Homeಮುಖಪುಟಸರ್ಕಾರಿ ಏಜೆಂಟ್ ನೇಮಿಸಿಕೊಳ್ಳಲು ಟ್ವಿಟರ್‌ ಮೇಲೆ ಭಾರತ ಸರ್ಕಾರ ಒತ್ತಡ; ಟ್ವಿಟ್ಟರ್ ಮಾಜಿ ಭದ್ರತಾ ಮುಖ್ಯಸ್ಥ...

ಸರ್ಕಾರಿ ಏಜೆಂಟ್ ನೇಮಿಸಿಕೊಳ್ಳಲು ಟ್ವಿಟರ್‌ ಮೇಲೆ ಭಾರತ ಸರ್ಕಾರ ಒತ್ತಡ; ಟ್ವಿಟ್ಟರ್ ಮಾಜಿ ಭದ್ರತಾ ಮುಖ್ಯಸ್ಥ ಆರೋಪ

- Advertisement -
- Advertisement -

ಟ್ವಿಟ್ಟರ್ ಮಾಜಿ ಭದ್ರತಾ ಮುಖ್ಯಸ್ಥ ಪೀಟರ್ ಝಟ್ಕೊ ಅವರು ಟ್ವಿಟರ್‌ ಸಂಸ್ಥೆ ವಿರುದ್ಧ ದೂರು ನೀಡಿದ್ದು, ಭಾರತದ ಸರ್ಕಾರದತ್ತಲೂ ಬೊಟ್ಟು ಮಾಡಿದ್ದಾರೆ. ‘ಸರ್ಕಾರಿ ಏಜೆಂಟ್’ ಆಗಿರುವ ಮತ್ತು ಸೂಕ್ಷ್ಮ ಬಳಕೆದಾರರ ಡೇಟಾಗೆ ಪ್ರವೇಶ ಪಡೆದಿರುವ ವ್ಯಕ್ತಿಯನ್ನು ಸಾಮಾಜಿಕ ಮಾಧ್ಯಮ ಕಂಪನಿ ಟ್ವಿಟರ್‌ಗೆ ನೇಮಿಸಿಕೊಳ್ಳಲು ಭಾರತ ಸರ್ಕಾರ ಒತ್ತಾಯಿಸಿತು ಎಂದು ಅವರು ಆರೋಪಿಸಿದ್ದಾರೆ.

ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್‌ ಕಮಿಷನ್‌ಗೆ ಕಳುಹಿಸಲಾದ 84-ಪುಟಗಳ ಕಡತದ ಕುರಿತು ಮಂಗಳವಾರ ಮಧ್ಯಾಹ್ನ ವಾಷಿಂಗ್ಟನ್ ಪೋಸ್ಟ್‌ ವರದಿ ಮಾಡಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ ಸಾಕ್ಷಿ ಮತ್ತು ದೃಢೀಕರಣದ ಮಾಹಿತಿಯನ್ನು ಝಟ್ಕೊ ಅವರ ವಕೀಲರು ಸಲ್ಲಿಸಿದ್ದಾರೆ. ಅಮೆರಿಕದ ನ್ಯಾಯಾಂಗ ಇಲಾಖೆಯ ರಾಷ್ಟ್ರೀಯ ಭದ್ರತಾ ವಿಭಾಗಕ್ಕೆ ಮತ್ತು ಅಮೆರಿಕದ ಗುಪ್ತಚರ ಸಮಿತಿಗೆ ದೂರು ರವಾನೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತನ್ನ ಸಹೋದ್ಯೋಗಿಗಳ ನಡುವೆ ‘ಮುಡ್ಜ್’ ಎಂದೇ ವ್ಯಾಪಕವಾಗಿ ಮೆಚ್ಚುಗೆ ಪಡೆದ ಹ್ಯಾಕರ್ ಝಟ್ಕೊ, “238 ಮಿಲಿಯನ್‌ನಷ್ಟು ದೈನಂದಿನ ಬಳಕೆದಾರರನ್ನು ಸರಿಯಾಗಿ ರಕ್ಷಿಸಲು ಸಾಧ್ಯವಾಗದ, ಅಸ್ತವ್ಯಸ್ತವಾಗಿರುವ ಕಂಪನಿ ಟ್ವಿಟರ್‌” ಎಂಬುದಾಗಿ ತಮ್ಮ ದೂರಿನಲ್ಲಿ ಅಭಿಪ್ರಾಯಪಟ್ಟಿದ್ದಾರೆ. ಈ ಎಲ್ಲ ವಿಷಯಗಳನ್ನು ತನ್ನ ದಾಖಲೆಯಲ್ಲಿ ಉಲ್ಲೇಖಿಸಿದ್ದಾರೆ.

