Homeಕರ್ನಾಟಕಅರ್ಜಿ ಸ್ವೀಕರಿಸದ ರಾಜ್ಯ ಸರ್ಕಾರ: ಕೆಲಸ ಕಳೆದುಕೊಂಡ ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಅರ್ಜಿ ಸ್ವೀಕರಿಸದ ರಾಜ್ಯ ಸರ್ಕಾರ: ಕೆಲಸ ಕಳೆದುಕೊಂಡ ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

"ಸರ್ಕಾರ ಮಾಡಬೇಕಾದ ಕೆಲಸಗಳು ಸಾಕಷ್ಟಿವೆ. ಅತಿಥಿ ಉಪನ್ಯಾಸಕರು, ಅಂಗನವಾಡಿ ಕಾರ್ಯಕರ್ತೆಯರು ಹೋರಾಟಕ್ಕೆ ಮುಂದಾಗಿದ್ದಾರೆ. ಇಂತಹ ನೈಜ ಸಮಸ್ಯೆಗಳನ್ನು ಮರೆಮಾಚಲು ಸರ್ಕಾರ ಮಕ್ಕಳಲ್ಲಿ ಕೋಮುಭಾವನೆಯನ್ನು ಕೆರಳಿಸಿ ದಿಕ್ಕು ತಪ್ಪಿಸುತ್ತಿದೆ"

- Advertisement -
- Advertisement -

ನಾಲ್ಕು ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿದರೂ ರಾಜ್ಯ ಸರ್ಕಾರ ಈ ವರ್ಷ ಪರಿಗಣಿಸದ ಕಾರಣ, ಮನನೊಂದು ಅತಿಥಿ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹಾಸನ ಜಿಲ್ಲೆ ಬೇಲೂರು ಪಟ್ಟಣ ಸಮೀಪದ ವೈಡಿಡಿ ಸರ್ಕಾರಿ ಪ್ರಥಮದರ್ಜೆ ಕಾಲೇಜು ಮತ್ತು ಸರ್ವೋದಯ ಕಾಲೇಜಿನಲ್ಲಿ 4 ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸಿದ್ದ ಚಿಕ್ಕಮಗಳೂರಿನವರಾದ ಉಮೆಯಾನಿ (30) ಸಾವಿಗೆ ಶರಣಾದವರು.

ಕೆಲ ದಿನಗಳ ಹಿಂದೆ ಸರ್ಕಾರ ಉಪನ್ಯಾಸಕರ ಆಯ್ಕೆಗಾಗಿ ಆನ್‍ಲೈನ್‍ನಲ್ಲಿ ಅರ್ಜಿ ಕರೆದಿದ್ದು, ಉಮೆಯಾನಿ ಅವರೂ ಅರ್ಜಿ ಸಲ್ಲಿಸಿದ್ದರು. ಆದರೆ ಆಯ್ಕೆಯಾಗಿರಲಿಲ್ಲ. ಇದರಿಂದ ಮನನೊಂದು ಚಿಕ್ಕಮಗಳೂರಿನ ತಮ್ಮ ತಾಯಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ‘ಪ್ರಜಾವಾಣಿ’ ವರದಿ ಮಾಡಿದೆ.

ಅತಿಥಿ ಉಪನ್ಯಾಸಕರ ದೀರ್ಘಕಾಲದ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ವರ್ಕ್ಲೋಡ್ ಹೆಚ್ಚಿಸಿ ಉಪನ್ಯಾಸಕ ಸಾವಿಗೆ ಕಾರಣವಾಗುತ್ತಿದೆ. 2021-22 ಸಾಲಿನಲ್ಲಿ 17106 ಉಪನ್ಯಾಸಕರು ಕೆಲಸ ನಿರ್ವಹಿಸುತ್ತಿದ್ದರು. ಅದರಲ್ಲಿ 7 ಸಾವಿರ ಉಪನ್ಯಾಸಕರಿಗೆ ಕೆಲಸ ಸಿಕ್ಕಿದೆ, ಉಳಿದ 10 ಸಾವಿರ ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ಕೈಬಿಡಲಾಗಿದೆ ಎಂದು ಅತಿಥಿ ಉಪನ್ಯಾಸಕರು ಆರೋಪಿಸಿದ್ದಾರೆ.

