Homeಮುಖಪುಟಬೆಲೆ ಏರಿಕೆ ಚರ್ಚೆಗೆ ಅನುಮತಿಸದ ಸರ್ಕಾರ: 5ನೇ ದಿನವೂ ಸಂಸತ್ ಅಧಿವೇಶನ ಮುಂದೂಡಿಕೆ

ಬೆಲೆ ಏರಿಕೆ ಚರ್ಚೆಗೆ ಅನುಮತಿಸದ ಸರ್ಕಾರ: 5ನೇ ದಿನವೂ ಸಂಸತ್ ಅಧಿವೇಶನ ಮುಂದೂಡಿಕೆ

- Advertisement -
- Advertisement -

ದೈನಂದಿನ ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿ ಜಾರಿ, ಬೆಲೆ ಏರಿಕೆ, ಕೇಂದ್ರೀಯ ಸಂಸ್ಥೆಗಳ ದುರುಪಯೋಗದ ಬಗ್ಗೆ ಕೇಂದ್ರದ ಮೇಲೆ ಪ್ರತಿಪಕ್ಷಗಳು ವಾಗ್ದಾಳಿ ನಡೆಸಿದ್ದರಿಂದ ಲೋಕಸಭೆಯ ಕಲಾಪವನ್ನು ಇಂದು ಎರಡು ಭಾರಿ ಮುಂದೂಡಲಾಗಿದೆ. ಮೊದಲು ಮಧ್ಯಾಹ್ನದವರೆಗೆ ಮತ್ತು ನಂತರ 2 ಗಂಟೆಯವರೆಗೆ ಕಲಾಪವನ್ನು ಮುಂದೂಡಲಾಯಿತು. ರಾಜ್ಯಸಭೆ ಕಲಾಪ 12 ಗಂಟೆಗೆ ಪುನರಾರಂಭವಾಯಿತು.

ಪ್ರಮುಖ ವಿಷಯಗಳ ಚರ್ಚೆಗಳಿಗೆ ಸರ್ಕಾರ ಬೆನ್ನು ತೋರಿಸಿ ಓಡಿ ಹೋಗುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದು, ಇದು ಮೋದಿ ಸರ್ಕಾರದ “ಹಠಮಾರಿತನ”ವನ್ನು ತೋರಿಸುತ್ತದೆ ಎಂದಿವೆ. ಮುಂಗಾರು ಅಧಿವೇಶನ ಆರಂಭವಾದಾಗಿನಿಂದ ಲೋಕಸಭೆ ಮತ್ತು ರಾಜ್ಯಸಭೆಗಳೆರಡೂ ನಿರಂತರ ಮುಂದೂಡಿಕೆ ಮಾಡಲಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಸ್ತುತ ಅಧಿವೇಶನದ ಸತತ ಐದನೇ ದಿನವಾದ ಇಂದು ಉಭಯ ಸದನಗಳು ಯಾವುದೇ ಚರ್ಚೆ ಇಲ್ಲ ಇಲ್ಲದೆ ಮುಂದೂಡಲ್ಪಟ್ಟಿವೆ.

ಪ್ರತಿಪಕ್ಷಗಳು ನಿರಂತರವಾಗಿ ವಾಗ್ದಾಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಂಸತ್ತಿನಲ್ಲಿ ಸರ್ಕಾರದ ಕಾರ್ಯತಂತ್ರದ ಕುರಿತು ಚರ್ಚಿಸಲು ಪ್ರಧಾನಿ ಮೋದಿ ಅವರು ರಾಜನಾಥ್ ಸಿಂಗ್, ಅಮಿತ್ ಶಾ ಸೇರಿದಂತೆ ಉನ್ನತ ಮಂತ್ರಿಗಳೊಂದಿಗೆ ಸಭೆ ನಡೆಸಿದರು.

ನಿರುದ್ಯೋಗ ಮತ್ತು ಇತರ ಸಮಸ್ಯೆಗಳು ಚರ್ಚೆಗೆ ಬಂದಾಗ ಕನಿಷ್ಠ ಏಳು ಭಾರಿ ಮುಂದೂಡಿಕೆ ಸೂಚನೆಗಳನ್ನು ಉಭಯ ಸದನಗಳಲ್ಲಿ ನೀಡಲಾಗಿದೆ.

