Homeಕರ್ನಾಟಕಅರ್ಜಿ ಸ್ವೀಕರಿಸದ ರಾಜ್ಯ ಸರ್ಕಾರ: ಕೆಲಸ ಕಳೆದುಕೊಂಡ ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಅರ್ಜಿ ಸ್ವೀಕರಿಸದ ರಾಜ್ಯ ಸರ್ಕಾರ: ಕೆಲಸ ಕಳೆದುಕೊಂಡ ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

"ಸರ್ಕಾರ ಮಾಡಬೇಕಾದ ಕೆಲಸಗಳು ಸಾಕಷ್ಟಿವೆ. ಅತಿಥಿ ಉಪನ್ಯಾಸಕರು, ಅಂಗನವಾಡಿ ಕಾರ್ಯಕರ್ತೆಯರು ಹೋರಾಟಕ್ಕೆ ಮುಂದಾಗಿದ್ದಾರೆ. ಇಂತಹ ನೈಜ ಸಮಸ್ಯೆಗಳನ್ನು ಮರೆಮಾಚಲು ಸರ್ಕಾರ ಮಕ್ಕಳಲ್ಲಿ ಕೋಮುಭಾವನೆಯನ್ನು ಕೆರಳಿಸಿ ದಿಕ್ಕು ತಪ್ಪಿಸುತ್ತಿದೆ"

- Advertisement -
- Advertisement -

ನಾಲ್ಕು ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿದರೂ ರಾಜ್ಯ ಸರ್ಕಾರ ಈ ವರ್ಷ ಪರಿಗಣಿಸದ ಕಾರಣ, ಮನನೊಂದು ಅತಿಥಿ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹಾಸನ ಜಿಲ್ಲೆ ಬೇಲೂರು ಪಟ್ಟಣ ಸಮೀಪದ ವೈಡಿಡಿ ಸರ್ಕಾರಿ ಪ್ರಥಮದರ್ಜೆ ಕಾಲೇಜು ಮತ್ತು ಸರ್ವೋದಯ ಕಾಲೇಜಿನಲ್ಲಿ 4 ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸಿದ್ದ ಚಿಕ್ಕಮಗಳೂರಿನವರಾದ ಉಮೆಯಾನಿ (30) ಸಾವಿಗೆ ಶರಣಾದವರು.

ಕೆಲ ದಿನಗಳ ಹಿಂದೆ ಸರ್ಕಾರ ಉಪನ್ಯಾಸಕರ ಆಯ್ಕೆಗಾಗಿ ಆನ್‍ಲೈನ್‍ನಲ್ಲಿ ಅರ್ಜಿ ಕರೆದಿದ್ದು, ಉಮೆಯಾನಿ ಅವರೂ ಅರ್ಜಿ ಸಲ್ಲಿಸಿದ್ದರು. ಆದರೆ ಆಯ್ಕೆಯಾಗಿರಲಿಲ್ಲ. ಇದರಿಂದ ಮನನೊಂದು ಚಿಕ್ಕಮಗಳೂರಿನ ತಮ್ಮ ತಾಯಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ‘ಪ್ರಜಾವಾಣಿ’ ವರದಿ ಮಾಡಿದೆ.

ಅತಿಥಿ ಉಪನ್ಯಾಸಕರ ದೀರ್ಘಕಾಲದ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ವರ್ಕ್ಲೋಡ್ ಹೆಚ್ಚಿಸಿ ಉಪನ್ಯಾಸಕ ಸಾವಿಗೆ ಕಾರಣವಾಗುತ್ತಿದೆ. 2021-22 ಸಾಲಿನಲ್ಲಿ 17106 ಉಪನ್ಯಾಸಕರು ಕೆಲಸ ನಿರ್ವಹಿಸುತ್ತಿದ್ದರು. ಅದರಲ್ಲಿ 7 ಸಾವಿರ ಉಪನ್ಯಾಸಕರಿಗೆ ಕೆಲಸ ಸಿಕ್ಕಿದೆ, ಉಳಿದ 10 ಸಾವಿರ ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ಕೈಬಿಡಲಾಗಿದೆ ಎಂದು ಅತಿಥಿ ಉಪನ್ಯಾಸಕರು ಆರೋಪಿಸಿದ್ದಾರೆ.

