Homeಮುಖಪುಟಬೆಲೆ ಏರಿಕೆ ಚರ್ಚೆಗೆ ಅನುಮತಿಸದ ಸರ್ಕಾರ: 5ನೇ ದಿನವೂ ಸಂಸತ್ ಅಧಿವೇಶನ ಮುಂದೂಡಿಕೆ

ಬೆಲೆ ಏರಿಕೆ ಚರ್ಚೆಗೆ ಅನುಮತಿಸದ ಸರ್ಕಾರ: 5ನೇ ದಿನವೂ ಸಂಸತ್ ಅಧಿವೇಶನ ಮುಂದೂಡಿಕೆ

- Advertisement -
- Advertisement -

ದೈನಂದಿನ ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿ ಜಾರಿ, ಬೆಲೆ ಏರಿಕೆ, ಕೇಂದ್ರೀಯ ಸಂಸ್ಥೆಗಳ ದುರುಪಯೋಗದ ಬಗ್ಗೆ ಕೇಂದ್ರದ ಮೇಲೆ ಪ್ರತಿಪಕ್ಷಗಳು ವಾಗ್ದಾಳಿ ನಡೆಸಿದ್ದರಿಂದ ಲೋಕಸಭೆಯ ಕಲಾಪವನ್ನು ಇಂದು ಎರಡು ಭಾರಿ ಮುಂದೂಡಲಾಗಿದೆ. ಮೊದಲು ಮಧ್ಯಾಹ್ನದವರೆಗೆ ಮತ್ತು ನಂತರ 2 ಗಂಟೆಯವರೆಗೆ ಕಲಾಪವನ್ನು ಮುಂದೂಡಲಾಯಿತು. ರಾಜ್ಯಸಭೆ ಕಲಾಪ 12 ಗಂಟೆಗೆ ಪುನರಾರಂಭವಾಯಿತು.

ಪ್ರಮುಖ ವಿಷಯಗಳ ಚರ್ಚೆಗಳಿಗೆ ಸರ್ಕಾರ ಬೆನ್ನು ತೋರಿಸಿ ಓಡಿ ಹೋಗುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದು, ಇದು ಮೋದಿ ಸರ್ಕಾರದ “ಹಠಮಾರಿತನ”ವನ್ನು ತೋರಿಸುತ್ತದೆ ಎಂದಿವೆ. ಮುಂಗಾರು ಅಧಿವೇಶನ ಆರಂಭವಾದಾಗಿನಿಂದ ಲೋಕಸಭೆ ಮತ್ತು ರಾಜ್ಯಸಭೆಗಳೆರಡೂ ನಿರಂತರ ಮುಂದೂಡಿಕೆ ಮಾಡಲಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಸ್ತುತ ಅಧಿವೇಶನದ ಸತತ ಐದನೇ ದಿನವಾದ ಇಂದು ಉಭಯ ಸದನಗಳು ಯಾವುದೇ ಚರ್ಚೆ ಇಲ್ಲ ಇಲ್ಲದೆ ಮುಂದೂಡಲ್ಪಟ್ಟಿವೆ.

ಪ್ರತಿಪಕ್ಷಗಳು ನಿರಂತರವಾಗಿ ವಾಗ್ದಾಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಂಸತ್ತಿನಲ್ಲಿ ಸರ್ಕಾರದ ಕಾರ್ಯತಂತ್ರದ ಕುರಿತು ಚರ್ಚಿಸಲು ಪ್ರಧಾನಿ ಮೋದಿ ಅವರು ರಾಜನಾಥ್ ಸಿಂಗ್, ಅಮಿತ್ ಶಾ ಸೇರಿದಂತೆ ಉನ್ನತ ಮಂತ್ರಿಗಳೊಂದಿಗೆ ಸಭೆ ನಡೆಸಿದರು.

ನಿರುದ್ಯೋಗ ಮತ್ತು ಇತರ ಸಮಸ್ಯೆಗಳು ಚರ್ಚೆಗೆ ಬಂದಾಗ ಕನಿಷ್ಠ ಏಳು ಭಾರಿ ಮುಂದೂಡಿಕೆ ಸೂಚನೆಗಳನ್ನು ಉಭಯ ಸದನಗಳಲ್ಲಿ ನೀಡಲಾಗಿದೆ.

ಪ್ರತಿಪಕ್ಷಗಳು ತಮ್ಮ ನಿಲುವು ಸಡಿಲಿಸಲು ನಿರಾಕರಿಸಿವೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡ ನಂತರ ಬೆಲೆ ಏರಿಕೆ ಕುರಿತು ಸಂಸತ್ತಿನಲ್ಲಿ ಚರ್ಚೆಗೆ ಸಿದ್ಧ ಎಂದು ಸರ್ಕಾರ ಬುಧವಾರ ಹೇಳಿದೆ.

