Homeಕರ್ನಾಟಕಅರ್ಜಿ ಸ್ವೀಕರಿಸದ ರಾಜ್ಯ ಸರ್ಕಾರ: ಕೆಲಸ ಕಳೆದುಕೊಂಡ ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಅರ್ಜಿ ಸ್ವೀಕರಿಸದ ರಾಜ್ಯ ಸರ್ಕಾರ: ಕೆಲಸ ಕಳೆದುಕೊಂಡ ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

"ಸರ್ಕಾರ ಮಾಡಬೇಕಾದ ಕೆಲಸಗಳು ಸಾಕಷ್ಟಿವೆ. ಅತಿಥಿ ಉಪನ್ಯಾಸಕರು, ಅಂಗನವಾಡಿ ಕಾರ್ಯಕರ್ತೆಯರು ಹೋರಾಟಕ್ಕೆ ಮುಂದಾಗಿದ್ದಾರೆ. ಇಂತಹ ನೈಜ ಸಮಸ್ಯೆಗಳನ್ನು ಮರೆಮಾಚಲು ಸರ್ಕಾರ ಮಕ್ಕಳಲ್ಲಿ ಕೋಮುಭಾವನೆಯನ್ನು ಕೆರಳಿಸಿ ದಿಕ್ಕು ತಪ್ಪಿಸುತ್ತಿದೆ"

- Advertisement -
- Advertisement -

ನಾಲ್ಕು ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿದರೂ ರಾಜ್ಯ ಸರ್ಕಾರ ಈ ವರ್ಷ ಪರಿಗಣಿಸದ ಕಾರಣ, ಮನನೊಂದು ಅತಿಥಿ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹಾಸನ ಜಿಲ್ಲೆ ಬೇಲೂರು ಪಟ್ಟಣ ಸಮೀಪದ ವೈಡಿಡಿ ಸರ್ಕಾರಿ ಪ್ರಥಮದರ್ಜೆ ಕಾಲೇಜು ಮತ್ತು ಸರ್ವೋದಯ ಕಾಲೇಜಿನಲ್ಲಿ 4 ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸಿದ್ದ ಚಿಕ್ಕಮಗಳೂರಿನವರಾದ ಉಮೆಯಾನಿ (30) ಸಾವಿಗೆ ಶರಣಾದವರು.

ಕೆಲ ದಿನಗಳ ಹಿಂದೆ ಸರ್ಕಾರ ಉಪನ್ಯಾಸಕರ ಆಯ್ಕೆಗಾಗಿ ಆನ್‍ಲೈನ್‍ನಲ್ಲಿ ಅರ್ಜಿ ಕರೆದಿದ್ದು, ಉಮೆಯಾನಿ ಅವರೂ ಅರ್ಜಿ ಸಲ್ಲಿಸಿದ್ದರು. ಆದರೆ ಆಯ್ಕೆಯಾಗಿರಲಿಲ್ಲ. ಇದರಿಂದ ಮನನೊಂದು ಚಿಕ್ಕಮಗಳೂರಿನ ತಮ್ಮ ತಾಯಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ‘ಪ್ರಜಾವಾಣಿ’ ವರದಿ ಮಾಡಿದೆ.

ಅತಿಥಿ ಉಪನ್ಯಾಸಕರ ದೀರ್ಘಕಾಲದ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ವರ್ಕ್ಲೋಡ್ ಹೆಚ್ಚಿಸಿ ಉಪನ್ಯಾಸಕ ಸಾವಿಗೆ ಕಾರಣವಾಗುತ್ತಿದೆ. 2021-22 ಸಾಲಿನಲ್ಲಿ 17106 ಉಪನ್ಯಾಸಕರು ಕೆಲಸ ನಿರ್ವಹಿಸುತ್ತಿದ್ದರು. ಅದರಲ್ಲಿ 7 ಸಾವಿರ ಉಪನ್ಯಾಸಕರಿಗೆ ಕೆಲಸ ಸಿಕ್ಕಿದೆ, ಉಳಿದ 10 ಸಾವಿರ ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ಕೈಬಿಡಲಾಗಿದೆ ಎಂದು ಅತಿಥಿ ಉಪನ್ಯಾಸಕರು ಆರೋಪಿಸಿದ್ದಾರೆ.