ಸರ್ಕಾರದ ಈ ತಾರತಮ್ಯ ನೀತಿಯ ಪರಿಣಾಮದಿಂದ ಮನನೊಂದು ಅನೇಕರು ಆತ್ಮಹತ್ಯೆ ಸಂದೇಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಜೊತೆಗೆ ಹೋರಾಟವನ್ನು ಮುಂದುವರೆಸಿದ್ದಾರೆ. ಆದರೂ ಸರ್ಕಾರಕ್ಕೆ ನಮ್ಮ ಸಂಕಷ್ಟ ಮುಖ್ಯವಾಗಲಿಲ್ಲ ಎಂದು ದೂರಿದ್ದಾರೆ.

ಇದನ್ನೂ ಓದಿರಿ: ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಭಗವಾಧ್ವಜ ರಾಷ್ಟ್ರಧ್ವಜ ಆಗುತ್ತದೆ; ಕೆಂಪುಕೋಟೆಯಲ್ಲಿ ಅದನ್ನು ಹಾರಿಸುತ್ತೇವೆ: ಕೆ.ಎಸ್‌. ಈಶ್ವರಪ್ಪ

ಉನ್ನತ ಶಿಕ್ಷಣ ಅಧೋಗತಿಗೆ ಹೋದರೂ ಪರವಾಗಿಲ್ಲ ನಮ್ಮಗೆ ಉದ್ಯೋಗ ಕೊಡುವುದಿಲ್ಲ ಎಂದು ನಿರ್ದಾರ ಮಾಡಿದ ಆಗಿದೆ. ಈ ಎಲ್ಲಾ ಬೆಳವಣಿಗೆಯ ಪರಿಣಾಮ ಬೇಲೂರಿನ ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೆಲಸ ನಿರ್ವಹಿಸಿದ್ದ ಅತಿಥಿ ಉಪನ್ಯಾಸಕಿ ಸಾವಿಗೀಡಾಗಿದ್ದಾರೆ. ಕುಮಾರ್ ನಾಯಕ್ ವರದಿಯ ಶಿಫಾರಸ್ಸಿನ ಆಧಾರದಲ್ಲಿ ಕೆಲಸ ಕಳೆದುಕೊಂಡ ಅತಿಥಿ ಉಪನ್ಯಾಸಕಿ ಉಮೆಯಾನಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅತಿಥಿ ಉಪನ್ಯಾಸಕರು ತಿಳಿಸಿದ್ದಾರೆ.

“ಸರ್ಕಾರ ಗಮನ ಹರಿಸಬೇಕಾದ, ಮಾಡಬೇಕಾದ ಕೆಲಸಗಳು ಸಾಕಷ್ಟಿವೆ. ಅತಿಥಿ ಉಪನ್ಯಾಸಕರು, ಅಂಗನವಾಡಿ ಕಾರ್ಯಕರ್ತೆಯರು ಹೋರಾಟಕ್ಕೆ ಮುಂದಾಗಿದ್ದಾರೆ. ಇಂತಹ ನೈಜ ಸಮಸ್ಯೆಗಳನ್ನು ಮರೆಮಾಚಲು ಸರ್ಕಾರ ಮಕ್ಕಳಲ್ಲಿ ಕೋಮುದ್ವೇಷವನ್ನು ಹುಟ್ಟಿಹಾಕುತ್ತಿದೆ. ಇತ್ತ ಮಕ್ಕಳಿಗೂ ಭವಿಷ್ಯವಿಲ್ಲ, ಅತಿಥಿ ಉಪನ್ಯಾಸಕರಿಗೂ ಭವಿಷ್ಯವಿಲ್ಲ” ಎಂದು ಹೊಸಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾಗಿರುವ ಡಾ.ಸಂದೀಪ್ ಡಿ.ಡಿ. ಅವರು ‘ನಾನುಗೌರಿ.ಕಾಂ’ಗೆ ತಿಳಿಸಿದರು.