ಸರ್ಕಾರದ ಈ ತಾರತಮ್ಯ ನೀತಿಯ ಪರಿಣಾಮದಿಂದ ಮನನೊಂದು ಅನೇಕರು ಆತ್ಮಹತ್ಯೆ ಸಂದೇಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಜೊತೆಗೆ ಹೋರಾಟವನ್ನು ಮುಂದುವರೆಸಿದ್ದಾರೆ. ಆದರೂ ಸರ್ಕಾರಕ್ಕೆ ನಮ್ಮ ಸಂಕಷ್ಟ ಮುಖ್ಯವಾಗಲಿಲ್ಲ ಎಂದು ದೂರಿದ್ದಾರೆ.

ಇದನ್ನೂ ಓದಿರಿ: ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಭಗವಾಧ್ವಜ ರಾಷ್ಟ್ರಧ್ವಜ ಆಗುತ್ತದೆ; ಕೆಂಪುಕೋಟೆಯಲ್ಲಿ ಅದನ್ನು ಹಾರಿಸುತ್ತೇವೆ: ಕೆ.ಎಸ್‌. ಈಶ್ವರಪ್ಪ

ಉನ್ನತ ಶಿಕ್ಷಣ ಅಧೋಗತಿಗೆ ಹೋದರೂ ಪರವಾಗಿಲ್ಲ ನಮ್ಮಗೆ ಉದ್ಯೋಗ ಕೊಡುವುದಿಲ್ಲ ಎಂದು ನಿರ್ದಾರ ಮಾಡಿದ ಆಗಿದೆ. ಈ ಎಲ್ಲಾ ಬೆಳವಣಿಗೆಯ ಪರಿಣಾಮ ಬೇಲೂರಿನ ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೆಲಸ ನಿರ್ವಹಿಸಿದ್ದ ಅತಿಥಿ ಉಪನ್ಯಾಸಕಿ ಸಾವಿಗೀಡಾಗಿದ್ದಾರೆ. ಕುಮಾರ್ ನಾಯಕ್ ವರದಿಯ ಶಿಫಾರಸ್ಸಿನ ಆಧಾರದಲ್ಲಿ ಕೆಲಸ ಕಳೆದುಕೊಂಡ ಅತಿಥಿ ಉಪನ್ಯಾಸಕಿ ಉಮೆಯಾನಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅತಿಥಿ ಉಪನ್ಯಾಸಕರು ತಿಳಿಸಿದ್ದಾರೆ.

“ಸರ್ಕಾರ ಗಮನ ಹರಿಸಬೇಕಾದ, ಮಾಡಬೇಕಾದ ಕೆಲಸಗಳು ಸಾಕಷ್ಟಿವೆ. ಅತಿಥಿ ಉಪನ್ಯಾಸಕರು, ಅಂಗನವಾಡಿ ಕಾರ್ಯಕರ್ತೆಯರು ಹೋರಾಟಕ್ಕೆ ಮುಂದಾಗಿದ್ದಾರೆ. ಇಂತಹ ನೈಜ ಸಮಸ್ಯೆಗಳನ್ನು ಮರೆಮಾಚಲು ಸರ್ಕಾರ ಮಕ್ಕಳಲ್ಲಿ ಕೋಮುದ್ವೇಷವನ್ನು ಹುಟ್ಟಿಹಾಕುತ್ತಿದೆ. ಇತ್ತ ಮಕ್ಕಳಿಗೂ ಭವಿಷ್ಯವಿಲ್ಲ, ಅತಿಥಿ ಉಪನ್ಯಾಸಕರಿಗೂ ಭವಿಷ್ಯವಿಲ್ಲ” ಎಂದು ಹೊಸಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾಗಿರುವ ಡಾ.ಸಂದೀಪ್ ಡಿ.ಡಿ. ಅವರು ‘ನಾನುಗೌರಿ.ಕಾಂ’ಗೆ ತಿಳಿಸಿದರು.

