Homeಕರ್ನಾಟಕಅರ್ಜಿ ಸ್ವೀಕರಿಸದ ರಾಜ್ಯ ಸರ್ಕಾರ: ಕೆಲಸ ಕಳೆದುಕೊಂಡ ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಅರ್ಜಿ ಸ್ವೀಕರಿಸದ ರಾಜ್ಯ ಸರ್ಕಾರ: ಕೆಲಸ ಕಳೆದುಕೊಂಡ ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

"ಸರ್ಕಾರ ಮಾಡಬೇಕಾದ ಕೆಲಸಗಳು ಸಾಕಷ್ಟಿವೆ. ಅತಿಥಿ ಉಪನ್ಯಾಸಕರು, ಅಂಗನವಾಡಿ ಕಾರ್ಯಕರ್ತೆಯರು ಹೋರಾಟಕ್ಕೆ ಮುಂದಾಗಿದ್ದಾರೆ. ಇಂತಹ ನೈಜ ಸಮಸ್ಯೆಗಳನ್ನು ಮರೆಮಾಚಲು ಸರ್ಕಾರ ಮಕ್ಕಳಲ್ಲಿ ಕೋಮುಭಾವನೆಯನ್ನು ಕೆರಳಿಸಿ ದಿಕ್ಕು ತಪ್ಪಿಸುತ್ತಿದೆ"

- Advertisement -
- Advertisement -

ನಾಲ್ಕು ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿದರೂ ರಾಜ್ಯ ಸರ್ಕಾರ ಈ ವರ್ಷ ಪರಿಗಣಿಸದ ಕಾರಣ, ಮನನೊಂದು ಅತಿಥಿ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹಾಸನ ಜಿಲ್ಲೆ ಬೇಲೂರು ಪಟ್ಟಣ ಸಮೀಪದ ವೈಡಿಡಿ ಸರ್ಕಾರಿ ಪ್ರಥಮದರ್ಜೆ ಕಾಲೇಜು ಮತ್ತು ಸರ್ವೋದಯ ಕಾಲೇಜಿನಲ್ಲಿ 4 ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸಿದ್ದ ಚಿಕ್ಕಮಗಳೂರಿನವರಾದ ಉಮೆಯಾನಿ (30) ಸಾವಿಗೆ ಶರಣಾದವರು.

ಕೆಲ ದಿನಗಳ ಹಿಂದೆ ಸರ್ಕಾರ ಉಪನ್ಯಾಸಕರ ಆಯ್ಕೆಗಾಗಿ ಆನ್‍ಲೈನ್‍ನಲ್ಲಿ ಅರ್ಜಿ ಕರೆದಿದ್ದು, ಉಮೆಯಾನಿ ಅವರೂ ಅರ್ಜಿ ಸಲ್ಲಿಸಿದ್ದರು. ಆದರೆ ಆಯ್ಕೆಯಾಗಿರಲಿಲ್ಲ. ಇದರಿಂದ ಮನನೊಂದು ಚಿಕ್ಕಮಗಳೂರಿನ ತಮ್ಮ ತಾಯಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ‘ಪ್ರಜಾವಾಣಿ’ ವರದಿ ಮಾಡಿದೆ.

ಅತಿಥಿ ಉಪನ್ಯಾಸಕರ ದೀರ್ಘಕಾಲದ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ವರ್ಕ್ಲೋಡ್ ಹೆಚ್ಚಿಸಿ ಉಪನ್ಯಾಸಕ ಸಾವಿಗೆ ಕಾರಣವಾಗುತ್ತಿದೆ. 2021-22 ಸಾಲಿನಲ್ಲಿ 17106 ಉಪನ್ಯಾಸಕರು ಕೆಲಸ ನಿರ್ವಹಿಸುತ್ತಿದ್ದರು. ಅದರಲ್ಲಿ 7 ಸಾವಿರ ಉಪನ್ಯಾಸಕರಿಗೆ ಕೆಲಸ ಸಿಕ್ಕಿದೆ, ಉಳಿದ 10 ಸಾವಿರ ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ಕೈಬಿಡಲಾಗಿದೆ ಎಂದು ಅತಿಥಿ ಉಪನ್ಯಾಸಕರು ಆರೋಪಿಸಿದ್ದಾರೆ.