ಸರ್ಕಾರದ ಈ ತಾರತಮ್ಯ ನೀತಿಯ ಪರಿಣಾಮದಿಂದ ಮನನೊಂದು ಅನೇಕರು ಆತ್ಮಹತ್ಯೆ ಸಂದೇಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಜೊತೆಗೆ ಹೋರಾಟವನ್ನು ಮುಂದುವರೆಸಿದ್ದಾರೆ. ಆದರೂ ಸರ್ಕಾರಕ್ಕೆ ನಮ್ಮ ಸಂಕಷ್ಟ ಮುಖ್ಯವಾಗಲಿಲ್ಲ ಎಂದು ದೂರಿದ್ದಾರೆ.

ಇದನ್ನೂ ಓದಿರಿ: ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಭಗವಾಧ್ವಜ ರಾಷ್ಟ್ರಧ್ವಜ ಆಗುತ್ತದೆ; ಕೆಂಪುಕೋಟೆಯಲ್ಲಿ ಅದನ್ನು ಹಾರಿಸುತ್ತೇವೆ: ಕೆ.ಎಸ್‌. ಈಶ್ವರಪ್ಪ

ಉನ್ನತ ಶಿಕ್ಷಣ ಅಧೋಗತಿಗೆ ಹೋದರೂ ಪರವಾಗಿಲ್ಲ ನಮ್ಮಗೆ ಉದ್ಯೋಗ ಕೊಡುವುದಿಲ್ಲ ಎಂದು ನಿರ್ದಾರ ಮಾಡಿದ ಆಗಿದೆ. ಈ ಎಲ್ಲಾ ಬೆಳವಣಿಗೆಯ ಪರಿಣಾಮ ಬೇಲೂರಿನ ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೆಲಸ ನಿರ್ವಹಿಸಿದ್ದ ಅತಿಥಿ ಉಪನ್ಯಾಸಕಿ ಸಾವಿಗೀಡಾಗಿದ್ದಾರೆ. ಕುಮಾರ್ ನಾಯಕ್ ವರದಿಯ ಶಿಫಾರಸ್ಸಿನ ಆಧಾರದಲ್ಲಿ ಕೆಲಸ ಕಳೆದುಕೊಂಡ ಅತಿಥಿ ಉಪನ್ಯಾಸಕಿ ಉಮೆಯಾನಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅತಿಥಿ ಉಪನ್ಯಾಸಕರು ತಿಳಿಸಿದ್ದಾರೆ.

“ಸರ್ಕಾರ ಗಮನ ಹರಿಸಬೇಕಾದ, ಮಾಡಬೇಕಾದ ಕೆಲಸಗಳು ಸಾಕಷ್ಟಿವೆ. ಅತಿಥಿ ಉಪನ್ಯಾಸಕರು, ಅಂಗನವಾಡಿ ಕಾರ್ಯಕರ್ತೆಯರು ಹೋರಾಟಕ್ಕೆ ಮುಂದಾಗಿದ್ದಾರೆ. ಇಂತಹ ನೈಜ ಸಮಸ್ಯೆಗಳನ್ನು ಮರೆಮಾಚಲು ಸರ್ಕಾರ ಮಕ್ಕಳಲ್ಲಿ ಕೋಮುದ್ವೇಷವನ್ನು ಹುಟ್ಟಿಹಾಕುತ್ತಿದೆ. ಇತ್ತ ಮಕ್ಕಳಿಗೂ ಭವಿಷ್ಯವಿಲ್ಲ, ಅತಿಥಿ ಉಪನ್ಯಾಸಕರಿಗೂ ಭವಿಷ್ಯವಿಲ್ಲ” ಎಂದು ಹೊಸಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾಗಿರುವ ಡಾ.ಸಂದೀಪ್ ಡಿ.ಡಿ. ಅವರು ‘ನಾನುಗೌರಿ.ಕಾಂ’ಗೆ ತಿಳಿಸಿದರು.