“ಐದಾರು ವರ್ಷ ಕೆಲಸ ಮಾಡಿದ ಅನೇಕ ಅತಿಥಿ ಉಪನ್ಯಾಸಕರು ಸರಿಯಾಗಿ ಸಂಬಳ ಸಿಗದ ಕಾರಣ ಸರ್ಕಾರಿ ಕಾಲೇಜುಗಳನ್ನು ತ್ಯಜಿಸಿ ಖಾಸಗಿ ಸಂಸ್ಥೆಗಳಿಗೆ ತೆರಳಿದ್ದರು. ವೇತನ ಹೆಚ್ಚಳ ಹೊಸ ಆದೇಶ ಹೊರಬಿದ್ದ ಬಳಿಕ ಈ ಹಿಂದೆ ಸೇವೆ ಸಲ್ಲಿಸಿದವರೂ ಅರ್ಜಿ ಹಾಕಿದರು. ಹೀಗಾಗಿ ಅವರ ಸೇವೆಯನ್ನು ಸರ್ಕಾರ ಪರಿಗಣಿಸಬೇಕಾಯಿತು. ನಿರಂತರವಾಗಿ ಸರ್ಕಾರಿ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಅನೇಕ ಅತಿಥಿ ಉಪನ್ಯಾಸಕರೂ ಕೆಲಸ ಕಳೆದುಕೊಂಡಿದ್ದಾರೆ” ಎನ್ನುತ್ತಾರೆ ಡಾ.ಸಂದೀಪ್‌.

ಹೊಸ ಆದೇಶ ತಂದ ಬಿಕ್ಕಟ್ಟು

ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರ ವೇತನ ಹಚ್ಚಳದ ಆದೇಶವನ್ನು ಇತ್ತೀಚೆಗೆ ಹೊರಡಿಸಿತ್ತು. ಆದರೆ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅತಿಥಿ ಉಪನ್ಯಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೇತನ ಹೆಚ್ಚಿಸುವ ನೆಪದಲ್ಲಿ ವರ್ಕ್‌ಲೋಡ್ ಹೆಚ್ಚಿಸಿ ಅರ್ಧದಷ್ಟು ಅತಿಥಿ ಉಪನ್ಯಾಸರನ್ನು ಕೆಲಸದಿಂದ ತೆಗೆದು ಹಾಕಲಾಗುತ್ತಿದೆ ಎಂಬುದು ಅತಿಥಿ ಉಪನ್ಯಾಸಕರ ಆರೋಪ.

ಹೊಸ ಆದೇಶದ ಅಂಶಗಳು

1. ಯುಜಿಸಿ ನಿಗದಿತ ಶೈಕ್ಷಣಿಕ ಅರ್ಹತೆ ಇದ್ದು, 5 ವರ್ಷ ಮತ್ತು ಅದಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅತಿಥಿ ಉಪನ್ಯಾಸಕರು ಇನ್ನು ಮುಂದೆ ಮಾಸಿಕ 32 ಸಾವಿರ ರೂ. ಇದಕ್ಕಿಂತ ಕಡಿಮೆ ಕಾಲ ಸೇವೆ ಸಲ್ಲಿಸಿರುವವರು ಮಾಸಿಕ 30 ಸಾವಿರ ರೂ. ಗೌರವ ಧನ ಪಡೆಯಲಿದ್ದಾರೆ.