ಸರ್ಕಾರದ ಈ ತಾರತಮ್ಯ ನೀತಿಯ ಪರಿಣಾಮದಿಂದ ಮನನೊಂದು ಅನೇಕರು ಆತ್ಮಹತ್ಯೆ ಸಂದೇಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಜೊತೆಗೆ ಹೋರಾಟವನ್ನು ಮುಂದುವರೆಸಿದ್ದಾರೆ. ಆದರೂ ಸರ್ಕಾರಕ್ಕೆ ನಮ್ಮ ಸಂಕಷ್ಟ ಮುಖ್ಯವಾಗಲಿಲ್ಲ ಎಂದು ದೂರಿದ್ದಾರೆ.

ಇದನ್ನೂ ಓದಿರಿ: ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಭಗವಾಧ್ವಜ ರಾಷ್ಟ್ರಧ್ವಜ ಆಗುತ್ತದೆ; ಕೆಂಪುಕೋಟೆಯಲ್ಲಿ ಅದನ್ನು ಹಾರಿಸುತ್ತೇವೆ: ಕೆ.ಎಸ್‌. ಈಶ್ವರಪ್ಪ

ಉನ್ನತ ಶಿಕ್ಷಣ ಅಧೋಗತಿಗೆ ಹೋದರೂ ಪರವಾಗಿಲ್ಲ ನಮ್ಮಗೆ ಉದ್ಯೋಗ ಕೊಡುವುದಿಲ್ಲ ಎಂದು ನಿರ್ದಾರ ಮಾಡಿದ ಆಗಿದೆ. ಈ ಎಲ್ಲಾ ಬೆಳವಣಿಗೆಯ ಪರಿಣಾಮ ಬೇಲೂರಿನ ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೆಲಸ ನಿರ್ವಹಿಸಿದ್ದ ಅತಿಥಿ ಉಪನ್ಯಾಸಕಿ ಸಾವಿಗೀಡಾಗಿದ್ದಾರೆ. ಕುಮಾರ್ ನಾಯಕ್ ವರದಿಯ ಶಿಫಾರಸ್ಸಿನ ಆಧಾರದಲ್ಲಿ ಕೆಲಸ ಕಳೆದುಕೊಂಡ ಅತಿಥಿ ಉಪನ್ಯಾಸಕಿ ಉಮೆಯಾನಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅತಿಥಿ ಉಪನ್ಯಾಸಕರು ತಿಳಿಸಿದ್ದಾರೆ.

“ಸರ್ಕಾರ ಗಮನ ಹರಿಸಬೇಕಾದ, ಮಾಡಬೇಕಾದ ಕೆಲಸಗಳು ಸಾಕಷ್ಟಿವೆ. ಅತಿಥಿ ಉಪನ್ಯಾಸಕರು, ಅಂಗನವಾಡಿ ಕಾರ್ಯಕರ್ತೆಯರು ಹೋರಾಟಕ್ಕೆ ಮುಂದಾಗಿದ್ದಾರೆ. ಇಂತಹ ನೈಜ ಸಮಸ್ಯೆಗಳನ್ನು ಮರೆಮಾಚಲು ಸರ್ಕಾರ ಮಕ್ಕಳಲ್ಲಿ ಕೋಮುದ್ವೇಷವನ್ನು ಹುಟ್ಟಿಹಾಕುತ್ತಿದೆ. ಇತ್ತ ಮಕ್ಕಳಿಗೂ ಭವಿಷ್ಯವಿಲ್ಲ, ಅತಿಥಿ ಉಪನ್ಯಾಸಕರಿಗೂ ಭವಿಷ್ಯವಿಲ್ಲ” ಎಂದು ಹೊಸಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾಗಿರುವ ಡಾ.ಸಂದೀಪ್ ಡಿ.ಡಿ. ಅವರು ‘ನಾನುಗೌರಿ.ಕಾಂ’ಗೆ ತಿಳಿಸಿದರು.

