Homeಮುಖಪುಟಎರಡು ಲಕ್ಷ ಕೆ.ಜಿ. ಗಾಂಜಾ ಸುಟ್ಟು ಹಾಕಿದ ಆಂಧ್ರ ಸರ್ಕಾರ; ದಟ್ಟ ಹೊಗೆಯ ಪರಿಸ್ಥಿತಿ ಹೇಗಿತ್ತು?

ಎರಡು ಲಕ್ಷ ಕೆ.ಜಿ. ಗಾಂಜಾ ಸುಟ್ಟು ಹಾಕಿದ ಆಂಧ್ರ ಸರ್ಕಾರ; ದಟ್ಟ ಹೊಗೆಯ ಪರಿಸ್ಥಿತಿ ಹೇಗಿತ್ತು?

ಐದು ನೂರು ಕೋಟಿ ರೂ. ಮೌಲ್ಯದ ಗಾಂಜಾವನ್ನು ಆಂಧ್ರ ಪ್ರದೇಶ ಸರ್ಕಾರ ಸುಟ್ಟು ಹಾಕುವ ಮೂಲಕ ಗಮನ ಸೆಳೆದಿದೆ.

- Advertisement -
- Advertisement -

ಆಂಧ್ರಪ್ರದೇಶದ ಕೋಡೂರು ಗ್ರಾಮದ ತೆರೆದ ಮೈದಾನದಲ್ಲಿ ಎರಡು ಲಕ್ಷ ಕೆ.ಜಿ. ಗಾಂಜಾವನ್ನು ಸುಟ್ಟು ಹಾಕುವ ಮೂಲಕ ಆಂಧ್ರ ಪ್ರದೇಶ ಸರ್ಕಾರ ಗಮನ ಸೆಳೆದಿದೆ.

ರಾಜ್ಯದಲ್ಲಿ ಡ್ರಗ್ಸ್ ಹಾವಳಿಯನ್ನು ನಿರ್ಮೂಲನೆ ಮಾಡುವುದಕ್ಕೆ ಸರ್ಕಾರ ಮುಂದಾಗಿದ್ದು ‘ಆಪರೇಷನ್ ಪರಿವರ್ತನಾ’ದ ಭಾಗವಾಗಿ ಎರಡು ಲಕ್ಷ ಕೆ.ಜಿ. ಗಾಂಜಾವನ್ನು ಸುಡಲಾಗಿದೆ. ನಾಶಪಡಿಸಿದ ನಿಷೇಧಿತ ವಸ್ತುವಿನ ಮೌಲ್ಯ ಸುಮಾರು 500 ಕೋಟಿ ರೂಪಾಯಿ ಎಂದು ಪೊಲೀಸರು ತಿಳಿಸಿದ್ದಾರೆ. ಇಷ್ಟು ದೊಡ್ಡ ಪ್ರಮಾಣದ ಡ್ರಗ್ಸ್ ನಾಶಪಡಿಸಿರುವುದು ದೇಶದಲ್ಲೇ ಇದೇ ಮೊದಲು ಎಂದು ಪೊಲೀಸರು ಹೇಳಿದ್ದಾರೆ.

ವಿಶಾಖಪಟ್ಟಣದ ಅನಕಪಲ್ಲಿ ಮಂಡಲದಲ್ಲಿರುವ ಕೋಡೂರಿನ ಮೈದಾನದಲ್ಲಿ ಬೃಹತ್  ಮಟ್ಟದ ರಾಶಿಗಳನ್ನು ನಿರ್ಮಿಸಿ ಬೆಂಕಿ ಹಂಚಲಾಯಿತು. ಈ ಘಟನೆಯನ್ನು ಹಲವರು ಕುತೂಹಲ ಹಾಗೂ ಹಲವು ನಿರೀಕ್ಷೆಯಿಂದ ವೀಕ್ಷಿಸಿದರು.

ಸ್ಥಳದಲ್ಲಿದ್ದ ಪೋಲಿಸರು, ಪತ್ರಕರ್ತರು ಹಾಗೂ ಇತರರಿಗೆ ಏನಾದರೂ ಸಮಸ್ಯೆಯಾಗಬಹುದೇ ಎಂದು ಕುತೂಹಲಭರಿತರಾಗಿದ್ದರು. ಬೃಹತ್ ಹೊಗೆಯು ಅನೇಕರಿಗೆ ತಲೆನೋವನ್ನು ತಂದಿತು. ಆದರೆ ಅಂತಹ ಪರಿಣಾಮಗಳೇನೂ ಆಗಿಲ್ಲ ಎಂದು ‘ನ್ಯೂಸ್‌ ಮಿನಿಟ್’ ವರದಿ ಮಾಡಿದೆ.

