Homeಮುಖಪುಟಎರಡು ಲಕ್ಷ ಕೆ.ಜಿ. ಗಾಂಜಾ ಸುಟ್ಟು ಹಾಕಿದ ಆಂಧ್ರ ಸರ್ಕಾರ; ದಟ್ಟ ಹೊಗೆಯ ಪರಿಸ್ಥಿತಿ ಹೇಗಿತ್ತು?

ಎರಡು ಲಕ್ಷ ಕೆ.ಜಿ. ಗಾಂಜಾ ಸುಟ್ಟು ಹಾಕಿದ ಆಂಧ್ರ ಸರ್ಕಾರ; ದಟ್ಟ ಹೊಗೆಯ ಪರಿಸ್ಥಿತಿ ಹೇಗಿತ್ತು?

ಐದು ನೂರು ಕೋಟಿ ರೂ. ಮೌಲ್ಯದ ಗಾಂಜಾವನ್ನು ಆಂಧ್ರ ಪ್ರದೇಶ ಸರ್ಕಾರ ಸುಟ್ಟು ಹಾಕುವ ಮೂಲಕ ಗಮನ ಸೆಳೆದಿದೆ.

- Advertisement -
- Advertisement -

ಆಂಧ್ರಪ್ರದೇಶದ ಕೋಡೂರು ಗ್ರಾಮದ ತೆರೆದ ಮೈದಾನದಲ್ಲಿ ಎರಡು ಲಕ್ಷ ಕೆ.ಜಿ. ಗಾಂಜಾವನ್ನು ಸುಟ್ಟು ಹಾಕುವ ಮೂಲಕ ಆಂಧ್ರ ಪ್ರದೇಶ ಸರ್ಕಾರ ಗಮನ ಸೆಳೆದಿದೆ.

ರಾಜ್ಯದಲ್ಲಿ ಡ್ರಗ್ಸ್ ಹಾವಳಿಯನ್ನು ನಿರ್ಮೂಲನೆ ಮಾಡುವುದಕ್ಕೆ ಸರ್ಕಾರ ಮುಂದಾಗಿದ್ದು ‘ಆಪರೇಷನ್ ಪರಿವರ್ತನಾ’ದ ಭಾಗವಾಗಿ ಎರಡು ಲಕ್ಷ ಕೆ.ಜಿ. ಗಾಂಜಾವನ್ನು ಸುಡಲಾಗಿದೆ. ನಾಶಪಡಿಸಿದ ನಿಷೇಧಿತ ವಸ್ತುವಿನ ಮೌಲ್ಯ ಸುಮಾರು 500 ಕೋಟಿ ರೂಪಾಯಿ ಎಂದು ಪೊಲೀಸರು ತಿಳಿಸಿದ್ದಾರೆ. ಇಷ್ಟು ದೊಡ್ಡ ಪ್ರಮಾಣದ ಡ್ರಗ್ಸ್ ನಾಶಪಡಿಸಿರುವುದು ದೇಶದಲ್ಲೇ ಇದೇ ಮೊದಲು ಎಂದು ಪೊಲೀಸರು ಹೇಳಿದ್ದಾರೆ.

ವಿಶಾಖಪಟ್ಟಣದ ಅನಕಪಲ್ಲಿ ಮಂಡಲದಲ್ಲಿರುವ ಕೋಡೂರಿನ ಮೈದಾನದಲ್ಲಿ ಬೃಹತ್  ಮಟ್ಟದ ರಾಶಿಗಳನ್ನು ನಿರ್ಮಿಸಿ ಬೆಂಕಿ ಹಂಚಲಾಯಿತು. ಈ ಘಟನೆಯನ್ನು ಹಲವರು ಕುತೂಹಲ ಹಾಗೂ ಹಲವು ನಿರೀಕ್ಷೆಯಿಂದ ವೀಕ್ಷಿಸಿದರು.

ಸ್ಥಳದಲ್ಲಿದ್ದ ಪೋಲಿಸರು, ಪತ್ರಕರ್ತರು ಹಾಗೂ ಇತರರಿಗೆ ಏನಾದರೂ ಸಮಸ್ಯೆಯಾಗಬಹುದೇ ಎಂದು ಕುತೂಹಲಭರಿತರಾಗಿದ್ದರು. ಬೃಹತ್ ಹೊಗೆಯು ಅನೇಕರಿಗೆ ತಲೆನೋವನ್ನು ತಂದಿತು. ಆದರೆ ಅಂತಹ ಪರಿಣಾಮಗಳೇನೂ ಆಗಿಲ್ಲ ಎಂದು ‘ನ್ಯೂಸ್‌ ಮಿನಿಟ್’ ವರದಿ ಮಾಡಿದೆ.