“ಕಾಂಗ್ರೆಸ್ ಪ್ರಜಾಪ್ರಭುತ್ವದ ಬಗ್ಗೆ ವಿನಾಶಕಾರಿ ಧೋರಣೆ ಹೊಂದಿದೆ. ಸದನ ಕಾರ್ಯನಿರ್ವಹಿಸಲು ಅನುಮತಿಸದೆ ತೊಂದರೆ ನೀಡುತ್ತಿದೆ. ಜೈರಾಮ್ ರಮೇಶ್ ಅವರ ಟ್ವೀಟ್‌ ಮೂಲಕ ಕಾಂಗ್ರೆಸ್ ಯಶಸ್ವಿಯಾಗಿರುವುದು ಬಹಿರಂಗವಾಗಿದೆ” ಎಂದು ರಾಜ್ಯಸಭೆಯ ಸಭಾನಾಯಕರಾಗಿರುವ ಪಿಯೂಷ್ ಗೋಯಲ್ ಸಂಸತ್ತಿನ ಹೊರಗೆ ಸುದ್ದಿಗಾರರಿಗೆ ತಿಳಿಸಿದರು.

“ಮೋದಿ ಸರ್ಕಾರದ ಹಠಮಾರಿತನದಿಂದ ಸಂಸತ್ತಿನಲ್ಲಿ ಚರ್ಚೆಗಳು ನಡೆಯುತ್ತಿಲ್ಲ” ಎಂದು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಬುಧವಾರ ಹೇಳಿದ್ದರು.

“ಇಂದು ಬೆಳಗ್ಗೆ ರಾಜ್ಯಸಭೆಯಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಪಕ್ಷಗಳು ಬೆಲೆ ಏರಿಕೆ ಮತ್ತು ಆಹಾರ ಪದಾರ್ಥಗಳ ಮೇಲಿನ ಅರ್ಥಹೀನ ಜಿಎಸ್‌ಟಿ ದರಗಳ ಕುರಿತು ತುರ್ತು ಚರ್ಚೆಗೆ ಒತ್ತಾಯಿಸಿದವು. ಇದನ್ನು ನಿರಾಕರಿಸಲಾಯಿತು. ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. ಮೋದಿ ಸರ್ಕಾರ ತನ್ನ ಹಠಮಾರಿತನ ಮುಂದುವರಿಸಿದೆ. ಸಂಸತ್ತಿನಲ್ಲಿ ಚರ್ಚೆಗಳು ನಡೆಯುತ್ತಿಲ್ಲ” ಎಂದು ಜೈರಾಮ್‌ ರಮೇಶ್ ಹೇಳಿದ್ದಾರೆ.

ಇದನ್ನೂ ಓದಿರಿ: ಪ್ರಧಾನಿ ಮೋದಿ ಉದ್ಘಾಟನೆ ಮಾಡಿದ ಕೆಲವೆ ದಿನಗಳಲ್ಲಿ ಕುಸಿದ 15,000 ಕೋಟಿ ವೆಚ್ಚದ ಎಕ್ಸ್‌ಪ್ರೆಸ್ ವೇ!

ರಾಷ್ಟ್ರಪತಿ ಹಾಗೂ ಉಪರಾಷ್ಟ್ರಪತಿ ಆಯ್ಕೆಯ ಹಿನ್ನೆಲೆಯಲ್ಲಿ ಈ ಭಾರಿಯ ಮುಂಗಾರು ಅಧಿವೇಶನ ಮಹತ್ವ ಪಡೆದಿದೆ.

ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ. ಭಾರತದ ಮೊದಲ ಬುಡಕಟ್ಟು ಮಹಿಳೆ ರಾಷ್ಟ್ರಪತಿಯಾಗಲಿದ್ದಾರೆ. ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅವಧಿ ಜುಲೈ 24ಕ್ಕೆ ಮುಕ್ತಾಯವಾಗಲಿದ್ದು, ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರ ಅವಧಿ ಆಗಸ್ಟ್ 10ಕ್ಕೆ ಕೊನೆಗೊಳ್ಳಲಿದೆ. ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 18ರಂದು ಪ್ರಾರಂಭವಾಯಿತು. ಆಗಸ್ಟ್ 12ರವರೆಗೆ ನಡೆಯಲಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಅಸಂವಿಧಾನಿಕ’ ಚುನಾವಣಾ ಬಾಂಡ್ ಯೋಜನೆಯನ್ನು ಸಮರ್ಥಿಸಿಕೊಂಡ ಪ್ರಧಾನಿ ಮೋದಿ

0
"ಚುನಾವಣಾ ಬಾಂಡ್ ಯೋಜನೆಯ ರದ್ದತಿ ಕುರಿತು ಪ್ರಾಮಾಣಿಕವಾಗಿ ಚಿಂತಿಸಿದಾಗ ಪ್ರತಿಯೊಬ್ಬರು ವಿಷಾದಿಸಲಿದ್ದಾರೆ. ಚುನಾವಣಾ ಬಾಂಡ್ ಯೋಜನೆಯ ರದ್ದತಿ ದೇಶವನ್ನು ಸಂಪೂರ್ಣವಾಗಿ ಕಪ್ಪು ಹಣದೆಡೆಗೆ ತಳ್ಳಲಿದೆ" ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸುದ್ದಿ ಸಂಸ್ಥೆ...