ಗಾಂಜಾ ಸುಟ್ಟಿದ್ದರ ಪರಿಣಾಮಗಳು ನಮಗೆ ಕಂಡುಬರಲಿಲ್ಲ. ಆದರೆ ಕೆಲವರಿಗೆ ಸ್ವಲ್ಪ ತಲೆ ನೋವು ಕಾಣಿಸಿಕೊಂಡಿದ್ದು, ಇದಕ್ಕೆ ಉರಿಯುತ್ತಿದ್ದ ಬೆಂಕಿ ಮತ್ತು ದಟ್ಟ ಹೊಗೆ ಕಾರಣ ಎನ್ನಬಹುದು ಎಂದು ಘಟನೆಯನ್ನು ವರದಿ ಮಾಡಿದ ವರದಿಗಾರರು ತಿಳಿಸಿದ್ದಾರೆ. ಗಾಂಜಾ ಹೊಗೆಯ ಪರಿಣಾಮವನ್ನು ಕಡಿಮೆ ಮಾಡಲು ಸಕ್ಕರೆ ಮತ್ತು ಕರ್ಪೂರವನ್ನು ಬಳಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

4 ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಜನವಾಸವಿಲ್ಲದ ಕಾರಣ ಪೊಲೀಸರು ಕೋಡೂರ್ ಅನ್ನು ಆಯ್ಕೆ ಮಾಡಿದರು. ಸುಟ್ಟಾಗ ಬರುವ ಹೊಗೆಯಿಂದಾಗಿ ತಲೆನೋವು ಅಥವಾ ಮಾದಕತೆ ಉಂಟಾಗಬಹುದು ಎಂಬ ಕಾರಣದಿಂದ ಸುತ್ತಮುತ್ತಲಿನ ನಿವಾಸಿಗಳಿಗೆ ಮುನ್ನೆಚ್ಚರಿಕೆ ನೀಡಿ ಮನೆಯೊಳಗೆಯೇ ಇರುವಂತೆ ಸೂಚಿಸಲಾಗಿತ್ತು.

ಆಪರೇಷನ್ ಪರಿವರ್ತನಾ ಕಾರ್ಯಾಚರಣೆಯನ್ನು ನವೆಂಬರ್ 1, 2021ರಂದು ಪ್ರಾರಂಭಿಸಲಾಯಿತು. ಈ ಕಾರ್ಯಾಚರಣೆಯ ಭಾಗವಾಗಿ ಇದುವರೆಗೆ, 47,986.934 ಕೆಜಿ ಗಾಂಜಾ ಮತ್ತು 46.41 ಲೀಟರ್ ಹಶಿಶ್ ಎಣ್ಣೆಯನ್ನು 314 ವಾಹನಗಳೊಂದಿಗೆ ವಶಪಡಿಸಿಕೊಳ್ಳಲಾಗಿದೆ. 577 ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು 1500 ಜನರನ್ನು ಬಂಧಿಸಲಾಗಿದೆ. 1985ರ ನಾರ್ಕೋಟಿಕ್ಸ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್ ಅಡಿಯಲ್ಲಿ ಗಾಂಜಾವನ್ನು ನಿಷೇಧಿಸಲಾಗಿದೆ. ಈ ಕಾಯಿದೆಯು ಗಾಂಜಾ ಮಾರಾಟ ಮತ್ತು ಖರೀದಿಯನ್ನು ನಿಷೇಧಿಸುತ್ತದೆ. 406 ತಂಡಗಳು ಆಪರೇಷನ್ ಪರಿವರ್ತನಾ ಭಾಗವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