2. ಐದು ವರ್ಷಕ್ಕಿಂತ ಹೆಚ್ಚಿನ ಅವಧಿ ಸೇವೆ ಸಲ್ಲಿಸಿದ್ದರೂ ಯುಜಿಸಿ ನಿಗದಿಪಡಿಸಿದ ಅರ್ಹತೆ ಇಲ್ಲದೆ ಇರುವವರ ವೇತನವನ್ನು ರೂ. 28 ಸಾವಿರಕ್ಕೆ ಹೆಚ್ಚಿಸುವುದು. ಐದು ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ ರೂ. 26,000 ರೂಪಾಯಿ ನೀಡುವುದು. ಅತಿಥಿ ಉಪನ್ಯಾಸಕರ ಕಾರ್ಯಭಾರ ಅವಧಿ 8 ರಿಂದ 10 ಗಂಟೆ ಇದ್ದುದನ್ನು 15 ಗಂಟೆಗಳಿಗೆ ಹೆಚ್ಚಿಸುವುದು.

ಇದನ್ನೂ ಓದಿರಿ: ಹಿಜಾಬ್ ವಿವಾದ: ಬೆಂಗಳೂರಿನಲ್ಲಿ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ

3. ಅತಿಥಿ ಉಪನ್ಯಾಸಕರನ್ನು ಸೆಮಿಸ್ಟರ್‌ ಬದಲಿಗೆ ಶೈಕ್ಷಣಿಕ ವರ್ಷಕ್ಕೆ (10 ತಿಂಗಳಿಗೆ) ನೇಮಕ ಮಾಡುವುದು. ಅತಿಥಿ ಉಪನ್ಯಾಸಕರ ಗೌರವಧನವನ್ನು ಪ್ರತಿ ತಿಂಗಳು 10ನೇ ತಾರೀಖಿನ ಒಳಗೆ ಪಾವತಿ ಮಾಡುವುದು.

4. ಅತಿಥಿ ಉಪನ್ಯಾಸಕರಾಗಿ ಹೆಚ್ಚಿನ ಅವಧಿಗೆ ಸೇವೆ ಸಲ್ಲಿಸಿದವರಿಗೆ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಪ್ರಾಧಾನ್ಯತೆ ಕೊಡುವುದು. ಇದಕ್ಕೆ ಸಂಬಂಧಪಟ್ಟ ಹಾಗೆ ಪ್ರಸ್ತುತ ಇಲಾಖೆಯಲ್ಲಿ ಅನುಸರಿಸುತ್ತಿರುವ ಮಾನದಂಡಗಳನ್ವಯ ಆಯ್ಕೆ ಪಟ್ಟಿ ತಯಾರಿಸುವುದು.

5. ಅತಿಥಿ ಉಪನ್ಯಾಸಕರಿಗೆ ಸಂಬಂಧಪಟ್ಟ ಕಾಲೇಜಿನಲ್ಲಿ ಗರಿಷ್ಠ 15 ಗಂಟೆಗಳ ಕಾರ್ಯಭಾರ ಲಭ್ಯವಿಲ್ಲದಿದ್ದರೆ, ಅಂತಹ ಅತಿಥಿ ಉಪನ್ಯಾಸಕರಿಗೆ ಕಾರ್ಯಭಾರವಿರುವ ಇತರೆ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಲು ಸೂಚಿಸುವುದು. ಇದರ ಹೊರತಾಗಿಯೂ 15 ಗಂಟೆಗಳಿಗಿಂತ ಕಡಿಮೆ ಕಾರ್ಯಭಾರವಿದ್ದಲ್ಲಿ ಎಷ್ಟು ಗಂಟೆಗಳ ಕಾರ್ಯಭಾರ ಉಪಲಬ್ದವಿದೆಯೋ ಅದಕ್ಕೆ ಅನುಗುಣವಾಗಿ ಗೌರವಧನ ನೀಡುವುದು. ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದ ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ಸಂಪೂರ್ಣ ನಿರ್ಬಂಧಿಸುವುದು.