“ಐದಾರು ವರ್ಷ ಕೆಲಸ ಮಾಡಿದ ಅನೇಕ ಅತಿಥಿ ಉಪನ್ಯಾಸಕರು ಸರಿಯಾಗಿ ಸಂಬಳ ಸಿಗದ ಕಾರಣ ಸರ್ಕಾರಿ ಕಾಲೇಜುಗಳನ್ನು ತ್ಯಜಿಸಿ ಖಾಸಗಿ ಸಂಸ್ಥೆಗಳಿಗೆ ತೆರಳಿದ್ದರು. ವೇತನ ಹೆಚ್ಚಳ ಹೊಸ ಆದೇಶ ಹೊರಬಿದ್ದ ಬಳಿಕ ಈ ಹಿಂದೆ ಸೇವೆ ಸಲ್ಲಿಸಿದವರೂ ಅರ್ಜಿ ಹಾಕಿದರು. ಹೀಗಾಗಿ ಅವರ ಸೇವೆಯನ್ನು ಸರ್ಕಾರ ಪರಿಗಣಿಸಬೇಕಾಯಿತು. ನಿರಂತರವಾಗಿ ಸರ್ಕಾರಿ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಅನೇಕ ಅತಿಥಿ ಉಪನ್ಯಾಸಕರೂ ಕೆಲಸ ಕಳೆದುಕೊಂಡಿದ್ದಾರೆ” ಎನ್ನುತ್ತಾರೆ ಡಾ.ಸಂದೀಪ್‌.

ಹೊಸ ಆದೇಶ ತಂದ ಬಿಕ್ಕಟ್ಟು

ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರ ವೇತನ ಹಚ್ಚಳದ ಆದೇಶವನ್ನು ಇತ್ತೀಚೆಗೆ ಹೊರಡಿಸಿತ್ತು. ಆದರೆ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅತಿಥಿ ಉಪನ್ಯಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೇತನ ಹೆಚ್ಚಿಸುವ ನೆಪದಲ್ಲಿ ವರ್ಕ್‌ಲೋಡ್ ಹೆಚ್ಚಿಸಿ ಅರ್ಧದಷ್ಟು ಅತಿಥಿ ಉಪನ್ಯಾಸರನ್ನು ಕೆಲಸದಿಂದ ತೆಗೆದು ಹಾಕಲಾಗುತ್ತಿದೆ ಎಂಬುದು ಅತಿಥಿ ಉಪನ್ಯಾಸಕರ ಆರೋಪ.

ಹೊಸ ಆದೇಶದ ಅಂಶಗಳು

1. ಯುಜಿಸಿ ನಿಗದಿತ ಶೈಕ್ಷಣಿಕ ಅರ್ಹತೆ ಇದ್ದು, 5 ವರ್ಷ ಮತ್ತು ಅದಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅತಿಥಿ ಉಪನ್ಯಾಸಕರು ಇನ್ನು ಮುಂದೆ ಮಾಸಿಕ 32 ಸಾವಿರ ರೂ. ಇದಕ್ಕಿಂತ ಕಡಿಮೆ ಕಾಲ ಸೇವೆ ಸಲ್ಲಿಸಿರುವವರು ಮಾಸಿಕ 30 ಸಾವಿರ ರೂ. ಗೌರವ ಧನ ಪಡೆಯಲಿದ್ದಾರೆ.