PC: News Minute

ಪೊಲೀಸರ ಪ್ರಕಾರ, ಒಡಿಶಾದ ಗಡಿಭಾಗದ ಜಿಲ್ಲೆಗಳಾದ ಶ್ರೀಕಾಕುಳಂ, ವಿಜಯನಗರ, ವಿಶಾಖಪಟ್ಟಣ ಮತ್ತು ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಗಾಂಜಾ ಬೆಳೆಯಲಾಗುತ್ತಿದೆ. ಒಡಿಶಾದ 23 ಜಿಲ್ಲೆಗಳು ಮತ್ತು ವಿಶಾಖಪಟ್ಟಣಂನ 11 ಮಂಡಲಗಳಲ್ಲಿ ನಿಷೇಧಿತ ಬೆಳೆ ಬೆಳೆಯುತ್ತಿರುವುದನ್ನು ಉಪಗ್ರಹ ಚಿತ್ರಗಳನ್ನು ಬಳಸಿ ಪೊಲೀಸರು ಪತ್ತೆ ಮಾಡಿದ್ದಾರೆ. ಆಪರೇಷನ್‌ ಪರಿವರ್ತನೆಯ ಭಾಗವಾಗಿ ಅಧಿಕಾರಿಗಳು 7,552 ಎಕರೆ ಗಾಂಜಾವನ್ನು ನಾಶಪಡಿಸಿದ್ದಾರೆ. ಇದರಲ್ಲಿ 400 ಎಕರೆ ಬೆಳೆಯನ್ನು ರೈತರೇ ನಾಶಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಚ್ಚಾಗಿ ಬುಡಕಟ್ಟು ಸಮುದಾಯಗಳು ಗಾಂಜಾವನ್ನು ಬೆಳೆಸುತ್ತಿರುವುದರಿಂದ, ಪೊಲೀಸರು ಸಾರ್ವಜನಿಕ ಜಾಗೃತಿ ಅಭಿಯಾನವನ್ನೂ ಮಾಡುತ್ತಿದ್ದಾರೆ. ಕಾರ್ಯಕ್ರಮದ ಆರಂಭದಿಂದಲೂ, 1,963 ಜಾಗೃತಿ ಅಭಿಯಾನಗಳನ್ನು ನಡೆಸಲಾಗಿದ್ದು, ಇದರಲ್ಲಿ 70,000 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ. ಗಾಂಜಾ ಹಾವಳಿ ತಡೆಯಲು ಪೊಲೀಸರು 120 ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿದ್ದಾರೆ.

ತೆಲಂಗಾಣ ಮತ್ತು ಕರ್ನಾಟಕದಂತಹ ನೆರೆಯ ರಾಜ್ಯಗಳು ಗಾಂಜಾವನ್ನು ನಿಯಂತ್ರಿಸದಿದ್ದಕ್ಕಾಗಿ ಅವರತ್ತ ಬೆರಳು ತೋರಿಸಿದ ನಂತರ ಆಂಧ್ರಪ್ರದೇಶವು ಡ್ರಗ್ಸ್ ವಿರುದ್ಧದ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ತೆಲಂಗಾಣ ಪೊಲೀಸರು ಡ್ರಗ್ಸ್ ವಿರುದ್ಧದ ಅಭಿಯಾನದ ಭಾಗವಾಗಿ ತಮ್ಮ ವ್ಯಾಪ್ತಿಯಲ್ಲಿ ಕೆಲವರನ್ನು ಬಂಧಿಸಿ ಆಂಧ್ರಪ್ರದೇಶ ಪೊಲೀಸರಿಗೆ ಮುಜುಗರ ಉಂಟು ಮಾಡಿದ್ದರು. ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದಲ್ಲಿ ರಾಜ್ಯವು ಡ್ರಗ್ ಹಬ್ ಆಗಿ ಬದಲಾಗುತ್ತಿದೆ ಎಂದು ರಾಜ್ಯದ ವಿರೋಧ ಪಕ್ಷದ ನಾಯಕ ಎನ್ ಚಂದ್ರಬಾಬು ನಾಯ್ಡು ಆರೋಪಿಸಿದ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಅದರ ಭಾಗಿ ಎರಡು ಲಕ್ಷ ಕೆ.ಜಿ. ಗಾಂಜಾವನ್ನು ಸುಡಲಾಗಿದೆ.


ಇದನ್ನೂ ಓದಿರಿ: ವಿಶಾಖಪಟ್ಟಣಂ ಉಕ್ಕು ಕಾರ್ಖಾನೆ ಖಾಸಗೀಕರಣದ ವಿರುದ್ದ ಜೈಲ್‌ ಭರೋ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...