“ಐದಾರು ವರ್ಷ ಕೆಲಸ ಮಾಡಿದ ಅನೇಕ ಅತಿಥಿ ಉಪನ್ಯಾಸಕರು ಸರಿಯಾಗಿ ಸಂಬಳ ಸಿಗದ ಕಾರಣ ಸರ್ಕಾರಿ ಕಾಲೇಜುಗಳನ್ನು ತ್ಯಜಿಸಿ ಖಾಸಗಿ ಸಂಸ್ಥೆಗಳಿಗೆ ತೆರಳಿದ್ದರು. ವೇತನ ಹೆಚ್ಚಳ ಹೊಸ ಆದೇಶ ಹೊರಬಿದ್ದ ಬಳಿಕ ಈ ಹಿಂದೆ ಸೇವೆ ಸಲ್ಲಿಸಿದವರೂ ಅರ್ಜಿ ಹಾಕಿದರು. ಹೀಗಾಗಿ ಅವರ ಸೇವೆಯನ್ನು ಸರ್ಕಾರ ಪರಿಗಣಿಸಬೇಕಾಯಿತು. ನಿರಂತರವಾಗಿ ಸರ್ಕಾರಿ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಅನೇಕ ಅತಿಥಿ ಉಪನ್ಯಾಸಕರೂ ಕೆಲಸ ಕಳೆದುಕೊಂಡಿದ್ದಾರೆ” ಎನ್ನುತ್ತಾರೆ ಡಾ.ಸಂದೀಪ್‌.

ಹೊಸ ಆದೇಶ ತಂದ ಬಿಕ್ಕಟ್ಟು

ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರ ವೇತನ ಹಚ್ಚಳದ ಆದೇಶವನ್ನು ಇತ್ತೀಚೆಗೆ ಹೊರಡಿಸಿತ್ತು. ಆದರೆ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅತಿಥಿ ಉಪನ್ಯಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೇತನ ಹೆಚ್ಚಿಸುವ ನೆಪದಲ್ಲಿ ವರ್ಕ್‌ಲೋಡ್ ಹೆಚ್ಚಿಸಿ ಅರ್ಧದಷ್ಟು ಅತಿಥಿ ಉಪನ್ಯಾಸರನ್ನು ಕೆಲಸದಿಂದ ತೆಗೆದು ಹಾಕಲಾಗುತ್ತಿದೆ ಎಂಬುದು ಅತಿಥಿ ಉಪನ್ಯಾಸಕರ ಆರೋಪ.

ಹೊಸ ಆದೇಶದ ಅಂಶಗಳು

1. ಯುಜಿಸಿ ನಿಗದಿತ ಶೈಕ್ಷಣಿಕ ಅರ್ಹತೆ ಇದ್ದು, 5 ವರ್ಷ ಮತ್ತು ಅದಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅತಿಥಿ ಉಪನ್ಯಾಸಕರು ಇನ್ನು ಮುಂದೆ ಮಾಸಿಕ 32 ಸಾವಿರ ರೂ. ಇದಕ್ಕಿಂತ ಕಡಿಮೆ ಕಾಲ ಸೇವೆ ಸಲ್ಲಿಸಿರುವವರು ಮಾಸಿಕ 30 ಸಾವಿರ ರೂ. ಗೌರವ ಧನ ಪಡೆಯಲಿದ್ದಾರೆ.