ಗಾಂಜಾ ಸುಟ್ಟಿದ್ದರ ಪರಿಣಾಮಗಳು ನಮಗೆ ಕಂಡುಬರಲಿಲ್ಲ. ಆದರೆ ಕೆಲವರಿಗೆ ಸ್ವಲ್ಪ ತಲೆ ನೋವು ಕಾಣಿಸಿಕೊಂಡಿದ್ದು, ಇದಕ್ಕೆ ಉರಿಯುತ್ತಿದ್ದ ಬೆಂಕಿ ಮತ್ತು ದಟ್ಟ ಹೊಗೆ ಕಾರಣ ಎನ್ನಬಹುದು ಎಂದು ಘಟನೆಯನ್ನು ವರದಿ ಮಾಡಿದ ವರದಿಗಾರರು ತಿಳಿಸಿದ್ದಾರೆ. ಗಾಂಜಾ ಹೊಗೆಯ ಪರಿಣಾಮವನ್ನು ಕಡಿಮೆ ಮಾಡಲು ಸಕ್ಕರೆ ಮತ್ತು ಕರ್ಪೂರವನ್ನು ಬಳಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

4 ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಜನವಾಸವಿಲ್ಲದ ಕಾರಣ ಪೊಲೀಸರು ಕೋಡೂರ್ ಅನ್ನು ಆಯ್ಕೆ ಮಾಡಿದರು. ಸುಟ್ಟಾಗ ಬರುವ ಹೊಗೆಯಿಂದಾಗಿ ತಲೆನೋವು ಅಥವಾ ಮಾದಕತೆ ಉಂಟಾಗಬಹುದು ಎಂಬ ಕಾರಣದಿಂದ ಸುತ್ತಮುತ್ತಲಿನ ನಿವಾಸಿಗಳಿಗೆ ಮುನ್ನೆಚ್ಚರಿಕೆ ನೀಡಿ ಮನೆಯೊಳಗೆಯೇ ಇರುವಂತೆ ಸೂಚಿಸಲಾಗಿತ್ತು.

ಆಪರೇಷನ್ ಪರಿವರ್ತನಾ ಕಾರ್ಯಾಚರಣೆಯನ್ನು ನವೆಂಬರ್ 1, 2021ರಂದು ಪ್ರಾರಂಭಿಸಲಾಯಿತು. ಈ ಕಾರ್ಯಾಚರಣೆಯ ಭಾಗವಾಗಿ ಇದುವರೆಗೆ, 47,986.934 ಕೆಜಿ ಗಾಂಜಾ ಮತ್ತು 46.41 ಲೀಟರ್ ಹಶಿಶ್ ಎಣ್ಣೆಯನ್ನು 314 ವಾಹನಗಳೊಂದಿಗೆ ವಶಪಡಿಸಿಕೊಳ್ಳಲಾಗಿದೆ. 577 ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು 1500 ಜನರನ್ನು ಬಂಧಿಸಲಾಗಿದೆ. 1985ರ ನಾರ್ಕೋಟಿಕ್ಸ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್ ಅಡಿಯಲ್ಲಿ ಗಾಂಜಾವನ್ನು ನಿಷೇಧಿಸಲಾಗಿದೆ. ಈ ಕಾಯಿದೆಯು ಗಾಂಜಾ ಮಾರಾಟ ಮತ್ತು ಖರೀದಿಯನ್ನು ನಿಷೇಧಿಸುತ್ತದೆ. 406 ತಂಡಗಳು ಆಪರೇಷನ್ ಪರಿವರ್ತನಾ ಭಾಗವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

