Homeಮುಖಪುಟಸರ್ಕಾರಿ ಏಜೆಂಟ್ ನೇಮಿಸಿಕೊಳ್ಳಲು ಟ್ವಿಟರ್‌ ಮೇಲೆ ಭಾರತ ಸರ್ಕಾರ ಒತ್ತಡ; ಟ್ವಿಟ್ಟರ್ ಮಾಜಿ ಭದ್ರತಾ ಮುಖ್ಯಸ್ಥ...

ಸರ್ಕಾರಿ ಏಜೆಂಟ್ ನೇಮಿಸಿಕೊಳ್ಳಲು ಟ್ವಿಟರ್‌ ಮೇಲೆ ಭಾರತ ಸರ್ಕಾರ ಒತ್ತಡ; ಟ್ವಿಟ್ಟರ್ ಮಾಜಿ ಭದ್ರತಾ ಮುಖ್ಯಸ್ಥ ಆರೋಪ

- Advertisement -
- Advertisement -

ಟ್ವಿಟ್ಟರ್ ಮಾಜಿ ಭದ್ರತಾ ಮುಖ್ಯಸ್ಥ ಪೀಟರ್ ಝಟ್ಕೊ ಅವರು ಟ್ವಿಟರ್‌ ಸಂಸ್ಥೆ ವಿರುದ್ಧ ದೂರು ನೀಡಿದ್ದು, ಭಾರತದ ಸರ್ಕಾರದತ್ತಲೂ ಬೊಟ್ಟು ಮಾಡಿದ್ದಾರೆ. ‘ಸರ್ಕಾರಿ ಏಜೆಂಟ್’ ಆಗಿರುವ ಮತ್ತು ಸೂಕ್ಷ್ಮ ಬಳಕೆದಾರರ ಡೇಟಾಗೆ ಪ್ರವೇಶ ಪಡೆದಿರುವ ವ್ಯಕ್ತಿಯನ್ನು ಸಾಮಾಜಿಕ ಮಾಧ್ಯಮ ಕಂಪನಿ ಟ್ವಿಟರ್‌ಗೆ ನೇಮಿಸಿಕೊಳ್ಳಲು ಭಾರತ ಸರ್ಕಾರ ಒತ್ತಾಯಿಸಿತು ಎಂದು ಅವರು ಆರೋಪಿಸಿದ್ದಾರೆ.

ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್‌ ಕಮಿಷನ್‌ಗೆ ಕಳುಹಿಸಲಾದ 84-ಪುಟಗಳ ಕಡತದ ಕುರಿತು ಮಂಗಳವಾರ ಮಧ್ಯಾಹ್ನ ವಾಷಿಂಗ್ಟನ್ ಪೋಸ್ಟ್‌ ವರದಿ ಮಾಡಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ ಸಾಕ್ಷಿ ಮತ್ತು ದೃಢೀಕರಣದ ಮಾಹಿತಿಯನ್ನು ಝಟ್ಕೊ ಅವರ ವಕೀಲರು ಸಲ್ಲಿಸಿದ್ದಾರೆ. ಅಮೆರಿಕದ ನ್ಯಾಯಾಂಗ ಇಲಾಖೆಯ ರಾಷ್ಟ್ರೀಯ ಭದ್ರತಾ ವಿಭಾಗಕ್ಕೆ ಮತ್ತು ಅಮೆರಿಕದ ಗುಪ್ತಚರ ಸಮಿತಿಗೆ ದೂರು ರವಾನೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತನ್ನ ಸಹೋದ್ಯೋಗಿಗಳ ನಡುವೆ ‘ಮುಡ್ಜ್’ ಎಂದೇ ವ್ಯಾಪಕವಾಗಿ ಮೆಚ್ಚುಗೆ ಪಡೆದ ಹ್ಯಾಕರ್ ಝಟ್ಕೊ, “238 ಮಿಲಿಯನ್‌ನಷ್ಟು ದೈನಂದಿನ ಬಳಕೆದಾರರನ್ನು ಸರಿಯಾಗಿ ರಕ್ಷಿಸಲು ಸಾಧ್ಯವಾಗದ, ಅಸ್ತವ್ಯಸ್ತವಾಗಿರುವ ಕಂಪನಿ ಟ್ವಿಟರ್‌” ಎಂಬುದಾಗಿ ತಮ್ಮ ದೂರಿನಲ್ಲಿ ಅಭಿಪ್ರಾಯಪಟ್ಟಿದ್ದಾರೆ. ಈ ಎಲ್ಲ ವಿಷಯಗಳನ್ನು ತನ್ನ ದಾಖಲೆಯಲ್ಲಿ ಉಲ್ಲೇಖಿಸಿದ್ದಾರೆ.