2. ಐದು ವರ್ಷಕ್ಕಿಂತ ಹೆಚ್ಚಿನ ಅವಧಿ ಸೇವೆ ಸಲ್ಲಿಸಿದ್ದರೂ ಯುಜಿಸಿ ನಿಗದಿಪಡಿಸಿದ ಅರ್ಹತೆ ಇಲ್ಲದೆ ಇರುವವರ ವೇತನವನ್ನು ರೂ. 28 ಸಾವಿರಕ್ಕೆ ಹೆಚ್ಚಿಸುವುದು. ಐದು ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ ರೂ. 26,000 ರೂಪಾಯಿ ನೀಡುವುದು. ಅತಿಥಿ ಉಪನ್ಯಾಸಕರ ಕಾರ್ಯಭಾರ ಅವಧಿ 8 ರಿಂದ 10 ಗಂಟೆ ಇದ್ದುದನ್ನು 15 ಗಂಟೆಗಳಿಗೆ ಹೆಚ್ಚಿಸುವುದು.

ಇದನ್ನೂ ಓದಿರಿ: ಹಿಜಾಬ್ ವಿವಾದ: ಬೆಂಗಳೂರಿನಲ್ಲಿ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ

3. ಅತಿಥಿ ಉಪನ್ಯಾಸಕರನ್ನು ಸೆಮಿಸ್ಟರ್‌ ಬದಲಿಗೆ ಶೈಕ್ಷಣಿಕ ವರ್ಷಕ್ಕೆ (10 ತಿಂಗಳಿಗೆ) ನೇಮಕ ಮಾಡುವುದು. ಅತಿಥಿ ಉಪನ್ಯಾಸಕರ ಗೌರವಧನವನ್ನು ಪ್ರತಿ ತಿಂಗಳು 10ನೇ ತಾರೀಖಿನ ಒಳಗೆ ಪಾವತಿ ಮಾಡುವುದು.

4. ಅತಿಥಿ ಉಪನ್ಯಾಸಕರಾಗಿ ಹೆಚ್ಚಿನ ಅವಧಿಗೆ ಸೇವೆ ಸಲ್ಲಿಸಿದವರಿಗೆ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಪ್ರಾಧಾನ್ಯತೆ ಕೊಡುವುದು. ಇದಕ್ಕೆ ಸಂಬಂಧಪಟ್ಟ ಹಾಗೆ ಪ್ರಸ್ತುತ ಇಲಾಖೆಯಲ್ಲಿ ಅನುಸರಿಸುತ್ತಿರುವ ಮಾನದಂಡಗಳನ್ವಯ ಆಯ್ಕೆ ಪಟ್ಟಿ ತಯಾರಿಸುವುದು.

5. ಅತಿಥಿ ಉಪನ್ಯಾಸಕರಿಗೆ ಸಂಬಂಧಪಟ್ಟ ಕಾಲೇಜಿನಲ್ಲಿ ಗರಿಷ್ಠ 15 ಗಂಟೆಗಳ ಕಾರ್ಯಭಾರ ಲಭ್ಯವಿಲ್ಲದಿದ್ದರೆ, ಅಂತಹ ಅತಿಥಿ ಉಪನ್ಯಾಸಕರಿಗೆ ಕಾರ್ಯಭಾರವಿರುವ ಇತರೆ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಲು ಸೂಚಿಸುವುದು. ಇದರ ಹೊರತಾಗಿಯೂ 15 ಗಂಟೆಗಳಿಗಿಂತ ಕಡಿಮೆ ಕಾರ್ಯಭಾರವಿದ್ದಲ್ಲಿ ಎಷ್ಟು ಗಂಟೆಗಳ ಕಾರ್ಯಭಾರ ಉಪಲಬ್ದವಿದೆಯೋ ಅದಕ್ಕೆ ಅನುಗುಣವಾಗಿ ಗೌರವಧನ ನೀಡುವುದು. ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದ ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ಸಂಪೂರ್ಣ ನಿರ್ಬಂಧಿಸುವುದು.