PC: News Minute

ಪೊಲೀಸರ ಪ್ರಕಾರ, ಒಡಿಶಾದ ಗಡಿಭಾಗದ ಜಿಲ್ಲೆಗಳಾದ ಶ್ರೀಕಾಕುಳಂ, ವಿಜಯನಗರ, ವಿಶಾಖಪಟ್ಟಣ ಮತ್ತು ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಗಾಂಜಾ ಬೆಳೆಯಲಾಗುತ್ತಿದೆ. ಒಡಿಶಾದ 23 ಜಿಲ್ಲೆಗಳು ಮತ್ತು ವಿಶಾಖಪಟ್ಟಣಂನ 11 ಮಂಡಲಗಳಲ್ಲಿ ನಿಷೇಧಿತ ಬೆಳೆ ಬೆಳೆಯುತ್ತಿರುವುದನ್ನು ಉಪಗ್ರಹ ಚಿತ್ರಗಳನ್ನು ಬಳಸಿ ಪೊಲೀಸರು ಪತ್ತೆ ಮಾಡಿದ್ದಾರೆ. ಆಪರೇಷನ್‌ ಪರಿವರ್ತನೆಯ ಭಾಗವಾಗಿ ಅಧಿಕಾರಿಗಳು 7,552 ಎಕರೆ ಗಾಂಜಾವನ್ನು ನಾಶಪಡಿಸಿದ್ದಾರೆ. ಇದರಲ್ಲಿ 400 ಎಕರೆ ಬೆಳೆಯನ್ನು ರೈತರೇ ನಾಶಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಚ್ಚಾಗಿ ಬುಡಕಟ್ಟು ಸಮುದಾಯಗಳು ಗಾಂಜಾವನ್ನು ಬೆಳೆಸುತ್ತಿರುವುದರಿಂದ, ಪೊಲೀಸರು ಸಾರ್ವಜನಿಕ ಜಾಗೃತಿ ಅಭಿಯಾನವನ್ನೂ ಮಾಡುತ್ತಿದ್ದಾರೆ. ಕಾರ್ಯಕ್ರಮದ ಆರಂಭದಿಂದಲೂ, 1,963 ಜಾಗೃತಿ ಅಭಿಯಾನಗಳನ್ನು ನಡೆಸಲಾಗಿದ್ದು, ಇದರಲ್ಲಿ 70,000 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ. ಗಾಂಜಾ ಹಾವಳಿ ತಡೆಯಲು ಪೊಲೀಸರು 120 ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿದ್ದಾರೆ.

ತೆಲಂಗಾಣ ಮತ್ತು ಕರ್ನಾಟಕದಂತಹ ನೆರೆಯ ರಾಜ್ಯಗಳು ಗಾಂಜಾವನ್ನು ನಿಯಂತ್ರಿಸದಿದ್ದಕ್ಕಾಗಿ ಅವರತ್ತ ಬೆರಳು ತೋರಿಸಿದ ನಂತರ ಆಂಧ್ರಪ್ರದೇಶವು ಡ್ರಗ್ಸ್ ವಿರುದ್ಧದ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ತೆಲಂಗಾಣ ಪೊಲೀಸರು ಡ್ರಗ್ಸ್ ವಿರುದ್ಧದ ಅಭಿಯಾನದ ಭಾಗವಾಗಿ ತಮ್ಮ ವ್ಯಾಪ್ತಿಯಲ್ಲಿ ಕೆಲವರನ್ನು ಬಂಧಿಸಿ ಆಂಧ್ರಪ್ರದೇಶ ಪೊಲೀಸರಿಗೆ ಮುಜುಗರ ಉಂಟು ಮಾಡಿದ್ದರು. ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದಲ್ಲಿ ರಾಜ್ಯವು ಡ್ರಗ್ ಹಬ್ ಆಗಿ ಬದಲಾಗುತ್ತಿದೆ ಎಂದು ರಾಜ್ಯದ ವಿರೋಧ ಪಕ್ಷದ ನಾಯಕ ಎನ್ ಚಂದ್ರಬಾಬು ನಾಯ್ಡು ಆರೋಪಿಸಿದ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಅದರ ಭಾಗಿ ಎರಡು ಲಕ್ಷ ಕೆ.ಜಿ. ಗಾಂಜಾವನ್ನು ಸುಡಲಾಗಿದೆ.


ಇದನ್ನೂ ಓದಿರಿ: ವಿಶಾಖಪಟ್ಟಣಂ ಉಕ್ಕು ಕಾರ್ಖಾನೆ ಖಾಸಗೀಕರಣದ ವಿರುದ್ದ ಜೈಲ್‌ ಭರೋ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...