“ಐದಾರು ವರ್ಷ ಕೆಲಸ ಮಾಡಿದ ಅನೇಕ ಅತಿಥಿ ಉಪನ್ಯಾಸಕರು ಸರಿಯಾಗಿ ಸಂಬಳ ಸಿಗದ ಕಾರಣ ಸರ್ಕಾರಿ ಕಾಲೇಜುಗಳನ್ನು ತ್ಯಜಿಸಿ ಖಾಸಗಿ ಸಂಸ್ಥೆಗಳಿಗೆ ತೆರಳಿದ್ದರು. ವೇತನ ಹೆಚ್ಚಳ ಹೊಸ ಆದೇಶ ಹೊರಬಿದ್ದ ಬಳಿಕ ಈ ಹಿಂದೆ ಸೇವೆ ಸಲ್ಲಿಸಿದವರೂ ಅರ್ಜಿ ಹಾಕಿದರು. ಹೀಗಾಗಿ ಅವರ ಸೇವೆಯನ್ನು ಸರ್ಕಾರ ಪರಿಗಣಿಸಬೇಕಾಯಿತು. ನಿರಂತರವಾಗಿ ಸರ್ಕಾರಿ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಅನೇಕ ಅತಿಥಿ ಉಪನ್ಯಾಸಕರೂ ಕೆಲಸ ಕಳೆದುಕೊಂಡಿದ್ದಾರೆ” ಎನ್ನುತ್ತಾರೆ ಡಾ.ಸಂದೀಪ್‌.

ಹೊಸ ಆದೇಶ ತಂದ ಬಿಕ್ಕಟ್ಟು

ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರ ವೇತನ ಹಚ್ಚಳದ ಆದೇಶವನ್ನು ಇತ್ತೀಚೆಗೆ ಹೊರಡಿಸಿತ್ತು. ಆದರೆ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅತಿಥಿ ಉಪನ್ಯಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೇತನ ಹೆಚ್ಚಿಸುವ ನೆಪದಲ್ಲಿ ವರ್ಕ್‌ಲೋಡ್ ಹೆಚ್ಚಿಸಿ ಅರ್ಧದಷ್ಟು ಅತಿಥಿ ಉಪನ್ಯಾಸರನ್ನು ಕೆಲಸದಿಂದ ತೆಗೆದು ಹಾಕಲಾಗುತ್ತಿದೆ ಎಂಬುದು ಅತಿಥಿ ಉಪನ್ಯಾಸಕರ ಆರೋಪ.

ಹೊಸ ಆದೇಶದ ಅಂಶಗಳು

1. ಯುಜಿಸಿ ನಿಗದಿತ ಶೈಕ್ಷಣಿಕ ಅರ್ಹತೆ ಇದ್ದು, 5 ವರ್ಷ ಮತ್ತು ಅದಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅತಿಥಿ ಉಪನ್ಯಾಸಕರು ಇನ್ನು ಮುಂದೆ ಮಾಸಿಕ 32 ಸಾವಿರ ರೂ. ಇದಕ್ಕಿಂತ ಕಡಿಮೆ ಕಾಲ ಸೇವೆ ಸಲ್ಲಿಸಿರುವವರು ಮಾಸಿಕ 30 ಸಾವಿರ ರೂ. ಗೌರವ ಧನ ಪಡೆಯಲಿದ್ದಾರೆ.