ಪ್ರತಿಪಕ್ಷಗಳು ತಮ್ಮ ನಿಲುವು ಸಡಿಲಿಸಲು ನಿರಾಕರಿಸಿವೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡ ನಂತರ ಬೆಲೆ ಏರಿಕೆ ಕುರಿತು ಸಂಸತ್ತಿನಲ್ಲಿ ಚರ್ಚೆಗೆ ಸಿದ್ಧ ಎಂದು ಸರ್ಕಾರ ಬುಧವಾರ ಹೇಳಿದೆ.

“ಕಾಂಗ್ರೆಸ್ ಪ್ರಜಾಪ್ರಭುತ್ವದ ಬಗ್ಗೆ ವಿನಾಶಕಾರಿ ಧೋರಣೆ ಹೊಂದಿದೆ. ಸದನ ಕಾರ್ಯನಿರ್ವಹಿಸಲು ಅನುಮತಿಸದೆ ತೊಂದರೆ ನೀಡುತ್ತಿದೆ. ಜೈರಾಮ್ ರಮೇಶ್ ಅವರ ಟ್ವೀಟ್‌ ಮೂಲಕ ಕಾಂಗ್ರೆಸ್ ಯಶಸ್ವಿಯಾಗಿರುವುದು ಬಹಿರಂಗವಾಗಿದೆ” ಎಂದು ರಾಜ್ಯಸಭೆಯ ಸಭಾನಾಯಕರಾಗಿರುವ ಪಿಯೂಷ್ ಗೋಯಲ್ ಸಂಸತ್ತಿನ ಹೊರಗೆ ಸುದ್ದಿಗಾರರಿಗೆ ತಿಳಿಸಿದರು.

“ಮೋದಿ ಸರ್ಕಾರದ ಹಠಮಾರಿತನದಿಂದ ಸಂಸತ್ತಿನಲ್ಲಿ ಚರ್ಚೆಗಳು ನಡೆಯುತ್ತಿಲ್ಲ” ಎಂದು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಬುಧವಾರ ಹೇಳಿದ್ದರು.

“ಇಂದು ಬೆಳಗ್ಗೆ ರಾಜ್ಯಸಭೆಯಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಪಕ್ಷಗಳು ಬೆಲೆ ಏರಿಕೆ ಮತ್ತು ಆಹಾರ ಪದಾರ್ಥಗಳ ಮೇಲಿನ ಅರ್ಥಹೀನ ಜಿಎಸ್‌ಟಿ ದರಗಳ ಕುರಿತು ತುರ್ತು ಚರ್ಚೆಗೆ ಒತ್ತಾಯಿಸಿದವು. ಇದನ್ನು ನಿರಾಕರಿಸಲಾಯಿತು. ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. ಮೋದಿ ಸರ್ಕಾರ ತನ್ನ ಹಠಮಾರಿತನ ಮುಂದುವರಿಸಿದೆ. ಸಂಸತ್ತಿನಲ್ಲಿ ಚರ್ಚೆಗಳು ನಡೆಯುತ್ತಿಲ್ಲ” ಎಂದು ಜೈರಾಮ್‌ ರಮೇಶ್ ಹೇಳಿದ್ದಾರೆ.

ಇದನ್ನೂ ಓದಿರಿ: ಪ್ರಧಾನಿ ಮೋದಿ ಉದ್ಘಾಟನೆ ಮಾಡಿದ ಕೆಲವೆ ದಿನಗಳಲ್ಲಿ ಕುಸಿದ 15,000 ಕೋಟಿ ವೆಚ್ಚದ ಎಕ್ಸ್‌ಪ್ರೆಸ್ ವೇ!

ರಾಷ್ಟ್ರಪತಿ ಹಾಗೂ ಉಪರಾಷ್ಟ್ರಪತಿ ಆಯ್ಕೆಯ ಹಿನ್ನೆಲೆಯಲ್ಲಿ ಈ ಭಾರಿಯ ಮುಂಗಾರು ಅಧಿವೇಶನ ಮಹತ್ವ ಪಡೆದಿದೆ.

ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ. ಭಾರತದ ಮೊದಲ ಬುಡಕಟ್ಟು ಮಹಿಳೆ ರಾಷ್ಟ್ರಪತಿಯಾಗಲಿದ್ದಾರೆ. ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅವಧಿ ಜುಲೈ 24ಕ್ಕೆ ಮುಕ್ತಾಯವಾಗಲಿದ್ದು, ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರ ಅವಧಿ ಆಗಸ್ಟ್ 10ಕ್ಕೆ ಕೊನೆಗೊಳ್ಳಲಿದೆ. ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 18ರಂದು ಪ್ರಾರಂಭವಾಯಿತು. ಆಗಸ್ಟ್ 12ರವರೆಗೆ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...