2. ಐದು ವರ್ಷಕ್ಕಿಂತ ಹೆಚ್ಚಿನ ಅವಧಿ ಸೇವೆ ಸಲ್ಲಿಸಿದ್ದರೂ ಯುಜಿಸಿ ನಿಗದಿಪಡಿಸಿದ ಅರ್ಹತೆ ಇಲ್ಲದೆ ಇರುವವರ ವೇತನವನ್ನು ರೂ. 28 ಸಾವಿರಕ್ಕೆ ಹೆಚ್ಚಿಸುವುದು. ಐದು ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ ರೂ. 26,000 ರೂಪಾಯಿ ನೀಡುವುದು. ಅತಿಥಿ ಉಪನ್ಯಾಸಕರ ಕಾರ್ಯಭಾರ ಅವಧಿ 8 ರಿಂದ 10 ಗಂಟೆ ಇದ್ದುದನ್ನು 15 ಗಂಟೆಗಳಿಗೆ ಹೆಚ್ಚಿಸುವುದು.

ಇದನ್ನೂ ಓದಿರಿ: ಹಿಜಾಬ್ ವಿವಾದ: ಬೆಂಗಳೂರಿನಲ್ಲಿ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ

3. ಅತಿಥಿ ಉಪನ್ಯಾಸಕರನ್ನು ಸೆಮಿಸ್ಟರ್‌ ಬದಲಿಗೆ ಶೈಕ್ಷಣಿಕ ವರ್ಷಕ್ಕೆ (10 ತಿಂಗಳಿಗೆ) ನೇಮಕ ಮಾಡುವುದು. ಅತಿಥಿ ಉಪನ್ಯಾಸಕರ ಗೌರವಧನವನ್ನು ಪ್ರತಿ ತಿಂಗಳು 10ನೇ ತಾರೀಖಿನ ಒಳಗೆ ಪಾವತಿ ಮಾಡುವುದು.

4. ಅತಿಥಿ ಉಪನ್ಯಾಸಕರಾಗಿ ಹೆಚ್ಚಿನ ಅವಧಿಗೆ ಸೇವೆ ಸಲ್ಲಿಸಿದವರಿಗೆ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಪ್ರಾಧಾನ್ಯತೆ ಕೊಡುವುದು. ಇದಕ್ಕೆ ಸಂಬಂಧಪಟ್ಟ ಹಾಗೆ ಪ್ರಸ್ತುತ ಇಲಾಖೆಯಲ್ಲಿ ಅನುಸರಿಸುತ್ತಿರುವ ಮಾನದಂಡಗಳನ್ವಯ ಆಯ್ಕೆ ಪಟ್ಟಿ ತಯಾರಿಸುವುದು.

5. ಅತಿಥಿ ಉಪನ್ಯಾಸಕರಿಗೆ ಸಂಬಂಧಪಟ್ಟ ಕಾಲೇಜಿನಲ್ಲಿ ಗರಿಷ್ಠ 15 ಗಂಟೆಗಳ ಕಾರ್ಯಭಾರ ಲಭ್ಯವಿಲ್ಲದಿದ್ದರೆ, ಅಂತಹ ಅತಿಥಿ ಉಪನ್ಯಾಸಕರಿಗೆ ಕಾರ್ಯಭಾರವಿರುವ ಇತರೆ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಲು ಸೂಚಿಸುವುದು. ಇದರ ಹೊರತಾಗಿಯೂ 15 ಗಂಟೆಗಳಿಗಿಂತ ಕಡಿಮೆ ಕಾರ್ಯಭಾರವಿದ್ದಲ್ಲಿ ಎಷ್ಟು ಗಂಟೆಗಳ ಕಾರ್ಯಭಾರ ಉಪಲಬ್ದವಿದೆಯೋ ಅದಕ್ಕೆ ಅನುಗುಣವಾಗಿ ಗೌರವಧನ ನೀಡುವುದು. ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದ ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ಸಂಪೂರ್ಣ ನಿರ್ಬಂಧಿಸುವುದು.

