Homeಮುಖಪುಟಎರಡು ಲಕ್ಷ ಕೆ.ಜಿ. ಗಾಂಜಾ ಸುಟ್ಟು ಹಾಕಿದ ಆಂಧ್ರ ಸರ್ಕಾರ; ದಟ್ಟ ಹೊಗೆಯ ಪರಿಸ್ಥಿತಿ ಹೇಗಿತ್ತು?

ಎರಡು ಲಕ್ಷ ಕೆ.ಜಿ. ಗಾಂಜಾ ಸುಟ್ಟು ಹಾಕಿದ ಆಂಧ್ರ ಸರ್ಕಾರ; ದಟ್ಟ ಹೊಗೆಯ ಪರಿಸ್ಥಿತಿ ಹೇಗಿತ್ತು?

ಐದು ನೂರು ಕೋಟಿ ರೂ. ಮೌಲ್ಯದ ಗಾಂಜಾವನ್ನು ಆಂಧ್ರ ಪ್ರದೇಶ ಸರ್ಕಾರ ಸುಟ್ಟು ಹಾಕುವ ಮೂಲಕ ಗಮನ ಸೆಳೆದಿದೆ.

- Advertisement -
- Advertisement -

ಆಂಧ್ರಪ್ರದೇಶದ ಕೋಡೂರು ಗ್ರಾಮದ ತೆರೆದ ಮೈದಾನದಲ್ಲಿ ಎರಡು ಲಕ್ಷ ಕೆ.ಜಿ. ಗಾಂಜಾವನ್ನು ಸುಟ್ಟು ಹಾಕುವ ಮೂಲಕ ಆಂಧ್ರ ಪ್ರದೇಶ ಸರ್ಕಾರ ಗಮನ ಸೆಳೆದಿದೆ.

ರಾಜ್ಯದಲ್ಲಿ ಡ್ರಗ್ಸ್ ಹಾವಳಿಯನ್ನು ನಿರ್ಮೂಲನೆ ಮಾಡುವುದಕ್ಕೆ ಸರ್ಕಾರ ಮುಂದಾಗಿದ್ದು ‘ಆಪರೇಷನ್ ಪರಿವರ್ತನಾ’ದ ಭಾಗವಾಗಿ ಎರಡು ಲಕ್ಷ ಕೆ.ಜಿ. ಗಾಂಜಾವನ್ನು ಸುಡಲಾಗಿದೆ. ನಾಶಪಡಿಸಿದ ನಿಷೇಧಿತ ವಸ್ತುವಿನ ಮೌಲ್ಯ ಸುಮಾರು 500 ಕೋಟಿ ರೂಪಾಯಿ ಎಂದು ಪೊಲೀಸರು ತಿಳಿಸಿದ್ದಾರೆ. ಇಷ್ಟು ದೊಡ್ಡ ಪ್ರಮಾಣದ ಡ್ರಗ್ಸ್ ನಾಶಪಡಿಸಿರುವುದು ದೇಶದಲ್ಲೇ ಇದೇ ಮೊದಲು ಎಂದು ಪೊಲೀಸರು ಹೇಳಿದ್ದಾರೆ.

ವಿಶಾಖಪಟ್ಟಣದ ಅನಕಪಲ್ಲಿ ಮಂಡಲದಲ್ಲಿರುವ ಕೋಡೂರಿನ ಮೈದಾನದಲ್ಲಿ ಬೃಹತ್  ಮಟ್ಟದ ರಾಶಿಗಳನ್ನು ನಿರ್ಮಿಸಿ ಬೆಂಕಿ ಹಂಚಲಾಯಿತು. ಈ ಘಟನೆಯನ್ನು ಹಲವರು ಕುತೂಹಲ ಹಾಗೂ ಹಲವು ನಿರೀಕ್ಷೆಯಿಂದ ವೀಕ್ಷಿಸಿದರು.

ಸ್ಥಳದಲ್ಲಿದ್ದ ಪೋಲಿಸರು, ಪತ್ರಕರ್ತರು ಹಾಗೂ ಇತರರಿಗೆ ಏನಾದರೂ ಸಮಸ್ಯೆಯಾಗಬಹುದೇ ಎಂದು ಕುತೂಹಲಭರಿತರಾಗಿದ್ದರು. ಬೃಹತ್ ಹೊಗೆಯು ಅನೇಕರಿಗೆ ತಲೆನೋವನ್ನು ತಂದಿತು. ಆದರೆ ಅಂತಹ ಪರಿಣಾಮಗಳೇನೂ ಆಗಿಲ್ಲ ಎಂದು ‘ನ್ಯೂಸ್‌ ಮಿನಿಟ್’ ವರದಿ ಮಾಡಿದೆ.