2. ಐದು ವರ್ಷಕ್ಕಿಂತ ಹೆಚ್ಚಿನ ಅವಧಿ ಸೇವೆ ಸಲ್ಲಿಸಿದ್ದರೂ ಯುಜಿಸಿ ನಿಗದಿಪಡಿಸಿದ ಅರ್ಹತೆ ಇಲ್ಲದೆ ಇರುವವರ ವೇತನವನ್ನು ರೂ. 28 ಸಾವಿರಕ್ಕೆ ಹೆಚ್ಚಿಸುವುದು. ಐದು ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ ರೂ. 26,000 ರೂಪಾಯಿ ನೀಡುವುದು. ಅತಿಥಿ ಉಪನ್ಯಾಸಕರ ಕಾರ್ಯಭಾರ ಅವಧಿ 8 ರಿಂದ 10 ಗಂಟೆ ಇದ್ದುದನ್ನು 15 ಗಂಟೆಗಳಿಗೆ ಹೆಚ್ಚಿಸುವುದು.

ಇದನ್ನೂ ಓದಿರಿ: ಹಿಜಾಬ್ ವಿವಾದ: ಬೆಂಗಳೂರಿನಲ್ಲಿ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ

3. ಅತಿಥಿ ಉಪನ್ಯಾಸಕರನ್ನು ಸೆಮಿಸ್ಟರ್‌ ಬದಲಿಗೆ ಶೈಕ್ಷಣಿಕ ವರ್ಷಕ್ಕೆ (10 ತಿಂಗಳಿಗೆ) ನೇಮಕ ಮಾಡುವುದು. ಅತಿಥಿ ಉಪನ್ಯಾಸಕರ ಗೌರವಧನವನ್ನು ಪ್ರತಿ ತಿಂಗಳು 10ನೇ ತಾರೀಖಿನ ಒಳಗೆ ಪಾವತಿ ಮಾಡುವುದು.

4. ಅತಿಥಿ ಉಪನ್ಯಾಸಕರಾಗಿ ಹೆಚ್ಚಿನ ಅವಧಿಗೆ ಸೇವೆ ಸಲ್ಲಿಸಿದವರಿಗೆ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಪ್ರಾಧಾನ್ಯತೆ ಕೊಡುವುದು. ಇದಕ್ಕೆ ಸಂಬಂಧಪಟ್ಟ ಹಾಗೆ ಪ್ರಸ್ತುತ ಇಲಾಖೆಯಲ್ಲಿ ಅನುಸರಿಸುತ್ತಿರುವ ಮಾನದಂಡಗಳನ್ವಯ ಆಯ್ಕೆ ಪಟ್ಟಿ ತಯಾರಿಸುವುದು.

5. ಅತಿಥಿ ಉಪನ್ಯಾಸಕರಿಗೆ ಸಂಬಂಧಪಟ್ಟ ಕಾಲೇಜಿನಲ್ಲಿ ಗರಿಷ್ಠ 15 ಗಂಟೆಗಳ ಕಾರ್ಯಭಾರ ಲಭ್ಯವಿಲ್ಲದಿದ್ದರೆ, ಅಂತಹ ಅತಿಥಿ ಉಪನ್ಯಾಸಕರಿಗೆ ಕಾರ್ಯಭಾರವಿರುವ ಇತರೆ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಲು ಸೂಚಿಸುವುದು. ಇದರ ಹೊರತಾಗಿಯೂ 15 ಗಂಟೆಗಳಿಗಿಂತ ಕಡಿಮೆ ಕಾರ್ಯಭಾರವಿದ್ದಲ್ಲಿ ಎಷ್ಟು ಗಂಟೆಗಳ ಕಾರ್ಯಭಾರ ಉಪಲಬ್ದವಿದೆಯೋ ಅದಕ್ಕೆ ಅನುಗುಣವಾಗಿ ಗೌರವಧನ ನೀಡುವುದು. ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದ ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ಸಂಪೂರ್ಣ ನಿರ್ಬಂಧಿಸುವುದು.