ಸಂಬಳ ಹೆಚ್ಚಳವನ್ನು ಮಾಡಲಾಗುತ್ತಿದೆ ಎಂಬುದನ್ನು ಬಿಟ್ಟರೆ, ಕೆಲಸ ಹೆಚ್ಚುಸುವುದು ಹಾಗೂ ಅರ್ಧಕ್ಕೆ ಅತಿಥಿ ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ವಜಾ ಮಾಡುವುದು ಸರ್ಕಾರ ಉದ್ದೇಶವಾಗಿದೆ ಎಂಬುದು ಇಲ್ಲಿ ಸ್ಪಷ್ಟವಾಗುತ್ತದೆ ಎಂದು ಅತಿಥಿ ಉಪನ್ಯಾಸಕರು ಆದೇಶ ಹೊರಬಿದ್ದ ದಿನದಿಂದಲೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ರಾಜ್ಯ ಸರ್ಕಾರದ ಈ ಆದೇಶ ಅಳಿಯ ಅಲ್ಲ, ಮಗಳ ಗಂಡ ಎಂಬಂತಿದೆ. ಹೊಸ ಆದೇಶದಿಂದಾಗಿ ಅರ್ಧಕ್ಕರ್ಧ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಇಲ್ಲದಂತಾಗುತ್ತದೆ. ಸರ್ಕಾರದ ಆದೇಶವನ್ನು ನಾವು ಸ್ವೀಕರಿಸುವುದಿಲ್ಲ, ನಮ್ಮ ಹೋರಾಟವು ಮುಂದುವರೆಯುತ್ತದೆ” ಎಂದು ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷರಾದ ಹನುಮಂತಪ್ಪ ಕಲ್ಮನಿ ಆರೋಪಿಸಿದ್ದರು.

“ಈ ಹಿಂದೆ ವಾರಕ್ಕೆ ಎಂಟು ಗಂಟೆಗಳ ವರ್ಕ್‌ ಕೊಡುತ್ತಿದ್ದರು ಮತ್ತು ಈ ಕೆಲಸಕ್ಕೆ ಯುಜಿಸಿ ಅರ್ಹತೆ ಇದ್ದವರಿಗೆ 13 ಸಾವಿರ ರೂ. ಯುಜಿಸಿ ಅರ್ಹತೆ ಇಲ್ಲದವರಿಗೆ 11 ಸಾವಿರ ವೇತನ ನೀಡುತ್ತಿದ್ದರು. ಆದರೆ ಸರ್ಕಾರದ ಇಂದಿನ ಆದೇಶದಲ್ಲಿ ಒಬ್ಬರಿಗೆ 15 ಗಂಟೆಗಳ ವರ್ಕ್‌ ಕೊಡುವುದಾಗಿ ಹೇಳಿದ್ದಾರೆ. ಇದರಿಂದಾಗಿ ವರ್ಕ್‌ಲೋಡ್‌ ಕಡಿಮೆಯಾಗಿ, ಸುಮಾರು 7,500 ಕ್ಕೂ ಹೆಚ್ಚು ಉಪನ್ಯಾಸಕರಿಗೆ ಕೆಲಸ ಇಲ್ಲದೆ ಆಗುತ್ತದೆ. ನಿರುದ್ಯೋಗ ಪ್ರಮಾಣವೂ ಹೆಚ್ಚಾಗುತ್ತದೆ” ಎಂದು ಅತಿಥಿ ಉಪನ್ಯಾಸಕರು ಆದೇಶವನ್ನು ವಿರೋಧಿಸುತ್ತಾ ಬಂದಿದ್ದಾರೆ.


ಇದನ್ನೂ ಓದಿರಿ: ಮಡಿಕೇರಿ: ಕೇಸರಿ ಶಾಲು ಧರಿಸಲು ಬಜರಂಗದಳ ನಾಯಕರಿಂದ ಪ್ರಚೋದನೆ; ವಿಡಿಯೊ ವೈರಲ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...