ಗಾಂಜಾ ಸುಟ್ಟಿದ್ದರ ಪರಿಣಾಮಗಳು ನಮಗೆ ಕಂಡುಬರಲಿಲ್ಲ. ಆದರೆ ಕೆಲವರಿಗೆ ಸ್ವಲ್ಪ ತಲೆ ನೋವು ಕಾಣಿಸಿಕೊಂಡಿದ್ದು, ಇದಕ್ಕೆ ಉರಿಯುತ್ತಿದ್ದ ಬೆಂಕಿ ಮತ್ತು ದಟ್ಟ ಹೊಗೆ ಕಾರಣ ಎನ್ನಬಹುದು ಎಂದು ಘಟನೆಯನ್ನು ವರದಿ ಮಾಡಿದ ವರದಿಗಾರರು ತಿಳಿಸಿದ್ದಾರೆ. ಗಾಂಜಾ ಹೊಗೆಯ ಪರಿಣಾಮವನ್ನು ಕಡಿಮೆ ಮಾಡಲು ಸಕ್ಕರೆ ಮತ್ತು ಕರ್ಪೂರವನ್ನು ಬಳಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

4 ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಜನವಾಸವಿಲ್ಲದ ಕಾರಣ ಪೊಲೀಸರು ಕೋಡೂರ್ ಅನ್ನು ಆಯ್ಕೆ ಮಾಡಿದರು. ಸುಟ್ಟಾಗ ಬರುವ ಹೊಗೆಯಿಂದಾಗಿ ತಲೆನೋವು ಅಥವಾ ಮಾದಕತೆ ಉಂಟಾಗಬಹುದು ಎಂಬ ಕಾರಣದಿಂದ ಸುತ್ತಮುತ್ತಲಿನ ನಿವಾಸಿಗಳಿಗೆ ಮುನ್ನೆಚ್ಚರಿಕೆ ನೀಡಿ ಮನೆಯೊಳಗೆಯೇ ಇರುವಂತೆ ಸೂಚಿಸಲಾಗಿತ್ತು.

ಆಪರೇಷನ್ ಪರಿವರ್ತನಾ ಕಾರ್ಯಾಚರಣೆಯನ್ನು ನವೆಂಬರ್ 1, 2021ರಂದು ಪ್ರಾರಂಭಿಸಲಾಯಿತು. ಈ ಕಾರ್ಯಾಚರಣೆಯ ಭಾಗವಾಗಿ ಇದುವರೆಗೆ, 47,986.934 ಕೆಜಿ ಗಾಂಜಾ ಮತ್ತು 46.41 ಲೀಟರ್ ಹಶಿಶ್ ಎಣ್ಣೆಯನ್ನು 314 ವಾಹನಗಳೊಂದಿಗೆ ವಶಪಡಿಸಿಕೊಳ್ಳಲಾಗಿದೆ. 577 ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು 1500 ಜನರನ್ನು ಬಂಧಿಸಲಾಗಿದೆ. 1985ರ ನಾರ್ಕೋಟಿಕ್ಸ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್ ಅಡಿಯಲ್ಲಿ ಗಾಂಜಾವನ್ನು ನಿಷೇಧಿಸಲಾಗಿದೆ. ಈ ಕಾಯಿದೆಯು ಗಾಂಜಾ ಮಾರಾಟ ಮತ್ತು ಖರೀದಿಯನ್ನು ನಿಷೇಧಿಸುತ್ತದೆ. 406 ತಂಡಗಳು ಆಪರೇಷನ್ ಪರಿವರ್ತನಾ ಭಾಗವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