ಸಲ್ಲಿಸಲಾಗಿರುವ ದಾಖಲೆಯಲ್ಲಿ ‘ವಿದೇಶಿ ಗುಪ್ತಚರದಿಂದ ಒಳಪ್ರವೇಶಿಕೆ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯ’ ಎಂಬ ಶೀರ್ಷಿಕೆಯ ವಿಭಾಗವಿದ್ದು, ಟ್ವಿಟರ್ ಪ್ರಜಾಪ್ರಭುತ್ವಕ್ಕೆ ತೊಂದರೆ ನೀಡಿರುವ ಅನೇಕ ಸಂಚಿಕೆಗಳನ್ನು ಝಟ್ಕೊ ಅಲ್ಲಿ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.

“ಸರ್ಕಾರಿ ಏಜೆಂಟ್‌ಗಳಾಗಿರುವ ನಿರ್ದಿಷ್ಟ ವ್ಯಕ್ತಿ(ಗಳನ್ನು) ಟ್ವಿಟರ್‌ಗೆ ನೇಮಿಸಿಕೊಳ್ಳುವಂತೆ ಭಾರತೀಯ ಸರ್ಕಾರವು ಒತ್ತಾಯಿಸಿತು. ಆ ನಿರ್ದಿಷ್ಟ ವ್ಯಕ್ತಿಗಳು (ಟ್ವಿಟರ್‌ನ ಮೂಲಭೂತ ದೋಷಗಳ ಕಾರಣದಿಂದಾಗಿ) ಅಪಾರ ಪ್ರಮಾಣದ ಟ್ವಿಟರ್ ಬಳಕೆದಾರರ ಸೂಕ್ಷ್ಮ ಡೇಟಾಗೆ ಪ್ರವೇಶ ಪಡೆದಿರುತ್ತಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಯಾವುದೇ ನಿರ್ಬಂಧವಿಲ್ಲದೆ ಭಾರತೀಯ ಸರ್ಕಾರಿ ಏಜೆಂಟ್‌, ಕಂಪನಿಯ ಬಳಕೆದಾರರ ಡೇಟಾಗೆ ನೇರ ಪ್ರವೇಶವನ್ನು ಪಡೆಯಲು ಅನುಮತಿ ನೀಡಲಾಗಿದೆ. ಟ್ವಿಟರ್‌ ಸಂಸ್ಥೆ ತನ್ನ ಬಳಕೆದಾರರಿಗೆ ಖಚಿತಪಡಿಸಿದ ಬದ್ಧತೆಯನ್ನು ಟ್ವಿಟರ್‌ ಅಧಿಕಾರಿಗಳು ಉಲ್ಲಂಘಿಸಿದ್ದಾರೆ” ಎಂದು ಗಂಭೀರವಾದ ಆರೋಪವನ್ನು ಅವರು ಮಾಡಿದ್ದಾರೆ.

ಇದನ್ನೂ ಓದಿರಿ: ಚಕ್ರವರ್ತಿ ಸೂಲಿಬೆಲೆಯಿಂದ ಆಯುಧ ತರಬೇತಿ ಆರೋಪ: ಟ್ವಿಟರ್‌ನಲ್ಲಿ ಕನ್ನಡಿಗರ ಆಕ್ಷೇಪ

ವಾಷಿಂಗ್ಟನ್ ಪೋಸ್ಟ್ ತನ್ನ ವರದಿಯಲ್ಲಿ ವಿಷಯಕ್ಕೆ ಸಂಬಂಧಿಸಿದ ವ್ಯಕ್ತಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿದೆ. ಝಕ್ಟೋ ಮಾಡಿರುವ ಆರೋಪಗಳನ್ನು ಅವರು ಕೂಡ ಅಲ್ಲಗಳೆದಿಲ್ಲ. ನೇಮಕಗೊಂಡ ಉದ್ಯೋಗಿ ಬಹುಶಃ ಸರ್ಕಾರಿ ಏಜೆಂಟ್ ಎಂಬ ಅಂಶವನ್ನು ಅವರೂ ಪ್ರಸ್ತಾಪಿಸಿದ್ದಾರೆ.

‘ಸ್ಕ್ವೀಜಿಂಗ್ ಲೋಕಲ್ ಸ್ಟಾಫ್’ ಎಂಬ ಶೀರ್ಷಿಕೆಯ ಮತ್ತೊಂದು ವಿಭಾಗದಲ್ಲಿ ಮಾಜಿ ಟ್ವಿಟರ್ ಭದ್ರತಾ ಮುಖ್ಯಸ್ಥರು ಮತ್ತಷ್ಟು ಸಂಗತಿಗಳನ್ನು ಪ್ರಸ್ತಾಪಿಸಿದ್ದಾರೆ. ಹತೋಟಿಯಾಗಿ ಬಳಸಬಹುದಾದ, ಸ್ಥಳೀಯ ಪೂರ್ಣ ಸಮಯದ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಟ್ವಿಟರ್ ಅನ್ನು ಭಾರತ ಸರ್ಕಾರ ಒತ್ತಾಯಿಸಿತು ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...