ಸಂಬಳ ಹೆಚ್ಚಳವನ್ನು ಮಾಡಲಾಗುತ್ತಿದೆ ಎಂಬುದನ್ನು ಬಿಟ್ಟರೆ, ಕೆಲಸ ಹೆಚ್ಚುಸುವುದು ಹಾಗೂ ಅರ್ಧಕ್ಕೆ ಅತಿಥಿ ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ವಜಾ ಮಾಡುವುದು ಸರ್ಕಾರ ಉದ್ದೇಶವಾಗಿದೆ ಎಂಬುದು ಇಲ್ಲಿ ಸ್ಪಷ್ಟವಾಗುತ್ತದೆ ಎಂದು ಅತಿಥಿ ಉಪನ್ಯಾಸಕರು ಆದೇಶ ಹೊರಬಿದ್ದ ದಿನದಿಂದಲೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ರಾಜ್ಯ ಸರ್ಕಾರದ ಈ ಆದೇಶ ಅಳಿಯ ಅಲ್ಲ, ಮಗಳ ಗಂಡ ಎಂಬಂತಿದೆ. ಹೊಸ ಆದೇಶದಿಂದಾಗಿ ಅರ್ಧಕ್ಕರ್ಧ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಇಲ್ಲದಂತಾಗುತ್ತದೆ. ಸರ್ಕಾರದ ಆದೇಶವನ್ನು ನಾವು ಸ್ವೀಕರಿಸುವುದಿಲ್ಲ, ನಮ್ಮ ಹೋರಾಟವು ಮುಂದುವರೆಯುತ್ತದೆ” ಎಂದು ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷರಾದ ಹನುಮಂತಪ್ಪ ಕಲ್ಮನಿ ಆರೋಪಿಸಿದ್ದರು.

“ಈ ಹಿಂದೆ ವಾರಕ್ಕೆ ಎಂಟು ಗಂಟೆಗಳ ವರ್ಕ್‌ ಕೊಡುತ್ತಿದ್ದರು ಮತ್ತು ಈ ಕೆಲಸಕ್ಕೆ ಯುಜಿಸಿ ಅರ್ಹತೆ ಇದ್ದವರಿಗೆ 13 ಸಾವಿರ ರೂ. ಯುಜಿಸಿ ಅರ್ಹತೆ ಇಲ್ಲದವರಿಗೆ 11 ಸಾವಿರ ವೇತನ ನೀಡುತ್ತಿದ್ದರು. ಆದರೆ ಸರ್ಕಾರದ ಇಂದಿನ ಆದೇಶದಲ್ಲಿ ಒಬ್ಬರಿಗೆ 15 ಗಂಟೆಗಳ ವರ್ಕ್‌ ಕೊಡುವುದಾಗಿ ಹೇಳಿದ್ದಾರೆ. ಇದರಿಂದಾಗಿ ವರ್ಕ್‌ಲೋಡ್‌ ಕಡಿಮೆಯಾಗಿ, ಸುಮಾರು 7,500 ಕ್ಕೂ ಹೆಚ್ಚು ಉಪನ್ಯಾಸಕರಿಗೆ ಕೆಲಸ ಇಲ್ಲದೆ ಆಗುತ್ತದೆ. ನಿರುದ್ಯೋಗ ಪ್ರಮಾಣವೂ ಹೆಚ್ಚಾಗುತ್ತದೆ” ಎಂದು ಅತಿಥಿ ಉಪನ್ಯಾಸಕರು ಆದೇಶವನ್ನು ವಿರೋಧಿಸುತ್ತಾ ಬಂದಿದ್ದಾರೆ.


ಇದನ್ನೂ ಓದಿರಿ: ಮಡಿಕೇರಿ: ಕೇಸರಿ ಶಾಲು ಧರಿಸಲು ಬಜರಂಗದಳ ನಾಯಕರಿಂದ ಪ್ರಚೋದನೆ; ವಿಡಿಯೊ ವೈರಲ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...