PC: News Minute

ಪೊಲೀಸರ ಪ್ರಕಾರ, ಒಡಿಶಾದ ಗಡಿಭಾಗದ ಜಿಲ್ಲೆಗಳಾದ ಶ್ರೀಕಾಕುಳಂ, ವಿಜಯನಗರ, ವಿಶಾಖಪಟ್ಟಣ ಮತ್ತು ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಗಾಂಜಾ ಬೆಳೆಯಲಾಗುತ್ತಿದೆ. ಒಡಿಶಾದ 23 ಜಿಲ್ಲೆಗಳು ಮತ್ತು ವಿಶಾಖಪಟ್ಟಣಂನ 11 ಮಂಡಲಗಳಲ್ಲಿ ನಿಷೇಧಿತ ಬೆಳೆ ಬೆಳೆಯುತ್ತಿರುವುದನ್ನು ಉಪಗ್ರಹ ಚಿತ್ರಗಳನ್ನು ಬಳಸಿ ಪೊಲೀಸರು ಪತ್ತೆ ಮಾಡಿದ್ದಾರೆ. ಆಪರೇಷನ್‌ ಪರಿವರ್ತನೆಯ ಭಾಗವಾಗಿ ಅಧಿಕಾರಿಗಳು 7,552 ಎಕರೆ ಗಾಂಜಾವನ್ನು ನಾಶಪಡಿಸಿದ್ದಾರೆ. ಇದರಲ್ಲಿ 400 ಎಕರೆ ಬೆಳೆಯನ್ನು ರೈತರೇ ನಾಶಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಚ್ಚಾಗಿ ಬುಡಕಟ್ಟು ಸಮುದಾಯಗಳು ಗಾಂಜಾವನ್ನು ಬೆಳೆಸುತ್ತಿರುವುದರಿಂದ, ಪೊಲೀಸರು ಸಾರ್ವಜನಿಕ ಜಾಗೃತಿ ಅಭಿಯಾನವನ್ನೂ ಮಾಡುತ್ತಿದ್ದಾರೆ. ಕಾರ್ಯಕ್ರಮದ ಆರಂಭದಿಂದಲೂ, 1,963 ಜಾಗೃತಿ ಅಭಿಯಾನಗಳನ್ನು ನಡೆಸಲಾಗಿದ್ದು, ಇದರಲ್ಲಿ 70,000 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ. ಗಾಂಜಾ ಹಾವಳಿ ತಡೆಯಲು ಪೊಲೀಸರು 120 ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿದ್ದಾರೆ.

ತೆಲಂಗಾಣ ಮತ್ತು ಕರ್ನಾಟಕದಂತಹ ನೆರೆಯ ರಾಜ್ಯಗಳು ಗಾಂಜಾವನ್ನು ನಿಯಂತ್ರಿಸದಿದ್ದಕ್ಕಾಗಿ ಅವರತ್ತ ಬೆರಳು ತೋರಿಸಿದ ನಂತರ ಆಂಧ್ರಪ್ರದೇಶವು ಡ್ರಗ್ಸ್ ವಿರುದ್ಧದ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ತೆಲಂಗಾಣ ಪೊಲೀಸರು ಡ್ರಗ್ಸ್ ವಿರುದ್ಧದ ಅಭಿಯಾನದ ಭಾಗವಾಗಿ ತಮ್ಮ ವ್ಯಾಪ್ತಿಯಲ್ಲಿ ಕೆಲವರನ್ನು ಬಂಧಿಸಿ ಆಂಧ್ರಪ್ರದೇಶ ಪೊಲೀಸರಿಗೆ ಮುಜುಗರ ಉಂಟು ಮಾಡಿದ್ದರು. ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದಲ್ಲಿ ರಾಜ್ಯವು ಡ್ರಗ್ ಹಬ್ ಆಗಿ ಬದಲಾಗುತ್ತಿದೆ ಎಂದು ರಾಜ್ಯದ ವಿರೋಧ ಪಕ್ಷದ ನಾಯಕ ಎನ್ ಚಂದ್ರಬಾಬು ನಾಯ್ಡು ಆರೋಪಿಸಿದ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಅದರ ಭಾಗಿ ಎರಡು ಲಕ್ಷ ಕೆ.ಜಿ. ಗಾಂಜಾವನ್ನು ಸುಡಲಾಗಿದೆ.


ಇದನ್ನೂ ಓದಿರಿ: ವಿಶಾಖಪಟ್ಟಣಂ ಉಕ್ಕು ಕಾರ್ಖಾನೆ ಖಾಸಗೀಕರಣದ ವಿರುದ್ದ ಜೈಲ್‌ ಭರೋ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...