ಸಂಬಳ ಹೆಚ್ಚಳವನ್ನು ಮಾಡಲಾಗುತ್ತಿದೆ ಎಂಬುದನ್ನು ಬಿಟ್ಟರೆ, ಕೆಲಸ ಹೆಚ್ಚುಸುವುದು ಹಾಗೂ ಅರ್ಧಕ್ಕೆ ಅತಿಥಿ ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ವಜಾ ಮಾಡುವುದು ಸರ್ಕಾರ ಉದ್ದೇಶವಾಗಿದೆ ಎಂಬುದು ಇಲ್ಲಿ ಸ್ಪಷ್ಟವಾಗುತ್ತದೆ ಎಂದು ಅತಿಥಿ ಉಪನ್ಯಾಸಕರು ಆದೇಶ ಹೊರಬಿದ್ದ ದಿನದಿಂದಲೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ರಾಜ್ಯ ಸರ್ಕಾರದ ಈ ಆದೇಶ ಅಳಿಯ ಅಲ್ಲ, ಮಗಳ ಗಂಡ ಎಂಬಂತಿದೆ. ಹೊಸ ಆದೇಶದಿಂದಾಗಿ ಅರ್ಧಕ್ಕರ್ಧ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಇಲ್ಲದಂತಾಗುತ್ತದೆ. ಸರ್ಕಾರದ ಆದೇಶವನ್ನು ನಾವು ಸ್ವೀಕರಿಸುವುದಿಲ್ಲ, ನಮ್ಮ ಹೋರಾಟವು ಮುಂದುವರೆಯುತ್ತದೆ” ಎಂದು ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷರಾದ ಹನುಮಂತಪ್ಪ ಕಲ್ಮನಿ ಆರೋಪಿಸಿದ್ದರು.

“ಈ ಹಿಂದೆ ವಾರಕ್ಕೆ ಎಂಟು ಗಂಟೆಗಳ ವರ್ಕ್‌ ಕೊಡುತ್ತಿದ್ದರು ಮತ್ತು ಈ ಕೆಲಸಕ್ಕೆ ಯುಜಿಸಿ ಅರ್ಹತೆ ಇದ್ದವರಿಗೆ 13 ಸಾವಿರ ರೂ. ಯುಜಿಸಿ ಅರ್ಹತೆ ಇಲ್ಲದವರಿಗೆ 11 ಸಾವಿರ ವೇತನ ನೀಡುತ್ತಿದ್ದರು. ಆದರೆ ಸರ್ಕಾರದ ಇಂದಿನ ಆದೇಶದಲ್ಲಿ ಒಬ್ಬರಿಗೆ 15 ಗಂಟೆಗಳ ವರ್ಕ್‌ ಕೊಡುವುದಾಗಿ ಹೇಳಿದ್ದಾರೆ. ಇದರಿಂದಾಗಿ ವರ್ಕ್‌ಲೋಡ್‌ ಕಡಿಮೆಯಾಗಿ, ಸುಮಾರು 7,500 ಕ್ಕೂ ಹೆಚ್ಚು ಉಪನ್ಯಾಸಕರಿಗೆ ಕೆಲಸ ಇಲ್ಲದೆ ಆಗುತ್ತದೆ. ನಿರುದ್ಯೋಗ ಪ್ರಮಾಣವೂ ಹೆಚ್ಚಾಗುತ್ತದೆ” ಎಂದು ಅತಿಥಿ ಉಪನ್ಯಾಸಕರು ಆದೇಶವನ್ನು ವಿರೋಧಿಸುತ್ತಾ ಬಂದಿದ್ದಾರೆ.


ಇದನ್ನೂ ಓದಿರಿ: ಮಡಿಕೇರಿ: ಕೇಸರಿ ಶಾಲು ಧರಿಸಲು ಬಜರಂಗದಳ ನಾಯಕರಿಂದ ಪ್ರಚೋದನೆ; ವಿಡಿಯೊ ವೈರಲ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...