ಸಲ್ಲಿಸಲಾಗಿರುವ ದಾಖಲೆಯಲ್ಲಿ ‘ವಿದೇಶಿ ಗುಪ್ತಚರದಿಂದ ಒಳಪ್ರವೇಶಿಕೆ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯ’ ಎಂಬ ಶೀರ್ಷಿಕೆಯ ವಿಭಾಗವಿದ್ದು, ಟ್ವಿಟರ್ ಪ್ರಜಾಪ್ರಭುತ್ವಕ್ಕೆ ತೊಂದರೆ ನೀಡಿರುವ ಅನೇಕ ಸಂಚಿಕೆಗಳನ್ನು ಝಟ್ಕೊ ಅಲ್ಲಿ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.

“ಸರ್ಕಾರಿ ಏಜೆಂಟ್‌ಗಳಾಗಿರುವ ನಿರ್ದಿಷ್ಟ ವ್ಯಕ್ತಿ(ಗಳನ್ನು) ಟ್ವಿಟರ್‌ಗೆ ನೇಮಿಸಿಕೊಳ್ಳುವಂತೆ ಭಾರತೀಯ ಸರ್ಕಾರವು ಒತ್ತಾಯಿಸಿತು. ಆ ನಿರ್ದಿಷ್ಟ ವ್ಯಕ್ತಿಗಳು (ಟ್ವಿಟರ್‌ನ ಮೂಲಭೂತ ದೋಷಗಳ ಕಾರಣದಿಂದಾಗಿ) ಅಪಾರ ಪ್ರಮಾಣದ ಟ್ವಿಟರ್ ಬಳಕೆದಾರರ ಸೂಕ್ಷ್ಮ ಡೇಟಾಗೆ ಪ್ರವೇಶ ಪಡೆದಿರುತ್ತಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಯಾವುದೇ ನಿರ್ಬಂಧವಿಲ್ಲದೆ ಭಾರತೀಯ ಸರ್ಕಾರಿ ಏಜೆಂಟ್‌, ಕಂಪನಿಯ ಬಳಕೆದಾರರ ಡೇಟಾಗೆ ನೇರ ಪ್ರವೇಶವನ್ನು ಪಡೆಯಲು ಅನುಮತಿ ನೀಡಲಾಗಿದೆ. ಟ್ವಿಟರ್‌ ಸಂಸ್ಥೆ ತನ್ನ ಬಳಕೆದಾರರಿಗೆ ಖಚಿತಪಡಿಸಿದ ಬದ್ಧತೆಯನ್ನು ಟ್ವಿಟರ್‌ ಅಧಿಕಾರಿಗಳು ಉಲ್ಲಂಘಿಸಿದ್ದಾರೆ” ಎಂದು ಗಂಭೀರವಾದ ಆರೋಪವನ್ನು ಅವರು ಮಾಡಿದ್ದಾರೆ.

ಇದನ್ನೂ ಓದಿರಿ: ಚಕ್ರವರ್ತಿ ಸೂಲಿಬೆಲೆಯಿಂದ ಆಯುಧ ತರಬೇತಿ ಆರೋಪ: ಟ್ವಿಟರ್‌ನಲ್ಲಿ ಕನ್ನಡಿಗರ ಆಕ್ಷೇಪ

ವಾಷಿಂಗ್ಟನ್ ಪೋಸ್ಟ್ ತನ್ನ ವರದಿಯಲ್ಲಿ ವಿಷಯಕ್ಕೆ ಸಂಬಂಧಿಸಿದ ವ್ಯಕ್ತಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿದೆ. ಝಕ್ಟೋ ಮಾಡಿರುವ ಆರೋಪಗಳನ್ನು ಅವರು ಕೂಡ ಅಲ್ಲಗಳೆದಿಲ್ಲ. ನೇಮಕಗೊಂಡ ಉದ್ಯೋಗಿ ಬಹುಶಃ ಸರ್ಕಾರಿ ಏಜೆಂಟ್ ಎಂಬ ಅಂಶವನ್ನು ಅವರೂ ಪ್ರಸ್ತಾಪಿಸಿದ್ದಾರೆ.

‘ಸ್ಕ್ವೀಜಿಂಗ್ ಲೋಕಲ್ ಸ್ಟಾಫ್’ ಎಂಬ ಶೀರ್ಷಿಕೆಯ ಮತ್ತೊಂದು ವಿಭಾಗದಲ್ಲಿ ಮಾಜಿ ಟ್ವಿಟರ್ ಭದ್ರತಾ ಮುಖ್ಯಸ್ಥರು ಮತ್ತಷ್ಟು ಸಂಗತಿಗಳನ್ನು ಪ್ರಸ್ತಾಪಿಸಿದ್ದಾರೆ. ಹತೋಟಿಯಾಗಿ ಬಳಸಬಹುದಾದ, ಸ್ಥಳೀಯ ಪೂರ್ಣ ಸಮಯದ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಟ್ವಿಟರ್ ಅನ್ನು ಭಾರತ ಸರ್ಕಾರ ಒತ್ತಾಯಿಸಿತು ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...