ಸಂಬಳ ಹೆಚ್ಚಳವನ್ನು ಮಾಡಲಾಗುತ್ತಿದೆ ಎಂಬುದನ್ನು ಬಿಟ್ಟರೆ, ಕೆಲಸ ಹೆಚ್ಚುಸುವುದು ಹಾಗೂ ಅರ್ಧಕ್ಕೆ ಅತಿಥಿ ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ವಜಾ ಮಾಡುವುದು ಸರ್ಕಾರ ಉದ್ದೇಶವಾಗಿದೆ ಎಂಬುದು ಇಲ್ಲಿ ಸ್ಪಷ್ಟವಾಗುತ್ತದೆ ಎಂದು ಅತಿಥಿ ಉಪನ್ಯಾಸಕರು ಆದೇಶ ಹೊರಬಿದ್ದ ದಿನದಿಂದಲೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ರಾಜ್ಯ ಸರ್ಕಾರದ ಈ ಆದೇಶ ಅಳಿಯ ಅಲ್ಲ, ಮಗಳ ಗಂಡ ಎಂಬಂತಿದೆ. ಹೊಸ ಆದೇಶದಿಂದಾಗಿ ಅರ್ಧಕ್ಕರ್ಧ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಇಲ್ಲದಂತಾಗುತ್ತದೆ. ಸರ್ಕಾರದ ಆದೇಶವನ್ನು ನಾವು ಸ್ವೀಕರಿಸುವುದಿಲ್ಲ, ನಮ್ಮ ಹೋರಾಟವು ಮುಂದುವರೆಯುತ್ತದೆ” ಎಂದು ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷರಾದ ಹನುಮಂತಪ್ಪ ಕಲ್ಮನಿ ಆರೋಪಿಸಿದ್ದರು.

“ಈ ಹಿಂದೆ ವಾರಕ್ಕೆ ಎಂಟು ಗಂಟೆಗಳ ವರ್ಕ್‌ ಕೊಡುತ್ತಿದ್ದರು ಮತ್ತು ಈ ಕೆಲಸಕ್ಕೆ ಯುಜಿಸಿ ಅರ್ಹತೆ ಇದ್ದವರಿಗೆ 13 ಸಾವಿರ ರೂ. ಯುಜಿಸಿ ಅರ್ಹತೆ ಇಲ್ಲದವರಿಗೆ 11 ಸಾವಿರ ವೇತನ ನೀಡುತ್ತಿದ್ದರು. ಆದರೆ ಸರ್ಕಾರದ ಇಂದಿನ ಆದೇಶದಲ್ಲಿ ಒಬ್ಬರಿಗೆ 15 ಗಂಟೆಗಳ ವರ್ಕ್‌ ಕೊಡುವುದಾಗಿ ಹೇಳಿದ್ದಾರೆ. ಇದರಿಂದಾಗಿ ವರ್ಕ್‌ಲೋಡ್‌ ಕಡಿಮೆಯಾಗಿ, ಸುಮಾರು 7,500 ಕ್ಕೂ ಹೆಚ್ಚು ಉಪನ್ಯಾಸಕರಿಗೆ ಕೆಲಸ ಇಲ್ಲದೆ ಆಗುತ್ತದೆ. ನಿರುದ್ಯೋಗ ಪ್ರಮಾಣವೂ ಹೆಚ್ಚಾಗುತ್ತದೆ” ಎಂದು ಅತಿಥಿ ಉಪನ್ಯಾಸಕರು ಆದೇಶವನ್ನು ವಿರೋಧಿಸುತ್ತಾ ಬಂದಿದ್ದಾರೆ.


ಇದನ್ನೂ ಓದಿರಿ: ಮಡಿಕೇರಿ: ಕೇಸರಿ ಶಾಲು ಧರಿಸಲು ಬಜರಂಗದಳ ನಾಯಕರಿಂದ ಪ್ರಚೋದನೆ; ವಿಡಿಯೊ ವೈರಲ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....