅಲ್ಲೆ ದಾಖಲಾಗಿರುವ ಮಹಿಳಾ ಮುಖಂಡೆ ವಿ.ಗೀತಾ ಆಕ್ರೋಶ – ವಿಡಿಯೋ ನೋಡಿ

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಯುವ ರೈತ ಹೋರಾಟಗಾರ್ತಿ ನಳಿನಿ, “ನಿನ್ನೆ ಈ ಆಸ್ಪತ್ರೆಗೆ ಉಪಮುಖ್ಯಮಂತ್ರಿಗಳಾದ ಡಾ.ಸಿ.ಎನ್ ಅಶ್ವಥ್ ನಾರಾಯಣ್‌ರವರು ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಮತ್ತು ವೈದ್ಯರ ನಿರ್ಲಕ್ಷ್ಯದಿಂದಾಗಿ ಸಾವನಪ್ಪಿದ ರೋಗಿಗಳ ಕುಟುಂಬಕ್ಕೆ ಪರಿಹಾರ ನೀಡಬೇಕು, ಕೂಡಲೇ ಇಲ್ಲಿನ ಅವ್ಯವಸ್ಥೆಗಳನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದವು. ಆದರೆ ಯಾವುದೇ ಸಮಸ್ಯೆಯಿಲ್ಲ, ಎಲ್ಲವೂ ಸರಿಯಿದೆ ಎಂದು ಅವರು ನಿರ್ಲಕ್ಷ್ಯ ತೋರಿದ್ದಾರೆ” ಎಂದು ಆರೋಪಿಸಿದರು.

ಕಳೆದ ವರ್ಷದ ತುಮಕೂರು ರಸ್ತೆಯ ವಸ್ತು ಪ್ರದರ್ಶನ ಮೈದಾನದಲ್ಲಿ ಸ್ಥಾಪಿಸಿದ್ದ 10100 ಬೆಡ್‌ಗಳ ಕೋವಿಡ್ ಕೇರ್ ಸೆಂಟರ್ ಏನಾಯಿತು? ಅಲ್ಲಿ ರೋಗಿಗಳನ್ನು ದಾಖಲು ಮಾಡಿಕೊಂಡು ಚಿಕಿತ್ಸೆ ಮಾಡಬಹುದಲ್ಲವೇ ಎಂಬ ಪ್ರಶ್ನೆಗೆ ‘ಆ ಕೋವಿಡ್ ಕೇರ್ ಸೆಂಟರ್ ಅನ್ನು ಉಪಯೋಗಿಸುವ ಅವಶ್ಯಕತೆ ಬರಲಿಲ್ಲ. ಅವಶ್ಯಕತೆ ಬಂದರೆ ಉಪಯೋಗ ಮಾಡುತ್ತೇವೆ ಎಂದರು’ ಎಂದು ನಳಿನಿ ತಿಳಿಸಿದ್ದಾರೆ.

ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಪ್ರತಿದಿನ 200 ಬೆಡ್ ವ್ಯವಸ್ಥೆ ಮಾಡಬೇಕು, ಸಮರ್ಪಕ ಆಕ್ಸಿಜನ್ ವ್ಯವಸ್ಥೆ ಮಾಡಬೇಕು ಎಂಬ ಹಕ್ಕೊತ್ತಾಯ ಪತ್ರ ನೀಡಲಾಯಿತು ಎಂದು ಅವರು ಹೇಳಿದರು.


ಇದನ್ನೂ ಓದಿ: ಬೆಡ್‌ಗಾಗಿ ಸೋಂಕಿತರ ಪರದಾಟ: ಬೆಂಗಳೂರಿನ 10,100 ಬೆಡ್‌ಗಳ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಏನಾಯಿತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇತ್ತೀಚಿನ ಕೆಲವು ದಿನಗಳಿಂದ ನಿಮ್ಮ ನ್ಯೂಸ್ ಅನ್ನು ಫೆಸಬುಕ್ನ ನನ್ನ ಅಕೌಂಟಿಗೆ ಅಪ್ ಲೋಡ್ ಮಾಡಲು ಸಾಧ್ಯವಾಗುತ್ತಿಲ್ಲ… ವಾಟ್ಸಾಪ್ ಗೆ ಸುಲಭವಾಗಿ ಅಪ್ಲೋಡ್ ಆಗ್ತಿದೆ.. ದಯವಿಟ್ಟು ಇದರ ಹಿಂದಿನ ರಾಜಕೀಯ ಕೈವಾಡವನ್ನು ಬಯಲಿಗೆಳೆಯಬೇಕೆಂದು ನನ್ನ ಕೋರಿಕೆ.. ನಿಮ್ಮ ಈ ಗ್ರೂಪ್ ಪ್ರಾರಂಭವಾದಗಿನಿಂದ ಇಂದಿನವರೆಗೆ ಯಾವುದೇ ತೊಂದರೆ ಇರಲಿಲ್ಲ..ಆದರೆ ಇತ್ತೀಚೆಗೆ ಹೀಗೆ ಆಗುತ್ತಿದೆ.. ನೈಜ ಸಮಾಚಾರಗಳನ್ನು ಪಸರಿಸದಂತೆ ಮಾಡುವ ಹುನ್ನಾರ ಎಂದು ನನಗನ್ನಿಸುತ್ತಿದೆ..

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...